Homeಮುಖಪುಟಜಗತ್ತಿನ ಹಲವೆಡೆ ಹೆಚ್ಚಿದ ಕೊರೊನಾ ಪ್ರಕರಣಗಳು: ಲಾಕ್‌ಡೌನ್‌ ಘೋಷಿಸಿದ ದೇಶಗಳಿವು

ಜಗತ್ತಿನ ಹಲವೆಡೆ ಹೆಚ್ಚಿದ ಕೊರೊನಾ ಪ್ರಕರಣಗಳು: ಲಾಕ್‌ಡೌನ್‌ ಘೋಷಿಸಿದ ದೇಶಗಳಿವು

- Advertisement -
- Advertisement -

ಕೋವಿಡ್‌ ಎರಡನೇ ಅಲೆ ಸೃಷ್ಠಿಸಿದ್ದ ತಲ್ಲಣದಿಂದ ಭಾರತ ಇನ್ನೂ ಚೇತರಿಸಿಕೊಳ್ಳುತ್ತಿದೆ. ದೇಶದೆಲ್ಲೆಡೆ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 8,865 ಕೋವಿಡ್‌ ಹೊಸ ಪ್ರಕರಣಗಳು ದಾಖಲಾಗಿವೆ. ಇದು 287 ದಿನಗಳಲ್ಲಿಯೇ ದಾಖಲಾದ ಅತೀ ಕಡಿಮೆ ಪ್ರಕರಣಗಳಾಗಿವೆ. ಆದರೆ ಪ್ರಪಂಚದ ಇತರ ಭಾಗಗಳಲ್ಲಿ ಕೊರೊನಾ ಹೆಚ್ಚಾಗುತ್ತಿದೆ. ಇದನ್ನು ನಿಭಾಯಿಸಲು ಹಲವು ರಾಷ್ಟ್ರಗಳು ಮತ್ತೆ ಲಾಕ್‌ಡೌನ್‌ ಮೊರೆಹೋಗುತ್ತಿವೆ. ಇದು 3ನೇ ಅಲೆಯ ಮುನ್ಸೂಚನೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಐರೋಪ್ಯ ರಾಷ್ಟ್ರಗಳಲ್ಲಿ ಕೊರೊನಾ ಸೋಂಕು ಗಣನೀಯವಾಗಿ ಹೆಚ್ಚುತ್ತಿದ್ದು, ಆಸ್ಟ್ರೀಯಾ, ನೆದರ್ಲೆಂಡ್, ಡೆನ್ಮಾರ್ಕ್‌, ಜರ್ಮನಿ, ನಾರ್ವೆ, ಲ್ಯಾಟ್ವಿಯಾ ಮತ್ತು ರಷ್ಯಾದಲ್ಲಿ ಭಾಗಶಃ ಲಾಕ್‌ಡೌನ್‌ ಜಾರಿಯಾಗಿದೆ. ಕೊರೊನಾ ವಿರುದ್ದ ನೀಡಲಾಗುವ ಎರಡು ಡೋಸ್‌ಗಳ ವ್ಯಾಕ್ಸಿನ್‌ ಅನ್ನು ಪಡೆಯದೇ ಇರುವವರಿಗೆ ಮಾತ್ರ ನಿರ್ಬಂಧಗಳನ್ನು ಹೇರುವ ಮೂಲಕ ಭಾಗಶಃ ಲಾಕ್‌ಡೌನ್‌ ಮಾಡಲು ಮುಂದಾಗಿವೆ. ಈ ರೀತಿಯಲ್ಲಿ, ಕೊರೊನಾ ಲಸಿಕೆ ಹಾಕಿಸಿಕೊಳ್ಳದವರು ತ್ವರಿತವಾಗಿ ವ್ಯಾಕ್ಸಿನ್‌ ಹಾಕಿಸಿಕೊಳ್ಳಲು ಅಲ್ಲಿನ ಸರ್ಕಾರಗಳು ಜನರನ್ನು ಒತ್ತಾಯಿಸುತ್ತಿವೆ.

ಯಾವ ದೇಶದಲ್ಲಿ ಯಾವ ರೀತಿಯ ಲಾಕ್‌ಡೌನ್‌ ಇವೆ ಎಂಬ ಮಾಹಿತಿ ಇಲ್ಲಿದೆ.

