Homeಮುಖಪುಟಮಣಿಪುರದಲ್ಲಿ ಹೆಚ್ಚಾದ ಹಿಂಸಾಚಾರ: ಕೇಂದ್ರ ಸಚಿವರ ಮನೆಗೆ ಬೆಂಕಿ!

ಮಣಿಪುರದಲ್ಲಿ ಹೆಚ್ಚಾದ ಹಿಂಸಾಚಾರ: ಕೇಂದ್ರ ಸಚಿವರ ಮನೆಗೆ ಬೆಂಕಿ!

- Advertisement -
- Advertisement -

ಮಣಿಪುರದಲ್ಲಿ ಕೆಲ ತಿಂಗಳಿನಿಂದ ನಡೆಯುತ್ತಿರುವ ಹಿಂಸಾಚಾರ ಮುಂದುವರೆದಿದ್ದು, ಗುರುವಾರ ರಾತ್ರಿ 11ರ ಸುಮಾರಿಗೆ ಗಲಭೆ ಪೀಡಿತ ಮಣಿಪುರ ಕೊಂಗಾದಲ್ಲಿರುವ ಕೇಂದ್ರ ಸಚಿವ ಆರ್.ಕೆ. ರಂಜನ್ ಸಿಂಗ್ ಅವರ ಮನೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ರಾತ್ರಿ 11ರ ಸುಮಾರಿಗೆ ಸಾವಿರಕ್ಕೂ ಹೆಚ್ಚು ಜನರ ಗುಂಪು ವಿದೇಶಾಂಗ ಇಲಾಖೆ ರಾಜ್ಯ ಖಾತೆ ಸಚಿವ ರಂಜನ್ ಸಿಂಗ್‌ ನಿವಾಸದ ಮೇಲೆ ದಾಳಿ ಮಾಡಿ, ಬೆಂಕಿ ಹಚ್ಚಿದ್ದು, ಅವರ ನಿವಾಸಕ್ಕೆ ಭಾರಿ ಹಾನಿಯಾಗಿದೆ. ಘಟನೆ ಸಂದರ್ಭದಲ್ಲಿ ಸಿಂಗ್‌ ಹಾಗೂ ಅವರ ಕುಟುಂಬ ಮಣಿಪುರದಲ್ಲಿ ಇರಲಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಈ ಘಟನೆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ರಂಜನ್ ಸಿಂಗ್‌, ”ಸರ್ಕಾರಿ ಕೆಲಸದ ವಿಚಾರವಾಗಿ ನಾನೀಗ ಕೇರಳದಲ್ಲಿದ್ದೇನೆ. ಅದೃಷ್ಟವಶಾತ್ ನನ್ನ ಮನೆಯಲ್ಲಿ ಕಳೆದ ರಾತ್ರಿ ಯಾರೊಬ್ಬರೂ ಗಾಯಗೊಂಡಿಲ್ಲ. ಕಿಡಿಗೇಡಿಗಳು ಪೆಟ್ರೋಲ್ ಬಾಂಬ್‌ಗಳೊಂದಿಗೆ ಬಂದಿದ್ದರು. ನನ್ನ ಮನೆಯ ನೆಲಮಹಡಿ ಮತ್ತು ಮೊದಲ ಮಹಡಿಗೆ ಹಾನಿಯಾಗಿದೆ. ಇದು ನೋವಿನ ಸಂಗತಿ. ಈಗಲೂ ಶಾಂತಿ ಕಾಪಾಡುವಂತೆ ಜನರಲ್ಲಿ ಮನವಿ ಮಾಡುತ್ತೇನೆ. ಈ ರೀತಿಯ ಕೃತ್ಯದಲ್ಲಿ ಭಾಗಿಯಾಗುವುದು ಸಂಪೂರ್ಣ ಅಮಾನವೀಯವಾದದ್ದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಂದುವರೆದ ಮಣಿಪುರ ಹಿಂಸಾಚಾರ: ಸಚಿವೆ ಮನೆಗೆ ಬೆಂಕಿ; ಭುಗಿಲೆದ್ದ ಆಕ್ರೋಶ

ಬುಧವಾರ ಶಂಕಿತ ಉಗ್ರರು ಪೂರ್ವ ಇಂಫಾಲದ ಖಾಮೆಲಾಕ್‌ ಗ್ರಾಮದಲ್ಲಿ ನಡೆಸಿದ ದಾಳಿ ವೇಳೆ 9 ಮಂದಿ ಮೃತಪಟ್ಟು, 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಘಟನೆ ಬೆನ್ನಲ್ಲೇ ಕೈಗಾರಿಕಾ ಸಚಿವೆ ನೆಮ್ಚಾ ಕಿಪ್‌ಗೆನ್‌ ನಿವಾಸಕ್ಕೆ ಬೆಂಕಿ ಹಚ್ಚಲಾಗಿತ್ತು. ಕಳೆದ ತಿಂಗಳು ಲೋಕೋಪಯೋಗಿ ಸಚಿವರ ಮನೆಯ ಮೇಲೆ ಇದೇ ರೀತಿ ದಾಳಿ ಮಾಡಲಾಗಿತ್ತು.

