Homeಮುಖಪುಟಮಣಿಪುರದಲ್ಲಿ ಹೆಚ್ಚಾದ ಹಿಂಸಾಚಾರ: ಕೇಂದ್ರ ಸಚಿವರ ಮನೆಗೆ ಬೆಂಕಿ!

ಮಣಿಪುರದಲ್ಲಿ ಹೆಚ್ಚಾದ ಹಿಂಸಾಚಾರ: ಕೇಂದ್ರ ಸಚಿವರ ಮನೆಗೆ ಬೆಂಕಿ!

- Advertisement -
- Advertisement -

ಮಣಿಪುರದಲ್ಲಿ ಕೆಲ ತಿಂಗಳಿನಿಂದ ನಡೆಯುತ್ತಿರುವ ಹಿಂಸಾಚಾರ ಮುಂದುವರೆದಿದ್ದು, ಗುರುವಾರ ರಾತ್ರಿ 11ರ ಸುಮಾರಿಗೆ ಗಲಭೆ ಪೀಡಿತ ಮಣಿಪುರ ಕೊಂಗಾದಲ್ಲಿರುವ ಕೇಂದ್ರ ಸಚಿವ ಆರ್.ಕೆ. ರಂಜನ್ ಸಿಂಗ್ ಅವರ ಮನೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ರಾತ್ರಿ 11ರ ಸುಮಾರಿಗೆ ಸಾವಿರಕ್ಕೂ ಹೆಚ್ಚು ಜನರ ಗುಂಪು ವಿದೇಶಾಂಗ ಇಲಾಖೆ ರಾಜ್ಯ ಖಾತೆ ಸಚಿವ ರಂಜನ್ ಸಿಂಗ್‌ ನಿವಾಸದ ಮೇಲೆ ದಾಳಿ ಮಾಡಿ, ಬೆಂಕಿ ಹಚ್ಚಿದ್ದು, ಅವರ ನಿವಾಸಕ್ಕೆ ಭಾರಿ ಹಾನಿಯಾಗಿದೆ. ಘಟನೆ ಸಂದರ್ಭದಲ್ಲಿ ಸಿಂಗ್‌ ಹಾಗೂ ಅವರ ಕುಟುಂಬ ಮಣಿಪುರದಲ್ಲಿ ಇರಲಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಈ ಘಟನೆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ರಂಜನ್ ಸಿಂಗ್‌, ”ಸರ್ಕಾರಿ ಕೆಲಸದ ವಿಚಾರವಾಗಿ ನಾನೀಗ ಕೇರಳದಲ್ಲಿದ್ದೇನೆ. ಅದೃಷ್ಟವಶಾತ್ ನನ್ನ ಮನೆಯಲ್ಲಿ ಕಳೆದ ರಾತ್ರಿ ಯಾರೊಬ್ಬರೂ ಗಾಯಗೊಂಡಿಲ್ಲ. ಕಿಡಿಗೇಡಿಗಳು ಪೆಟ್ರೋಲ್ ಬಾಂಬ್‌ಗಳೊಂದಿಗೆ ಬಂದಿದ್ದರು. ನನ್ನ ಮನೆಯ ನೆಲಮಹಡಿ ಮತ್ತು ಮೊದಲ ಮಹಡಿಗೆ ಹಾನಿಯಾಗಿದೆ. ಇದು ನೋವಿನ ಸಂಗತಿ. ಈಗಲೂ ಶಾಂತಿ ಕಾಪಾಡುವಂತೆ ಜನರಲ್ಲಿ ಮನವಿ ಮಾಡುತ್ತೇನೆ. ಈ ರೀತಿಯ ಕೃತ್ಯದಲ್ಲಿ ಭಾಗಿಯಾಗುವುದು ಸಂಪೂರ್ಣ ಅಮಾನವೀಯವಾದದ್ದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಂದುವರೆದ ಮಣಿಪುರ ಹಿಂಸಾಚಾರ: ಸಚಿವೆ ಮನೆಗೆ ಬೆಂಕಿ; ಭುಗಿಲೆದ್ದ ಆಕ್ರೋಶ

