Homeಮುಖಪುಟಶ್ರೀಲಂಕಾದಲ್ಲಿ ಹೆಚ್ಚುತ್ತಿದೆ ಚೀನಾ ಸೇನೆಯ ಪ್ರಾಬಲ್ಯ; ತಮಿಳುನಾಡಿಗೆ ಗುಪ್ತಚರ ಸಂಸ್ಥೆ ಎಚ್ಚರಿಕೆ ಕರೆಘಂಟೆ

ಶ್ರೀಲಂಕಾದಲ್ಲಿ ಹೆಚ್ಚುತ್ತಿದೆ ಚೀನಾ ಸೇನೆಯ ಪ್ರಾಬಲ್ಯ; ತಮಿಳುನಾಡಿಗೆ ಗುಪ್ತಚರ ಸಂಸ್ಥೆ ಎಚ್ಚರಿಕೆ ಕರೆಘಂಟೆ

- Advertisement -
- Advertisement -

ಶ್ರೀಲಂಕಾದಲ್ಲಿ ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಪ್ರಾಬಲ್ಯ ಹೆಚ್ಚುತ್ತಿರುವ ಬಗ್ಗೆ ತಮಿಳುನಾಡು ರಾಜ್ಯವು ಗಂಭೀರ ಭದ್ರತಾ ಕಳವಳಗಳನ್ನು ವ್ಯಕ್ತಪಡಿಸಿದೆ.

ಕೆಲವು ದಿನಗಳ ಹಿಂದೆ ರಾಜ್ಯದ ಗುಪ್ತಚರ ಸಂಸ್ಥೆ ಎಚ್ಚರಿಕೆಗಳನ್ನು ನೀಡಿದ್ದು, ನೆರೆಯ ದೇಶದಲ್ಲಿ ಚೀನಿಯರ ಚಟುವಟಿಕೆಗಳು ರಾಷ್ಟ್ರೀಯ ಭದ್ರತೆಗೆ ಕಳವಳಕಾರಿಯಾಗಿವೆ ಮತ್ತು ಕರಾವಳಿಯಾದ್ಯಂತ ತೀವ್ರ ಜಾಗರೂಕತೆ ವಹಿಸುವ ಅಗತ್ಯವಿದೆ ಎಂದು ಎಚ್ಚರಿಕೆ ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉತ್ತರ ಶ್ರೀಲಂಕಾದಲ್ಲಿ ಪಿಎಲ್‌ಎ ಕೇಡರ್‌ಗಳ ಚಲನವಲನ ಮತ್ತು ಹೈಟೆಕ್ ಗ್ಯಾಜೆಟ್‌ಗಳಾದ ಉಪಗ್ರಹಗಳು, ಡ್ರೋನ್‌ಗಳು, ಇತರ ಸಂವಹನ ಸಾಧನಗಳ ನಿಯೋಜನೆಯನ್ನು ಗಮನಿಸಲು ಕರಾವಳಿ ಜಿಲ್ಲೆಗಳಲ್ಲಿ ನಿರಂತರ ಕಣ್ಗಾವಲು ಅಗತ್ಯವಿದೆ ಎಂದು ರಾಜ್ಯದ ಎಲ್ಲಾ ನಗರಗಳು/ಜಿಲ್ಲೆಗಳಿಗೆ ಸಲಹೆ ಕಳುಹಿಸಲಾಗಿದೆ. ಮೂಲಗಳನ್ನು ಉಲ್ಲೇಖಿಸಿರುವ ಗುಪ್ತಚರ ಸಂಸ್ಥೆ, “ಪಿಎಲ್‌ಎ ಸಮುದ್ರ ಸೌತೆಕಾಯಿ ಕೃಷಿಯನ್ನು ಪ್ರಾರಂಭಿಸುವ ನೆಪದಲ್ಲಿ ಅತ್ಯಾಧುನಿಕ ಗ್ಯಾಜೆಟ್‌ಗಳನ್ನು ನಿಯೋಜಿಸಿದೆ” ಎಂಬ ಎಚ್ಚರಿಕೆಯನ್ನೂ ನೀಡಿದೆ.