ನೆದರ್ಲೆಂಡ್: ನೆದರ್ಲೆಂಡ್‌ನಲ್ಲಿ ದಿನಕ್ಕೆ 16,000 ಪ್ರಕರಣಗಳು ದಾಖಲಾಗಿತ್ತಿವೆ. ಹೀಗಾಗಿ, ಶನಿವಾರದಿಂದ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ಅಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಸಂಪೂರ್ಣವಾಗಿ ನಿರ್ಬಂಧ ಹೇರಲಾಗಿದೆ. ಅಂಗಡಿಗಳು, ಶಾಂಪಿಂಗ್ ಮಾಲ್‌ಗಳನ್ನು ಮುಚ್ಚಲಾಗಿದೆ. ಸೂಪರ್‌ ಮಾರ್ಕೆಟ್‌ ಹಾಗೂ ಅವಶ್ಯಕವಲ್ಲದ ಸಾಮಗ್ರಿಗಳನ್ನು ಮಾರಾಟ ಮಾಡುವ ಅಂಗಡಿಗಳಿಗೆ ಈ ನಿಯಮಗಳು ಅನ್ವಯವಾಗುತ್ತವೆ ಎಂದು ಅಲ್ಲಿನ ಹಂಗಾಮಿ ಪ್ರಧಾನಿ ಮಾರ್ಕ್‌ ರಟ್ಟೆ ಹೇಳಿದ್ದಾರೆ. ರಾತ್ರಿ 08 ಗಂಟೆವರೆಗೆ ಮಾತ್ರ ಕೆಫೆಗಳು, ಹೋಟೆಲ್‌ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.

ಆಸ್ಟ್ರಿಯಾ: ಆಸ್ಟ್ರೀಯಾದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಭಾನುವಾರದಿಂದಲೇ ಲಾಕ್‌ಡೌನ್‌ ಜಾರಿಯಾಗಿದೆ. ಲಸಿಕೆ ಹಾಕಿಸಿಕೊಳ್ಳದೇ ಇರುವವರಿಗೆ ಹೆಚ್ಚಾಗಿ ಸೋಂಕು ಭಾದಿಸುವುದರಿಂದ, ಲಸಿಕೆ ಹಾಕಿಸಿಕೊಳ್ಳದೇ ಇರುವವರು ಸಾರ್ವಜನಿಕ ಸ್ಥಳಗಳಿಗೆ ತೆರಳುವಂತಿಲ್ಲ ಎಂದು ನಿರ್ಬಂಧ ವಿಧಿಸಲಾಗಿದೆ.

ವೃತ್ತಿ ಸಂಬಂಧಿತ ಓಡಾಟ, ದಿನಸಿ ಖರೀದಿ, ವ್ಯಾಯಾಮದ ಉದ್ದೇಶದ ವಾಕಿಂಗ್, ಲಸಿಕೆ ಪಡೆಯುವವರಿಗೆ, ಆರೋಗ್ಯ ತಪಾಸಣೆಗೆ ತೆರಳುವವರಿಗೆ ಮಾತ್ರ ಹೊರಹೋಗಲು ಅವಕಾಶವಿದ್ದು, ಉಳಿದ ಎಲ್ಲಾ ರೀತಿಯ ಓಡಾಟಗಳನ್ನು ನಿರ್ಬಂಧಿಸಲಾಗಿದೆ. ನ.24ರ ವರೆಗೆ ಲಾಕ್‌ಡೌನ್‌ ಜಾರಿಯಲ್ಲಿರಲಿದೆ.

ನಾರ್ವೆ: ನಾರ್ವೆಯಲ್ಲಿಯೂ ಕೊರೊನಾ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿವೆ. ಆದರೆ, ಅಲ್ಲಿನ ಸರ್ಕಾರ ಲಾಕ್‌ಡೌನ್‌ ಜಾರಿ ಮಾಡಲು ನಿರಾಕರಿಸುತ್ತಿದ್ದು, ಲಾಕ್‌ಡೌನ್‌ಗೆ ಬದಲಾಗಿ ಪರ್ಯಾಯ ಕ್ರಮಗಳನ್ನು ಜಾರಿಗೊಳಿಸಲು ಆಲೋಚಿಸುತ್ತಿದೆ. ಅದಕ್ಕಾಗಿ, ಪರ್ಯಾಯಗಳನ್ನು ಯಾವುದು ಎಂದು ಹುಡುಕಾಟ ನಡೆಸುತ್ತಿದೆ. ಲಾಕ್‌ಡೌನ್ ಬದಲು, ದೇಶದ ಎಲ್ಲರಿಗೂ 3ನೇ ಡೋಸ್‌ ಲಸಿಕೆ ನೀಡುವ ಬಗ್ಗೆ ನಾರ್ವೆ ಪ್ರಧಾನಿ ಜೋನಾಸ್‌ ಜೋಹರ್‌ ಚಿಂತನೆ ನಡೆಸಿದ್ದು, ಲಸಿಕೆ ಪಡೆದ ಎಲ್ಲರಿಗೂ ಕರೋನಾ ಪಾಸ್‌ಗಳನ್ನು ವಿತರಿಸುವಂತೆ ಸ್ಥಳೀಯ ಸರ್ಕಾರಗಳಿಗೆ ಸೂಚಿಸಲು ತೀರ್ಮಾನಿಸಲಾಗಿದೆ. ಅಂತಹ ಪಾಸ್‌ಗಳನ್ನು ಪಡೆದವರಿಗೆ ಮಾತ್ರ ಮನೆಗಳಿಂದ ಹೊರಬರಲು ಅವಕಾಶ ಸಿಗಲಿದೆ.

