Homeಮುಖಪುಟಶ್ರೀಲಂಕಾದಲ್ಲಿ ಹೆಚ್ಚುತ್ತಿದೆ ಚೀನಾ ಸೇನೆಯ ಪ್ರಾಬಲ್ಯ; ತಮಿಳುನಾಡಿಗೆ ಗುಪ್ತಚರ ಸಂಸ್ಥೆ ಎಚ್ಚರಿಕೆ ಕರೆಘಂಟೆ

ಶ್ರೀಲಂಕಾದಲ್ಲಿ ಹೆಚ್ಚುತ್ತಿದೆ ಚೀನಾ ಸೇನೆಯ ಪ್ರಾಬಲ್ಯ; ತಮಿಳುನಾಡಿಗೆ ಗುಪ್ತಚರ ಸಂಸ್ಥೆ ಎಚ್ಚರಿಕೆ ಕರೆಘಂಟೆ

- Advertisement -
- Advertisement -

ಶ್ರೀಲಂಕಾದಲ್ಲಿ ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಪ್ರಾಬಲ್ಯ ಹೆಚ್ಚುತ್ತಿರುವ ಬಗ್ಗೆ ತಮಿಳುನಾಡು ರಾಜ್ಯವು ಗಂಭೀರ ಭದ್ರತಾ ಕಳವಳಗಳನ್ನು ವ್ಯಕ್ತಪಡಿಸಿದೆ.

ಕೆಲವು ದಿನಗಳ ಹಿಂದೆ ರಾಜ್ಯದ ಗುಪ್ತಚರ ಸಂಸ್ಥೆ ಎಚ್ಚರಿಕೆಗಳನ್ನು ನೀಡಿದ್ದು, ನೆರೆಯ ದೇಶದಲ್ಲಿ ಚೀನಿಯರ ಚಟುವಟಿಕೆಗಳು ರಾಷ್ಟ್ರೀಯ ಭದ್ರತೆಗೆ ಕಳವಳಕಾರಿಯಾಗಿವೆ ಮತ್ತು ಕರಾವಳಿಯಾದ್ಯಂತ ತೀವ್ರ ಜಾಗರೂಕತೆ ವಹಿಸುವ ಅಗತ್ಯವಿದೆ ಎಂದು ಎಚ್ಚರಿಕೆ ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉತ್ತರ ಶ್ರೀಲಂಕಾದಲ್ಲಿ ಪಿಎಲ್‌ಎ ಕೇಡರ್‌ಗಳ ಚಲನವಲನ ಮತ್ತು ಹೈಟೆಕ್ ಗ್ಯಾಜೆಟ್‌ಗಳಾದ ಉಪಗ್ರಹಗಳು, ಡ್ರೋನ್‌ಗಳು, ಇತರ ಸಂವಹನ ಸಾಧನಗಳ ನಿಯೋಜನೆಯನ್ನು ಗಮನಿಸಲು ಕರಾವಳಿ ಜಿಲ್ಲೆಗಳಲ್ಲಿ ನಿರಂತರ ಕಣ್ಗಾವಲು ಅಗತ್ಯವಿದೆ ಎಂದು ರಾಜ್ಯದ ಎಲ್ಲಾ ನಗರಗಳು/ಜಿಲ್ಲೆಗಳಿಗೆ ಸಲಹೆ ಕಳುಹಿಸಲಾಗಿದೆ. ಮೂಲಗಳನ್ನು ಉಲ್ಲೇಖಿಸಿರುವ ಗುಪ್ತಚರ ಸಂಸ್ಥೆ, “ಪಿಎಲ್‌ಎ ಸಮುದ್ರ ಸೌತೆಕಾಯಿ ಕೃಷಿಯನ್ನು ಪ್ರಾರಂಭಿಸುವ ನೆಪದಲ್ಲಿ ಅತ್ಯಾಧುನಿಕ ಗ್ಯಾಜೆಟ್‌ಗಳನ್ನು ನಿಯೋಜಿಸಿದೆ” ಎಂಬ ಎಚ್ಚರಿಕೆಯನ್ನೂ ನೀಡಿದೆ.

