Homeಮುಖಪುಟಶ್ರೀಲಂಕಾದಲ್ಲಿ ಹೆಚ್ಚುತ್ತಿದೆ ಚೀನಾ ಸೇನೆಯ ಪ್ರಾಬಲ್ಯ; ತಮಿಳುನಾಡಿಗೆ ಗುಪ್ತಚರ ಸಂಸ್ಥೆ ಎಚ್ಚರಿಕೆ ಕರೆಘಂಟೆ

ಶ್ರೀಲಂಕಾದಲ್ಲಿ ಹೆಚ್ಚುತ್ತಿದೆ ಚೀನಾ ಸೇನೆಯ ಪ್ರಾಬಲ್ಯ; ತಮಿಳುನಾಡಿಗೆ ಗುಪ್ತಚರ ಸಂಸ್ಥೆ ಎಚ್ಚರಿಕೆ ಕರೆಘಂಟೆ

- Advertisement -
- Advertisement -

ಶ್ರೀಲಂಕಾದಲ್ಲಿ ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಪ್ರಾಬಲ್ಯ ಹೆಚ್ಚುತ್ತಿರುವ ಬಗ್ಗೆ ತಮಿಳುನಾಡು ರಾಜ್ಯವು ಗಂಭೀರ ಭದ್ರತಾ ಕಳವಳಗಳನ್ನು ವ್ಯಕ್ತಪಡಿಸಿದೆ.

ಕೆಲವು ದಿನಗಳ ಹಿಂದೆ ರಾಜ್ಯದ ಗುಪ್ತಚರ ಸಂಸ್ಥೆ ಎಚ್ಚರಿಕೆಗಳನ್ನು ನೀಡಿದ್ದು, ನೆರೆಯ ದೇಶದಲ್ಲಿ ಚೀನಿಯರ ಚಟುವಟಿಕೆಗಳು ರಾಷ್ಟ್ರೀಯ ಭದ್ರತೆಗೆ ಕಳವಳಕಾರಿಯಾಗಿವೆ ಮತ್ತು ಕರಾವಳಿಯಾದ್ಯಂತ ತೀವ್ರ ಜಾಗರೂಕತೆ ವಹಿಸುವ ಅಗತ್ಯವಿದೆ ಎಂದು ಎಚ್ಚರಿಕೆ ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉತ್ತರ ಶ್ರೀಲಂಕಾದಲ್ಲಿ ಪಿಎಲ್‌ಎ ಕೇಡರ್‌ಗಳ ಚಲನವಲನ ಮತ್ತು ಹೈಟೆಕ್ ಗ್ಯಾಜೆಟ್‌ಗಳಾದ ಉಪಗ್ರಹಗಳು, ಡ್ರೋನ್‌ಗಳು, ಇತರ ಸಂವಹನ ಸಾಧನಗಳ ನಿಯೋಜನೆಯನ್ನು ಗಮನಿಸಲು ಕರಾವಳಿ ಜಿಲ್ಲೆಗಳಲ್ಲಿ ನಿರಂತರ ಕಣ್ಗಾವಲು ಅಗತ್ಯವಿದೆ ಎಂದು ರಾಜ್ಯದ ಎಲ್ಲಾ ನಗರಗಳು/ಜಿಲ್ಲೆಗಳಿಗೆ ಸಲಹೆ ಕಳುಹಿಸಲಾಗಿದೆ. ಮೂಲಗಳನ್ನು ಉಲ್ಲೇಖಿಸಿರುವ ಗುಪ್ತಚರ ಸಂಸ್ಥೆ, “ಪಿಎಲ್‌ಎ ಸಮುದ್ರ ಸೌತೆಕಾಯಿ ಕೃಷಿಯನ್ನು ಪ್ರಾರಂಭಿಸುವ ನೆಪದಲ್ಲಿ ಅತ್ಯಾಧುನಿಕ ಗ್ಯಾಜೆಟ್‌ಗಳನ್ನು ನಿಯೋಜಿಸಿದೆ” ಎಂಬ ಎಚ್ಚರಿಕೆಯನ್ನೂ ನೀಡಿದೆ.