ಕೈಗಾರಿಕಾ ಸಚಿವೆ ನೆಮ್ಚಾ ಕಿಪ್‌ಗೆನ್‌ ಅವರಿಗೆ ಸೇರಿದ ಲಾಂಫೀಲ್‌ ಪ್ರದೇಶದಲ್ಲಿರುವ ಸರ್ಕಾರಿ ನಿವಾಸಕ್ಕೆ ಬುಧವಾರ ರಾತ್ರಿ ಬೆಂಕಿ ಹಚ್ಚಲಾಗಿತ್ತು. ಈ ಕೃತ್ಯ ನಡೆದ ವೇಳೆ ಸಚಿವೆ ಮನೆಯಲ್ಲಿ ಇರಲಿಲ್ಲ. ಅಧಿಕೃತ ಪ್ರವಾಸದ ಕಾರಣದಿಂದ ಹೊರಗಿದ್ದರು. ಈ ವೇಳೆ ಈ ದುಷ್ಕೃತ್ಯ ನಡೆಸಲಾಗಿದೆ. ಮನೆಯಲ್ಲಿದ್ದ ವಸ್ತುಗಳು ಬೆಂಕಿಗಾಹುತಿಯಾಗಿದ್ದು ಅಪಾರ ಪ್ರಮಾಣದ ನಷ್ಟವಾಗಿದೆ.

ಮಣಿಪುರದಲ್ಲಿ ಪರಿಶಿಷ್ಟ ಪಂಗಡ ಮೀಸಲಾತಿ ವಿಚಾರವಾಗಿ ಮೈತೆಯಿ ಮತ್ತು ಕುಕಿ ಸಮುದಾಯದ ನಡುವೆ ಒಂದು ತಿಂಗಳಿಂದ ಹಿಂಸಾಚಾರ ನಡೆಯುತ್ತಿದೆ. ಇದುವರೆಗೆ 100ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ರಾಜ್ಯದಲ್ಲಿ ಶಾಂತಿ ಸ್ಥಾಪಿಸಲು ಸೇನೆ ಮತ್ತು ಅರೆ ಪಡೆಗಳನ್ನು ನಿಯೋಜಿಸಲಾಗಿದೆ. ಶಂಕಿತ ಉಗ್ರರು ಮಂಗಳವಾರ (ಜೂನ್ 13) ರಾತ್ರಿ ದಾಳಿ ನಡೆಸಿದ್ದರು. ಘಟನೆಯಲ್ಲಿ 9 ಮಂದಿ ಮೃತಪಟ್ಟು, 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಇದರ ಬೆನ್ನಲ್ಲೇ, ಕುಕಿ ಸಮುದಾಯದ ನಾಯಕಿಯಾಗಿರುವ ನೆಮ್ಮಾ ಕಿಪ್‌ಗೆನ್ ಅವರ ಅಧಿಕೃತ ನಿವಾಸಕ್ಕೆ ಬುಧವಾರ (ಜೂನ್ 14) ರಾತ್ರಿ ಅಪರಿಚಿತರು ಬೆಂಕಿ ಹಚ್ಚಿದ್ದರು. ಗುರುವಾರವೂ ಹಲವು ಮನೆಗಳಿಗೆ ಬೆಂಕಿ ಹಚ್ಚಲಾಗಿತ್ತು. ಗುರುವಾರ ರಾತ್ರಿ 11ರ ಸುಮಾರಿಗೆ ಗಲಭೆ ಪೀಡಿತ ಮಣಿಪುರ ಕೊಂಗಾದಲ್ಲಿರುವ ಕೇಂದ್ರ ಸಚಿವ ಆರ್.ಕೆ. ರಂಜನ್ ಸಿಂಗ್ ಅವರ ಮನೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೋಕಸಭೆ ಚುನಾವಣೆ: ಮುಸ್ಲಿಂ ಸಮುದಾಯಕ್ಕೆ ಕಡಿಮೆ ಪ್ರಾತನಿಧ್ಯ ನೀಡಿದ ರಾಜಕೀಯ ಪಕ್ಷಗಳು

0
ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ 2019ಕ್ಕೆ ಹೋಲಿಕೆ ಮಾಡಿದರೆ ಮುಸ್ಲಿಂ ಸಮುದಾಯಕ್ಕೆ ಈ ಬಾರಿ ಕಡಿಮೆ ಪ್ರಾತಿನಿಧ್ಯ ನೀಡಿರುವುದು ಕಂಡು ಬಂದಿದೆ. ಪ್ರಮುಖ ರಾಷ್ಟ್ರೀಯ ಪಕ್ಷ ಬಿಜೆಪಿ ಕೇವಲ ಓರ್ವ ಮುಸ್ಲಿಂ...