Homeಮುಖಪುಟಮಣಿಪುರದಲ್ಲಿ ಹೆಚ್ಚಾದ ಹಿಂಸಾಚಾರ: ಕೇಂದ್ರ ಸಚಿವರ ಮನೆಗೆ ಬೆಂಕಿ!

ಮಣಿಪುರದಲ್ಲಿ ಹೆಚ್ಚಾದ ಹಿಂಸಾಚಾರ: ಕೇಂದ್ರ ಸಚಿವರ ಮನೆಗೆ ಬೆಂಕಿ!

- Advertisement -
- Advertisement -

ಮಣಿಪುರದಲ್ಲಿ ಕೆಲ ತಿಂಗಳಿನಿಂದ ನಡೆಯುತ್ತಿರುವ ಹಿಂಸಾಚಾರ ಮುಂದುವರೆದಿದ್ದು, ಗುರುವಾರ ರಾತ್ರಿ 11ರ ಸುಮಾರಿಗೆ ಗಲಭೆ ಪೀಡಿತ ಮಣಿಪುರ ಕೊಂಗಾದಲ್ಲಿರುವ ಕೇಂದ್ರ ಸಚಿವ ಆರ್.ಕೆ. ರಂಜನ್ ಸಿಂಗ್ ಅವರ ಮನೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ರಾತ್ರಿ 11ರ ಸುಮಾರಿಗೆ ಸಾವಿರಕ್ಕೂ ಹೆಚ್ಚು ಜನರ ಗುಂಪು ವಿದೇಶಾಂಗ ಇಲಾಖೆ ರಾಜ್ಯ ಖಾತೆ ಸಚಿವ ರಂಜನ್ ಸಿಂಗ್‌ ನಿವಾಸದ ಮೇಲೆ ದಾಳಿ ಮಾಡಿ, ಬೆಂಕಿ ಹಚ್ಚಿದ್ದು, ಅವರ ನಿವಾಸಕ್ಕೆ ಭಾರಿ ಹಾನಿಯಾಗಿದೆ. ಘಟನೆ ಸಂದರ್ಭದಲ್ಲಿ ಸಿಂಗ್‌ ಹಾಗೂ ಅವರ ಕುಟುಂಬ ಮಣಿಪುರದಲ್ಲಿ ಇರಲಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಈ ಘಟನೆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ರಂಜನ್ ಸಿಂಗ್‌, ”ಸರ್ಕಾರಿ ಕೆಲಸದ ವಿಚಾರವಾಗಿ ನಾನೀಗ ಕೇರಳದಲ್ಲಿದ್ದೇನೆ. ಅದೃಷ್ಟವಶಾತ್ ನನ್ನ ಮನೆಯಲ್ಲಿ ಕಳೆದ ರಾತ್ರಿ ಯಾರೊಬ್ಬರೂ ಗಾಯಗೊಂಡಿಲ್ಲ. ಕಿಡಿಗೇಡಿಗಳು ಪೆಟ್ರೋಲ್ ಬಾಂಬ್‌ಗಳೊಂದಿಗೆ ಬಂದಿದ್ದರು. ನನ್ನ ಮನೆಯ ನೆಲಮಹಡಿ ಮತ್ತು ಮೊದಲ ಮಹಡಿಗೆ ಹಾನಿಯಾಗಿದೆ. ಇದು ನೋವಿನ ಸಂಗತಿ. ಈಗಲೂ ಶಾಂತಿ ಕಾಪಾಡುವಂತೆ ಜನರಲ್ಲಿ ಮನವಿ ಮಾಡುತ್ತೇನೆ. ಈ ರೀತಿಯ ಕೃತ್ಯದಲ್ಲಿ ಭಾಗಿಯಾಗುವುದು ಸಂಪೂರ್ಣ ಅಮಾನವೀಯವಾದದ್ದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಂದುವರೆದ ಮಣಿಪುರ ಹಿಂಸಾಚಾರ: ಸಚಿವೆ ಮನೆಗೆ ಬೆಂಕಿ; ಭುಗಿಲೆದ್ದ ಆಕ್ರೋಶ

