Homeಮುಖಪುಟಜಗತ್ತಿನ ಹಲವೆಡೆ ಹೆಚ್ಚಿದ ಕೊರೊನಾ ಪ್ರಕರಣಗಳು: ಲಾಕ್‌ಡೌನ್‌ ಘೋಷಿಸಿದ ದೇಶಗಳಿವು

ಜಗತ್ತಿನ ಹಲವೆಡೆ ಹೆಚ್ಚಿದ ಕೊರೊನಾ ಪ್ರಕರಣಗಳು: ಲಾಕ್‌ಡೌನ್‌ ಘೋಷಿಸಿದ ದೇಶಗಳಿವು

- Advertisement -
- Advertisement -

ಕೋವಿಡ್‌ ಎರಡನೇ ಅಲೆ ಸೃಷ್ಠಿಸಿದ್ದ ತಲ್ಲಣದಿಂದ ಭಾರತ ಇನ್ನೂ ಚೇತರಿಸಿಕೊಳ್ಳುತ್ತಿದೆ. ದೇಶದೆಲ್ಲೆಡೆ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 8,865 ಕೋವಿಡ್‌ ಹೊಸ ಪ್ರಕರಣಗಳು ದಾಖಲಾಗಿವೆ. ಇದು 287 ದಿನಗಳಲ್ಲಿಯೇ ದಾಖಲಾದ ಅತೀ ಕಡಿಮೆ ಪ್ರಕರಣಗಳಾಗಿವೆ. ಆದರೆ ಪ್ರಪಂಚದ ಇತರ ಭಾಗಗಳಲ್ಲಿ ಕೊರೊನಾ ಹೆಚ್ಚಾಗುತ್ತಿದೆ. ಇದನ್ನು ನಿಭಾಯಿಸಲು ಹಲವು ರಾಷ್ಟ್ರಗಳು ಮತ್ತೆ ಲಾಕ್‌ಡೌನ್‌ ಮೊರೆಹೋಗುತ್ತಿವೆ. ಇದು 3ನೇ ಅಲೆಯ ಮುನ್ಸೂಚನೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಐರೋಪ್ಯ ರಾಷ್ಟ್ರಗಳಲ್ಲಿ ಕೊರೊನಾ ಸೋಂಕು ಗಣನೀಯವಾಗಿ ಹೆಚ್ಚುತ್ತಿದ್ದು, ಆಸ್ಟ್ರೀಯಾ, ನೆದರ್ಲೆಂಡ್, ಡೆನ್ಮಾರ್ಕ್‌, ಜರ್ಮನಿ, ನಾರ್ವೆ, ಲ್ಯಾಟ್ವಿಯಾ ಮತ್ತು ರಷ್ಯಾದಲ್ಲಿ ಭಾಗಶಃ ಲಾಕ್‌ಡೌನ್‌ ಜಾರಿಯಾಗಿದೆ. ಕೊರೊನಾ ವಿರುದ್ದ ನೀಡಲಾಗುವ ಎರಡು ಡೋಸ್‌ಗಳ ವ್ಯಾಕ್ಸಿನ್‌ ಅನ್ನು ಪಡೆಯದೇ ಇರುವವರಿಗೆ ಮಾತ್ರ ನಿರ್ಬಂಧಗಳನ್ನು ಹೇರುವ ಮೂಲಕ ಭಾಗಶಃ ಲಾಕ್‌ಡೌನ್‌ ಮಾಡಲು ಮುಂದಾಗಿವೆ. ಈ ರೀತಿಯಲ್ಲಿ, ಕೊರೊನಾ ಲಸಿಕೆ ಹಾಕಿಸಿಕೊಳ್ಳದವರು ತ್ವರಿತವಾಗಿ ವ್ಯಾಕ್ಸಿನ್‌ ಹಾಕಿಸಿಕೊಳ್ಳಲು ಅಲ್ಲಿನ ಸರ್ಕಾರಗಳು ಜನರನ್ನು ಒತ್ತಾಯಿಸುತ್ತಿವೆ.

ಯಾವ ದೇಶದಲ್ಲಿ ಯಾವ ರೀತಿಯ ಲಾಕ್‌ಡೌನ್‌ ಇವೆ ಎಂಬ ಮಾಹಿತಿ ಇಲ್ಲಿದೆ.

