Homeಕರ್ನಾಟಕಕೋಮು ದ್ವೇಷ ಹೆಚ್ಚುತ್ತಿರುವ ಹಿನ್ನಲೆ: ರಾಜ್ಯ ಮಟ್ಟದ ಸೌಹಾರ್ದ ಸಮಾವೇಶಕ್ಕೆ ಸಜ್ಜಾಗುತ್ತಿರುವ ಉಡುಪಿ!

ಕೋಮು ದ್ವೇಷ ಹೆಚ್ಚುತ್ತಿರುವ ಹಿನ್ನಲೆ: ರಾಜ್ಯ ಮಟ್ಟದ ಸೌಹಾರ್ದ ಸಮಾವೇಶಕ್ಕೆ ಸಜ್ಜಾಗುತ್ತಿರುವ ಉಡುಪಿ!

- Advertisement -
- Advertisement -

ಇತ್ತೀಚೆಗೆ ರಾಜ್ಯದ ಕರಾವಳಿ ಜಿಲ್ಲೆಯಾದ ಉಡುಪಿಯಲ್ಲಿ ಕೋಮು ಸೌಹಾರ್ದ ಕದಡುತ್ತಿರುವ ಹಿನ್ನಲೆಯಲ್ಲಿ, ಸಮಾಜದಲ್ಲಿ ಶಾಂತಿ ಸೌಹಾರ್ದತೆ ಎತ್ತಿ ಹಿಡಿಯುವ ಉದ್ದೇಶದಿಂದ ಮೇ ತಿಂಗಳ 7 ರಂದು ‘ಸಾಮರಸ್ಯ ನಡಿಗೆ’ ಮತ್ತು ‘ರಾಜ್ಯ ಮಟ್ಟದ ಸೌಹಾರ್ದತಾ ಸಮಾವೇಶ’ ನಡೆಯಲಿದೆ ಎಂದು ವರದಿಯಾಗಿದೆ.

ಉಡುಪಿಯಲ್ಲಿ ಇತ್ತೀಚೆಗೆ ಹಿಜಾಬ್ ವಿಚಾರದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಯಾದ ಎಬಿವಿಪಿ ಮತ್ತು ಸಂಘಪರಿವಾರ ಗಲಭೆಯನ್ನು ಹುಟ್ಟು ಹಾಕಲು ಪ್ರಯತ್ನಿಸಿತ್ತು. ಶಾಲಾ ಮಟ್ಟದಲ್ಲಿ ಮುಗಿಯಬಹುದಾಗಿದ್ದ ಹಿಜಾಬ್ ವಿಚಾರವನ್ನು ಬಿಜೆಪಿ ಶಾಸಕ ಮತ್ತು ನಾಯಕರುಗಳು ವಿಶ್ವ ಮಟ್ಟದಲ್ಲಿ ಸುದ್ದಿಯಾಗುವಂತೆ ವಿವಾದವನ್ನಾಗಿ ಮಾಡಿ, ರಾಜ್ಯದ ಗೌರವವನ್ನು ಮಣ್ಣು ಪಾಲು ಮಾಡಿದ್ದರು ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಭೂಮಿ-ವಸತಿ ಸಮಸ್ಯೆಗಳ ಪರಿಹಾರಕ್ಕಾಗಿ ಮಲೆನಾಡಿಗರ ಬೈಕ್‌ ರ್‍ಯಾಲಿ ಮತ್ತು ಬೃಹತ್ ಪ್ರತಿಭಟನೆ