ಶ್ರೀಲಂಕಾ ಮೂಲದ ರಾಜಕೀಯ ಪಕ್ಷವೊಂದಕ್ಕೆ ಸೇರಿದ ಕಾರ್ಯಕರ್ತರ ನೆರವಿನೊಂದಿಗೆ ಕೆಲವು ಚೀನಾದ ಪ್ರಜೆಗಳು ರಹಸ್ಯವಾಗಿ ಸಮುದ್ರ ಮಾರ್ಗದ ಮೂಲಕ ಭಾರತವನ್ನು ಪ್ರವೇಶಿಸಿದ್ದಾರೆ ಎಂದು ಅದೇ ಸಂಸ್ಥೆ ಎಚ್ಚರಿಕೆ ನೀಡಿದ ಕೆಲವು ದಿನಗಳ ನಂತರ ಭದ್ರತಾ ಸಲಹೆ ಹೊರಬಿದ್ದಿದೆ.

ತಮಿಳುನಾಡು ಕೋಸ್ಟಲ್ ಸೆಕ್ಯುರಿಟಿ ಗ್ರೂಪ್, ಕೇಂದ್ರ ಗುಪ್ತಚರ ಸಂಸ್ಥೆಯನ್ನು ಉಲ್ಲೇಖಿಸಿದೆ. ಉಪಗ್ರಹಗಳು, ರಾಕೆಟ್‌ಗಳು ಮತ್ತು ಖಂಡಾಂತರ ಕ್ಷಿಪಣಿ ಉಡಾವಣೆಗಳ ಮೇಲೆ ನಿಗಾ ಇರಿಸಲು ಬಳಸುವ ಚೀನಾದ ಹಡಗಿನ ಮೇಲೆ ಎಚ್ಚರಿಕೆ ಅಗತ್ಯ. ಶ್ರೀಲಂಕಾದ ಹಂಬನ್‌ತೋಟ ಬಂದರಿನ ಬೆಳವಣಿಗೆಗಳನ್ನು ಗಮನಿಸಬೇಕು. ಸಾಕಷ್ಟು ಭದ್ರತಾ ವ್ಯವಸ್ಥೆಗಳಿಗೆ ಕರೆ ನೀಡಲಾಗಿದೆ. ತಮಿಳುನಾಡು ಕರಾವಳಿಯುದ್ದಕ್ಕೂ ಗಮನ ಹರಿಸಬೇಕು ಎಂದು ಸೂಚಿಸಲಾಗಿದೆ.

ಮುಲ್ಲೈತೀವು, ಪರುತಿಥೀವು, ಅನಲೈತೀವು, ಮೀಸಲೈ ಮತ್ತು ಚಾವಕ್ಕಚೇರಿ ಸೇರಿದಂತೆ ಉತ್ತರ ಶ್ರೀಲಂಕಾದ ಹಲವು ಭಾಗಗಳಲ್ಲಿ ಚೀನಾದ ಪ್ರಜೆಗಳ ಮುಕ್ತ ಸಂಚಾರವು ತಮಿಳು ಮೀನುಗಾರರಲ್ಲಿ ಅಸಮಾಧಾನವನ್ನು ಉಂಟುಮಾಡಿದೆ. ತಮ್ಮ ಜೀವನಾಧಾರವಾಗಿರುವ ಶ್ರೀಮಂತ ಸಮುದ್ರ ಸಂಪತ್ತನ್ನು ಚೀನಿಯರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಆತಂಕವನ್ನು ಅವರು ವ್ಯಕ್ತಪಡಿಸಿದ್ದಾರೆ.

ಸದ್ಯದ ಪರಿಸ್ಥಿತಿಯು ಶ್ರೀಲಂಕಾದ ಪ್ರಜೆಗಳ ನಡುವೆ ವಿಭಜನೆ ಉಂಟು ಮಾಡಬಹುದು. ದ್ವೀಪ ರಾಷ್ಟ್ರದ ಉತ್ತರ ಮತ್ತು ಪೂರ್ವ ಭಾಗಗಳಲ್ಲಿ ವಾಸಿಸುವ ತಮಿಳರ ಮೇಲೆ ಭಾರತದ ಪ್ರಭಾವವನ್ನು ಮೊಟಕುಗೊಳಿಸಬಹುದು ಎಂಬುದು ಸ್ಥಳೀಯ ತಮಿಳರ ಭಯವಾಗಿದೆ.

