Homeಕರ್ನಾಟಕಕೋಮು ದ್ವೇಷ ಹೆಚ್ಚುತ್ತಿರುವ ಹಿನ್ನಲೆ: ರಾಜ್ಯ ಮಟ್ಟದ ಸೌಹಾರ್ದ ಸಮಾವೇಶಕ್ಕೆ ಸಜ್ಜಾಗುತ್ತಿರುವ ಉಡುಪಿ!

ಕೋಮು ದ್ವೇಷ ಹೆಚ್ಚುತ್ತಿರುವ ಹಿನ್ನಲೆ: ರಾಜ್ಯ ಮಟ್ಟದ ಸೌಹಾರ್ದ ಸಮಾವೇಶಕ್ಕೆ ಸಜ್ಜಾಗುತ್ತಿರುವ ಉಡುಪಿ!

- Advertisement -
- Advertisement -

ಇತ್ತೀಚೆಗೆ ರಾಜ್ಯದ ಕರಾವಳಿ ಜಿಲ್ಲೆಯಾದ ಉಡುಪಿಯಲ್ಲಿ ಕೋಮು ಸೌಹಾರ್ದ ಕದಡುತ್ತಿರುವ ಹಿನ್ನಲೆಯಲ್ಲಿ, ಸಮಾಜದಲ್ಲಿ ಶಾಂತಿ ಸೌಹಾರ್ದತೆ ಎತ್ತಿ ಹಿಡಿಯುವ ಉದ್ದೇಶದಿಂದ ಮೇ ತಿಂಗಳ 7 ರಂದು ‘ಸಾಮರಸ್ಯ ನಡಿಗೆ’ ಮತ್ತು ‘ರಾಜ್ಯ ಮಟ್ಟದ ಸೌಹಾರ್ದತಾ ಸಮಾವೇಶ’ ನಡೆಯಲಿದೆ ಎಂದು ವರದಿಯಾಗಿದೆ.

ಉಡುಪಿಯಲ್ಲಿ ಇತ್ತೀಚೆಗೆ ಹಿಜಾಬ್ ವಿಚಾರದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಯಾದ ಎಬಿವಿಪಿ ಮತ್ತು ಸಂಘಪರಿವಾರ ಗಲಭೆಯನ್ನು ಹುಟ್ಟು ಹಾಕಲು ಪ್ರಯತ್ನಿಸಿತ್ತು. ಶಾಲಾ ಮಟ್ಟದಲ್ಲಿ ಮುಗಿಯಬಹುದಾಗಿದ್ದ ಹಿಜಾಬ್ ವಿಚಾರವನ್ನು ಬಿಜೆಪಿ ಶಾಸಕ ಮತ್ತು ನಾಯಕರುಗಳು ವಿಶ್ವ ಮಟ್ಟದಲ್ಲಿ ಸುದ್ದಿಯಾಗುವಂತೆ ವಿವಾದವನ್ನಾಗಿ ಮಾಡಿ, ರಾಜ್ಯದ ಗೌರವವನ್ನು ಮಣ್ಣು ಪಾಲು ಮಾಡಿದ್ದರು ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಭೂಮಿ-ವಸತಿ ಸಮಸ್ಯೆಗಳ ಪರಿಹಾರಕ್ಕಾಗಿ ಮಲೆನಾಡಿಗರ ಬೈಕ್‌ ರ್‍ಯಾಲಿ ಮತ್ತು ಬೃಹತ್ ಪ್ರತಿಭಟನೆ

