Homeಮುಖಪುಟಶ್ರೀಲಂಕಾದಲ್ಲಿ ಹೆಚ್ಚುತ್ತಿದೆ ಚೀನಾ ಸೇನೆಯ ಪ್ರಾಬಲ್ಯ; ತಮಿಳುನಾಡಿಗೆ ಗುಪ್ತಚರ ಸಂಸ್ಥೆ ಎಚ್ಚರಿಕೆ ಕರೆಘಂಟೆ

ಶ್ರೀಲಂಕಾದಲ್ಲಿ ಹೆಚ್ಚುತ್ತಿದೆ ಚೀನಾ ಸೇನೆಯ ಪ್ರಾಬಲ್ಯ; ತಮಿಳುನಾಡಿಗೆ ಗುಪ್ತಚರ ಸಂಸ್ಥೆ ಎಚ್ಚರಿಕೆ ಕರೆಘಂಟೆ

- Advertisement -
- Advertisement -

ಶ್ರೀಲಂಕಾದಲ್ಲಿ ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಪ್ರಾಬಲ್ಯ ಹೆಚ್ಚುತ್ತಿರುವ ಬಗ್ಗೆ ತಮಿಳುನಾಡು ರಾಜ್ಯವು ಗಂಭೀರ ಭದ್ರತಾ ಕಳವಳಗಳನ್ನು ವ್ಯಕ್ತಪಡಿಸಿದೆ.

ಕೆಲವು ದಿನಗಳ ಹಿಂದೆ ರಾಜ್ಯದ ಗುಪ್ತಚರ ಸಂಸ್ಥೆ ಎಚ್ಚರಿಕೆಗಳನ್ನು ನೀಡಿದ್ದು, ನೆರೆಯ ದೇಶದಲ್ಲಿ ಚೀನಿಯರ ಚಟುವಟಿಕೆಗಳು ರಾಷ್ಟ್ರೀಯ ಭದ್ರತೆಗೆ ಕಳವಳಕಾರಿಯಾಗಿವೆ ಮತ್ತು ಕರಾವಳಿಯಾದ್ಯಂತ ತೀವ್ರ ಜಾಗರೂಕತೆ ವಹಿಸುವ ಅಗತ್ಯವಿದೆ ಎಂದು ಎಚ್ಚರಿಕೆ ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉತ್ತರ ಶ್ರೀಲಂಕಾದಲ್ಲಿ ಪಿಎಲ್‌ಎ ಕೇಡರ್‌ಗಳ ಚಲನವಲನ ಮತ್ತು ಹೈಟೆಕ್ ಗ್ಯಾಜೆಟ್‌ಗಳಾದ ಉಪಗ್ರಹಗಳು, ಡ್ರೋನ್‌ಗಳು, ಇತರ ಸಂವಹನ ಸಾಧನಗಳ ನಿಯೋಜನೆಯನ್ನು ಗಮನಿಸಲು ಕರಾವಳಿ ಜಿಲ್ಲೆಗಳಲ್ಲಿ ನಿರಂತರ ಕಣ್ಗಾವಲು ಅಗತ್ಯವಿದೆ ಎಂದು ರಾಜ್ಯದ ಎಲ್ಲಾ ನಗರಗಳು/ಜಿಲ್ಲೆಗಳಿಗೆ ಸಲಹೆ ಕಳುಹಿಸಲಾಗಿದೆ. ಮೂಲಗಳನ್ನು ಉಲ್ಲೇಖಿಸಿರುವ ಗುಪ್ತಚರ ಸಂಸ್ಥೆ, “ಪಿಎಲ್‌ಎ ಸಮುದ್ರ ಸೌತೆಕಾಯಿ ಕೃಷಿಯನ್ನು ಪ್ರಾರಂಭಿಸುವ ನೆಪದಲ್ಲಿ ಅತ್ಯಾಧುನಿಕ ಗ್ಯಾಜೆಟ್‌ಗಳನ್ನು ನಿಯೋಜಿಸಿದೆ” ಎಂಬ ಎಚ್ಚರಿಕೆಯನ್ನೂ ನೀಡಿದೆ.