ಶ್ರೀಲಂಕಾದ ಹಂಬಂತೋಟಾ ಬಂದರಿಗೆ ಚೀನಾದ ಸಂಶೋಧನಾ ನೌಕೆ ‘ಯುವಾನ್ ವಾಂಗ್ 5’ ಆಗಮನದ ಕುರಿತು ಕೇಂದ್ರ ಸರ್ಕಾರ ಪ್ರತಿಕ್ರಿಯಿಸಿತ್ತು. ನಂತರ ತಮಿಳುನಾಡು ಆಗ್ನೇಯ ಕರಾವಳಿಯಲ್ಲಿ ಭದ್ರತಾ ವ್ಯವಸ್ಥೆಯನ್ನು ಬಲಪಡಿಸಿದೆ. 1,076-ಕಿಮೀ ಉದ್ದದ ಕರಾವಳಿ ಭಾಗದಲ್ಲಿ ಗುಪ್ತಚರ ಚಟುವಟಿಕೆಗಳನ್ನು ಸರ್ಕಾರ ಸಕ್ರಿಯಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ವರ್ಷದ ಆಗಸ್ಟ್‌ನಲ್ಲಿ ಚೀನಾದ ಅನುದಾನಿತ ಹಂಬನ್‌ತೋಟ ಬಂದರಿಗೆ ಚೀನಾದ ಉಪಗ್ರಹ-ಟ್ರ್ಯಾಕಿಂಗ್ ಹಡಗಿನ ಆಗಮನವಾಗಿದ್ದರ ಕುರಿತು ಭಾರತವು ಆತಂಕ ವ್ಯಕ್ತಪಡಿಸಿತ್ತು. ತನ್ನ ಭದ್ರತೆ ಮತ್ತು ಆರ್ಥಿಕ ಹಿತಾಸಕ್ತಿಗಳ ಮೇಲೆ ಪರಿಣಾಮ ಬೀರುವ ಬೆಳವಣಿಗೆಗಳನ್ನು ಎಚ್ಚರಿಕೆಯಿಂದ ಭಾರತ ಗಮನಿಸುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮತ್ತು ತಮಿಳುನಾಡು ಕರಾವಳಿ ಭದ್ರತಾ ಗುಂಪಿನ ಮುಖ್ಯಸ್ಥ ಸಂದೀಪ್ ಮಿತ್ತಲ್ ಪ್ರತಿಕ್ರಿಯಿಸಿದ್ದು, “ಶ್ರೀಲಂಕಾದಲ್ಲಿ ಚೀನಾದ ಪ್ರಜೆಗಳ ಉಪಸ್ಥಿತಿಯು ಹೆಚ್ಚುತ್ತಿದೆ ಎಂಬುದು ವಿವಾದಾಸ್ಪದ ಸಂಗತಿಯಲ್ಲ. ಆದರೆ ಶ್ರೀಲಂಕಾದಲ್ಲಿರುವ ಚೀನಾದ ರಾಯಭಾರಿಯು ಅಂತಾರಾಷ್ಟ್ರೀಯ ಕಡಲ ಗಡಿ ರೇಖೆಯ ಸಮೀಪವಿರುವ ದ್ವೀಪಗಳಿಗೆ ಆಗಾಗ್ಗೆ ಭೇಟಿ ನೀಡುತ್ತಿರುವುದು ಮತ್ತು ಸಮುದ್ರ ಸೌತೆಕಾಯಿಯನ್ನು ಬೆಳೆಯುವ ನೆಪದಲ್ಲಿ ಆ ಪ್ರದೇಶದಲ್ಲಿ ನಡೆಸಲಾದ ಡ್ರೋನ್ ಸಮೀಕ್ಷೆಯು ಅನುಮಾನಗಳನ್ನು ತಂದಿವೆ” ಎಂದಿದ್ದಾರೆ.