ನೆದರ್ಲೆಂಡ್: ನೆದರ್ಲೆಂಡ್‌ನಲ್ಲಿ ದಿನಕ್ಕೆ 16,000 ಪ್ರಕರಣಗಳು ದಾಖಲಾಗಿತ್ತಿವೆ. ಹೀಗಾಗಿ, ಶನಿವಾರದಿಂದ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ಅಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಸಂಪೂರ್ಣವಾಗಿ ನಿರ್ಬಂಧ ಹೇರಲಾಗಿದೆ. ಅಂಗಡಿಗಳು, ಶಾಂಪಿಂಗ್ ಮಾಲ್‌ಗಳನ್ನು ಮುಚ್ಚಲಾಗಿದೆ. ಸೂಪರ್‌ ಮಾರ್ಕೆಟ್‌ ಹಾಗೂ ಅವಶ್ಯಕವಲ್ಲದ ಸಾಮಗ್ರಿಗಳನ್ನು ಮಾರಾಟ ಮಾಡುವ ಅಂಗಡಿಗಳಿಗೆ ಈ ನಿಯಮಗಳು ಅನ್ವಯವಾಗುತ್ತವೆ ಎಂದು ಅಲ್ಲಿನ ಹಂಗಾಮಿ ಪ್ರಧಾನಿ ಮಾರ್ಕ್‌ ರಟ್ಟೆ ಹೇಳಿದ್ದಾರೆ. ರಾತ್ರಿ 08 ಗಂಟೆವರೆಗೆ ಮಾತ್ರ ಕೆಫೆಗಳು, ಹೋಟೆಲ್‌ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.

ಆಸ್ಟ್ರಿಯಾ: ಆಸ್ಟ್ರೀಯಾದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಭಾನುವಾರದಿಂದಲೇ ಲಾಕ್‌ಡೌನ್‌ ಜಾರಿಯಾಗಿದೆ. ಲಸಿಕೆ ಹಾಕಿಸಿಕೊಳ್ಳದೇ ಇರುವವರಿಗೆ ಹೆಚ್ಚಾಗಿ ಸೋಂಕು ಭಾದಿಸುವುದರಿಂದ, ಲಸಿಕೆ ಹಾಕಿಸಿಕೊಳ್ಳದೇ ಇರುವವರು ಸಾರ್ವಜನಿಕ ಸ್ಥಳಗಳಿಗೆ ತೆರಳುವಂತಿಲ್ಲ ಎಂದು ನಿರ್ಬಂಧ ವಿಧಿಸಲಾಗಿದೆ.

ವೃತ್ತಿ ಸಂಬಂಧಿತ ಓಡಾಟ, ದಿನಸಿ ಖರೀದಿ, ವ್ಯಾಯಾಮದ ಉದ್ದೇಶದ ವಾಕಿಂಗ್, ಲಸಿಕೆ ಪಡೆಯುವವರಿಗೆ, ಆರೋಗ್ಯ ತಪಾಸಣೆಗೆ ತೆರಳುವವರಿಗೆ ಮಾತ್ರ ಹೊರಹೋಗಲು ಅವಕಾಶವಿದ್ದು, ಉಳಿದ ಎಲ್ಲಾ ರೀತಿಯ ಓಡಾಟಗಳನ್ನು ನಿರ್ಬಂಧಿಸಲಾಗಿದೆ. ನ.24ರ ವರೆಗೆ ಲಾಕ್‌ಡೌನ್‌ ಜಾರಿಯಲ್ಲಿರಲಿದೆ.

ನಾರ್ವೆ: ನಾರ್ವೆಯಲ್ಲಿಯೂ ಕೊರೊನಾ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿವೆ. ಆದರೆ, ಅಲ್ಲಿನ ಸರ್ಕಾರ ಲಾಕ್‌ಡೌನ್‌ ಜಾರಿ ಮಾಡಲು ನಿರಾಕರಿಸುತ್ತಿದ್ದು, ಲಾಕ್‌ಡೌನ್‌ಗೆ ಬದಲಾಗಿ ಪರ್ಯಾಯ ಕ್ರಮಗಳನ್ನು ಜಾರಿಗೊಳಿಸಲು ಆಲೋಚಿಸುತ್ತಿದೆ. ಅದಕ್ಕಾಗಿ, ಪರ್ಯಾಯಗಳನ್ನು ಯಾವುದು ಎಂದು ಹುಡುಕಾಟ ನಡೆಸುತ್ತಿದೆ. ಲಾಕ್‌ಡೌನ್ ಬದಲು, ದೇಶದ ಎಲ್ಲರಿಗೂ 3ನೇ ಡೋಸ್‌ ಲಸಿಕೆ ನೀಡುವ ಬಗ್ಗೆ ನಾರ್ವೆ ಪ್ರಧಾನಿ ಜೋನಾಸ್‌ ಜೋಹರ್‌ ಚಿಂತನೆ ನಡೆಸಿದ್ದು, ಲಸಿಕೆ ಪಡೆದ ಎಲ್ಲರಿಗೂ ಕರೋನಾ ಪಾಸ್‌ಗಳನ್ನು ವಿತರಿಸುವಂತೆ ಸ್ಥಳೀಯ ಸರ್ಕಾರಗಳಿಗೆ ಸೂಚಿಸಲು ತೀರ್ಮಾನಿಸಲಾಗಿದೆ. ಅಂತಹ ಪಾಸ್‌ಗಳನ್ನು ಪಡೆದವರಿಗೆ ಮಾತ್ರ ಮನೆಗಳಿಂದ ಹೊರಬರಲು ಅವಕಾಶ ಸಿಗಲಿದೆ.

