Homeಮುಖಪುಟಶ್ರೀಲಂಕಾದಲ್ಲಿ ಹೆಚ್ಚುತ್ತಿದೆ ಚೀನಾ ಸೇನೆಯ ಪ್ರಾಬಲ್ಯ; ತಮಿಳುನಾಡಿಗೆ ಗುಪ್ತಚರ ಸಂಸ್ಥೆ ಎಚ್ಚರಿಕೆ ಕರೆಘಂಟೆ

ಶ್ರೀಲಂಕಾದಲ್ಲಿ ಹೆಚ್ಚುತ್ತಿದೆ ಚೀನಾ ಸೇನೆಯ ಪ್ರಾಬಲ್ಯ; ತಮಿಳುನಾಡಿಗೆ ಗುಪ್ತಚರ ಸಂಸ್ಥೆ ಎಚ್ಚರಿಕೆ ಕರೆಘಂಟೆ

- Advertisement -
- Advertisement -

ಶ್ರೀಲಂಕಾದಲ್ಲಿ ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಪ್ರಾಬಲ್ಯ ಹೆಚ್ಚುತ್ತಿರುವ ಬಗ್ಗೆ ತಮಿಳುನಾಡು ರಾಜ್ಯವು ಗಂಭೀರ ಭದ್ರತಾ ಕಳವಳಗಳನ್ನು ವ್ಯಕ್ತಪಡಿಸಿದೆ.

ಕೆಲವು ದಿನಗಳ ಹಿಂದೆ ರಾಜ್ಯದ ಗುಪ್ತಚರ ಸಂಸ್ಥೆ ಎಚ್ಚರಿಕೆಗಳನ್ನು ನೀಡಿದ್ದು, ನೆರೆಯ ದೇಶದಲ್ಲಿ ಚೀನಿಯರ ಚಟುವಟಿಕೆಗಳು ರಾಷ್ಟ್ರೀಯ ಭದ್ರತೆಗೆ ಕಳವಳಕಾರಿಯಾಗಿವೆ ಮತ್ತು ಕರಾವಳಿಯಾದ್ಯಂತ ತೀವ್ರ ಜಾಗರೂಕತೆ ವಹಿಸುವ ಅಗತ್ಯವಿದೆ ಎಂದು ಎಚ್ಚರಿಕೆ ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉತ್ತರ ಶ್ರೀಲಂಕಾದಲ್ಲಿ ಪಿಎಲ್‌ಎ ಕೇಡರ್‌ಗಳ ಚಲನವಲನ ಮತ್ತು ಹೈಟೆಕ್ ಗ್ಯಾಜೆಟ್‌ಗಳಾದ ಉಪಗ್ರಹಗಳು, ಡ್ರೋನ್‌ಗಳು, ಇತರ ಸಂವಹನ ಸಾಧನಗಳ ನಿಯೋಜನೆಯನ್ನು ಗಮನಿಸಲು ಕರಾವಳಿ ಜಿಲ್ಲೆಗಳಲ್ಲಿ ನಿರಂತರ ಕಣ್ಗಾವಲು ಅಗತ್ಯವಿದೆ ಎಂದು ರಾಜ್ಯದ ಎಲ್ಲಾ ನಗರಗಳು/ಜಿಲ್ಲೆಗಳಿಗೆ ಸಲಹೆ ಕಳುಹಿಸಲಾಗಿದೆ. ಮೂಲಗಳನ್ನು ಉಲ್ಲೇಖಿಸಿರುವ ಗುಪ್ತಚರ ಸಂಸ್ಥೆ, “ಪಿಎಲ್‌ಎ ಸಮುದ್ರ ಸೌತೆಕಾಯಿ ಕೃಷಿಯನ್ನು ಪ್ರಾರಂಭಿಸುವ ನೆಪದಲ್ಲಿ ಅತ್ಯಾಧುನಿಕ ಗ್ಯಾಜೆಟ್‌ಗಳನ್ನು ನಿಯೋಜಿಸಿದೆ” ಎಂಬ ಎಚ್ಚರಿಕೆಯನ್ನೂ ನೀಡಿದೆ.