ಶ್ರೀಲಂಕಾ ಮೂಲದ ರಾಜಕೀಯ ಪಕ್ಷವೊಂದಕ್ಕೆ ಸೇರಿದ ಕಾರ್ಯಕರ್ತರ ನೆರವಿನೊಂದಿಗೆ ಕೆಲವು ಚೀನಾದ ಪ್ರಜೆಗಳು ರಹಸ್ಯವಾಗಿ ಸಮುದ್ರ ಮಾರ್ಗದ ಮೂಲಕ ಭಾರತವನ್ನು ಪ್ರವೇಶಿಸಿದ್ದಾರೆ ಎಂದು ಅದೇ ಸಂಸ್ಥೆ ಎಚ್ಚರಿಕೆ ನೀಡಿದ ಕೆಲವು ದಿನಗಳ ನಂತರ ಭದ್ರತಾ ಸಲಹೆ ಹೊರಬಿದ್ದಿದೆ.

ತಮಿಳುನಾಡು ಕೋಸ್ಟಲ್ ಸೆಕ್ಯುರಿಟಿ ಗ್ರೂಪ್, ಕೇಂದ್ರ ಗುಪ್ತಚರ ಸಂಸ್ಥೆಯನ್ನು ಉಲ್ಲೇಖಿಸಿದೆ. ಉಪಗ್ರಹಗಳು, ರಾಕೆಟ್‌ಗಳು ಮತ್ತು ಖಂಡಾಂತರ ಕ್ಷಿಪಣಿ ಉಡಾವಣೆಗಳ ಮೇಲೆ ನಿಗಾ ಇರಿಸಲು ಬಳಸುವ ಚೀನಾದ ಹಡಗಿನ ಮೇಲೆ ಎಚ್ಚರಿಕೆ ಅಗತ್ಯ. ಶ್ರೀಲಂಕಾದ ಹಂಬನ್‌ತೋಟ ಬಂದರಿನ ಬೆಳವಣಿಗೆಗಳನ್ನು ಗಮನಿಸಬೇಕು. ಸಾಕಷ್ಟು ಭದ್ರತಾ ವ್ಯವಸ್ಥೆಗಳಿಗೆ ಕರೆ ನೀಡಲಾಗಿದೆ. ತಮಿಳುನಾಡು ಕರಾವಳಿಯುದ್ದಕ್ಕೂ ಗಮನ ಹರಿಸಬೇಕು ಎಂದು ಸೂಚಿಸಲಾಗಿದೆ.

ಮುಲ್ಲೈತೀವು, ಪರುತಿಥೀವು, ಅನಲೈತೀವು, ಮೀಸಲೈ ಮತ್ತು ಚಾವಕ್ಕಚೇರಿ ಸೇರಿದಂತೆ ಉತ್ತರ ಶ್ರೀಲಂಕಾದ ಹಲವು ಭಾಗಗಳಲ್ಲಿ ಚೀನಾದ ಪ್ರಜೆಗಳ ಮುಕ್ತ ಸಂಚಾರವು ತಮಿಳು ಮೀನುಗಾರರಲ್ಲಿ ಅಸಮಾಧಾನವನ್ನು ಉಂಟುಮಾಡಿದೆ. ತಮ್ಮ ಜೀವನಾಧಾರವಾಗಿರುವ ಶ್ರೀಮಂತ ಸಮುದ್ರ ಸಂಪತ್ತನ್ನು ಚೀನಿಯರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಆತಂಕವನ್ನು ಅವರು ವ್ಯಕ್ತಪಡಿಸಿದ್ದಾರೆ.

ಸದ್ಯದ ಪರಿಸ್ಥಿತಿಯು ಶ್ರೀಲಂಕಾದ ಪ್ರಜೆಗಳ ನಡುವೆ ವಿಭಜನೆ ಉಂಟು ಮಾಡಬಹುದು. ದ್ವೀಪ ರಾಷ್ಟ್ರದ ಉತ್ತರ ಮತ್ತು ಪೂರ್ವ ಭಾಗಗಳಲ್ಲಿ ವಾಸಿಸುವ ತಮಿಳರ ಮೇಲೆ ಭಾರತದ ಪ್ರಭಾವವನ್ನು ಮೊಟಕುಗೊಳಿಸಬಹುದು ಎಂಬುದು ಸ್ಥಳೀಯ ತಮಿಳರ ಭಯವಾಗಿದೆ.