ಡೆನ್ಮಾರ್ಕ್: ಡೆನ್ಮಾರ್ಕ್‌ನಲ್ಲಿ ಕೊರೊನಾ ಲಸಿಕೆ ಅಭಿಯಾನ ಭರದಿಂದ ಸಾಗುತ್ತಿದೆ. ಇದೇ ಹೊತ್ತಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯೂ ಹೆಚ್ಚುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಕಳೆದ ಬಾರಿ ವಿಧಿಸಿದ್ದ ನಿರ್ಬಂಧಗಳನ್ನು ಮತ್ತೆ ಜಾರಿಗೊಳಿಸಲು ಮುಂದಾಗಿದೆ. ಲಸಿಕೆ ಪಡೆದವರಿಗೆ ಅಥವಾ ಕೊರೊನಾ ನೆಗೆಟಿವ್‌ ಟೆಸ್ಟ್‌ ಪ್ರಮಾಣಪತ್ರ ಹೊಂದಿರುವವರಿಗೆ ಮಾತ್ರ ಬಾರ್‌ ಮತ್ತು ಕ್ಲಬ್‌ಗಳಿಗೆ ಪ್ರವೇಶ ಕಲ್ಪಿಸಲು ಚಿಂತನೆ ನಡೆಸಲಾಗಿದೆ. ಜೊತೆಗೆ ಎರಡು ಡೋಸ್ ಪಡೆದವರಿಗೆ ಹಾಗೂ ಕೊರೊನಾದಿಂದ ಗುಣಮುಖರಾದವರಿಗೆ ಸಾರ್ವಜನಿಕ ಸ್ಥಳಗಳನ್ನು ಬಳಸಲು ಕೊರೊನಾ ಪಾಸ್‌ಗಳನ್ನು ನೀಡಲು ನಿರ್ಧರಿಸಲಾಗಿದೆ.

ಜರ್ಮನಿ: ಜರ್ಮನಿಯಲ್ಲಿ ಈಗಾಗಲೇ ಕೊರೊನಾ 4ನೇ ಅಲೆ ಆವರಿಸಿಕೊಂಡಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಪ್ರತಿದಿನ 50,000 ದಾಟುತ್ತಿದೆ ಎಂದು ಹೇಳಲಾಗಿದೆ. ಹೀಗಾಗಿ, ಹಲವು ನಿರ್ಬಂಧಗಳನ್ನು ಜಾರಿಗೆ ತರಲಾಗಿದ್ದು, ಸಾರ್ವಜನಿಕ ಸ್ಥಳಗಳಿಗೆ ಎರಡು ಡೋಸ್ ಲಸಿಕೆ ಪಡೆಯದವರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಎರಡು ಡೋಸ್ ಪಡೆದವರು ಮತ್ತು ಕೊರೊನಾದಿಂದ ಗುಣಮುಖರಾದವರಿಗೆ ಮಾತ್ರ ರೆಸ್ಟೋರೆಂಟ್‌ಗಳಲ್ಲಿ, ಬಾರ್‌ ಮತ್ತು ಕ್ಲಬ್‌ಗಳಿಗೆ ಪ್ರವೇಶವನ್ನು ಸೂಚಿಸಲಾಗಿದೆ. ವೈದ್ಯಕೀಯ ಕಾರಣಗಳಿಗಾಗಿ ಮನೆಗಳಿಂದ ಹೊರ ಬರುವವರಿಗೆ ಹಾಗೂ ಮಕ್ಕಳಿಗೆ ಈ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.

ಲ್ಯಾಟ್ವಿಯಾ: ಯೂರೋಪ್‌ ರಾಷ್ಟ್ರಗಳ ಪೈಕಿ, ಅತೀ ಕಡಿಮೆ ಜನರಿಗೆ ಲಸಿಕೆ ನೀಡಿದ ರಾಷ್ಟ್ರ ಎಂಬ ಕುಖ್ಯಾತಿಗೆ ಲ್ಯಾಟ್ವಿಯಾ ಗುರಿಯಾಗಿದೆ. ಈ ದೇಶದಲ್ಲಿ ಲಸಿಕೆ ಅಭಿಯಾನ ಕುಂಟುತ್ತಾ ಸಾಗಿದೆ. ಹೀಗಾಗಿ, ಕಳೆದ ಅಕ್ಟೋಬರ್‌ನಲ್ಲಿಯೇ ಇಲ್ಲಿ ನಾಲ್ಕು ವಾರಗಳ ಲಾಕ್‌ಡೌನ್ ಹೇರಲಾಗಿತ್ತು. ಇದೀಗ, ನವೆಂಬರ್‌ನಿಂದ ಕೆಲವು ನಿರ್ಬಂಧಗಳನ್ನು ಸಡಿಲಿಸಲಾಗಿದೆ. ಆದರೆ, ಕೊರೊನಾ ಅಬ್ಬರ ಲ್ಯಾಟ್ವಿಯಾದಲ್ಲಿ ಏರಿಳಿತ ಕಾಣುತ್ತಿದ್ದು, ಮತ್ತೆ ಸಂಪೂರ್ಣ ಲಾಕ್‌ಡೌನ್ ಮೊರೆ ಹೋಗುವ ಸಾಧ್ಯತೆ ಇದ್ದು, ಸರ್ಕಾರ ಹಲವು ಹಂತಗಳಲ್ಲಿ ಸಭೆ ನಡೆಸುತ್ತಿದೆ.