ಡೆನ್ಮಾರ್ಕ್: ಡೆನ್ಮಾರ್ಕ್‌ನಲ್ಲಿ ಕೊರೊನಾ ಲಸಿಕೆ ಅಭಿಯಾನ ಭರದಿಂದ ಸಾಗುತ್ತಿದೆ. ಇದೇ ಹೊತ್ತಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯೂ ಹೆಚ್ಚುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಕಳೆದ ಬಾರಿ ವಿಧಿಸಿದ್ದ ನಿರ್ಬಂಧಗಳನ್ನು ಮತ್ತೆ ಜಾರಿಗೊಳಿಸಲು ಮುಂದಾಗಿದೆ. ಲಸಿಕೆ ಪಡೆದವರಿಗೆ ಅಥವಾ ಕೊರೊನಾ ನೆಗೆಟಿವ್‌ ಟೆಸ್ಟ್‌ ಪ್ರಮಾಣಪತ್ರ ಹೊಂದಿರುವವರಿಗೆ ಮಾತ್ರ ಬಾರ್‌ ಮತ್ತು ಕ್ಲಬ್‌ಗಳಿಗೆ ಪ್ರವೇಶ ಕಲ್ಪಿಸಲು ಚಿಂತನೆ ನಡೆಸಲಾಗಿದೆ. ಜೊತೆಗೆ ಎರಡು ಡೋಸ್ ಪಡೆದವರಿಗೆ ಹಾಗೂ ಕೊರೊನಾದಿಂದ ಗುಣಮುಖರಾದವರಿಗೆ ಸಾರ್ವಜನಿಕ ಸ್ಥಳಗಳನ್ನು ಬಳಸಲು ಕೊರೊನಾ ಪಾಸ್‌ಗಳನ್ನು ನೀಡಲು ನಿರ್ಧರಿಸಲಾಗಿದೆ.

ಜರ್ಮನಿ: ಜರ್ಮನಿಯಲ್ಲಿ ಈಗಾಗಲೇ ಕೊರೊನಾ 4ನೇ ಅಲೆ ಆವರಿಸಿಕೊಂಡಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಪ್ರತಿದಿನ 50,000 ದಾಟುತ್ತಿದೆ ಎಂದು ಹೇಳಲಾಗಿದೆ. ಹೀಗಾಗಿ, ಹಲವು ನಿರ್ಬಂಧಗಳನ್ನು ಜಾರಿಗೆ ತರಲಾಗಿದ್ದು, ಸಾರ್ವಜನಿಕ ಸ್ಥಳಗಳಿಗೆ ಎರಡು ಡೋಸ್ ಲಸಿಕೆ ಪಡೆಯದವರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಎರಡು ಡೋಸ್ ಪಡೆದವರು ಮತ್ತು ಕೊರೊನಾದಿಂದ ಗುಣಮುಖರಾದವರಿಗೆ ಮಾತ್ರ ರೆಸ್ಟೋರೆಂಟ್‌ಗಳಲ್ಲಿ, ಬಾರ್‌ ಮತ್ತು ಕ್ಲಬ್‌ಗಳಿಗೆ ಪ್ರವೇಶವನ್ನು ಸೂಚಿಸಲಾಗಿದೆ. ವೈದ್ಯಕೀಯ ಕಾರಣಗಳಿಗಾಗಿ ಮನೆಗಳಿಂದ ಹೊರ ಬರುವವರಿಗೆ ಹಾಗೂ ಮಕ್ಕಳಿಗೆ ಈ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.

ಲ್ಯಾಟ್ವಿಯಾ: ಯೂರೋಪ್‌ ರಾಷ್ಟ್ರಗಳ ಪೈಕಿ, ಅತೀ ಕಡಿಮೆ ಜನರಿಗೆ ಲಸಿಕೆ ನೀಡಿದ ರಾಷ್ಟ್ರ ಎಂಬ ಕುಖ್ಯಾತಿಗೆ ಲ್ಯಾಟ್ವಿಯಾ ಗುರಿಯಾಗಿದೆ. ಈ ದೇಶದಲ್ಲಿ ಲಸಿಕೆ ಅಭಿಯಾನ ಕುಂಟುತ್ತಾ ಸಾಗಿದೆ. ಹೀಗಾಗಿ, ಕಳೆದ ಅಕ್ಟೋಬರ್‌ನಲ್ಲಿಯೇ ಇಲ್ಲಿ ನಾಲ್ಕು ವಾರಗಳ ಲಾಕ್‌ಡೌನ್ ಹೇರಲಾಗಿತ್ತು. ಇದೀಗ, ನವೆಂಬರ್‌ನಿಂದ ಕೆಲವು ನಿರ್ಬಂಧಗಳನ್ನು ಸಡಿಲಿಸಲಾಗಿದೆ. ಆದರೆ, ಕೊರೊನಾ ಅಬ್ಬರ ಲ್ಯಾಟ್ವಿಯಾದಲ್ಲಿ ಏರಿಳಿತ ಕಾಣುತ್ತಿದ್ದು, ಮತ್ತೆ ಸಂಪೂರ್ಣ ಲಾಕ್‌ಡೌನ್ ಮೊರೆ ಹೋಗುವ ಸಾಧ್ಯತೆ ಇದ್ದು, ಸರ್ಕಾರ ಹಲವು ಹಂತಗಳಲ್ಲಿ ಸಭೆ ನಡೆಸುತ್ತಿದೆ.

