Homeಮುಖಪುಟದೇಶದಲ್ಲಿ ಹೆಚ್ಚುತ್ತಿರುವ ಬ್ಲಾಕ್ ಫಂಗಸ್ ಸೋಂಕು: ಮಹಾರಾಷ್ಟ್ರದಲ್ಲೇ 2000 ಮಂದಿ ಸೋಂಕಿತರು

ದೇಶದಲ್ಲಿ ಹೆಚ್ಚುತ್ತಿರುವ ಬ್ಲಾಕ್ ಫಂಗಸ್ ಸೋಂಕು: ಮಹಾರಾಷ್ಟ್ರದಲ್ಲೇ 2000 ಮಂದಿ ಸೋಂಕಿತರು

- Advertisement -
- Advertisement -

ಕೊರೊನಾ ಪ್ರಕರಣಗಳ ಏರಿಕೆ, ಸಾವುಗಳು, ಆರೋಗ್ಯ ಸೌಕರ್ಯಗಳ ಅಲಭ್ಯತೆ ನಡುವೆ ದೇಶವೇ ಜರ್ಜರಿತವಾಗಿದೆ. ಇದರ ನಡುವೆ ಬ್ಲಾಕ್ ಫಂಗಸ್ ಸೋಂಕು ಜನರಲ್ಲಿ ಮತ್ತಷ್ಟು ಆತಂಕ ಉಂಟುಮಾಡುತ್ತಿದೆ. ಮಹಾರಾಷ್ಟ್ರದಲ್ಲೇ 2000 ಮಂದಿ ಸೋಂಕಿತರು ಇದ್ದಾರೆ ಎಂದು ಸರ್ಕಾರ ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಬ್ಲಾಕ್ ಫಂಗಸ್ ಸೋಂಕಿನಿಂದ ಹೆಚ್ಚಿನ ಸಾವುಗಳು ಸಂಭವಿಸಿವೆ ಎಂದು ವರದಿಯಾಗಿದ್ದು, ರಾಜ್ಯದಲ್ಲಿ 2,000 ಪ್ರಕರಣಗಳು ಇರಬಹುದು. ಕೊರೊನಾ ಪ್ರಕರಣಗಳ ಏರಿಕೆ ಜೊತೆಗೆ ಬ್ಲಾಕ್ ಫಂಗಸ್ ಸೋಂಕಿತರು ಏರಿಕೆಯಾಗಬಹುದು ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪೆ ಹೇಳಿದ್ದಾರೆ.

ವೈದ್ಯಕೀಯ ಕಾಲೇಜುಗಳೊಂದಿಗಿರುವ ಆಸ್ಪತ್ರೆಗಳನ್ನು ಬ್ಲಾಕ್ ಫಂಗಸ್ ಸೋಂಕು ಚಿಕಿತ್ಸಾ ಕೇಂದ್ರಗಳಾಗಿ ಬಳಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ಸಚಿವ ರಾಜೇಶ್ ಟೋಪೆ ತಿಳಿಸಿದ್ದಾರೆ.

ಬುಧವಾರ (ಮೇ 12) ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಬ್ಲಾಕ್ ಫಂಗಸ್‌ನಿಂದಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಜೊತೆಗೆ ಥಾಣೆಯಲ್ಲಿ ಇತರ ಆರು ರೋಗಿಗಳು ಈ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಒಂದೇ ಹಳ್ಳಿಯಲ್ಲಿ ತಿಂಗಳಲ್ಲಿ 60ಕ್ಕೂ ಹೆಚ್ಚು ಸಾವು, ಕಡೆ ಪಕ್ಷ ಕೊರೊನಾ ಟೆಸ್ಟ್ ಕೂಡ ಮಾಡಿಸದ ಅಧಿಕಾರಿಗಳು!

ಎರಡು ದಿನಗಳ ಹಿಂದೆ ಒಡಿಶಾ ರಾಜ್ಯದಲ್ಲಿ ಮೊದಲ ಬ್ಲಾಕ್ ಫಂಗಸ್ ಪ್ರಕರಣವನ್ನು ವರದಿಯಾಗಿದೆ. ಒಡಿಶಾದ ಜಜ್ಪುರ್ ಜಿಲ್ಲೆಯ 71 ವರ್ಷದ ಕೊರೊನಾ ರೋಗಿಯಲ್ಲಿ ಸೋಂಕು ಕಂಡು ಬಂದಿದ್ದು, ಅವರು ಅನಿಯಂತ್ರಿತ ಮಧುಮೇಹವನ್ನು ಸಹ ಹೊಂದಿದ್ದಾರೆ.

ಇತ್ತ ದೆಹಲಿ, ಗುಜರಾತ್ ಮತ್ತು ಇತರ ಕೆಲವು ರಾಜ್ಯಗಳಲ್ಲಿ ಈ ಸೋಂಕಿನ ಈಗಾಗಲೇ ಆತಂಕ ಉಂಟುಮಾಡುತ್ತಿದೆ.