ಶ್ರೀಲಂಕಾದ ಹಂಬಂತೋಟಾ ಬಂದರಿಗೆ ಚೀನಾದ ಸಂಶೋಧನಾ ನೌಕೆ ‘ಯುವಾನ್ ವಾಂಗ್ 5’ ಆಗಮನದ ಕುರಿತು ಕೇಂದ್ರ ಸರ್ಕಾರ ಪ್ರತಿಕ್ರಿಯಿಸಿತ್ತು. ನಂತರ ತಮಿಳುನಾಡು ಆಗ್ನೇಯ ಕರಾವಳಿಯಲ್ಲಿ ಭದ್ರತಾ ವ್ಯವಸ್ಥೆಯನ್ನು ಬಲಪಡಿಸಿದೆ. 1,076-ಕಿಮೀ ಉದ್ದದ ಕರಾವಳಿ ಭಾಗದಲ್ಲಿ ಗುಪ್ತಚರ ಚಟುವಟಿಕೆಗಳನ್ನು ಸರ್ಕಾರ ಸಕ್ರಿಯಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ವರ್ಷದ ಆಗಸ್ಟ್‌ನಲ್ಲಿ ಚೀನಾದ ಅನುದಾನಿತ ಹಂಬನ್‌ತೋಟ ಬಂದರಿಗೆ ಚೀನಾದ ಉಪಗ್ರಹ-ಟ್ರ್ಯಾಕಿಂಗ್ ಹಡಗಿನ ಆಗಮನವಾಗಿದ್ದರ ಕುರಿತು ಭಾರತವು ಆತಂಕ ವ್ಯಕ್ತಪಡಿಸಿತ್ತು. ತನ್ನ ಭದ್ರತೆ ಮತ್ತು ಆರ್ಥಿಕ ಹಿತಾಸಕ್ತಿಗಳ ಮೇಲೆ ಪರಿಣಾಮ ಬೀರುವ ಬೆಳವಣಿಗೆಗಳನ್ನು ಎಚ್ಚರಿಕೆಯಿಂದ ಭಾರತ ಗಮನಿಸುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮತ್ತು ತಮಿಳುನಾಡು ಕರಾವಳಿ ಭದ್ರತಾ ಗುಂಪಿನ ಮುಖ್ಯಸ್ಥ ಸಂದೀಪ್ ಮಿತ್ತಲ್ ಪ್ರತಿಕ್ರಿಯಿಸಿದ್ದು, “ಶ್ರೀಲಂಕಾದಲ್ಲಿ ಚೀನಾದ ಪ್ರಜೆಗಳ ಉಪಸ್ಥಿತಿಯು ಹೆಚ್ಚುತ್ತಿದೆ ಎಂಬುದು ವಿವಾದಾಸ್ಪದ ಸಂಗತಿಯಲ್ಲ. ಆದರೆ ಶ್ರೀಲಂಕಾದಲ್ಲಿರುವ ಚೀನಾದ ರಾಯಭಾರಿಯು ಅಂತಾರಾಷ್ಟ್ರೀಯ ಕಡಲ ಗಡಿ ರೇಖೆಯ ಸಮೀಪವಿರುವ ದ್ವೀಪಗಳಿಗೆ ಆಗಾಗ್ಗೆ ಭೇಟಿ ನೀಡುತ್ತಿರುವುದು ಮತ್ತು ಸಮುದ್ರ ಸೌತೆಕಾಯಿಯನ್ನು ಬೆಳೆಯುವ ನೆಪದಲ್ಲಿ ಆ ಪ್ರದೇಶದಲ್ಲಿ ನಡೆಸಲಾದ ಡ್ರೋನ್ ಸಮೀಕ್ಷೆಯು ಅನುಮಾನಗಳನ್ನು ತಂದಿವೆ” ಎಂದಿದ್ದಾರೆ.