ಶ್ರೀಲಂಕಾ ಮೂಲದ ರಾಜಕೀಯ ಪಕ್ಷವೊಂದಕ್ಕೆ ಸೇರಿದ ಕಾರ್ಯಕರ್ತರ ನೆರವಿನೊಂದಿಗೆ ಕೆಲವು ಚೀನಾದ ಪ್ರಜೆಗಳು ರಹಸ್ಯವಾಗಿ ಸಮುದ್ರ ಮಾರ್ಗದ ಮೂಲಕ ಭಾರತವನ್ನು ಪ್ರವೇಶಿಸಿದ್ದಾರೆ ಎಂದು ಅದೇ ಸಂಸ್ಥೆ ಎಚ್ಚರಿಕೆ ನೀಡಿದ ಕೆಲವು ದಿನಗಳ ನಂತರ ಭದ್ರತಾ ಸಲಹೆ ಹೊರಬಿದ್ದಿದೆ.

ತಮಿಳುನಾಡು ಕೋಸ್ಟಲ್ ಸೆಕ್ಯುರಿಟಿ ಗ್ರೂಪ್, ಕೇಂದ್ರ ಗುಪ್ತಚರ ಸಂಸ್ಥೆಯನ್ನು ಉಲ್ಲೇಖಿಸಿದೆ. ಉಪಗ್ರಹಗಳು, ರಾಕೆಟ್‌ಗಳು ಮತ್ತು ಖಂಡಾಂತರ ಕ್ಷಿಪಣಿ ಉಡಾವಣೆಗಳ ಮೇಲೆ ನಿಗಾ ಇರಿಸಲು ಬಳಸುವ ಚೀನಾದ ಹಡಗಿನ ಮೇಲೆ ಎಚ್ಚರಿಕೆ ಅಗತ್ಯ. ಶ್ರೀಲಂಕಾದ ಹಂಬನ್‌ತೋಟ ಬಂದರಿನ ಬೆಳವಣಿಗೆಗಳನ್ನು ಗಮನಿಸಬೇಕು. ಸಾಕಷ್ಟು ಭದ್ರತಾ ವ್ಯವಸ್ಥೆಗಳಿಗೆ ಕರೆ ನೀಡಲಾಗಿದೆ. ತಮಿಳುನಾಡು ಕರಾವಳಿಯುದ್ದಕ್ಕೂ ಗಮನ ಹರಿಸಬೇಕು ಎಂದು ಸೂಚಿಸಲಾಗಿದೆ.

ಮುಲ್ಲೈತೀವು, ಪರುತಿಥೀವು, ಅನಲೈತೀವು, ಮೀಸಲೈ ಮತ್ತು ಚಾವಕ್ಕಚೇರಿ ಸೇರಿದಂತೆ ಉತ್ತರ ಶ್ರೀಲಂಕಾದ ಹಲವು ಭಾಗಗಳಲ್ಲಿ ಚೀನಾದ ಪ್ರಜೆಗಳ ಮುಕ್ತ ಸಂಚಾರವು ತಮಿಳು ಮೀನುಗಾರರಲ್ಲಿ ಅಸಮಾಧಾನವನ್ನು ಉಂಟುಮಾಡಿದೆ. ತಮ್ಮ ಜೀವನಾಧಾರವಾಗಿರುವ ಶ್ರೀಮಂತ ಸಮುದ್ರ ಸಂಪತ್ತನ್ನು ಚೀನಿಯರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಆತಂಕವನ್ನು ಅವರು ವ್ಯಕ್ತಪಡಿಸಿದ್ದಾರೆ.

ಸದ್ಯದ ಪರಿಸ್ಥಿತಿಯು ಶ್ರೀಲಂಕಾದ ಪ್ರಜೆಗಳ ನಡುವೆ ವಿಭಜನೆ ಉಂಟು ಮಾಡಬಹುದು. ದ್ವೀಪ ರಾಷ್ಟ್ರದ ಉತ್ತರ ಮತ್ತು ಪೂರ್ವ ಭಾಗಗಳಲ್ಲಿ ವಾಸಿಸುವ ತಮಿಳರ ಮೇಲೆ ಭಾರತದ ಪ್ರಭಾವವನ್ನು ಮೊಟಕುಗೊಳಿಸಬಹುದು ಎಂಬುದು ಸ್ಥಳೀಯ ತಮಿಳರ ಭಯವಾಗಿದೆ.

