Homeಮುಖಪುಟದೇಶದಲ್ಲಿ ಹೆಚ್ಚುತ್ತಿರುವ ಬ್ಲಾಕ್ ಫಂಗಸ್ ಸೋಂಕು: ಮಹಾರಾಷ್ಟ್ರದಲ್ಲೇ 2000 ಮಂದಿ ಸೋಂಕಿತರು

ದೇಶದಲ್ಲಿ ಹೆಚ್ಚುತ್ತಿರುವ ಬ್ಲಾಕ್ ಫಂಗಸ್ ಸೋಂಕು: ಮಹಾರಾಷ್ಟ್ರದಲ್ಲೇ 2000 ಮಂದಿ ಸೋಂಕಿತರು

- Advertisement -
- Advertisement -

ಕೊರೊನಾ ಪ್ರಕರಣಗಳ ಏರಿಕೆ, ಸಾವುಗಳು, ಆರೋಗ್ಯ ಸೌಕರ್ಯಗಳ ಅಲಭ್ಯತೆ ನಡುವೆ ದೇಶವೇ ಜರ್ಜರಿತವಾಗಿದೆ. ಇದರ ನಡುವೆ ಬ್ಲಾಕ್ ಫಂಗಸ್ ಸೋಂಕು ಜನರಲ್ಲಿ ಮತ್ತಷ್ಟು ಆತಂಕ ಉಂಟುಮಾಡುತ್ತಿದೆ. ಮಹಾರಾಷ್ಟ್ರದಲ್ಲೇ 2000 ಮಂದಿ ಸೋಂಕಿತರು ಇದ್ದಾರೆ ಎಂದು ಸರ್ಕಾರ ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಬ್ಲಾಕ್ ಫಂಗಸ್ ಸೋಂಕಿನಿಂದ ಹೆಚ್ಚಿನ ಸಾವುಗಳು ಸಂಭವಿಸಿವೆ ಎಂದು ವರದಿಯಾಗಿದ್ದು, ರಾಜ್ಯದಲ್ಲಿ 2,000 ಪ್ರಕರಣಗಳು ಇರಬಹುದು. ಕೊರೊನಾ ಪ್ರಕರಣಗಳ ಏರಿಕೆ ಜೊತೆಗೆ ಬ್ಲಾಕ್ ಫಂಗಸ್ ಸೋಂಕಿತರು ಏರಿಕೆಯಾಗಬಹುದು ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪೆ ಹೇಳಿದ್ದಾರೆ.

ವೈದ್ಯಕೀಯ ಕಾಲೇಜುಗಳೊಂದಿಗಿರುವ ಆಸ್ಪತ್ರೆಗಳನ್ನು ಬ್ಲಾಕ್ ಫಂಗಸ್ ಸೋಂಕು ಚಿಕಿತ್ಸಾ ಕೇಂದ್ರಗಳಾಗಿ ಬಳಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ಸಚಿವ ರಾಜೇಶ್ ಟೋಪೆ ತಿಳಿಸಿದ್ದಾರೆ.

ಬುಧವಾರ (ಮೇ 12) ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಬ್ಲಾಕ್ ಫಂಗಸ್‌ನಿಂದಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಜೊತೆಗೆ ಥಾಣೆಯಲ್ಲಿ ಇತರ ಆರು ರೋಗಿಗಳು ಈ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಒಂದೇ ಹಳ್ಳಿಯಲ್ಲಿ ತಿಂಗಳಲ್ಲಿ 60ಕ್ಕೂ ಹೆಚ್ಚು ಸಾವು, ಕಡೆ ಪಕ್ಷ ಕೊರೊನಾ ಟೆಸ್ಟ್ ಕೂಡ ಮಾಡಿಸದ ಅಧಿಕಾರಿಗಳು!

ಎರಡು ದಿನಗಳ ಹಿಂದೆ ಒಡಿಶಾ ರಾಜ್ಯದಲ್ಲಿ ಮೊದಲ ಬ್ಲಾಕ್ ಫಂಗಸ್ ಪ್ರಕರಣವನ್ನು ವರದಿಯಾಗಿದೆ. ಒಡಿಶಾದ ಜಜ್ಪುರ್ ಜಿಲ್ಲೆಯ 71 ವರ್ಷದ ಕೊರೊನಾ ರೋಗಿಯಲ್ಲಿ ಸೋಂಕು ಕಂಡು ಬಂದಿದ್ದು, ಅವರು ಅನಿಯಂತ್ರಿತ ಮಧುಮೇಹವನ್ನು ಸಹ ಹೊಂದಿದ್ದಾರೆ.

ಇತ್ತ ದೆಹಲಿ, ಗುಜರಾತ್ ಮತ್ತು ಇತರ ಕೆಲವು ರಾಜ್ಯಗಳಲ್ಲಿ ಈ ಸೋಂಕಿನ ಈಗಾಗಲೇ ಆತಂಕ ಉಂಟುಮಾಡುತ್ತಿದೆ.