ಶ್ರೀಲಂಕಾ ಮೂಲದ ರಾಜಕೀಯ ಪಕ್ಷವೊಂದಕ್ಕೆ ಸೇರಿದ ಕಾರ್ಯಕರ್ತರ ನೆರವಿನೊಂದಿಗೆ ಕೆಲವು ಚೀನಾದ ಪ್ರಜೆಗಳು ರಹಸ್ಯವಾಗಿ ಸಮುದ್ರ ಮಾರ್ಗದ ಮೂಲಕ ಭಾರತವನ್ನು ಪ್ರವೇಶಿಸಿದ್ದಾರೆ ಎಂದು ಅದೇ ಸಂಸ್ಥೆ ಎಚ್ಚರಿಕೆ ನೀಡಿದ ಕೆಲವು ದಿನಗಳ ನಂತರ ಭದ್ರತಾ ಸಲಹೆ ಹೊರಬಿದ್ದಿದೆ.

ತಮಿಳುನಾಡು ಕೋಸ್ಟಲ್ ಸೆಕ್ಯುರಿಟಿ ಗ್ರೂಪ್, ಕೇಂದ್ರ ಗುಪ್ತಚರ ಸಂಸ್ಥೆಯನ್ನು ಉಲ್ಲೇಖಿಸಿದೆ. ಉಪಗ್ರಹಗಳು, ರಾಕೆಟ್‌ಗಳು ಮತ್ತು ಖಂಡಾಂತರ ಕ್ಷಿಪಣಿ ಉಡಾವಣೆಗಳ ಮೇಲೆ ನಿಗಾ ಇರಿಸಲು ಬಳಸುವ ಚೀನಾದ ಹಡಗಿನ ಮೇಲೆ ಎಚ್ಚರಿಕೆ ಅಗತ್ಯ. ಶ್ರೀಲಂಕಾದ ಹಂಬನ್‌ತೋಟ ಬಂದರಿನ ಬೆಳವಣಿಗೆಗಳನ್ನು ಗಮನಿಸಬೇಕು. ಸಾಕಷ್ಟು ಭದ್ರತಾ ವ್ಯವಸ್ಥೆಗಳಿಗೆ ಕರೆ ನೀಡಲಾಗಿದೆ. ತಮಿಳುನಾಡು ಕರಾವಳಿಯುದ್ದಕ್ಕೂ ಗಮನ ಹರಿಸಬೇಕು ಎಂದು ಸೂಚಿಸಲಾಗಿದೆ.

ಮುಲ್ಲೈತೀವು, ಪರುತಿಥೀವು, ಅನಲೈತೀವು, ಮೀಸಲೈ ಮತ್ತು ಚಾವಕ್ಕಚೇರಿ ಸೇರಿದಂತೆ ಉತ್ತರ ಶ್ರೀಲಂಕಾದ ಹಲವು ಭಾಗಗಳಲ್ಲಿ ಚೀನಾದ ಪ್ರಜೆಗಳ ಮುಕ್ತ ಸಂಚಾರವು ತಮಿಳು ಮೀನುಗಾರರಲ್ಲಿ ಅಸಮಾಧಾನವನ್ನು ಉಂಟುಮಾಡಿದೆ. ತಮ್ಮ ಜೀವನಾಧಾರವಾಗಿರುವ ಶ್ರೀಮಂತ ಸಮುದ್ರ ಸಂಪತ್ತನ್ನು ಚೀನಿಯರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಆತಂಕವನ್ನು ಅವರು ವ್ಯಕ್ತಪಡಿಸಿದ್ದಾರೆ.

ಸದ್ಯದ ಪರಿಸ್ಥಿತಿಯು ಶ್ರೀಲಂಕಾದ ಪ್ರಜೆಗಳ ನಡುವೆ ವಿಭಜನೆ ಉಂಟು ಮಾಡಬಹುದು. ದ್ವೀಪ ರಾಷ್ಟ್ರದ ಉತ್ತರ ಮತ್ತು ಪೂರ್ವ ಭಾಗಗಳಲ್ಲಿ ವಾಸಿಸುವ ತಮಿಳರ ಮೇಲೆ ಭಾರತದ ಪ್ರಭಾವವನ್ನು ಮೊಟಕುಗೊಳಿಸಬಹುದು ಎಂಬುದು ಸ್ಥಳೀಯ ತಮಿಳರ ಭಯವಾಗಿದೆ.