ಶ್ರೀಲಂಕಾದ ಹಂಬಂತೋಟಾ ಬಂದರಿಗೆ ಚೀನಾದ ಸಂಶೋಧನಾ ನೌಕೆ ‘ಯುವಾನ್ ವಾಂಗ್ 5’ ಆಗಮನದ ಕುರಿತು ಕೇಂದ್ರ ಸರ್ಕಾರ ಪ್ರತಿಕ್ರಿಯಿಸಿತ್ತು. ನಂತರ ತಮಿಳುನಾಡು ಆಗ್ನೇಯ ಕರಾವಳಿಯಲ್ಲಿ ಭದ್ರತಾ ವ್ಯವಸ್ಥೆಯನ್ನು ಬಲಪಡಿಸಿದೆ. 1,076-ಕಿಮೀ ಉದ್ದದ ಕರಾವಳಿ ಭಾಗದಲ್ಲಿ ಗುಪ್ತಚರ ಚಟುವಟಿಕೆಗಳನ್ನು ಸರ್ಕಾರ ಸಕ್ರಿಯಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ವರ್ಷದ ಆಗಸ್ಟ್‌ನಲ್ಲಿ ಚೀನಾದ ಅನುದಾನಿತ ಹಂಬನ್‌ತೋಟ ಬಂದರಿಗೆ ಚೀನಾದ ಉಪಗ್ರಹ-ಟ್ರ್ಯಾಕಿಂಗ್ ಹಡಗಿನ ಆಗಮನವಾಗಿದ್ದರ ಕುರಿತು ಭಾರತವು ಆತಂಕ ವ್ಯಕ್ತಪಡಿಸಿತ್ತು. ತನ್ನ ಭದ್ರತೆ ಮತ್ತು ಆರ್ಥಿಕ ಹಿತಾಸಕ್ತಿಗಳ ಮೇಲೆ ಪರಿಣಾಮ ಬೀರುವ ಬೆಳವಣಿಗೆಗಳನ್ನು ಎಚ್ಚರಿಕೆಯಿಂದ ಭಾರತ ಗಮನಿಸುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮತ್ತು ತಮಿಳುನಾಡು ಕರಾವಳಿ ಭದ್ರತಾ ಗುಂಪಿನ ಮುಖ್ಯಸ್ಥ ಸಂದೀಪ್ ಮಿತ್ತಲ್ ಪ್ರತಿಕ್ರಿಯಿಸಿದ್ದು, “ಶ್ರೀಲಂಕಾದಲ್ಲಿ ಚೀನಾದ ಪ್ರಜೆಗಳ ಉಪಸ್ಥಿತಿಯು ಹೆಚ್ಚುತ್ತಿದೆ ಎಂಬುದು ವಿವಾದಾಸ್ಪದ ಸಂಗತಿಯಲ್ಲ. ಆದರೆ ಶ್ರೀಲಂಕಾದಲ್ಲಿರುವ ಚೀನಾದ ರಾಯಭಾರಿಯು ಅಂತಾರಾಷ್ಟ್ರೀಯ ಕಡಲ ಗಡಿ ರೇಖೆಯ ಸಮೀಪವಿರುವ ದ್ವೀಪಗಳಿಗೆ ಆಗಾಗ್ಗೆ ಭೇಟಿ ನೀಡುತ್ತಿರುವುದು ಮತ್ತು ಸಮುದ್ರ ಸೌತೆಕಾಯಿಯನ್ನು ಬೆಳೆಯುವ ನೆಪದಲ್ಲಿ ಆ ಪ್ರದೇಶದಲ್ಲಿ ನಡೆಸಲಾದ ಡ್ರೋನ್ ಸಮೀಕ್ಷೆಯು ಅನುಮಾನಗಳನ್ನು ತಂದಿವೆ” ಎಂದಿದ್ದಾರೆ.