ಇದರ ನಂತರ ಕೂಡಾ ಕರಾವಳಿ ಜಿಲ್ಲೆಯಲ್ಲಿ ಕೋಮು ಸೌಹಾರ್ದ ಹಾಳುಗೆಡವುವಂತಹ ಘಟನೆಗಳು ನಡೆಯುತ್ತಿದ್ದು, ನಾಗರೀಕರನ್ನು ಕಂಗೆಡಿಸಿದೆ. ಹಿಜಾಬ್ ವಿಚಾರವನ್ನೇ ಮುಂದುವರೆಸಿರುವ ಬಿಜೆಪಿ ಬೆಂಬಲಿತ ಸಂಘಟನೆಗಳು ಇತ್ತೀಚೆಗೆ ಜಾತ್ರೆಗಳಿಗೂ ಮುಸ್ಲಿಂ ವ್ಯಾಪಾರಿಗಳು ಬರಬಾರದು ಎಂದು ಬ್ಯಾನರ್‌ಗಳನ್ನು ಕಟ್ಟಿ ಮತ್ತಷ್ಟು ಕೋಮು ಧ್ರುವೀಕರಣ ಮಾಡಿ ಇಸ್ಲಾಮೊಫೊಬಿಯಾವನ್ನು ಹರಡುತ್ತಿವೆ. ಇದನ್ನು ‘ಸಹಬಾಳ್ವೆ ಉಡುಪಿ’ ತಂಡವು ಇತ್ತೀಚೆಗೆ ವಿರೋಧಿಸಿತ್ತು.

ಸೌಹಾರ್ದ ಸಮಾವೇಶದ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿರುವ ‘ಸಹಬಾಳ್ವೆ ಉಡುಪಿ’ ತಂಡದ ಸಂಚಾಲಕ ಅಮೃತ ಶೆಣೈ, “ಉಡುಪಿಯಿಂದ ಹಲವಾರು ವಿವಾದಗಳು ಪ್ರಾರಂಭವಾಗಿದೆ. ಇದು ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದೆ. ಅವುಗಳೆಲ್ಲವೂ ಬಹುತೇಕ ಸಾಮರಸ್ಯ ಕೆಡಿಸುವಂತ ವಿವಾದ ಹಾಗೂ ವಿಚಾರಗಳಾಗಿವೆ. ಹಾಗಾಗಿ ಶಾಂತಿ, ಸಾಮರಸ್ಯದ ಸಂದೇಶವನ್ನು ಉಡುಪಿಯಿಂದಲೇ ಸಾರಬೇಕು ಎಂಬ ಕಾರಣದಿಂದ ಇದನ್ನು ಹಮ್ಮಿಕೊಳ್ಳುತ್ತಿದ್ದೇವೆ” ಎಂದು ಹೇಳಿದ್ದಾರೆ.

ಕಾರ್ಯಕ್ರಮವನ್ನು ಸಹಬಾಳ್ವೆ ಉಡುಪಿ ಮತ್ತು ಸಮಾನ ಮನಸ್ಕ ಸಂಘಟನೆಗಳ ಅಡಿಯಲ್ಲಿ ಇದನ್ನು ನಡೆಸಲಿದ್ದೇವೆ ಎಂದು ಅಮೃತ್‌ ಶೆಣೈ ಹೇಳಿದ್ದಾರೆ.

ಕಾರ್ಯಕ್ರಮದ ಅಂಗವಾಗಿ ಸೌಹಾರ್ಧ ಪಾದಯಾತ್ರೆ ಮತ್ತು ಬಹಿರಂಗ ಸಭೆ ನಡೆಯಲಿದೆ. ಮುಖ್ಯವಾಗಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ರಾಜಕೀಯ ಹಾಗೂ ರಾಜಕೀಯೇತರ ನಾಯಕರುಗಳು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ಅಮೃತ್‌ ಶೆಣೈ ಹೇಳಿದ್ದಾರೆ.

ಇದನ್ನೂ ಓದಿ: ನಾಲ್ಕು ತಿಂಗಳ ನಂತರ ಮತ್ತೆ ಪೆಟ್ರೋಲ್ ಬೆಲೆ ಏರಿಕೆ; ಗುಲ್ಬರ್ಗಾದಲ್ಲಿ 1.45, ಮೈಸೂರಿನಲ್ಲಿ 1 ರೂ. ಏರಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...