ಕಳೆದ 12 ಗಂಟೆಗಳಲ್ಲಿ ಜೈಪುರದಲ್ಲಿ ಬ್ಲಾಕ್ ಫಂಗಸ್ ಸೋಂಕಿನ 14 ರೋಗಿಗಳು ಕಂಡು ಬಂದಿದ್ದಾರೆ.  ರಾಂಚಿಯಿಂದ ಇಬ್ಬರು, ರಾಜಸ್ಥಾನದಿಂದ ನಾಲ್ಕು ಮಂದಿ, ಉತ್ತರ ಪ್ರದೇಶದ ಐವರು ಮತ್ತು ದೆಹಲಿ-ಎನ್‌ಸಿಆರ್‌ನಿಂದ ಇಬ್ಬರು ಸೋಂಕಿತರು ಪತ್ತೆಯಾಗಿದ್ದಾರೆ. ಈ ಸೋಂಕಿತರಲ್ಲಿ ಹಲವರು ದೃಷ್ಟಿ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

ಈ ಮಧ್ಯೆ ಗುಜರಾತ್‌ನಲ್ಲಿ ಅತಿ ಹೆಚ್ಚು ಬ್ಲಾಕ್ ಫಂಗಸ್ ಪ್ರಕರಣಗಳು ವರದಿಯಾಗಿವೆ. ಗುಜರಾತ್ ಸರ್ಕಾರವು ಅಂತಹ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್‌ಗಳನ್ನು ಸ್ಥಾಪಿಸಲು ಪ್ರಾರಂಭಿಸಿದೆ ಮತ್ತು ಅದರ ಚಿಕಿತ್ಸೆಯಲ್ಲಿ ಬಳಸುವ 5,000 ಔಷಧದ ಬಾಟಲುಗಳನ್ನು ಸಂಗ್ರಹಿಸಿದೆ. ಗುಜರಾತ್ ಇದುವರೆಗೆ 100 ಕ್ಕೂ ಹೆಚ್ಚು  ಪ್ರಕರಣಗಳನ್ನು ವರದಿ ಮಾಡಿದ್ದು, ಇದು ಅನೇಕ ರೋಗಿಗಳನ್ನು ಕುರುಡನನ್ನಾಗಿ ಮಾಡಿದೆ.

ಇದನ್ನೂ ಓದಿ: ಚಿಕಿತ್ಸೆಗಾಗಿ ಗಂಡನನ್ನ ದಾಖಲಿಸಿದ್ದ ಆಸ್ಪತ್ರೆಯಲ್ಲಿಯೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆ!

ಈ ಸೋಂಕಿನಿಂದ ಬಳಲುತ್ತಿರುವ ರೋಗಿಗಳ ಮೇಲೆ ಬಳಸಲಾಗುತ್ತಿರುವ ಆಂಫೊಟೆರಿಸಿನ್ ಬಿ (Amphotericin B) ಉತ್ಪಾದನೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೆಚ್ಚುವರಿ ಆಮದು ಮತ್ತು ದೇಶೀಯ ಉತ್ಪಾದನೆಯಲ್ಲಿ ಹೆಚ್ಚಳದೊಂದಿಗೆ ಔಷಧಿ ಪೂರೈಕೆ ಸುಧಾರಿಸುವ ನಿರೀಕ್ಷೆಯಿದೆ ಎಂದು ಕೇಂದ್ರ ತಿಳಿಸಿದೆ.

ಬ್ಲಾಕ್ ಫಂಗಸ್ ಸೋಂಕಿನ ಲಕ್ಷಣಗಳು ತಲೆನೋವು, ಜ್ವರ, ಕಣ್ಣುಗಳ ಕೆಳಗೆ ನೋವು, ಮೂಗಿನ ಅಥವಾ ಸೈನಸ್ ದಟ್ಟಣೆ ಮತ್ತು ದೃಷ್ಟಿ ಭಾಗಶಃ ನಷ್ಟ. ಕೆಲವರು ಕೆಮ್ಮು, ಉಸಿರಾಟದ ತೊಂದರೆ, ರಕ್ತಸಿಕ್ತ ವಾಂತಿ ಮತ್ತು ಬದಲಾದ ಮಾನಸಿಕ ಸ್ಥಿತಿ ಕಂಡುಬರುತ್ತದೆ.

ಕೊರೊನಾ ರೋಗಿಗಳಲ್ಲಿ ಅನಿಯಂತ್ರಿತ ಮಧುಮೇಹ ಮತ್ತು ದೀರ್ಘಕಾಲದ ತೀವ್ರ ನಿಗಾ ಘಟಕ (ಐಸಿಯು) ವಾಸ್ತವ್ಯದಲ್ಲಿ ಈ ಸೋಂಕು ಕಂಡುಬಂದಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಬ್ಲಾಕ್ ಫಂಗಸ್ ಸೋಂಕು ಹೊಸದಲ್ಲ ಆದರೆ ಕೊರೊನಾ ಸೋಂಕಿತ ರೋಗಿಗಳಲ್ಲಿ ಹೆಚ್ಚುತ್ತಿದೆ ಎಂದು ತಜ್ಞರು ಹೇಳಿದ್ದಾರೆ. ಏಕೆಂದರೆ ಸ್ಟೀರಾಯಡ್‌ಗಳ ಬಳಕೆಯು ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ಕೆಲವು ಔಷಧಿಗಳು ರೋಗಿಗಳ ರೋಗನಿರೋಧಕ ಶಕ್ತಿಯನ್ನು ಕಡಿಮೆಗೊಳಿಸುತ್ತವೆ ಎಂದು ತಜ್ಞರು ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಚಿಕಿತ್ಸೆಗೆ ಹಸುವಿನ ಸಗಣಿ ಬಳಕೆ ಅಪಾಯಕಾರಿ- ವೈದ್ಯರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...