ರಷ್ಯಾ: ಭಾನುವಾರ ರಷ್ಯಾದಲ್ಲಿ 38,000ಕ್ಕೂ ಅಧಿಕ ಕೊರೊನಾ ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ಅಂದು ಒಂದೇ ದಿನ 1,219 ಸಾವುಗಳಾಗಿವೆ. ಹೀಗಾಗಿ, ಅಲ್ಲಿಯೂ ಸಹ ಹಲವು ನಿರ್ಬಂಧಗಳನ್ನು ಜಾರಿಗೊಳಿಸಲು ಸರ್ಕಾರ ಮುಂದಾಗಿದ್ದು, ಈ ಕುರಿತಂತೆ ಸರ್ಕಾರವು ಸಂಸತ್ತಿನಲ್ಲಿ ಎರಡು ಮಸೂದೆಗಳನ್ನು ಮಂಡಿಸಿದೆ. ಅವುಗಳ ಪ್ರಕಾರ,  ಅಂತರ್‌ ರಾಷ್ಟ್ರ ರೈಲು ಮತ್ತು ವಿಮಾನ ಪ್ರಯಾಣಕ್ಕೆ ನಿರ್ಬಂಧ, ಸಾರ್ವಜನಿಕ ಸ್ಥಳಗಳಲ್ಲಿ ಕೊರೊನಾ ಲಸಿಕೆ ಪಡೆಯುವವರಿಗೆ ನಿರ್ಬಂಧ ಹೇರುವ ಅಂಶಗಳಿವೆ. ಸಂಸತ್ತು ಇದಕ್ಕೆ ಅನುಮೋದಿಸಿದರೆ, 2022 ಫೆಬ್ರವರಿಯಲ್ಲಿ ರಷ್ಯಾದಲ್ಲಿ ಲಾಕ್‌ಡೌನ್ ಜಾರಿಯಾಗುವ ಸಾಧ್ಯತೆಗಳಿವೆ ಎಂದು ರಷ್ಯಾದ ಕೊರೊನಾ ಟಾಸ್ಕ್ಫೋರ್ಸ್‌ನ ಮುಖ್ಯಸ್ಥರು ಆಗಿರುವ ಉಪಪ್ರಧಾನಿ ತಾತ್ಯಾನಾ ಗೊಲಿಕೊವಾ ತಿಳಿಸಿದ್ದಾರೆ.

ಈ ರಾಷ್ಟ್ರಗಳ ಹೊರತಾಗಿಯೂ ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚುತ್ತಿವೆ. ಅಮೆರಿಕಾದಲ್ಲಿ ವ್ಯಾಕ್ಸಿನೇಷನ್‌ ಪ್ರಕ್ರಿಯೆ ಗಣನೀಯವಾಗಿ ನಡೆದ ಬಳಿಕ ಅಲ್ಲಿನ ಜನರಿಗೆ ಮಾಸ್ಕ್‌ ಹಾಕುವುದರಿಂದ ವಿನಾಯತಿ ನೀಡಲಾಗಿತ್ತು. ಆದರೆ, ಇದೀಗ ಕೊರೊನಾ ರೂಪಾಂತರಿಗಳು ಕಾಣಿಸಿಕೊಳ್ಳುತ್ತಿದ್ದು, ಅಮೆರಿಕಾ ಮತ್ತೆ ಮಾಸ್ಕ್‌ ಕಡ್ಡಾಯಗೊಳಿಸಲು ಚಿಂತಿಸುತ್ತಿದೆ ಎಂದು ವರದಿಯಾಗಿದೆ.


ಇದನ್ನೂ ಓದಿ: ದಿನದಲ್ಲಿ 8,865 ಹೊಸ ಕೋವಿಡ್‌ ಪ್ರಕರಣ: 9 ತಿಂಗಳಿನಲ್ಲಿಯೇ ಅತ್ಯಂತ ಕಡಿಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...