Homeಸಿನಿಮಾಕ್ರೀಡೆಐಪಿಎಲ್‌ನಲ್ಲಿ ದೀಪಕ್‌ ಚಹಾರ್‌ಗೆ ಹೆಚ್ಚಿದ ಬೇಡಿಕೆ

ಐಪಿಎಲ್‌ನಲ್ಲಿ ದೀಪಕ್‌ ಚಹಾರ್‌ಗೆ ಹೆಚ್ಚಿದ ಬೇಡಿಕೆ

- Advertisement -
- Advertisement -

ಐಪಿಎಲ್‌-2022ರ ಹರಾಜು ಪ್ರಕ್ರಿಯೆ ಫೆಬ್ರವರಿ 12 ಮತ್ತು 13 ರಂದು ನಡೆಯಲಿದೆ. ಈ ಹರಾಜಿನಲ್ಲಿ ವಿಶೇಷವಾಗಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ವೇಗದ ಬೌಲರ್ ದೀಪಕ್ ಚಹಾರ್ ದೊಡ್ಡ ಮೊತ್ತವನ್ನು ಪಡೆಯುತ್ತಾರೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಚಹರ್ ಅವರು 2018 ರಲ್ಲಿ ಸಿಎಸ್‌ಕೆ ತಂಡಕ್ಕೆ ಆಯ್ಕೆಯಾದರು. ಕಳೆದ ನಾಲ್ಕು ವರ್ಷಗಳಿಂದ ಸಿಎಸ್‌ಕೆ ತಂಡಕ್ಕಾಗಿ ಅವರು ಆಡಿದ್ದಾರೆ. ವೇಗಿ ಬೌಲರ್‌ ಆಗಿರುವ ಚಹರ್, ಐಪಿಎಲ್‌ನಲ್ಲಿ ಇದುವರೆಗೆ 63 ಪಂದ್ಯಗಳನ್ನು ಆಡಿದ್ದಾರೆ. 2019ರಲ್ಲಿ ಅವರ ಅತ್ಯುತ್ತಮ ಪ್ರದರ್ಶನದಿಂದಾಗಿ ಚೆನ್ನೈ ತಂಡವು 59 ವಿಕೆಟ್‌ಗಳನ್ನು ಪಡೆದಿತ್ತು. ಅದಲ್ಲಿ ಚಹರ್‌ 22 ವಿಕೆಟ್‌ಗಳನ್ನು ಪಡೆದಿದ್ದರು.

ಇದನ್ನೂ ಓದಿ:ಭಾರತೀಯ ಕ್ರಿಕೆಟ್ ತಂಡದ ಭವಿಷ್ಯದ ನಾಯಕನಾಗುವ ಹುರುಪಿನಲ್ಲಿರುವ ರಿಷಬ್ ಪಂತ್‌

“ಯಾವುದೇ ಭಾರತೀಯ ಬೌಲರ್ ಹೊಸ ಚೆಂಡಿನೊಂದಿಗೆ ನಿಯಮಿತವಾಗಿ ವಿಕೆಟ್ ಕೀಳುವುದನ್ನು ನಾನು ನೋಡಿಲ್ಲ. ಆದರೆ, ಚಹರ್‌ ಹೊಸ ಚೆಂಡಿನೊಂದಿಗೆ ನಿಯಮಿತವಾಗಿ ವಿಕೆಟ್‌ಗಳನ್ನು ಉರುಳಿಸುತ್ತಾರೆ. ಬೇರೆ ಯಾವುದೇ ಭಾರತೀಯ ಬೌಲರ್ ಈ ರೀತಿ ವಿಕೆಟ್‌ ಪಡೆಯುವುದನ್ನ ನೋಡಲು ಸಾಧ್ಯವಿಲ್ಲ” ಎಂದು ಭಾರತದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಹೇಳಿದ್ದಾರೆ.

“ಮೊದಲ ಮೂರು ಓವರ್‌ಗಳಲ್ಲಿ ದೀಪಕ್ ಚಹರ್ ತಂಡದ ಬ್ಯಾಂಕ್ ಆಗಿರುತ್ತಾರೆ. ಅವರು ಪವರ್‌ಪ್ಲೇ ಓವರ್‌ಗಳಲ್ಲಿ ಬಂದು ವಿಕೆಟ್‌ಗಳನ್ನು ಪಡೆದು ಎದುರಾಳಿಗಳ ಬೆನ್ನು ಮುರಿಯುತ್ತಾರೆ. ಅಹಮದಾಬಾದ್ ಮತ್ತು ಲಕ್ನೋದಂತೆ ಚೆನ್ನೈ ಮತ್ತೆ ಅವರನ್ನು ಬಿಡ್ ಮಾಡಲಿದೆ” ಎಂದು ಚೋಪ್ರಾ ಹೇಳಿದ್ದಾರೆ.

ಇದನ್ನೂ ಓದಿ: ಎಲ್ಲಾ ಮಾದರಿಯ ಕ್ರಿಕೆಟ್‌‌‌ಗೆ ವಿದಾಯ ಹೇಳಿದ ಹರ್ಭಜನ್‌ ಸಿಂಗ್‌‌

“ಚಹರ್‌ ಬೌಲಿಂಗ್‌ ಜೊತೆಗೆ ಇತ್ತೀಚೆಗೆ ಉತ್ತಮ ಬ್ಯಾಟಿಂಗ್‌ ಕೂಡ ಮಾಡುತ್ತಿದ್ದಾರೆ. ಅವರಿಗೆ ಅತಿಹೆಚ್ಚು ಬೇಡಿಕೆ ಇದೆ. ಆದ್ದರಿಂದ, ಅವರು ಮುಂದಿನ ಹರಾಜಿನಲ್ಲಿ ಗರಿಷ್ಟ ವಿಕೆಟ್ ಪಡೆಯಬಹುದು”ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಅರ್ಧಶತಕವನ್ನು ಗಳಿಸುವ ಮೂಲಕ ಚಹರ್ ಭಾರತ ತಂಡಕ್ಕೆ ಬ್ಯಾಟಿಂಗ್‌ ಕೊಡುಗೆ ನೀಡಿದ್ದರು. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲೂ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು.

ಇದನ್ನೂ ಓದಿ: ಕ್ರಿಕೆಟ್ ಜಗತ್ತು ಕಂಡ ಕೆಚ್ಚೆದೆಯ ನಾಯಕ ಕೊಹ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...