ಇದರ ನಂತರ ಕೂಡಾ ಕರಾವಳಿ ಜಿಲ್ಲೆಯಲ್ಲಿ ಕೋಮು ಸೌಹಾರ್ದ ಹಾಳುಗೆಡವುವಂತಹ ಘಟನೆಗಳು ನಡೆಯುತ್ತಿದ್ದು, ನಾಗರೀಕರನ್ನು ಕಂಗೆಡಿಸಿದೆ. ಹಿಜಾಬ್ ವಿಚಾರವನ್ನೇ ಮುಂದುವರೆಸಿರುವ ಬಿಜೆಪಿ ಬೆಂಬಲಿತ ಸಂಘಟನೆಗಳು ಇತ್ತೀಚೆಗೆ ಜಾತ್ರೆಗಳಿಗೂ ಮುಸ್ಲಿಂ ವ್ಯಾಪಾರಿಗಳು ಬರಬಾರದು ಎಂದು ಬ್ಯಾನರ್‌ಗಳನ್ನು ಕಟ್ಟಿ ಮತ್ತಷ್ಟು ಕೋಮು ಧ್ರುವೀಕರಣ ಮಾಡಿ ಇಸ್ಲಾಮೊಫೊಬಿಯಾವನ್ನು ಹರಡುತ್ತಿವೆ. ಇದನ್ನು ‘ಸಹಬಾಳ್ವೆ ಉಡುಪಿ’ ತಂಡವು ಇತ್ತೀಚೆಗೆ ವಿರೋಧಿಸಿತ್ತು.

ಸೌಹಾರ್ದ ಸಮಾವೇಶದ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿರುವ ‘ಸಹಬಾಳ್ವೆ ಉಡುಪಿ’ ತಂಡದ ಸಂಚಾಲಕ ಅಮೃತ ಶೆಣೈ, “ಉಡುಪಿಯಿಂದ ಹಲವಾರು ವಿವಾದಗಳು ಪ್ರಾರಂಭವಾಗಿದೆ. ಇದು ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದೆ. ಅವುಗಳೆಲ್ಲವೂ ಬಹುತೇಕ ಸಾಮರಸ್ಯ ಕೆಡಿಸುವಂತ ವಿವಾದ ಹಾಗೂ ವಿಚಾರಗಳಾಗಿವೆ. ಹಾಗಾಗಿ ಶಾಂತಿ, ಸಾಮರಸ್ಯದ ಸಂದೇಶವನ್ನು ಉಡುಪಿಯಿಂದಲೇ ಸಾರಬೇಕು ಎಂಬ ಕಾರಣದಿಂದ ಇದನ್ನು ಹಮ್ಮಿಕೊಳ್ಳುತ್ತಿದ್ದೇವೆ” ಎಂದು ಹೇಳಿದ್ದಾರೆ.

ಕಾರ್ಯಕ್ರಮವನ್ನು ಸಹಬಾಳ್ವೆ ಉಡುಪಿ ಮತ್ತು ಸಮಾನ ಮನಸ್ಕ ಸಂಘಟನೆಗಳ ಅಡಿಯಲ್ಲಿ ಇದನ್ನು ನಡೆಸಲಿದ್ದೇವೆ ಎಂದು ಅಮೃತ್‌ ಶೆಣೈ ಹೇಳಿದ್ದಾರೆ.

ಕಾರ್ಯಕ್ರಮದ ಅಂಗವಾಗಿ ಸೌಹಾರ್ಧ ಪಾದಯಾತ್ರೆ ಮತ್ತು ಬಹಿರಂಗ ಸಭೆ ನಡೆಯಲಿದೆ. ಮುಖ್ಯವಾಗಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ರಾಜಕೀಯ ಹಾಗೂ ರಾಜಕೀಯೇತರ ನಾಯಕರುಗಳು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ಅಮೃತ್‌ ಶೆಣೈ ಹೇಳಿದ್ದಾರೆ.

ಇದನ್ನೂ ಓದಿ: ನಾಲ್ಕು ತಿಂಗಳ ನಂತರ ಮತ್ತೆ ಪೆಟ್ರೋಲ್ ಬೆಲೆ ಏರಿಕೆ; ಗುಲ್ಬರ್ಗಾದಲ್ಲಿ 1.45, ಮೈಸೂರಿನಲ್ಲಿ 1 ರೂ. ಏರಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...