ಬುಧವಾರ ಶಂಕಿತ ಉಗ್ರರು ಪೂರ್ವ ಇಂಫಾಲದ ಖಾಮೆಲಾಕ್‌ ಗ್ರಾಮದಲ್ಲಿ ನಡೆಸಿದ ದಾಳಿ ವೇಳೆ 9 ಮಂದಿ ಮೃತಪಟ್ಟು, 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಘಟನೆ ಬೆನ್ನಲ್ಲೇ ಕೈಗಾರಿಕಾ ಸಚಿವೆ ನೆಮ್ಚಾ ಕಿಪ್‌ಗೆನ್‌ ನಿವಾಸಕ್ಕೆ ಬೆಂಕಿ ಹಚ್ಚಲಾಗಿತ್ತು. ಕಳೆದ ತಿಂಗಳು ಲೋಕೋಪಯೋಗಿ ಸಚಿವರ ಮನೆಯ ಮೇಲೆ ಇದೇ ರೀತಿ ದಾಳಿ ಮಾಡಲಾಗಿತ್ತು.

ಕೈಗಾರಿಕಾ ಸಚಿವೆ ನೆಮ್ಚಾ ಕಿಪ್‌ಗೆನ್‌ ಅವರಿಗೆ ಸೇರಿದ ಲಾಂಫೀಲ್‌ ಪ್ರದೇಶದಲ್ಲಿರುವ ಸರ್ಕಾರಿ ನಿವಾಸಕ್ಕೆ ಬುಧವಾರ ರಾತ್ರಿ ಬೆಂಕಿ ಹಚ್ಚಲಾಗಿತ್ತು. ಈ ಕೃತ್ಯ ನಡೆದ ವೇಳೆ ಸಚಿವೆ ಮನೆಯಲ್ಲಿ ಇರಲಿಲ್ಲ. ಅಧಿಕೃತ ಪ್ರವಾಸದ ಕಾರಣದಿಂದ ಹೊರಗಿದ್ದರು. ಈ ವೇಳೆ ಈ ದುಷ್ಕೃತ್ಯ ನಡೆಸಲಾಗಿದೆ. ಮನೆಯಲ್ಲಿದ್ದ ವಸ್ತುಗಳು ಬೆಂಕಿಗಾಹುತಿಯಾಗಿದ್ದು ಅಪಾರ ಪ್ರಮಾಣದ ನಷ್ಟವಾಗಿದೆ.

ಮಣಿಪುರದಲ್ಲಿ ಪರಿಶಿಷ್ಟ ಪಂಗಡ ಮೀಸಲಾತಿ ವಿಚಾರವಾಗಿ ಮೈತೆಯಿ ಮತ್ತು ಕುಕಿ ಸಮುದಾಯದ ನಡುವೆ ಒಂದು ತಿಂಗಳಿಂದ ಹಿಂಸಾಚಾರ ನಡೆಯುತ್ತಿದೆ. ಇದುವರೆಗೆ 100ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ರಾಜ್ಯದಲ್ಲಿ ಶಾಂತಿ ಸ್ಥಾಪಿಸಲು ಸೇನೆ ಮತ್ತು ಅರೆ ಪಡೆಗಳನ್ನು ನಿಯೋಜಿಸಲಾಗಿದೆ. ಶಂಕಿತ ಉಗ್ರರು ಮಂಗಳವಾರ (ಜೂನ್ 13) ರಾತ್ರಿ ದಾಳಿ ನಡೆಸಿದ್ದರು. ಘಟನೆಯಲ್ಲಿ 9 ಮಂದಿ ಮೃತಪಟ್ಟು, 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಇದರ ಬೆನ್ನಲ್ಲೇ, ಕುಕಿ ಸಮುದಾಯದ ನಾಯಕಿಯಾಗಿರುವ ನೆಮ್ಮಾ ಕಿಪ್‌ಗೆನ್ ಅವರ ಅಧಿಕೃತ ನಿವಾಸಕ್ಕೆ ಬುಧವಾರ (ಜೂನ್ 14) ರಾತ್ರಿ ಅಪರಿಚಿತರು ಬೆಂಕಿ ಹಚ್ಚಿದ್ದರು. ಗುರುವಾರವೂ ಹಲವು ಮನೆಗಳಿಗೆ ಬೆಂಕಿ ಹಚ್ಚಲಾಗಿತ್ತು. ಗುರುವಾರ ರಾತ್ರಿ 11ರ ಸುಮಾರಿಗೆ ಗಲಭೆ ಪೀಡಿತ ಮಣಿಪುರ ಕೊಂಗಾದಲ್ಲಿರುವ ಕೇಂದ್ರ ಸಚಿವ ಆರ್.ಕೆ. ರಂಜನ್ ಸಿಂಗ್ ಅವರ ಮನೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...