ಶ್ರೀಲಂಕಾದ ಹಂಬಂತೋಟಾ ಬಂದರಿಗೆ ಚೀನಾದ ಸಂಶೋಧನಾ ನೌಕೆ ‘ಯುವಾನ್ ವಾಂಗ್ 5’ ಆಗಮನದ ಕುರಿತು ಕೇಂದ್ರ ಸರ್ಕಾರ ಪ್ರತಿಕ್ರಿಯಿಸಿತ್ತು. ನಂತರ ತಮಿಳುನಾಡು ಆಗ್ನೇಯ ಕರಾವಳಿಯಲ್ಲಿ ಭದ್ರತಾ ವ್ಯವಸ್ಥೆಯನ್ನು ಬಲಪಡಿಸಿದೆ. 1,076-ಕಿಮೀ ಉದ್ದದ ಕರಾವಳಿ ಭಾಗದಲ್ಲಿ ಗುಪ್ತಚರ ಚಟುವಟಿಕೆಗಳನ್ನು ಸರ್ಕಾರ ಸಕ್ರಿಯಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ವರ್ಷದ ಆಗಸ್ಟ್‌ನಲ್ಲಿ ಚೀನಾದ ಅನುದಾನಿತ ಹಂಬನ್‌ತೋಟ ಬಂದರಿಗೆ ಚೀನಾದ ಉಪಗ್ರಹ-ಟ್ರ್ಯಾಕಿಂಗ್ ಹಡಗಿನ ಆಗಮನವಾಗಿದ್ದರ ಕುರಿತು ಭಾರತವು ಆತಂಕ ವ್ಯಕ್ತಪಡಿಸಿತ್ತು. ತನ್ನ ಭದ್ರತೆ ಮತ್ತು ಆರ್ಥಿಕ ಹಿತಾಸಕ್ತಿಗಳ ಮೇಲೆ ಪರಿಣಾಮ ಬೀರುವ ಬೆಳವಣಿಗೆಗಳನ್ನು ಎಚ್ಚರಿಕೆಯಿಂದ ಭಾರತ ಗಮನಿಸುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮತ್ತು ತಮಿಳುನಾಡು ಕರಾವಳಿ ಭದ್ರತಾ ಗುಂಪಿನ ಮುಖ್ಯಸ್ಥ ಸಂದೀಪ್ ಮಿತ್ತಲ್ ಪ್ರತಿಕ್ರಿಯಿಸಿದ್ದು, “ಶ್ರೀಲಂಕಾದಲ್ಲಿ ಚೀನಾದ ಪ್ರಜೆಗಳ ಉಪಸ್ಥಿತಿಯು ಹೆಚ್ಚುತ್ತಿದೆ ಎಂಬುದು ವಿವಾದಾಸ್ಪದ ಸಂಗತಿಯಲ್ಲ. ಆದರೆ ಶ್ರೀಲಂಕಾದಲ್ಲಿರುವ ಚೀನಾದ ರಾಯಭಾರಿಯು ಅಂತಾರಾಷ್ಟ್ರೀಯ ಕಡಲ ಗಡಿ ರೇಖೆಯ ಸಮೀಪವಿರುವ ದ್ವೀಪಗಳಿಗೆ ಆಗಾಗ್ಗೆ ಭೇಟಿ ನೀಡುತ್ತಿರುವುದು ಮತ್ತು ಸಮುದ್ರ ಸೌತೆಕಾಯಿಯನ್ನು ಬೆಳೆಯುವ ನೆಪದಲ್ಲಿ ಆ ಪ್ರದೇಶದಲ್ಲಿ ನಡೆಸಲಾದ ಡ್ರೋನ್ ಸಮೀಕ್ಷೆಯು ಅನುಮಾನಗಳನ್ನು ತಂದಿವೆ” ಎಂದಿದ್ದಾರೆ.

