Homeಮುಖಪುಟಜಗತ್ತಿನ ಹಲವೆಡೆ ಹೆಚ್ಚಿದ ಕೊರೊನಾ ಪ್ರಕರಣಗಳು: ಲಾಕ್‌ಡೌನ್‌ ಘೋಷಿಸಿದ ದೇಶಗಳಿವು

ಜಗತ್ತಿನ ಹಲವೆಡೆ ಹೆಚ್ಚಿದ ಕೊರೊನಾ ಪ್ರಕರಣಗಳು: ಲಾಕ್‌ಡೌನ್‌ ಘೋಷಿಸಿದ ದೇಶಗಳಿವು

- Advertisement -
- Advertisement -

ಕೋವಿಡ್‌ ಎರಡನೇ ಅಲೆ ಸೃಷ್ಠಿಸಿದ್ದ ತಲ್ಲಣದಿಂದ ಭಾರತ ಇನ್ನೂ ಚೇತರಿಸಿಕೊಳ್ಳುತ್ತಿದೆ. ದೇಶದೆಲ್ಲೆಡೆ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 8,865 ಕೋವಿಡ್‌ ಹೊಸ ಪ್ರಕರಣಗಳು ದಾಖಲಾಗಿವೆ. ಇದು 287 ದಿನಗಳಲ್ಲಿಯೇ ದಾಖಲಾದ ಅತೀ ಕಡಿಮೆ ಪ್ರಕರಣಗಳಾಗಿವೆ. ಆದರೆ ಪ್ರಪಂಚದ ಇತರ ಭಾಗಗಳಲ್ಲಿ ಕೊರೊನಾ ಹೆಚ್ಚಾಗುತ್ತಿದೆ. ಇದನ್ನು ನಿಭಾಯಿಸಲು ಹಲವು ರಾಷ್ಟ್ರಗಳು ಮತ್ತೆ ಲಾಕ್‌ಡೌನ್‌ ಮೊರೆಹೋಗುತ್ತಿವೆ. ಇದು 3ನೇ ಅಲೆಯ ಮುನ್ಸೂಚನೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಐರೋಪ್ಯ ರಾಷ್ಟ್ರಗಳಲ್ಲಿ ಕೊರೊನಾ ಸೋಂಕು ಗಣನೀಯವಾಗಿ ಹೆಚ್ಚುತ್ತಿದ್ದು, ಆಸ್ಟ್ರೀಯಾ, ನೆದರ್ಲೆಂಡ್, ಡೆನ್ಮಾರ್ಕ್‌, ಜರ್ಮನಿ, ನಾರ್ವೆ, ಲ್ಯಾಟ್ವಿಯಾ ಮತ್ತು ರಷ್ಯಾದಲ್ಲಿ ಭಾಗಶಃ ಲಾಕ್‌ಡೌನ್‌ ಜಾರಿಯಾಗಿದೆ. ಕೊರೊನಾ ವಿರುದ್ದ ನೀಡಲಾಗುವ ಎರಡು ಡೋಸ್‌ಗಳ ವ್ಯಾಕ್ಸಿನ್‌ ಅನ್ನು ಪಡೆಯದೇ ಇರುವವರಿಗೆ ಮಾತ್ರ ನಿರ್ಬಂಧಗಳನ್ನು ಹೇರುವ ಮೂಲಕ ಭಾಗಶಃ ಲಾಕ್‌ಡೌನ್‌ ಮಾಡಲು ಮುಂದಾಗಿವೆ. ಈ ರೀತಿಯಲ್ಲಿ, ಕೊರೊನಾ ಲಸಿಕೆ ಹಾಕಿಸಿಕೊಳ್ಳದವರು ತ್ವರಿತವಾಗಿ ವ್ಯಾಕ್ಸಿನ್‌ ಹಾಕಿಸಿಕೊಳ್ಳಲು ಅಲ್ಲಿನ ಸರ್ಕಾರಗಳು ಜನರನ್ನು ಒತ್ತಾಯಿಸುತ್ತಿವೆ.

ಯಾವ ದೇಶದಲ್ಲಿ ಯಾವ ರೀತಿಯ ಲಾಕ್‌ಡೌನ್‌ ಇವೆ ಎಂಬ ಮಾಹಿತಿ ಇಲ್ಲಿದೆ.

