Homeಮುಖಪುಟಜಗತ್ತಿನ ಹಲವೆಡೆ ಹೆಚ್ಚಿದ ಕೊರೊನಾ ಪ್ರಕರಣಗಳು: ಲಾಕ್‌ಡೌನ್‌ ಘೋಷಿಸಿದ ದೇಶಗಳಿವು

ಜಗತ್ತಿನ ಹಲವೆಡೆ ಹೆಚ್ಚಿದ ಕೊರೊನಾ ಪ್ರಕರಣಗಳು: ಲಾಕ್‌ಡೌನ್‌ ಘೋಷಿಸಿದ ದೇಶಗಳಿವು

- Advertisement -
- Advertisement -

ಕೋವಿಡ್‌ ಎರಡನೇ ಅಲೆ ಸೃಷ್ಠಿಸಿದ್ದ ತಲ್ಲಣದಿಂದ ಭಾರತ ಇನ್ನೂ ಚೇತರಿಸಿಕೊಳ್ಳುತ್ತಿದೆ. ದೇಶದೆಲ್ಲೆಡೆ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 8,865 ಕೋವಿಡ್‌ ಹೊಸ ಪ್ರಕರಣಗಳು ದಾಖಲಾಗಿವೆ. ಇದು 287 ದಿನಗಳಲ್ಲಿಯೇ ದಾಖಲಾದ ಅತೀ ಕಡಿಮೆ ಪ್ರಕರಣಗಳಾಗಿವೆ. ಆದರೆ ಪ್ರಪಂಚದ ಇತರ ಭಾಗಗಳಲ್ಲಿ ಕೊರೊನಾ ಹೆಚ್ಚಾಗುತ್ತಿದೆ. ಇದನ್ನು ನಿಭಾಯಿಸಲು ಹಲವು ರಾಷ್ಟ್ರಗಳು ಮತ್ತೆ ಲಾಕ್‌ಡೌನ್‌ ಮೊರೆಹೋಗುತ್ತಿವೆ. ಇದು 3ನೇ ಅಲೆಯ ಮುನ್ಸೂಚನೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಐರೋಪ್ಯ ರಾಷ್ಟ್ರಗಳಲ್ಲಿ ಕೊರೊನಾ ಸೋಂಕು ಗಣನೀಯವಾಗಿ ಹೆಚ್ಚುತ್ತಿದ್ದು, ಆಸ್ಟ್ರೀಯಾ, ನೆದರ್ಲೆಂಡ್, ಡೆನ್ಮಾರ್ಕ್‌, ಜರ್ಮನಿ, ನಾರ್ವೆ, ಲ್ಯಾಟ್ವಿಯಾ ಮತ್ತು ರಷ್ಯಾದಲ್ಲಿ ಭಾಗಶಃ ಲಾಕ್‌ಡೌನ್‌ ಜಾರಿಯಾಗಿದೆ. ಕೊರೊನಾ ವಿರುದ್ದ ನೀಡಲಾಗುವ ಎರಡು ಡೋಸ್‌ಗಳ ವ್ಯಾಕ್ಸಿನ್‌ ಅನ್ನು ಪಡೆಯದೇ ಇರುವವರಿಗೆ ಮಾತ್ರ ನಿರ್ಬಂಧಗಳನ್ನು ಹೇರುವ ಮೂಲಕ ಭಾಗಶಃ ಲಾಕ್‌ಡೌನ್‌ ಮಾಡಲು ಮುಂದಾಗಿವೆ. ಈ ರೀತಿಯಲ್ಲಿ, ಕೊರೊನಾ ಲಸಿಕೆ ಹಾಕಿಸಿಕೊಳ್ಳದವರು ತ್ವರಿತವಾಗಿ ವ್ಯಾಕ್ಸಿನ್‌ ಹಾಕಿಸಿಕೊಳ್ಳಲು ಅಲ್ಲಿನ ಸರ್ಕಾರಗಳು ಜನರನ್ನು ಒತ್ತಾಯಿಸುತ್ತಿವೆ.

ಯಾವ ದೇಶದಲ್ಲಿ ಯಾವ ರೀತಿಯ ಲಾಕ್‌ಡೌನ್‌ ಇವೆ ಎಂಬ ಮಾಹಿತಿ ಇಲ್ಲಿದೆ.

