Homeಮುಖಪುಟಶ್ರೀಲಂಕಾದಲ್ಲಿ ಹೆಚ್ಚುತ್ತಿದೆ ಚೀನಾ ಸೇನೆಯ ಪ್ರಾಬಲ್ಯ; ತಮಿಳುನಾಡಿಗೆ ಗುಪ್ತಚರ ಸಂಸ್ಥೆ ಎಚ್ಚರಿಕೆ ಕರೆಘಂಟೆ

ಶ್ರೀಲಂಕಾದಲ್ಲಿ ಹೆಚ್ಚುತ್ತಿದೆ ಚೀನಾ ಸೇನೆಯ ಪ್ರಾಬಲ್ಯ; ತಮಿಳುನಾಡಿಗೆ ಗುಪ್ತಚರ ಸಂಸ್ಥೆ ಎಚ್ಚರಿಕೆ ಕರೆಘಂಟೆ

- Advertisement -
- Advertisement -

ಶ್ರೀಲಂಕಾದಲ್ಲಿ ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಪ್ರಾಬಲ್ಯ ಹೆಚ್ಚುತ್ತಿರುವ ಬಗ್ಗೆ ತಮಿಳುನಾಡು ರಾಜ್ಯವು ಗಂಭೀರ ಭದ್ರತಾ ಕಳವಳಗಳನ್ನು ವ್ಯಕ್ತಪಡಿಸಿದೆ.

ಕೆಲವು ದಿನಗಳ ಹಿಂದೆ ರಾಜ್ಯದ ಗುಪ್ತಚರ ಸಂಸ್ಥೆ ಎಚ್ಚರಿಕೆಗಳನ್ನು ನೀಡಿದ್ದು, ನೆರೆಯ ದೇಶದಲ್ಲಿ ಚೀನಿಯರ ಚಟುವಟಿಕೆಗಳು ರಾಷ್ಟ್ರೀಯ ಭದ್ರತೆಗೆ ಕಳವಳಕಾರಿಯಾಗಿವೆ ಮತ್ತು ಕರಾವಳಿಯಾದ್ಯಂತ ತೀವ್ರ ಜಾಗರೂಕತೆ ವಹಿಸುವ ಅಗತ್ಯವಿದೆ ಎಂದು ಎಚ್ಚರಿಕೆ ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉತ್ತರ ಶ್ರೀಲಂಕಾದಲ್ಲಿ ಪಿಎಲ್‌ಎ ಕೇಡರ್‌ಗಳ ಚಲನವಲನ ಮತ್ತು ಹೈಟೆಕ್ ಗ್ಯಾಜೆಟ್‌ಗಳಾದ ಉಪಗ್ರಹಗಳು, ಡ್ರೋನ್‌ಗಳು, ಇತರ ಸಂವಹನ ಸಾಧನಗಳ ನಿಯೋಜನೆಯನ್ನು ಗಮನಿಸಲು ಕರಾವಳಿ ಜಿಲ್ಲೆಗಳಲ್ಲಿ ನಿರಂತರ ಕಣ್ಗಾವಲು ಅಗತ್ಯವಿದೆ ಎಂದು ರಾಜ್ಯದ ಎಲ್ಲಾ ನಗರಗಳು/ಜಿಲ್ಲೆಗಳಿಗೆ ಸಲಹೆ ಕಳುಹಿಸಲಾಗಿದೆ. ಮೂಲಗಳನ್ನು ಉಲ್ಲೇಖಿಸಿರುವ ಗುಪ್ತಚರ ಸಂಸ್ಥೆ, “ಪಿಎಲ್‌ಎ ಸಮುದ್ರ ಸೌತೆಕಾಯಿ ಕೃಷಿಯನ್ನು ಪ್ರಾರಂಭಿಸುವ ನೆಪದಲ್ಲಿ ಅತ್ಯಾಧುನಿಕ ಗ್ಯಾಜೆಟ್‌ಗಳನ್ನು ನಿಯೋಜಿಸಿದೆ” ಎಂಬ ಎಚ್ಚರಿಕೆಯನ್ನೂ ನೀಡಿದೆ.