ನೆದರ್ಲೆಂಡ್: ನೆದರ್ಲೆಂಡ್‌ನಲ್ಲಿ ದಿನಕ್ಕೆ 16,000 ಪ್ರಕರಣಗಳು ದಾಖಲಾಗಿತ್ತಿವೆ. ಹೀಗಾಗಿ, ಶನಿವಾರದಿಂದ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ಅಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಸಂಪೂರ್ಣವಾಗಿ ನಿರ್ಬಂಧ ಹೇರಲಾಗಿದೆ. ಅಂಗಡಿಗಳು, ಶಾಂಪಿಂಗ್ ಮಾಲ್‌ಗಳನ್ನು ಮುಚ್ಚಲಾಗಿದೆ. ಸೂಪರ್‌ ಮಾರ್ಕೆಟ್‌ ಹಾಗೂ ಅವಶ್ಯಕವಲ್ಲದ ಸಾಮಗ್ರಿಗಳನ್ನು ಮಾರಾಟ ಮಾಡುವ ಅಂಗಡಿಗಳಿಗೆ ಈ ನಿಯಮಗಳು ಅನ್ವಯವಾಗುತ್ತವೆ ಎಂದು ಅಲ್ಲಿನ ಹಂಗಾಮಿ ಪ್ರಧಾನಿ ಮಾರ್ಕ್‌ ರಟ್ಟೆ ಹೇಳಿದ್ದಾರೆ. ರಾತ್ರಿ 08 ಗಂಟೆವರೆಗೆ ಮಾತ್ರ ಕೆಫೆಗಳು, ಹೋಟೆಲ್‌ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.

ಆಸ್ಟ್ರಿಯಾ: ಆಸ್ಟ್ರೀಯಾದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಭಾನುವಾರದಿಂದಲೇ ಲಾಕ್‌ಡೌನ್‌ ಜಾರಿಯಾಗಿದೆ. ಲಸಿಕೆ ಹಾಕಿಸಿಕೊಳ್ಳದೇ ಇರುವವರಿಗೆ ಹೆಚ್ಚಾಗಿ ಸೋಂಕು ಭಾದಿಸುವುದರಿಂದ, ಲಸಿಕೆ ಹಾಕಿಸಿಕೊಳ್ಳದೇ ಇರುವವರು ಸಾರ್ವಜನಿಕ ಸ್ಥಳಗಳಿಗೆ ತೆರಳುವಂತಿಲ್ಲ ಎಂದು ನಿರ್ಬಂಧ ವಿಧಿಸಲಾಗಿದೆ.

ವೃತ್ತಿ ಸಂಬಂಧಿತ ಓಡಾಟ, ದಿನಸಿ ಖರೀದಿ, ವ್ಯಾಯಾಮದ ಉದ್ದೇಶದ ವಾಕಿಂಗ್, ಲಸಿಕೆ ಪಡೆಯುವವರಿಗೆ, ಆರೋಗ್ಯ ತಪಾಸಣೆಗೆ ತೆರಳುವವರಿಗೆ ಮಾತ್ರ ಹೊರಹೋಗಲು ಅವಕಾಶವಿದ್ದು, ಉಳಿದ ಎಲ್ಲಾ ರೀತಿಯ ಓಡಾಟಗಳನ್ನು ನಿರ್ಬಂಧಿಸಲಾಗಿದೆ. ನ.24ರ ವರೆಗೆ ಲಾಕ್‌ಡೌನ್‌ ಜಾರಿಯಲ್ಲಿರಲಿದೆ.

ನಾರ್ವೆ: ನಾರ್ವೆಯಲ್ಲಿಯೂ ಕೊರೊನಾ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿವೆ. ಆದರೆ, ಅಲ್ಲಿನ ಸರ್ಕಾರ ಲಾಕ್‌ಡೌನ್‌ ಜಾರಿ ಮಾಡಲು ನಿರಾಕರಿಸುತ್ತಿದ್ದು, ಲಾಕ್‌ಡೌನ್‌ಗೆ ಬದಲಾಗಿ ಪರ್ಯಾಯ ಕ್ರಮಗಳನ್ನು ಜಾರಿಗೊಳಿಸಲು ಆಲೋಚಿಸುತ್ತಿದೆ. ಅದಕ್ಕಾಗಿ, ಪರ್ಯಾಯಗಳನ್ನು ಯಾವುದು ಎಂದು ಹುಡುಕಾಟ ನಡೆಸುತ್ತಿದೆ. ಲಾಕ್‌ಡೌನ್ ಬದಲು, ದೇಶದ ಎಲ್ಲರಿಗೂ 3ನೇ ಡೋಸ್‌ ಲಸಿಕೆ ನೀಡುವ ಬಗ್ಗೆ ನಾರ್ವೆ ಪ್ರಧಾನಿ ಜೋನಾಸ್‌ ಜೋಹರ್‌ ಚಿಂತನೆ ನಡೆಸಿದ್ದು, ಲಸಿಕೆ ಪಡೆದ ಎಲ್ಲರಿಗೂ ಕರೋನಾ ಪಾಸ್‌ಗಳನ್ನು ವಿತರಿಸುವಂತೆ ಸ್ಥಳೀಯ ಸರ್ಕಾರಗಳಿಗೆ ಸೂಚಿಸಲು ತೀರ್ಮಾನಿಸಲಾಗಿದೆ. ಅಂತಹ ಪಾಸ್‌ಗಳನ್ನು ಪಡೆದವರಿಗೆ ಮಾತ್ರ ಮನೆಗಳಿಂದ ಹೊರಬರಲು ಅವಕಾಶ ಸಿಗಲಿದೆ.