ನೆದರ್ಲೆಂಡ್: ನೆದರ್ಲೆಂಡ್‌ನಲ್ಲಿ ದಿನಕ್ಕೆ 16,000 ಪ್ರಕರಣಗಳು ದಾಖಲಾಗಿತ್ತಿವೆ. ಹೀಗಾಗಿ, ಶನಿವಾರದಿಂದ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ಅಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಸಂಪೂರ್ಣವಾಗಿ ನಿರ್ಬಂಧ ಹೇರಲಾಗಿದೆ. ಅಂಗಡಿಗಳು, ಶಾಂಪಿಂಗ್ ಮಾಲ್‌ಗಳನ್ನು ಮುಚ್ಚಲಾಗಿದೆ. ಸೂಪರ್‌ ಮಾರ್ಕೆಟ್‌ ಹಾಗೂ ಅವಶ್ಯಕವಲ್ಲದ ಸಾಮಗ್ರಿಗಳನ್ನು ಮಾರಾಟ ಮಾಡುವ ಅಂಗಡಿಗಳಿಗೆ ಈ ನಿಯಮಗಳು ಅನ್ವಯವಾಗುತ್ತವೆ ಎಂದು ಅಲ್ಲಿನ ಹಂಗಾಮಿ ಪ್ರಧಾನಿ ಮಾರ್ಕ್‌ ರಟ್ಟೆ ಹೇಳಿದ್ದಾರೆ. ರಾತ್ರಿ 08 ಗಂಟೆವರೆಗೆ ಮಾತ್ರ ಕೆಫೆಗಳು, ಹೋಟೆಲ್‌ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.

ಆಸ್ಟ್ರಿಯಾ: ಆಸ್ಟ್ರೀಯಾದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಭಾನುವಾರದಿಂದಲೇ ಲಾಕ್‌ಡೌನ್‌ ಜಾರಿಯಾಗಿದೆ. ಲಸಿಕೆ ಹಾಕಿಸಿಕೊಳ್ಳದೇ ಇರುವವರಿಗೆ ಹೆಚ್ಚಾಗಿ ಸೋಂಕು ಭಾದಿಸುವುದರಿಂದ, ಲಸಿಕೆ ಹಾಕಿಸಿಕೊಳ್ಳದೇ ಇರುವವರು ಸಾರ್ವಜನಿಕ ಸ್ಥಳಗಳಿಗೆ ತೆರಳುವಂತಿಲ್ಲ ಎಂದು ನಿರ್ಬಂಧ ವಿಧಿಸಲಾಗಿದೆ.

ವೃತ್ತಿ ಸಂಬಂಧಿತ ಓಡಾಟ, ದಿನಸಿ ಖರೀದಿ, ವ್ಯಾಯಾಮದ ಉದ್ದೇಶದ ವಾಕಿಂಗ್, ಲಸಿಕೆ ಪಡೆಯುವವರಿಗೆ, ಆರೋಗ್ಯ ತಪಾಸಣೆಗೆ ತೆರಳುವವರಿಗೆ ಮಾತ್ರ ಹೊರಹೋಗಲು ಅವಕಾಶವಿದ್ದು, ಉಳಿದ ಎಲ್ಲಾ ರೀತಿಯ ಓಡಾಟಗಳನ್ನು ನಿರ್ಬಂಧಿಸಲಾಗಿದೆ. ನ.24ರ ವರೆಗೆ ಲಾಕ್‌ಡೌನ್‌ ಜಾರಿಯಲ್ಲಿರಲಿದೆ.

ನಾರ್ವೆ: ನಾರ್ವೆಯಲ್ಲಿಯೂ ಕೊರೊನಾ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿವೆ. ಆದರೆ, ಅಲ್ಲಿನ ಸರ್ಕಾರ ಲಾಕ್‌ಡೌನ್‌ ಜಾರಿ ಮಾಡಲು ನಿರಾಕರಿಸುತ್ತಿದ್ದು, ಲಾಕ್‌ಡೌನ್‌ಗೆ ಬದಲಾಗಿ ಪರ್ಯಾಯ ಕ್ರಮಗಳನ್ನು ಜಾರಿಗೊಳಿಸಲು ಆಲೋಚಿಸುತ್ತಿದೆ. ಅದಕ್ಕಾಗಿ, ಪರ್ಯಾಯಗಳನ್ನು ಯಾವುದು ಎಂದು ಹುಡುಕಾಟ ನಡೆಸುತ್ತಿದೆ. ಲಾಕ್‌ಡೌನ್ ಬದಲು, ದೇಶದ ಎಲ್ಲರಿಗೂ 3ನೇ ಡೋಸ್‌ ಲಸಿಕೆ ನೀಡುವ ಬಗ್ಗೆ ನಾರ್ವೆ ಪ್ರಧಾನಿ ಜೋನಾಸ್‌ ಜೋಹರ್‌ ಚಿಂತನೆ ನಡೆಸಿದ್ದು, ಲಸಿಕೆ ಪಡೆದ ಎಲ್ಲರಿಗೂ ಕರೋನಾ ಪಾಸ್‌ಗಳನ್ನು ವಿತರಿಸುವಂತೆ ಸ್ಥಳೀಯ ಸರ್ಕಾರಗಳಿಗೆ ಸೂಚಿಸಲು ತೀರ್ಮಾನಿಸಲಾಗಿದೆ. ಅಂತಹ ಪಾಸ್‌ಗಳನ್ನು ಪಡೆದವರಿಗೆ ಮಾತ್ರ ಮನೆಗಳಿಂದ ಹೊರಬರಲು ಅವಕಾಶ ಸಿಗಲಿದೆ.