ಕಳೆದ 12 ಗಂಟೆಗಳಲ್ಲಿ ಜೈಪುರದಲ್ಲಿ ಬ್ಲಾಕ್ ಫಂಗಸ್ ಸೋಂಕಿನ 14 ರೋಗಿಗಳು ಕಂಡು ಬಂದಿದ್ದಾರೆ.  ರಾಂಚಿಯಿಂದ ಇಬ್ಬರು, ರಾಜಸ್ಥಾನದಿಂದ ನಾಲ್ಕು ಮಂದಿ, ಉತ್ತರ ಪ್ರದೇಶದ ಐವರು ಮತ್ತು ದೆಹಲಿ-ಎನ್‌ಸಿಆರ್‌ನಿಂದ ಇಬ್ಬರು ಸೋಂಕಿತರು ಪತ್ತೆಯಾಗಿದ್ದಾರೆ. ಈ ಸೋಂಕಿತರಲ್ಲಿ ಹಲವರು ದೃಷ್ಟಿ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

ಈ ಮಧ್ಯೆ ಗುಜರಾತ್‌ನಲ್ಲಿ ಅತಿ ಹೆಚ್ಚು ಬ್ಲಾಕ್ ಫಂಗಸ್ ಪ್ರಕರಣಗಳು ವರದಿಯಾಗಿವೆ. ಗುಜರಾತ್ ಸರ್ಕಾರವು ಅಂತಹ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್‌ಗಳನ್ನು ಸ್ಥಾಪಿಸಲು ಪ್ರಾರಂಭಿಸಿದೆ ಮತ್ತು ಅದರ ಚಿಕಿತ್ಸೆಯಲ್ಲಿ ಬಳಸುವ 5,000 ಔಷಧದ ಬಾಟಲುಗಳನ್ನು ಸಂಗ್ರಹಿಸಿದೆ. ಗುಜರಾತ್ ಇದುವರೆಗೆ 100 ಕ್ಕೂ ಹೆಚ್ಚು  ಪ್ರಕರಣಗಳನ್ನು ವರದಿ ಮಾಡಿದ್ದು, ಇದು ಅನೇಕ ರೋಗಿಗಳನ್ನು ಕುರುಡನನ್ನಾಗಿ ಮಾಡಿದೆ.

ಇದನ್ನೂ ಓದಿ: ಚಿಕಿತ್ಸೆಗಾಗಿ ಗಂಡನನ್ನ ದಾಖಲಿಸಿದ್ದ ಆಸ್ಪತ್ರೆಯಲ್ಲಿಯೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆ!

ಈ ಸೋಂಕಿನಿಂದ ಬಳಲುತ್ತಿರುವ ರೋಗಿಗಳ ಮೇಲೆ ಬಳಸಲಾಗುತ್ತಿರುವ ಆಂಫೊಟೆರಿಸಿನ್ ಬಿ (Amphotericin B) ಉತ್ಪಾದನೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೆಚ್ಚುವರಿ ಆಮದು ಮತ್ತು ದೇಶೀಯ ಉತ್ಪಾದನೆಯಲ್ಲಿ ಹೆಚ್ಚಳದೊಂದಿಗೆ ಔಷಧಿ ಪೂರೈಕೆ ಸುಧಾರಿಸುವ ನಿರೀಕ್ಷೆಯಿದೆ ಎಂದು ಕೇಂದ್ರ ತಿಳಿಸಿದೆ.

ಬ್ಲಾಕ್ ಫಂಗಸ್ ಸೋಂಕಿನ ಲಕ್ಷಣಗಳು ತಲೆನೋವು, ಜ್ವರ, ಕಣ್ಣುಗಳ ಕೆಳಗೆ ನೋವು, ಮೂಗಿನ ಅಥವಾ ಸೈನಸ್ ದಟ್ಟಣೆ ಮತ್ತು ದೃಷ್ಟಿ ಭಾಗಶಃ ನಷ್ಟ. ಕೆಲವರು ಕೆಮ್ಮು, ಉಸಿರಾಟದ ತೊಂದರೆ, ರಕ್ತಸಿಕ್ತ ವಾಂತಿ ಮತ್ತು ಬದಲಾದ ಮಾನಸಿಕ ಸ್ಥಿತಿ ಕಂಡುಬರುತ್ತದೆ.

ಕೊರೊನಾ ರೋಗಿಗಳಲ್ಲಿ ಅನಿಯಂತ್ರಿತ ಮಧುಮೇಹ ಮತ್ತು ದೀರ್ಘಕಾಲದ ತೀವ್ರ ನಿಗಾ ಘಟಕ (ಐಸಿಯು) ವಾಸ್ತವ್ಯದಲ್ಲಿ ಈ ಸೋಂಕು ಕಂಡುಬಂದಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಬ್ಲಾಕ್ ಫಂಗಸ್ ಸೋಂಕು ಹೊಸದಲ್ಲ ಆದರೆ ಕೊರೊನಾ ಸೋಂಕಿತ ರೋಗಿಗಳಲ್ಲಿ ಹೆಚ್ಚುತ್ತಿದೆ ಎಂದು ತಜ್ಞರು ಹೇಳಿದ್ದಾರೆ. ಏಕೆಂದರೆ ಸ್ಟೀರಾಯಡ್‌ಗಳ ಬಳಕೆಯು ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ಕೆಲವು ಔಷಧಿಗಳು ರೋಗಿಗಳ ರೋಗನಿರೋಧಕ ಶಕ್ತಿಯನ್ನು ಕಡಿಮೆಗೊಳಿಸುತ್ತವೆ ಎಂದು ತಜ್ಞರು ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಚಿಕಿತ್ಸೆಗೆ ಹಸುವಿನ ಸಗಣಿ ಬಳಕೆ ಅಪಾಯಕಾರಿ- ವೈದ್ಯರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...