ಶ್ರೀಲಂಕಾ ಮೂಲದ ರಾಜಕೀಯ ಪಕ್ಷವೊಂದಕ್ಕೆ ಸೇರಿದ ಕಾರ್ಯಕರ್ತರ ನೆರವಿನೊಂದಿಗೆ ಕೆಲವು ಚೀನಾದ ಪ್ರಜೆಗಳು ರಹಸ್ಯವಾಗಿ ಸಮುದ್ರ ಮಾರ್ಗದ ಮೂಲಕ ಭಾರತವನ್ನು ಪ್ರವೇಶಿಸಿದ್ದಾರೆ ಎಂದು ಅದೇ ಸಂಸ್ಥೆ ಎಚ್ಚರಿಕೆ ನೀಡಿದ ಕೆಲವು ದಿನಗಳ ನಂತರ ಭದ್ರತಾ ಸಲಹೆ ಹೊರಬಿದ್ದಿದೆ.

ತಮಿಳುನಾಡು ಕೋಸ್ಟಲ್ ಸೆಕ್ಯುರಿಟಿ ಗ್ರೂಪ್, ಕೇಂದ್ರ ಗುಪ್ತಚರ ಸಂಸ್ಥೆಯನ್ನು ಉಲ್ಲೇಖಿಸಿದೆ. ಉಪಗ್ರಹಗಳು, ರಾಕೆಟ್‌ಗಳು ಮತ್ತು ಖಂಡಾಂತರ ಕ್ಷಿಪಣಿ ಉಡಾವಣೆಗಳ ಮೇಲೆ ನಿಗಾ ಇರಿಸಲು ಬಳಸುವ ಚೀನಾದ ಹಡಗಿನ ಮೇಲೆ ಎಚ್ಚರಿಕೆ ಅಗತ್ಯ. ಶ್ರೀಲಂಕಾದ ಹಂಬನ್‌ತೋಟ ಬಂದರಿನ ಬೆಳವಣಿಗೆಗಳನ್ನು ಗಮನಿಸಬೇಕು. ಸಾಕಷ್ಟು ಭದ್ರತಾ ವ್ಯವಸ್ಥೆಗಳಿಗೆ ಕರೆ ನೀಡಲಾಗಿದೆ. ತಮಿಳುನಾಡು ಕರಾವಳಿಯುದ್ದಕ್ಕೂ ಗಮನ ಹರಿಸಬೇಕು ಎಂದು ಸೂಚಿಸಲಾಗಿದೆ.

ಮುಲ್ಲೈತೀವು, ಪರುತಿಥೀವು, ಅನಲೈತೀವು, ಮೀಸಲೈ ಮತ್ತು ಚಾವಕ್ಕಚೇರಿ ಸೇರಿದಂತೆ ಉತ್ತರ ಶ್ರೀಲಂಕಾದ ಹಲವು ಭಾಗಗಳಲ್ಲಿ ಚೀನಾದ ಪ್ರಜೆಗಳ ಮುಕ್ತ ಸಂಚಾರವು ತಮಿಳು ಮೀನುಗಾರರಲ್ಲಿ ಅಸಮಾಧಾನವನ್ನು ಉಂಟುಮಾಡಿದೆ. ತಮ್ಮ ಜೀವನಾಧಾರವಾಗಿರುವ ಶ್ರೀಮಂತ ಸಮುದ್ರ ಸಂಪತ್ತನ್ನು ಚೀನಿಯರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಆತಂಕವನ್ನು ಅವರು ವ್ಯಕ್ತಪಡಿಸಿದ್ದಾರೆ.

ಸದ್ಯದ ಪರಿಸ್ಥಿತಿಯು ಶ್ರೀಲಂಕಾದ ಪ್ರಜೆಗಳ ನಡುವೆ ವಿಭಜನೆ ಉಂಟು ಮಾಡಬಹುದು. ದ್ವೀಪ ರಾಷ್ಟ್ರದ ಉತ್ತರ ಮತ್ತು ಪೂರ್ವ ಭಾಗಗಳಲ್ಲಿ ವಾಸಿಸುವ ತಮಿಳರ ಮೇಲೆ ಭಾರತದ ಪ್ರಭಾವವನ್ನು ಮೊಟಕುಗೊಳಿಸಬಹುದು ಎಂಬುದು ಸ್ಥಳೀಯ ತಮಿಳರ ಭಯವಾಗಿದೆ.