ಡೆನ್ಮಾರ್ಕ್: ಡೆನ್ಮಾರ್ಕ್‌ನಲ್ಲಿ ಕೊರೊನಾ ಲಸಿಕೆ ಅಭಿಯಾನ ಭರದಿಂದ ಸಾಗುತ್ತಿದೆ. ಇದೇ ಹೊತ್ತಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯೂ ಹೆಚ್ಚುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಕಳೆದ ಬಾರಿ ವಿಧಿಸಿದ್ದ ನಿರ್ಬಂಧಗಳನ್ನು ಮತ್ತೆ ಜಾರಿಗೊಳಿಸಲು ಮುಂದಾಗಿದೆ. ಲಸಿಕೆ ಪಡೆದವರಿಗೆ ಅಥವಾ ಕೊರೊನಾ ನೆಗೆಟಿವ್‌ ಟೆಸ್ಟ್‌ ಪ್ರಮಾಣಪತ್ರ ಹೊಂದಿರುವವರಿಗೆ ಮಾತ್ರ ಬಾರ್‌ ಮತ್ತು ಕ್ಲಬ್‌ಗಳಿಗೆ ಪ್ರವೇಶ ಕಲ್ಪಿಸಲು ಚಿಂತನೆ ನಡೆಸಲಾಗಿದೆ. ಜೊತೆಗೆ ಎರಡು ಡೋಸ್ ಪಡೆದವರಿಗೆ ಹಾಗೂ ಕೊರೊನಾದಿಂದ ಗುಣಮುಖರಾದವರಿಗೆ ಸಾರ್ವಜನಿಕ ಸ್ಥಳಗಳನ್ನು ಬಳಸಲು ಕೊರೊನಾ ಪಾಸ್‌ಗಳನ್ನು ನೀಡಲು ನಿರ್ಧರಿಸಲಾಗಿದೆ.

ಜರ್ಮನಿ: ಜರ್ಮನಿಯಲ್ಲಿ ಈಗಾಗಲೇ ಕೊರೊನಾ 4ನೇ ಅಲೆ ಆವರಿಸಿಕೊಂಡಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಪ್ರತಿದಿನ 50,000 ದಾಟುತ್ತಿದೆ ಎಂದು ಹೇಳಲಾಗಿದೆ. ಹೀಗಾಗಿ, ಹಲವು ನಿರ್ಬಂಧಗಳನ್ನು ಜಾರಿಗೆ ತರಲಾಗಿದ್ದು, ಸಾರ್ವಜನಿಕ ಸ್ಥಳಗಳಿಗೆ ಎರಡು ಡೋಸ್ ಲಸಿಕೆ ಪಡೆಯದವರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಎರಡು ಡೋಸ್ ಪಡೆದವರು ಮತ್ತು ಕೊರೊನಾದಿಂದ ಗುಣಮುಖರಾದವರಿಗೆ ಮಾತ್ರ ರೆಸ್ಟೋರೆಂಟ್‌ಗಳಲ್ಲಿ, ಬಾರ್‌ ಮತ್ತು ಕ್ಲಬ್‌ಗಳಿಗೆ ಪ್ರವೇಶವನ್ನು ಸೂಚಿಸಲಾಗಿದೆ. ವೈದ್ಯಕೀಯ ಕಾರಣಗಳಿಗಾಗಿ ಮನೆಗಳಿಂದ ಹೊರ ಬರುವವರಿಗೆ ಹಾಗೂ ಮಕ್ಕಳಿಗೆ ಈ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.

ಲ್ಯಾಟ್ವಿಯಾ: ಯೂರೋಪ್‌ ರಾಷ್ಟ್ರಗಳ ಪೈಕಿ, ಅತೀ ಕಡಿಮೆ ಜನರಿಗೆ ಲಸಿಕೆ ನೀಡಿದ ರಾಷ್ಟ್ರ ಎಂಬ ಕುಖ್ಯಾತಿಗೆ ಲ್ಯಾಟ್ವಿಯಾ ಗುರಿಯಾಗಿದೆ. ಈ ದೇಶದಲ್ಲಿ ಲಸಿಕೆ ಅಭಿಯಾನ ಕುಂಟುತ್ತಾ ಸಾಗಿದೆ. ಹೀಗಾಗಿ, ಕಳೆದ ಅಕ್ಟೋಬರ್‌ನಲ್ಲಿಯೇ ಇಲ್ಲಿ ನಾಲ್ಕು ವಾರಗಳ ಲಾಕ್‌ಡೌನ್ ಹೇರಲಾಗಿತ್ತು. ಇದೀಗ, ನವೆಂಬರ್‌ನಿಂದ ಕೆಲವು ನಿರ್ಬಂಧಗಳನ್ನು ಸಡಿಲಿಸಲಾಗಿದೆ. ಆದರೆ, ಕೊರೊನಾ ಅಬ್ಬರ ಲ್ಯಾಟ್ವಿಯಾದಲ್ಲಿ ಏರಿಳಿತ ಕಾಣುತ್ತಿದ್ದು, ಮತ್ತೆ ಸಂಪೂರ್ಣ ಲಾಕ್‌ಡೌನ್ ಮೊರೆ ಹೋಗುವ ಸಾಧ್ಯತೆ ಇದ್ದು, ಸರ್ಕಾರ ಹಲವು ಹಂತಗಳಲ್ಲಿ ಸಭೆ ನಡೆಸುತ್ತಿದೆ.