ಡೆನ್ಮಾರ್ಕ್: ಡೆನ್ಮಾರ್ಕ್‌ನಲ್ಲಿ ಕೊರೊನಾ ಲಸಿಕೆ ಅಭಿಯಾನ ಭರದಿಂದ ಸಾಗುತ್ತಿದೆ. ಇದೇ ಹೊತ್ತಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯೂ ಹೆಚ್ಚುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಕಳೆದ ಬಾರಿ ವಿಧಿಸಿದ್ದ ನಿರ್ಬಂಧಗಳನ್ನು ಮತ್ತೆ ಜಾರಿಗೊಳಿಸಲು ಮುಂದಾಗಿದೆ. ಲಸಿಕೆ ಪಡೆದವರಿಗೆ ಅಥವಾ ಕೊರೊನಾ ನೆಗೆಟಿವ್‌ ಟೆಸ್ಟ್‌ ಪ್ರಮಾಣಪತ್ರ ಹೊಂದಿರುವವರಿಗೆ ಮಾತ್ರ ಬಾರ್‌ ಮತ್ತು ಕ್ಲಬ್‌ಗಳಿಗೆ ಪ್ರವೇಶ ಕಲ್ಪಿಸಲು ಚಿಂತನೆ ನಡೆಸಲಾಗಿದೆ. ಜೊತೆಗೆ ಎರಡು ಡೋಸ್ ಪಡೆದವರಿಗೆ ಹಾಗೂ ಕೊರೊನಾದಿಂದ ಗುಣಮುಖರಾದವರಿಗೆ ಸಾರ್ವಜನಿಕ ಸ್ಥಳಗಳನ್ನು ಬಳಸಲು ಕೊರೊನಾ ಪಾಸ್‌ಗಳನ್ನು ನೀಡಲು ನಿರ್ಧರಿಸಲಾಗಿದೆ.

ಜರ್ಮನಿ: ಜರ್ಮನಿಯಲ್ಲಿ ಈಗಾಗಲೇ ಕೊರೊನಾ 4ನೇ ಅಲೆ ಆವರಿಸಿಕೊಂಡಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಪ್ರತಿದಿನ 50,000 ದಾಟುತ್ತಿದೆ ಎಂದು ಹೇಳಲಾಗಿದೆ. ಹೀಗಾಗಿ, ಹಲವು ನಿರ್ಬಂಧಗಳನ್ನು ಜಾರಿಗೆ ತರಲಾಗಿದ್ದು, ಸಾರ್ವಜನಿಕ ಸ್ಥಳಗಳಿಗೆ ಎರಡು ಡೋಸ್ ಲಸಿಕೆ ಪಡೆಯದವರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಎರಡು ಡೋಸ್ ಪಡೆದವರು ಮತ್ತು ಕೊರೊನಾದಿಂದ ಗುಣಮುಖರಾದವರಿಗೆ ಮಾತ್ರ ರೆಸ್ಟೋರೆಂಟ್‌ಗಳಲ್ಲಿ, ಬಾರ್‌ ಮತ್ತು ಕ್ಲಬ್‌ಗಳಿಗೆ ಪ್ರವೇಶವನ್ನು ಸೂಚಿಸಲಾಗಿದೆ. ವೈದ್ಯಕೀಯ ಕಾರಣಗಳಿಗಾಗಿ ಮನೆಗಳಿಂದ ಹೊರ ಬರುವವರಿಗೆ ಹಾಗೂ ಮಕ್ಕಳಿಗೆ ಈ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.

ಲ್ಯಾಟ್ವಿಯಾ: ಯೂರೋಪ್‌ ರಾಷ್ಟ್ರಗಳ ಪೈಕಿ, ಅತೀ ಕಡಿಮೆ ಜನರಿಗೆ ಲಸಿಕೆ ನೀಡಿದ ರಾಷ್ಟ್ರ ಎಂಬ ಕುಖ್ಯಾತಿಗೆ ಲ್ಯಾಟ್ವಿಯಾ ಗುರಿಯಾಗಿದೆ. ಈ ದೇಶದಲ್ಲಿ ಲಸಿಕೆ ಅಭಿಯಾನ ಕುಂಟುತ್ತಾ ಸಾಗಿದೆ. ಹೀಗಾಗಿ, ಕಳೆದ ಅಕ್ಟೋಬರ್‌ನಲ್ಲಿಯೇ ಇಲ್ಲಿ ನಾಲ್ಕು ವಾರಗಳ ಲಾಕ್‌ಡೌನ್ ಹೇರಲಾಗಿತ್ತು. ಇದೀಗ, ನವೆಂಬರ್‌ನಿಂದ ಕೆಲವು ನಿರ್ಬಂಧಗಳನ್ನು ಸಡಿಲಿಸಲಾಗಿದೆ. ಆದರೆ, ಕೊರೊನಾ ಅಬ್ಬರ ಲ್ಯಾಟ್ವಿಯಾದಲ್ಲಿ ಏರಿಳಿತ ಕಾಣುತ್ತಿದ್ದು, ಮತ್ತೆ ಸಂಪೂರ್ಣ ಲಾಕ್‌ಡೌನ್ ಮೊರೆ ಹೋಗುವ ಸಾಧ್ಯತೆ ಇದ್ದು, ಸರ್ಕಾರ ಹಲವು ಹಂತಗಳಲ್ಲಿ ಸಭೆ ನಡೆಸುತ್ತಿದೆ.