“ಭಾರತದಲ್ಲಿ ಪದವಿಪೂರ್ವ ಕಲಿಕೆಯನ್ನು ಮಾಡುತ್ತಿರುವ ಶ್ರೀಲಂಕಾದ ವಿದ್ಯಾರ್ಥಿಗಳಿಗೆ ಭಾರತವು ವಿದ್ಯಾರ್ಥಿವೇತನವನ್ನು ನೀಡುತ್ತಿದ್ದರೆ, ಶ್ರೀಲಂಕಾದಲ್ಲಿಯೇ ಓದುತ್ತಿರುವ ಸ್ನಾತಕೋತ್ತರ ಶ್ರೀಲಂಕಾ ವಿದ್ಯಾರ್ಥಿಗಳಿಗೆ ಚೀನಾ ಧನಸಹಾಯ ನೀಡುತ್ತಿದೆ. ಅವರು [ಚೀನೀಯರು] ತಮ್ಮ ಭವಿಷ್ಯದ ಯೋಜನೆಗಳನ್ನು ಬೆಂಬಲಿಸಲು ಶ್ರೀಲಂಕಾದಲ್ಲಿ ಯುವಕರನ್ನು ಓಲೈಸಲು ಪ್ರಯತ್ನಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: 100ಕ್ಕೂ ಹೆಚ್ಚು ಅಪ್ಲಿಕೇಷನ್‌ ಬಳಸಿ ಸುಲಿಗೆ; ₹ 500 ಕೋಟಿ ಚೀನಾಕ್ಕೆ ಕಳುಹಿಸಿದ ಯುಪಿ ಗ್ಯಾಂಗ್‌ ಅರೆಸ್ಟ್‌‌!

ಚೀನೀಯರು ಭಾರತದ ಜಲಪ್ರದೇಶಕ್ಕೆ ನುಗ್ಗುತ್ತಾರೆ ಎಂಬುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ ಎಂದು ರಾಜ್ಯ ಕಡಲ ಭದ್ರತಾ ಸಂಯೋಜಕರೂ ಆಗಿರುವ ಡಾ.ಮಿತ್ತಲ್ ಹೇಳಿದ್ದಾರೆ. “ತಮ್ಮ ಗುಪ್ತಚರ ಚಟುವಟಿಕೆಗಳನ್ನು ಸಕ್ರಿಯಗೊಳಿಸಲು ಮತ್ತು ಕರಾವಳಿಯಾದ್ಯಂತ ಭದ್ರತೆಯನ್ನು ತೀವ್ರಗೊಳಿಸಲು ಎಲ್ಲಾ ಕರಾವಳಿ ಜಿಲ್ಲೆಗಳಿಗೆ ಎಚ್ಚರಿಕೆಯನ್ನು ತಮಿಳುನಾಡು ನೀಡಿದೆ” ಎಂದಿದ್ದಾರೆ.

ಕೇಂದ್ರ ಸರ್ಕಾರವು ಕರಾವಳಿ ಭದ್ರತಾ ಯೋಜನೆಯ ಹಂತ-IIIರ ನಿಧಿಯನ್ನು ಸಕ್ರಿಯಗೊಳಿಸುವ ತುರ್ತು ಅವಶ್ಯಕತೆಯಿದೆ ಎಂದು ತಮಿಳುನಾಡಿನ ಭದ್ರತಾ ಏಜೆನ್ಸಿಗಳು ಹೇಳುತ್ತದೆ. ಹಂತ-II 2020ರಲ್ಲಿ ಕೊನೆಗೊಂಡ ನಂತರ, ಕರಾವಳಿ ಭದ್ರತಾ ಗುಂಪಿಗೆ ಹಣ ಮತ್ತು ಮೂಲಸೌಕರ್ಯದ ಬೆಂಬಲವನ್ನು ನಿಲ್ಲಿಸಲಾಯಿತು.

“ಹೆಚ್ಚುತ್ತಿರುವ ಆತಂಕವನ್ನು ಪರಿಗಣಿಸಿ ಕರಾವಳಿಯುದ್ದಕ್ಕೂ ಅನುಕೂಲಕರ ಸ್ಥಳಗಳಲ್ಲಿ ನೆಲೆಸಲು ಕೆಲವು ಭಾರತೀಯ ಸಮುದ್ರ ಮೀಸಲು ಬೆಟಾಲಿಯನ್‌ಗಳನ್ನು ಹೆಚ್ಚಿಸಲು ಕೇಂದ್ರವು ತಮಿಳುನಾಡಿಗೆ ಸಹಾಯ ಮಾಡಬೇಕು. ತಮಿಳುನಾಡು ಕೋಸ್ಟಲ್ ಸೆಕ್ಯುರಿಟಿ ಗ್ರೂಪ್‌ಗೆ 800 ಸಿಬ್ಬಂದಿಗಳ ಮಂಜೂರಾತಿಯಲ್ಲಿ ಸುಮಾರು 50% ಖಾಲಿ ಇದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ‘ದಿ ಹಿಂದೂ’ ವರದಿ ಮಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...