“ಭಾರತದಲ್ಲಿ ಪದವಿಪೂರ್ವ ಕಲಿಕೆಯನ್ನು ಮಾಡುತ್ತಿರುವ ಶ್ರೀಲಂಕಾದ ವಿದ್ಯಾರ್ಥಿಗಳಿಗೆ ಭಾರತವು ವಿದ್ಯಾರ್ಥಿವೇತನವನ್ನು ನೀಡುತ್ತಿದ್ದರೆ, ಶ್ರೀಲಂಕಾದಲ್ಲಿಯೇ ಓದುತ್ತಿರುವ ಸ್ನಾತಕೋತ್ತರ ಶ್ರೀಲಂಕಾ ವಿದ್ಯಾರ್ಥಿಗಳಿಗೆ ಚೀನಾ ಧನಸಹಾಯ ನೀಡುತ್ತಿದೆ. ಅವರು [ಚೀನೀಯರು] ತಮ್ಮ ಭವಿಷ್ಯದ ಯೋಜನೆಗಳನ್ನು ಬೆಂಬಲಿಸಲು ಶ್ರೀಲಂಕಾದಲ್ಲಿ ಯುವಕರನ್ನು ಓಲೈಸಲು ಪ್ರಯತ್ನಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: 100ಕ್ಕೂ ಹೆಚ್ಚು ಅಪ್ಲಿಕೇಷನ್‌ ಬಳಸಿ ಸುಲಿಗೆ; ₹ 500 ಕೋಟಿ ಚೀನಾಕ್ಕೆ ಕಳುಹಿಸಿದ ಯುಪಿ ಗ್ಯಾಂಗ್‌ ಅರೆಸ್ಟ್‌‌!

ಚೀನೀಯರು ಭಾರತದ ಜಲಪ್ರದೇಶಕ್ಕೆ ನುಗ್ಗುತ್ತಾರೆ ಎಂಬುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ ಎಂದು ರಾಜ್ಯ ಕಡಲ ಭದ್ರತಾ ಸಂಯೋಜಕರೂ ಆಗಿರುವ ಡಾ.ಮಿತ್ತಲ್ ಹೇಳಿದ್ದಾರೆ. “ತಮ್ಮ ಗುಪ್ತಚರ ಚಟುವಟಿಕೆಗಳನ್ನು ಸಕ್ರಿಯಗೊಳಿಸಲು ಮತ್ತು ಕರಾವಳಿಯಾದ್ಯಂತ ಭದ್ರತೆಯನ್ನು ತೀವ್ರಗೊಳಿಸಲು ಎಲ್ಲಾ ಕರಾವಳಿ ಜಿಲ್ಲೆಗಳಿಗೆ ಎಚ್ಚರಿಕೆಯನ್ನು ತಮಿಳುನಾಡು ನೀಡಿದೆ” ಎಂದಿದ್ದಾರೆ.

ಕೇಂದ್ರ ಸರ್ಕಾರವು ಕರಾವಳಿ ಭದ್ರತಾ ಯೋಜನೆಯ ಹಂತ-IIIರ ನಿಧಿಯನ್ನು ಸಕ್ರಿಯಗೊಳಿಸುವ ತುರ್ತು ಅವಶ್ಯಕತೆಯಿದೆ ಎಂದು ತಮಿಳುನಾಡಿನ ಭದ್ರತಾ ಏಜೆನ್ಸಿಗಳು ಹೇಳುತ್ತದೆ. ಹಂತ-II 2020ರಲ್ಲಿ ಕೊನೆಗೊಂಡ ನಂತರ, ಕರಾವಳಿ ಭದ್ರತಾ ಗುಂಪಿಗೆ ಹಣ ಮತ್ತು ಮೂಲಸೌಕರ್ಯದ ಬೆಂಬಲವನ್ನು ನಿಲ್ಲಿಸಲಾಯಿತು.

“ಹೆಚ್ಚುತ್ತಿರುವ ಆತಂಕವನ್ನು ಪರಿಗಣಿಸಿ ಕರಾವಳಿಯುದ್ದಕ್ಕೂ ಅನುಕೂಲಕರ ಸ್ಥಳಗಳಲ್ಲಿ ನೆಲೆಸಲು ಕೆಲವು ಭಾರತೀಯ ಸಮುದ್ರ ಮೀಸಲು ಬೆಟಾಲಿಯನ್‌ಗಳನ್ನು ಹೆಚ್ಚಿಸಲು ಕೇಂದ್ರವು ತಮಿಳುನಾಡಿಗೆ ಸಹಾಯ ಮಾಡಬೇಕು. ತಮಿಳುನಾಡು ಕೋಸ್ಟಲ್ ಸೆಕ್ಯುರಿಟಿ ಗ್ರೂಪ್‌ಗೆ 800 ಸಿಬ್ಬಂದಿಗಳ ಮಂಜೂರಾತಿಯಲ್ಲಿ ಸುಮಾರು 50% ಖಾಲಿ ಇದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ‘ದಿ ಹಿಂದೂ’ ವರದಿ ಮಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...