“ಭಾರತದಲ್ಲಿ ಪದವಿಪೂರ್ವ ಕಲಿಕೆಯನ್ನು ಮಾಡುತ್ತಿರುವ ಶ್ರೀಲಂಕಾದ ವಿದ್ಯಾರ್ಥಿಗಳಿಗೆ ಭಾರತವು ವಿದ್ಯಾರ್ಥಿವೇತನವನ್ನು ನೀಡುತ್ತಿದ್ದರೆ, ಶ್ರೀಲಂಕಾದಲ್ಲಿಯೇ ಓದುತ್ತಿರುವ ಸ್ನಾತಕೋತ್ತರ ಶ್ರೀಲಂಕಾ ವಿದ್ಯಾರ್ಥಿಗಳಿಗೆ ಚೀನಾ ಧನಸಹಾಯ ನೀಡುತ್ತಿದೆ. ಅವರು [ಚೀನೀಯರು] ತಮ್ಮ ಭವಿಷ್ಯದ ಯೋಜನೆಗಳನ್ನು ಬೆಂಬಲಿಸಲು ಶ್ರೀಲಂಕಾದಲ್ಲಿ ಯುವಕರನ್ನು ಓಲೈಸಲು ಪ್ರಯತ್ನಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: 100ಕ್ಕೂ ಹೆಚ್ಚು ಅಪ್ಲಿಕೇಷನ್‌ ಬಳಸಿ ಸುಲಿಗೆ; ₹ 500 ಕೋಟಿ ಚೀನಾಕ್ಕೆ ಕಳುಹಿಸಿದ ಯುಪಿ ಗ್ಯಾಂಗ್‌ ಅರೆಸ್ಟ್‌‌!

ಚೀನೀಯರು ಭಾರತದ ಜಲಪ್ರದೇಶಕ್ಕೆ ನುಗ್ಗುತ್ತಾರೆ ಎಂಬುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ ಎಂದು ರಾಜ್ಯ ಕಡಲ ಭದ್ರತಾ ಸಂಯೋಜಕರೂ ಆಗಿರುವ ಡಾ.ಮಿತ್ತಲ್ ಹೇಳಿದ್ದಾರೆ. “ತಮ್ಮ ಗುಪ್ತಚರ ಚಟುವಟಿಕೆಗಳನ್ನು ಸಕ್ರಿಯಗೊಳಿಸಲು ಮತ್ತು ಕರಾವಳಿಯಾದ್ಯಂತ ಭದ್ರತೆಯನ್ನು ತೀವ್ರಗೊಳಿಸಲು ಎಲ್ಲಾ ಕರಾವಳಿ ಜಿಲ್ಲೆಗಳಿಗೆ ಎಚ್ಚರಿಕೆಯನ್ನು ತಮಿಳುನಾಡು ನೀಡಿದೆ” ಎಂದಿದ್ದಾರೆ.

ಕೇಂದ್ರ ಸರ್ಕಾರವು ಕರಾವಳಿ ಭದ್ರತಾ ಯೋಜನೆಯ ಹಂತ-IIIರ ನಿಧಿಯನ್ನು ಸಕ್ರಿಯಗೊಳಿಸುವ ತುರ್ತು ಅವಶ್ಯಕತೆಯಿದೆ ಎಂದು ತಮಿಳುನಾಡಿನ ಭದ್ರತಾ ಏಜೆನ್ಸಿಗಳು ಹೇಳುತ್ತದೆ. ಹಂತ-II 2020ರಲ್ಲಿ ಕೊನೆಗೊಂಡ ನಂತರ, ಕರಾವಳಿ ಭದ್ರತಾ ಗುಂಪಿಗೆ ಹಣ ಮತ್ತು ಮೂಲಸೌಕರ್ಯದ ಬೆಂಬಲವನ್ನು ನಿಲ್ಲಿಸಲಾಯಿತು.

“ಹೆಚ್ಚುತ್ತಿರುವ ಆತಂಕವನ್ನು ಪರಿಗಣಿಸಿ ಕರಾವಳಿಯುದ್ದಕ್ಕೂ ಅನುಕೂಲಕರ ಸ್ಥಳಗಳಲ್ಲಿ ನೆಲೆಸಲು ಕೆಲವು ಭಾರತೀಯ ಸಮುದ್ರ ಮೀಸಲು ಬೆಟಾಲಿಯನ್‌ಗಳನ್ನು ಹೆಚ್ಚಿಸಲು ಕೇಂದ್ರವು ತಮಿಳುನಾಡಿಗೆ ಸಹಾಯ ಮಾಡಬೇಕು. ತಮಿಳುನಾಡು ಕೋಸ್ಟಲ್ ಸೆಕ್ಯುರಿಟಿ ಗ್ರೂಪ್‌ಗೆ 800 ಸಿಬ್ಬಂದಿಗಳ ಮಂಜೂರಾತಿಯಲ್ಲಿ ಸುಮಾರು 50% ಖಾಲಿ ಇದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ‘ದಿ ಹಿಂದೂ’ ವರದಿ ಮಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...