ಶ್ರೀಲಂಕಾ ಮೂಲದ ರಾಜಕೀಯ ಪಕ್ಷವೊಂದಕ್ಕೆ ಸೇರಿದ ಕಾರ್ಯಕರ್ತರ ನೆರವಿನೊಂದಿಗೆ ಕೆಲವು ಚೀನಾದ ಪ್ರಜೆಗಳು ರಹಸ್ಯವಾಗಿ ಸಮುದ್ರ ಮಾರ್ಗದ ಮೂಲಕ ಭಾರತವನ್ನು ಪ್ರವೇಶಿಸಿದ್ದಾರೆ ಎಂದು ಅದೇ ಸಂಸ್ಥೆ ಎಚ್ಚರಿಕೆ ನೀಡಿದ ಕೆಲವು ದಿನಗಳ ನಂತರ ಭದ್ರತಾ ಸಲಹೆ ಹೊರಬಿದ್ದಿದೆ.

ತಮಿಳುನಾಡು ಕೋಸ್ಟಲ್ ಸೆಕ್ಯುರಿಟಿ ಗ್ರೂಪ್, ಕೇಂದ್ರ ಗುಪ್ತಚರ ಸಂಸ್ಥೆಯನ್ನು ಉಲ್ಲೇಖಿಸಿದೆ. ಉಪಗ್ರಹಗಳು, ರಾಕೆಟ್‌ಗಳು ಮತ್ತು ಖಂಡಾಂತರ ಕ್ಷಿಪಣಿ ಉಡಾವಣೆಗಳ ಮೇಲೆ ನಿಗಾ ಇರಿಸಲು ಬಳಸುವ ಚೀನಾದ ಹಡಗಿನ ಮೇಲೆ ಎಚ್ಚರಿಕೆ ಅಗತ್ಯ. ಶ್ರೀಲಂಕಾದ ಹಂಬನ್‌ತೋಟ ಬಂದರಿನ ಬೆಳವಣಿಗೆಗಳನ್ನು ಗಮನಿಸಬೇಕು. ಸಾಕಷ್ಟು ಭದ್ರತಾ ವ್ಯವಸ್ಥೆಗಳಿಗೆ ಕರೆ ನೀಡಲಾಗಿದೆ. ತಮಿಳುನಾಡು ಕರಾವಳಿಯುದ್ದಕ್ಕೂ ಗಮನ ಹರಿಸಬೇಕು ಎಂದು ಸೂಚಿಸಲಾಗಿದೆ.

ಮುಲ್ಲೈತೀವು, ಪರುತಿಥೀವು, ಅನಲೈತೀವು, ಮೀಸಲೈ ಮತ್ತು ಚಾವಕ್ಕಚೇರಿ ಸೇರಿದಂತೆ ಉತ್ತರ ಶ್ರೀಲಂಕಾದ ಹಲವು ಭಾಗಗಳಲ್ಲಿ ಚೀನಾದ ಪ್ರಜೆಗಳ ಮುಕ್ತ ಸಂಚಾರವು ತಮಿಳು ಮೀನುಗಾರರಲ್ಲಿ ಅಸಮಾಧಾನವನ್ನು ಉಂಟುಮಾಡಿದೆ. ತಮ್ಮ ಜೀವನಾಧಾರವಾಗಿರುವ ಶ್ರೀಮಂತ ಸಮುದ್ರ ಸಂಪತ್ತನ್ನು ಚೀನಿಯರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಆತಂಕವನ್ನು ಅವರು ವ್ಯಕ್ತಪಡಿಸಿದ್ದಾರೆ.

ಸದ್ಯದ ಪರಿಸ್ಥಿತಿಯು ಶ್ರೀಲಂಕಾದ ಪ್ರಜೆಗಳ ನಡುವೆ ವಿಭಜನೆ ಉಂಟು ಮಾಡಬಹುದು. ದ್ವೀಪ ರಾಷ್ಟ್ರದ ಉತ್ತರ ಮತ್ತು ಪೂರ್ವ ಭಾಗಗಳಲ್ಲಿ ವಾಸಿಸುವ ತಮಿಳರ ಮೇಲೆ ಭಾರತದ ಪ್ರಭಾವವನ್ನು ಮೊಟಕುಗೊಳಿಸಬಹುದು ಎಂಬುದು ಸ್ಥಳೀಯ ತಮಿಳರ ಭಯವಾಗಿದೆ.