ರಷ್ಯಾ: ಭಾನುವಾರ ರಷ್ಯಾದಲ್ಲಿ 38,000ಕ್ಕೂ ಅಧಿಕ ಕೊರೊನಾ ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ಅಂದು ಒಂದೇ ದಿನ 1,219 ಸಾವುಗಳಾಗಿವೆ. ಹೀಗಾಗಿ, ಅಲ್ಲಿಯೂ ಸಹ ಹಲವು ನಿರ್ಬಂಧಗಳನ್ನು ಜಾರಿಗೊಳಿಸಲು ಸರ್ಕಾರ ಮುಂದಾಗಿದ್ದು, ಈ ಕುರಿತಂತೆ ಸರ್ಕಾರವು ಸಂಸತ್ತಿನಲ್ಲಿ ಎರಡು ಮಸೂದೆಗಳನ್ನು ಮಂಡಿಸಿದೆ. ಅವುಗಳ ಪ್ರಕಾರ,  ಅಂತರ್‌ ರಾಷ್ಟ್ರ ರೈಲು ಮತ್ತು ವಿಮಾನ ಪ್ರಯಾಣಕ್ಕೆ ನಿರ್ಬಂಧ, ಸಾರ್ವಜನಿಕ ಸ್ಥಳಗಳಲ್ಲಿ ಕೊರೊನಾ ಲಸಿಕೆ ಪಡೆಯುವವರಿಗೆ ನಿರ್ಬಂಧ ಹೇರುವ ಅಂಶಗಳಿವೆ. ಸಂಸತ್ತು ಇದಕ್ಕೆ ಅನುಮೋದಿಸಿದರೆ, 2022 ಫೆಬ್ರವರಿಯಲ್ಲಿ ರಷ್ಯಾದಲ್ಲಿ ಲಾಕ್‌ಡೌನ್ ಜಾರಿಯಾಗುವ ಸಾಧ್ಯತೆಗಳಿವೆ ಎಂದು ರಷ್ಯಾದ ಕೊರೊನಾ ಟಾಸ್ಕ್ಫೋರ್ಸ್‌ನ ಮುಖ್ಯಸ್ಥರು ಆಗಿರುವ ಉಪಪ್ರಧಾನಿ ತಾತ್ಯಾನಾ ಗೊಲಿಕೊವಾ ತಿಳಿಸಿದ್ದಾರೆ.

ಈ ರಾಷ್ಟ್ರಗಳ ಹೊರತಾಗಿಯೂ ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚುತ್ತಿವೆ. ಅಮೆರಿಕಾದಲ್ಲಿ ವ್ಯಾಕ್ಸಿನೇಷನ್‌ ಪ್ರಕ್ರಿಯೆ ಗಣನೀಯವಾಗಿ ನಡೆದ ಬಳಿಕ ಅಲ್ಲಿನ ಜನರಿಗೆ ಮಾಸ್ಕ್‌ ಹಾಕುವುದರಿಂದ ವಿನಾಯತಿ ನೀಡಲಾಗಿತ್ತು. ಆದರೆ, ಇದೀಗ ಕೊರೊನಾ ರೂಪಾಂತರಿಗಳು ಕಾಣಿಸಿಕೊಳ್ಳುತ್ತಿದ್ದು, ಅಮೆರಿಕಾ ಮತ್ತೆ ಮಾಸ್ಕ್‌ ಕಡ್ಡಾಯಗೊಳಿಸಲು ಚಿಂತಿಸುತ್ತಿದೆ ಎಂದು ವರದಿಯಾಗಿದೆ.


ಇದನ್ನೂ ಓದಿ: ದಿನದಲ್ಲಿ 8,865 ಹೊಸ ಕೋವಿಡ್‌ ಪ್ರಕರಣ: 9 ತಿಂಗಳಿನಲ್ಲಿಯೇ ಅತ್ಯಂತ ಕಡಿಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....