ರಷ್ಯಾ: ಭಾನುವಾರ ರಷ್ಯಾದಲ್ಲಿ 38,000ಕ್ಕೂ ಅಧಿಕ ಕೊರೊನಾ ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ಅಂದು ಒಂದೇ ದಿನ 1,219 ಸಾವುಗಳಾಗಿವೆ. ಹೀಗಾಗಿ, ಅಲ್ಲಿಯೂ ಸಹ ಹಲವು ನಿರ್ಬಂಧಗಳನ್ನು ಜಾರಿಗೊಳಿಸಲು ಸರ್ಕಾರ ಮುಂದಾಗಿದ್ದು, ಈ ಕುರಿತಂತೆ ಸರ್ಕಾರವು ಸಂಸತ್ತಿನಲ್ಲಿ ಎರಡು ಮಸೂದೆಗಳನ್ನು ಮಂಡಿಸಿದೆ. ಅವುಗಳ ಪ್ರಕಾರ,  ಅಂತರ್‌ ರಾಷ್ಟ್ರ ರೈಲು ಮತ್ತು ವಿಮಾನ ಪ್ರಯಾಣಕ್ಕೆ ನಿರ್ಬಂಧ, ಸಾರ್ವಜನಿಕ ಸ್ಥಳಗಳಲ್ಲಿ ಕೊರೊನಾ ಲಸಿಕೆ ಪಡೆಯುವವರಿಗೆ ನಿರ್ಬಂಧ ಹೇರುವ ಅಂಶಗಳಿವೆ. ಸಂಸತ್ತು ಇದಕ್ಕೆ ಅನುಮೋದಿಸಿದರೆ, 2022 ಫೆಬ್ರವರಿಯಲ್ಲಿ ರಷ್ಯಾದಲ್ಲಿ ಲಾಕ್‌ಡೌನ್ ಜಾರಿಯಾಗುವ ಸಾಧ್ಯತೆಗಳಿವೆ ಎಂದು ರಷ್ಯಾದ ಕೊರೊನಾ ಟಾಸ್ಕ್ಫೋರ್ಸ್‌ನ ಮುಖ್ಯಸ್ಥರು ಆಗಿರುವ ಉಪಪ್ರಧಾನಿ ತಾತ್ಯಾನಾ ಗೊಲಿಕೊವಾ ತಿಳಿಸಿದ್ದಾರೆ.

ಈ ರಾಷ್ಟ್ರಗಳ ಹೊರತಾಗಿಯೂ ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚುತ್ತಿವೆ. ಅಮೆರಿಕಾದಲ್ಲಿ ವ್ಯಾಕ್ಸಿನೇಷನ್‌ ಪ್ರಕ್ರಿಯೆ ಗಣನೀಯವಾಗಿ ನಡೆದ ಬಳಿಕ ಅಲ್ಲಿನ ಜನರಿಗೆ ಮಾಸ್ಕ್‌ ಹಾಕುವುದರಿಂದ ವಿನಾಯತಿ ನೀಡಲಾಗಿತ್ತು. ಆದರೆ, ಇದೀಗ ಕೊರೊನಾ ರೂಪಾಂತರಿಗಳು ಕಾಣಿಸಿಕೊಳ್ಳುತ್ತಿದ್ದು, ಅಮೆರಿಕಾ ಮತ್ತೆ ಮಾಸ್ಕ್‌ ಕಡ್ಡಾಯಗೊಳಿಸಲು ಚಿಂತಿಸುತ್ತಿದೆ ಎಂದು ವರದಿಯಾಗಿದೆ.


ಇದನ್ನೂ ಓದಿ: ದಿನದಲ್ಲಿ 8,865 ಹೊಸ ಕೋವಿಡ್‌ ಪ್ರಕರಣ: 9 ತಿಂಗಳಿನಲ್ಲಿಯೇ ಅತ್ಯಂತ ಕಡಿಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...