ಶ್ರೀಲಂಕಾದ ಹಂಬಂತೋಟಾ ಬಂದರಿಗೆ ಚೀನಾದ ಸಂಶೋಧನಾ ನೌಕೆ ‘ಯುವಾನ್ ವಾಂಗ್ 5’ ಆಗಮನದ ಕುರಿತು ಕೇಂದ್ರ ಸರ್ಕಾರ ಪ್ರತಿಕ್ರಿಯಿಸಿತ್ತು. ನಂತರ ತಮಿಳುನಾಡು ಆಗ್ನೇಯ ಕರಾವಳಿಯಲ್ಲಿ ಭದ್ರತಾ ವ್ಯವಸ್ಥೆಯನ್ನು ಬಲಪಡಿಸಿದೆ. 1,076-ಕಿಮೀ ಉದ್ದದ ಕರಾವಳಿ ಭಾಗದಲ್ಲಿ ಗುಪ್ತಚರ ಚಟುವಟಿಕೆಗಳನ್ನು ಸರ್ಕಾರ ಸಕ್ರಿಯಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ವರ್ಷದ ಆಗಸ್ಟ್‌ನಲ್ಲಿ ಚೀನಾದ ಅನುದಾನಿತ ಹಂಬನ್‌ತೋಟ ಬಂದರಿಗೆ ಚೀನಾದ ಉಪಗ್ರಹ-ಟ್ರ್ಯಾಕಿಂಗ್ ಹಡಗಿನ ಆಗಮನವಾಗಿದ್ದರ ಕುರಿತು ಭಾರತವು ಆತಂಕ ವ್ಯಕ್ತಪಡಿಸಿತ್ತು. ತನ್ನ ಭದ್ರತೆ ಮತ್ತು ಆರ್ಥಿಕ ಹಿತಾಸಕ್ತಿಗಳ ಮೇಲೆ ಪರಿಣಾಮ ಬೀರುವ ಬೆಳವಣಿಗೆಗಳನ್ನು ಎಚ್ಚರಿಕೆಯಿಂದ ಭಾರತ ಗಮನಿಸುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮತ್ತು ತಮಿಳುನಾಡು ಕರಾವಳಿ ಭದ್ರತಾ ಗುಂಪಿನ ಮುಖ್ಯಸ್ಥ ಸಂದೀಪ್ ಮಿತ್ತಲ್ ಪ್ರತಿಕ್ರಿಯಿಸಿದ್ದು, “ಶ್ರೀಲಂಕಾದಲ್ಲಿ ಚೀನಾದ ಪ್ರಜೆಗಳ ಉಪಸ್ಥಿತಿಯು ಹೆಚ್ಚುತ್ತಿದೆ ಎಂಬುದು ವಿವಾದಾಸ್ಪದ ಸಂಗತಿಯಲ್ಲ. ಆದರೆ ಶ್ರೀಲಂಕಾದಲ್ಲಿರುವ ಚೀನಾದ ರಾಯಭಾರಿಯು ಅಂತಾರಾಷ್ಟ್ರೀಯ ಕಡಲ ಗಡಿ ರೇಖೆಯ ಸಮೀಪವಿರುವ ದ್ವೀಪಗಳಿಗೆ ಆಗಾಗ್ಗೆ ಭೇಟಿ ನೀಡುತ್ತಿರುವುದು ಮತ್ತು ಸಮುದ್ರ ಸೌತೆಕಾಯಿಯನ್ನು ಬೆಳೆಯುವ ನೆಪದಲ್ಲಿ ಆ ಪ್ರದೇಶದಲ್ಲಿ ನಡೆಸಲಾದ ಡ್ರೋನ್ ಸಮೀಕ್ಷೆಯು ಅನುಮಾನಗಳನ್ನು ತಂದಿವೆ” ಎಂದಿದ್ದಾರೆ.