“ಭಾರತದಲ್ಲಿ ಪದವಿಪೂರ್ವ ಕಲಿಕೆಯನ್ನು ಮಾಡುತ್ತಿರುವ ಶ್ರೀಲಂಕಾದ ವಿದ್ಯಾರ್ಥಿಗಳಿಗೆ ಭಾರತವು ವಿದ್ಯಾರ್ಥಿವೇತನವನ್ನು ನೀಡುತ್ತಿದ್ದರೆ, ಶ್ರೀಲಂಕಾದಲ್ಲಿಯೇ ಓದುತ್ತಿರುವ ಸ್ನಾತಕೋತ್ತರ ಶ್ರೀಲಂಕಾ ವಿದ್ಯಾರ್ಥಿಗಳಿಗೆ ಚೀನಾ ಧನಸಹಾಯ ನೀಡುತ್ತಿದೆ. ಅವರು [ಚೀನೀಯರು] ತಮ್ಮ ಭವಿಷ್ಯದ ಯೋಜನೆಗಳನ್ನು ಬೆಂಬಲಿಸಲು ಶ್ರೀಲಂಕಾದಲ್ಲಿ ಯುವಕರನ್ನು ಓಲೈಸಲು ಪ್ರಯತ್ನಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: 100ಕ್ಕೂ ಹೆಚ್ಚು ಅಪ್ಲಿಕೇಷನ್‌ ಬಳಸಿ ಸುಲಿಗೆ; ₹ 500 ಕೋಟಿ ಚೀನಾಕ್ಕೆ ಕಳುಹಿಸಿದ ಯುಪಿ ಗ್ಯಾಂಗ್‌ ಅರೆಸ್ಟ್‌‌!

ಚೀನೀಯರು ಭಾರತದ ಜಲಪ್ರದೇಶಕ್ಕೆ ನುಗ್ಗುತ್ತಾರೆ ಎಂಬುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ ಎಂದು ರಾಜ್ಯ ಕಡಲ ಭದ್ರತಾ ಸಂಯೋಜಕರೂ ಆಗಿರುವ ಡಾ.ಮಿತ್ತಲ್ ಹೇಳಿದ್ದಾರೆ. “ತಮ್ಮ ಗುಪ್ತಚರ ಚಟುವಟಿಕೆಗಳನ್ನು ಸಕ್ರಿಯಗೊಳಿಸಲು ಮತ್ತು ಕರಾವಳಿಯಾದ್ಯಂತ ಭದ್ರತೆಯನ್ನು ತೀವ್ರಗೊಳಿಸಲು ಎಲ್ಲಾ ಕರಾವಳಿ ಜಿಲ್ಲೆಗಳಿಗೆ ಎಚ್ಚರಿಕೆಯನ್ನು ತಮಿಳುನಾಡು ನೀಡಿದೆ” ಎಂದಿದ್ದಾರೆ.

ಕೇಂದ್ರ ಸರ್ಕಾರವು ಕರಾವಳಿ ಭದ್ರತಾ ಯೋಜನೆಯ ಹಂತ-IIIರ ನಿಧಿಯನ್ನು ಸಕ್ರಿಯಗೊಳಿಸುವ ತುರ್ತು ಅವಶ್ಯಕತೆಯಿದೆ ಎಂದು ತಮಿಳುನಾಡಿನ ಭದ್ರತಾ ಏಜೆನ್ಸಿಗಳು ಹೇಳುತ್ತದೆ. ಹಂತ-II 2020ರಲ್ಲಿ ಕೊನೆಗೊಂಡ ನಂತರ, ಕರಾವಳಿ ಭದ್ರತಾ ಗುಂಪಿಗೆ ಹಣ ಮತ್ತು ಮೂಲಸೌಕರ್ಯದ ಬೆಂಬಲವನ್ನು ನಿಲ್ಲಿಸಲಾಯಿತು.

“ಹೆಚ್ಚುತ್ತಿರುವ ಆತಂಕವನ್ನು ಪರಿಗಣಿಸಿ ಕರಾವಳಿಯುದ್ದಕ್ಕೂ ಅನುಕೂಲಕರ ಸ್ಥಳಗಳಲ್ಲಿ ನೆಲೆಸಲು ಕೆಲವು ಭಾರತೀಯ ಸಮುದ್ರ ಮೀಸಲು ಬೆಟಾಲಿಯನ್‌ಗಳನ್ನು ಹೆಚ್ಚಿಸಲು ಕೇಂದ್ರವು ತಮಿಳುನಾಡಿಗೆ ಸಹಾಯ ಮಾಡಬೇಕು. ತಮಿಳುನಾಡು ಕೋಸ್ಟಲ್ ಸೆಕ್ಯುರಿಟಿ ಗ್ರೂಪ್‌ಗೆ 800 ಸಿಬ್ಬಂದಿಗಳ ಮಂಜೂರಾತಿಯಲ್ಲಿ ಸುಮಾರು 50% ಖಾಲಿ ಇದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ‘ದಿ ಹಿಂದೂ’ ವರದಿ ಮಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...