ಶ್ರೀಲಂಕಾದ ಹಂಬಂತೋಟಾ ಬಂದರಿಗೆ ಚೀನಾದ ಸಂಶೋಧನಾ ನೌಕೆ ‘ಯುವಾನ್ ವಾಂಗ್ 5’ ಆಗಮನದ ಕುರಿತು ಕೇಂದ್ರ ಸರ್ಕಾರ ಪ್ರತಿಕ್ರಿಯಿಸಿತ್ತು. ನಂತರ ತಮಿಳುನಾಡು ಆಗ್ನೇಯ ಕರಾವಳಿಯಲ್ಲಿ ಭದ್ರತಾ ವ್ಯವಸ್ಥೆಯನ್ನು ಬಲಪಡಿಸಿದೆ. 1,076-ಕಿಮೀ ಉದ್ದದ ಕರಾವಳಿ ಭಾಗದಲ್ಲಿ ಗುಪ್ತಚರ ಚಟುವಟಿಕೆಗಳನ್ನು ಸರ್ಕಾರ ಸಕ್ರಿಯಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ವರ್ಷದ ಆಗಸ್ಟ್‌ನಲ್ಲಿ ಚೀನಾದ ಅನುದಾನಿತ ಹಂಬನ್‌ತೋಟ ಬಂದರಿಗೆ ಚೀನಾದ ಉಪಗ್ರಹ-ಟ್ರ್ಯಾಕಿಂಗ್ ಹಡಗಿನ ಆಗಮನವಾಗಿದ್ದರ ಕುರಿತು ಭಾರತವು ಆತಂಕ ವ್ಯಕ್ತಪಡಿಸಿತ್ತು. ತನ್ನ ಭದ್ರತೆ ಮತ್ತು ಆರ್ಥಿಕ ಹಿತಾಸಕ್ತಿಗಳ ಮೇಲೆ ಪರಿಣಾಮ ಬೀರುವ ಬೆಳವಣಿಗೆಗಳನ್ನು ಎಚ್ಚರಿಕೆಯಿಂದ ಭಾರತ ಗಮನಿಸುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮತ್ತು ತಮಿಳುನಾಡು ಕರಾವಳಿ ಭದ್ರತಾ ಗುಂಪಿನ ಮುಖ್ಯಸ್ಥ ಸಂದೀಪ್ ಮಿತ್ತಲ್ ಪ್ರತಿಕ್ರಿಯಿಸಿದ್ದು, “ಶ್ರೀಲಂಕಾದಲ್ಲಿ ಚೀನಾದ ಪ್ರಜೆಗಳ ಉಪಸ್ಥಿತಿಯು ಹೆಚ್ಚುತ್ತಿದೆ ಎಂಬುದು ವಿವಾದಾಸ್ಪದ ಸಂಗತಿಯಲ್ಲ. ಆದರೆ ಶ್ರೀಲಂಕಾದಲ್ಲಿರುವ ಚೀನಾದ ರಾಯಭಾರಿಯು ಅಂತಾರಾಷ್ಟ್ರೀಯ ಕಡಲ ಗಡಿ ರೇಖೆಯ ಸಮೀಪವಿರುವ ದ್ವೀಪಗಳಿಗೆ ಆಗಾಗ್ಗೆ ಭೇಟಿ ನೀಡುತ್ತಿರುವುದು ಮತ್ತು ಸಮುದ್ರ ಸೌತೆಕಾಯಿಯನ್ನು ಬೆಳೆಯುವ ನೆಪದಲ್ಲಿ ಆ ಪ್ರದೇಶದಲ್ಲಿ ನಡೆಸಲಾದ ಡ್ರೋನ್ ಸಮೀಕ್ಷೆಯು ಅನುಮಾನಗಳನ್ನು ತಂದಿವೆ” ಎಂದಿದ್ದಾರೆ.