“ಭಾರತದಲ್ಲಿ ಪದವಿಪೂರ್ವ ಕಲಿಕೆಯನ್ನು ಮಾಡುತ್ತಿರುವ ಶ್ರೀಲಂಕಾದ ವಿದ್ಯಾರ್ಥಿಗಳಿಗೆ ಭಾರತವು ವಿದ್ಯಾರ್ಥಿವೇತನವನ್ನು ನೀಡುತ್ತಿದ್ದರೆ, ಶ್ರೀಲಂಕಾದಲ್ಲಿಯೇ ಓದುತ್ತಿರುವ ಸ್ನಾತಕೋತ್ತರ ಶ್ರೀಲಂಕಾ ವಿದ್ಯಾರ್ಥಿಗಳಿಗೆ ಚೀನಾ ಧನಸಹಾಯ ನೀಡುತ್ತಿದೆ. ಅವರು [ಚೀನೀಯರು] ತಮ್ಮ ಭವಿಷ್ಯದ ಯೋಜನೆಗಳನ್ನು ಬೆಂಬಲಿಸಲು ಶ್ರೀಲಂಕಾದಲ್ಲಿ ಯುವಕರನ್ನು ಓಲೈಸಲು ಪ್ರಯತ್ನಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: 100ಕ್ಕೂ ಹೆಚ್ಚು ಅಪ್ಲಿಕೇಷನ್‌ ಬಳಸಿ ಸುಲಿಗೆ; ₹ 500 ಕೋಟಿ ಚೀನಾಕ್ಕೆ ಕಳುಹಿಸಿದ ಯುಪಿ ಗ್ಯಾಂಗ್‌ ಅರೆಸ್ಟ್‌‌!

ಚೀನೀಯರು ಭಾರತದ ಜಲಪ್ರದೇಶಕ್ಕೆ ನುಗ್ಗುತ್ತಾರೆ ಎಂಬುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ ಎಂದು ರಾಜ್ಯ ಕಡಲ ಭದ್ರತಾ ಸಂಯೋಜಕರೂ ಆಗಿರುವ ಡಾ.ಮಿತ್ತಲ್ ಹೇಳಿದ್ದಾರೆ. “ತಮ್ಮ ಗುಪ್ತಚರ ಚಟುವಟಿಕೆಗಳನ್ನು ಸಕ್ರಿಯಗೊಳಿಸಲು ಮತ್ತು ಕರಾವಳಿಯಾದ್ಯಂತ ಭದ್ರತೆಯನ್ನು ತೀವ್ರಗೊಳಿಸಲು ಎಲ್ಲಾ ಕರಾವಳಿ ಜಿಲ್ಲೆಗಳಿಗೆ ಎಚ್ಚರಿಕೆಯನ್ನು ತಮಿಳುನಾಡು ನೀಡಿದೆ” ಎಂದಿದ್ದಾರೆ.

ಕೇಂದ್ರ ಸರ್ಕಾರವು ಕರಾವಳಿ ಭದ್ರತಾ ಯೋಜನೆಯ ಹಂತ-IIIರ ನಿಧಿಯನ್ನು ಸಕ್ರಿಯಗೊಳಿಸುವ ತುರ್ತು ಅವಶ್ಯಕತೆಯಿದೆ ಎಂದು ತಮಿಳುನಾಡಿನ ಭದ್ರತಾ ಏಜೆನ್ಸಿಗಳು ಹೇಳುತ್ತದೆ. ಹಂತ-II 2020ರಲ್ಲಿ ಕೊನೆಗೊಂಡ ನಂತರ, ಕರಾವಳಿ ಭದ್ರತಾ ಗುಂಪಿಗೆ ಹಣ ಮತ್ತು ಮೂಲಸೌಕರ್ಯದ ಬೆಂಬಲವನ್ನು ನಿಲ್ಲಿಸಲಾಯಿತು.

“ಹೆಚ್ಚುತ್ತಿರುವ ಆತಂಕವನ್ನು ಪರಿಗಣಿಸಿ ಕರಾವಳಿಯುದ್ದಕ್ಕೂ ಅನುಕೂಲಕರ ಸ್ಥಳಗಳಲ್ಲಿ ನೆಲೆಸಲು ಕೆಲವು ಭಾರತೀಯ ಸಮುದ್ರ ಮೀಸಲು ಬೆಟಾಲಿಯನ್‌ಗಳನ್ನು ಹೆಚ್ಚಿಸಲು ಕೇಂದ್ರವು ತಮಿಳುನಾಡಿಗೆ ಸಹಾಯ ಮಾಡಬೇಕು. ತಮಿಳುನಾಡು ಕೋಸ್ಟಲ್ ಸೆಕ್ಯುರಿಟಿ ಗ್ರೂಪ್‌ಗೆ 800 ಸಿಬ್ಬಂದಿಗಳ ಮಂಜೂರಾತಿಯಲ್ಲಿ ಸುಮಾರು 50% ಖಾಲಿ ಇದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ‘ದಿ ಹಿಂದೂ’ ವರದಿ ಮಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...