ಬುಧವಾರ ಶಂಕಿತ ಉಗ್ರರು ಪೂರ್ವ ಇಂಫಾಲದ ಖಾಮೆಲಾಕ್‌ ಗ್ರಾಮದಲ್ಲಿ ನಡೆಸಿದ ದಾಳಿ ವೇಳೆ 9 ಮಂದಿ ಮೃತಪಟ್ಟು, 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಘಟನೆ ಬೆನ್ನಲ್ಲೇ ಕೈಗಾರಿಕಾ ಸಚಿವೆ ನೆಮ್ಚಾ ಕಿಪ್‌ಗೆನ್‌ ನಿವಾಸಕ್ಕೆ ಬೆಂಕಿ ಹಚ್ಚಲಾಗಿತ್ತು. ಕಳೆದ ತಿಂಗಳು ಲೋಕೋಪಯೋಗಿ ಸಚಿವರ ಮನೆಯ ಮೇಲೆ ಇದೇ ರೀತಿ ದಾಳಿ ಮಾಡಲಾಗಿತ್ತು.

ಕೈಗಾರಿಕಾ ಸಚಿವೆ ನೆಮ್ಚಾ ಕಿಪ್‌ಗೆನ್‌ ಅವರಿಗೆ ಸೇರಿದ ಲಾಂಫೀಲ್‌ ಪ್ರದೇಶದಲ್ಲಿರುವ ಸರ್ಕಾರಿ ನಿವಾಸಕ್ಕೆ ಬುಧವಾರ ರಾತ್ರಿ ಬೆಂಕಿ ಹಚ್ಚಲಾಗಿತ್ತು. ಈ ಕೃತ್ಯ ನಡೆದ ವೇಳೆ ಸಚಿವೆ ಮನೆಯಲ್ಲಿ ಇರಲಿಲ್ಲ. ಅಧಿಕೃತ ಪ್ರವಾಸದ ಕಾರಣದಿಂದ ಹೊರಗಿದ್ದರು. ಈ ವೇಳೆ ಈ ದುಷ್ಕೃತ್ಯ ನಡೆಸಲಾಗಿದೆ. ಮನೆಯಲ್ಲಿದ್ದ ವಸ್ತುಗಳು ಬೆಂಕಿಗಾಹುತಿಯಾಗಿದ್ದು ಅಪಾರ ಪ್ರಮಾಣದ ನಷ್ಟವಾಗಿದೆ.

ಮಣಿಪುರದಲ್ಲಿ ಪರಿಶಿಷ್ಟ ಪಂಗಡ ಮೀಸಲಾತಿ ವಿಚಾರವಾಗಿ ಮೈತೆಯಿ ಮತ್ತು ಕುಕಿ ಸಮುದಾಯದ ನಡುವೆ ಒಂದು ತಿಂಗಳಿಂದ ಹಿಂಸಾಚಾರ ನಡೆಯುತ್ತಿದೆ. ಇದುವರೆಗೆ 100ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ರಾಜ್ಯದಲ್ಲಿ ಶಾಂತಿ ಸ್ಥಾಪಿಸಲು ಸೇನೆ ಮತ್ತು ಅರೆ ಪಡೆಗಳನ್ನು ನಿಯೋಜಿಸಲಾಗಿದೆ. ಶಂಕಿತ ಉಗ್ರರು ಮಂಗಳವಾರ (ಜೂನ್ 13) ರಾತ್ರಿ ದಾಳಿ ನಡೆಸಿದ್ದರು. ಘಟನೆಯಲ್ಲಿ 9 ಮಂದಿ ಮೃತಪಟ್ಟು, 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಇದರ ಬೆನ್ನಲ್ಲೇ, ಕುಕಿ ಸಮುದಾಯದ ನಾಯಕಿಯಾಗಿರುವ ನೆಮ್ಮಾ ಕಿಪ್‌ಗೆನ್ ಅವರ ಅಧಿಕೃತ ನಿವಾಸಕ್ಕೆ ಬುಧವಾರ (ಜೂನ್ 14) ರಾತ್ರಿ ಅಪರಿಚಿತರು ಬೆಂಕಿ ಹಚ್ಚಿದ್ದರು. ಗುರುವಾರವೂ ಹಲವು ಮನೆಗಳಿಗೆ ಬೆಂಕಿ ಹಚ್ಚಲಾಗಿತ್ತು. ಗುರುವಾರ ರಾತ್ರಿ 11ರ ಸುಮಾರಿಗೆ ಗಲಭೆ ಪೀಡಿತ ಮಣಿಪುರ ಕೊಂಗಾದಲ್ಲಿರುವ ಕೇಂದ್ರ ಸಚಿವ ಆರ್.ಕೆ. ರಂಜನ್ ಸಿಂಗ್ ಅವರ ಮನೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...