“ಭಾರತದಲ್ಲಿ ಪದವಿಪೂರ್ವ ಕಲಿಕೆಯನ್ನು ಮಾಡುತ್ತಿರುವ ಶ್ರೀಲಂಕಾದ ವಿದ್ಯಾರ್ಥಿಗಳಿಗೆ ಭಾರತವು ವಿದ್ಯಾರ್ಥಿವೇತನವನ್ನು ನೀಡುತ್ತಿದ್ದರೆ, ಶ್ರೀಲಂಕಾದಲ್ಲಿಯೇ ಓದುತ್ತಿರುವ ಸ್ನಾತಕೋತ್ತರ ಶ್ರೀಲಂಕಾ ವಿದ್ಯಾರ್ಥಿಗಳಿಗೆ ಚೀನಾ ಧನಸಹಾಯ ನೀಡುತ್ತಿದೆ. ಅವರು [ಚೀನೀಯರು] ತಮ್ಮ ಭವಿಷ್ಯದ ಯೋಜನೆಗಳನ್ನು ಬೆಂಬಲಿಸಲು ಶ್ರೀಲಂಕಾದಲ್ಲಿ ಯುವಕರನ್ನು ಓಲೈಸಲು ಪ್ರಯತ್ನಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: 100ಕ್ಕೂ ಹೆಚ್ಚು ಅಪ್ಲಿಕೇಷನ್‌ ಬಳಸಿ ಸುಲಿಗೆ; ₹ 500 ಕೋಟಿ ಚೀನಾಕ್ಕೆ ಕಳುಹಿಸಿದ ಯುಪಿ ಗ್ಯಾಂಗ್‌ ಅರೆಸ್ಟ್‌‌!

ಚೀನೀಯರು ಭಾರತದ ಜಲಪ್ರದೇಶಕ್ಕೆ ನುಗ್ಗುತ್ತಾರೆ ಎಂಬುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ ಎಂದು ರಾಜ್ಯ ಕಡಲ ಭದ್ರತಾ ಸಂಯೋಜಕರೂ ಆಗಿರುವ ಡಾ.ಮಿತ್ತಲ್ ಹೇಳಿದ್ದಾರೆ. “ತಮ್ಮ ಗುಪ್ತಚರ ಚಟುವಟಿಕೆಗಳನ್ನು ಸಕ್ರಿಯಗೊಳಿಸಲು ಮತ್ತು ಕರಾವಳಿಯಾದ್ಯಂತ ಭದ್ರತೆಯನ್ನು ತೀವ್ರಗೊಳಿಸಲು ಎಲ್ಲಾ ಕರಾವಳಿ ಜಿಲ್ಲೆಗಳಿಗೆ ಎಚ್ಚರಿಕೆಯನ್ನು ತಮಿಳುನಾಡು ನೀಡಿದೆ” ಎಂದಿದ್ದಾರೆ.

ಕೇಂದ್ರ ಸರ್ಕಾರವು ಕರಾವಳಿ ಭದ್ರತಾ ಯೋಜನೆಯ ಹಂತ-IIIರ ನಿಧಿಯನ್ನು ಸಕ್ರಿಯಗೊಳಿಸುವ ತುರ್ತು ಅವಶ್ಯಕತೆಯಿದೆ ಎಂದು ತಮಿಳುನಾಡಿನ ಭದ್ರತಾ ಏಜೆನ್ಸಿಗಳು ಹೇಳುತ್ತದೆ. ಹಂತ-II 2020ರಲ್ಲಿ ಕೊನೆಗೊಂಡ ನಂತರ, ಕರಾವಳಿ ಭದ್ರತಾ ಗುಂಪಿಗೆ ಹಣ ಮತ್ತು ಮೂಲಸೌಕರ್ಯದ ಬೆಂಬಲವನ್ನು ನಿಲ್ಲಿಸಲಾಯಿತು.

“ಹೆಚ್ಚುತ್ತಿರುವ ಆತಂಕವನ್ನು ಪರಿಗಣಿಸಿ ಕರಾವಳಿಯುದ್ದಕ್ಕೂ ಅನುಕೂಲಕರ ಸ್ಥಳಗಳಲ್ಲಿ ನೆಲೆಸಲು ಕೆಲವು ಭಾರತೀಯ ಸಮುದ್ರ ಮೀಸಲು ಬೆಟಾಲಿಯನ್‌ಗಳನ್ನು ಹೆಚ್ಚಿಸಲು ಕೇಂದ್ರವು ತಮಿಳುನಾಡಿಗೆ ಸಹಾಯ ಮಾಡಬೇಕು. ತಮಿಳುನಾಡು ಕೋಸ್ಟಲ್ ಸೆಕ್ಯುರಿಟಿ ಗ್ರೂಪ್‌ಗೆ 800 ಸಿಬ್ಬಂದಿಗಳ ಮಂಜೂರಾತಿಯಲ್ಲಿ ಸುಮಾರು 50% ಖಾಲಿ ಇದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ‘ದಿ ಹಿಂದೂ’ ವರದಿ ಮಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...