ರಷ್ಯಾ: ಭಾನುವಾರ ರಷ್ಯಾದಲ್ಲಿ 38,000ಕ್ಕೂ ಅಧಿಕ ಕೊರೊನಾ ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ಅಂದು ಒಂದೇ ದಿನ 1,219 ಸಾವುಗಳಾಗಿವೆ. ಹೀಗಾಗಿ, ಅಲ್ಲಿಯೂ ಸಹ ಹಲವು ನಿರ್ಬಂಧಗಳನ್ನು ಜಾರಿಗೊಳಿಸಲು ಸರ್ಕಾರ ಮುಂದಾಗಿದ್ದು, ಈ ಕುರಿತಂತೆ ಸರ್ಕಾರವು ಸಂಸತ್ತಿನಲ್ಲಿ ಎರಡು ಮಸೂದೆಗಳನ್ನು ಮಂಡಿಸಿದೆ. ಅವುಗಳ ಪ್ರಕಾರ,  ಅಂತರ್‌ ರಾಷ್ಟ್ರ ರೈಲು ಮತ್ತು ವಿಮಾನ ಪ್ರಯಾಣಕ್ಕೆ ನಿರ್ಬಂಧ, ಸಾರ್ವಜನಿಕ ಸ್ಥಳಗಳಲ್ಲಿ ಕೊರೊನಾ ಲಸಿಕೆ ಪಡೆಯುವವರಿಗೆ ನಿರ್ಬಂಧ ಹೇರುವ ಅಂಶಗಳಿವೆ. ಸಂಸತ್ತು ಇದಕ್ಕೆ ಅನುಮೋದಿಸಿದರೆ, 2022 ಫೆಬ್ರವರಿಯಲ್ಲಿ ರಷ್ಯಾದಲ್ಲಿ ಲಾಕ್‌ಡೌನ್ ಜಾರಿಯಾಗುವ ಸಾಧ್ಯತೆಗಳಿವೆ ಎಂದು ರಷ್ಯಾದ ಕೊರೊನಾ ಟಾಸ್ಕ್ಫೋರ್ಸ್‌ನ ಮುಖ್ಯಸ್ಥರು ಆಗಿರುವ ಉಪಪ್ರಧಾನಿ ತಾತ್ಯಾನಾ ಗೊಲಿಕೊವಾ ತಿಳಿಸಿದ್ದಾರೆ.

ಈ ರಾಷ್ಟ್ರಗಳ ಹೊರತಾಗಿಯೂ ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚುತ್ತಿವೆ. ಅಮೆರಿಕಾದಲ್ಲಿ ವ್ಯಾಕ್ಸಿನೇಷನ್‌ ಪ್ರಕ್ರಿಯೆ ಗಣನೀಯವಾಗಿ ನಡೆದ ಬಳಿಕ ಅಲ್ಲಿನ ಜನರಿಗೆ ಮಾಸ್ಕ್‌ ಹಾಕುವುದರಿಂದ ವಿನಾಯತಿ ನೀಡಲಾಗಿತ್ತು. ಆದರೆ, ಇದೀಗ ಕೊರೊನಾ ರೂಪಾಂತರಿಗಳು ಕಾಣಿಸಿಕೊಳ್ಳುತ್ತಿದ್ದು, ಅಮೆರಿಕಾ ಮತ್ತೆ ಮಾಸ್ಕ್‌ ಕಡ್ಡಾಯಗೊಳಿಸಲು ಚಿಂತಿಸುತ್ತಿದೆ ಎಂದು ವರದಿಯಾಗಿದೆ.


ಇದನ್ನೂ ಓದಿ: ದಿನದಲ್ಲಿ 8,865 ಹೊಸ ಕೋವಿಡ್‌ ಪ್ರಕರಣ: 9 ತಿಂಗಳಿನಲ್ಲಿಯೇ ಅತ್ಯಂತ ಕಡಿಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...