Homeಮುಖಪುಟಶ್ರೀಲಂಕಾದಲ್ಲಿ ಹೆಚ್ಚುತ್ತಿದೆ ಚೀನಾ ಸೇನೆಯ ಪ್ರಾಬಲ್ಯ; ತಮಿಳುನಾಡಿಗೆ ಗುಪ್ತಚರ ಸಂಸ್ಥೆ ಎಚ್ಚರಿಕೆ ಕರೆಘಂಟೆ

ಶ್ರೀಲಂಕಾದಲ್ಲಿ ಹೆಚ್ಚುತ್ತಿದೆ ಚೀನಾ ಸೇನೆಯ ಪ್ರಾಬಲ್ಯ; ತಮಿಳುನಾಡಿಗೆ ಗುಪ್ತಚರ ಸಂಸ್ಥೆ ಎಚ್ಚರಿಕೆ ಕರೆಘಂಟೆ

- Advertisement -
- Advertisement -

ಶ್ರೀಲಂಕಾದಲ್ಲಿ ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಪ್ರಾಬಲ್ಯ ಹೆಚ್ಚುತ್ತಿರುವ ಬಗ್ಗೆ ತಮಿಳುನಾಡು ರಾಜ್ಯವು ಗಂಭೀರ ಭದ್ರತಾ ಕಳವಳಗಳನ್ನು ವ್ಯಕ್ತಪಡಿಸಿದೆ.

ಕೆಲವು ದಿನಗಳ ಹಿಂದೆ ರಾಜ್ಯದ ಗುಪ್ತಚರ ಸಂಸ್ಥೆ ಎಚ್ಚರಿಕೆಗಳನ್ನು ನೀಡಿದ್ದು, ನೆರೆಯ ದೇಶದಲ್ಲಿ ಚೀನಿಯರ ಚಟುವಟಿಕೆಗಳು ರಾಷ್ಟ್ರೀಯ ಭದ್ರತೆಗೆ ಕಳವಳಕಾರಿಯಾಗಿವೆ ಮತ್ತು ಕರಾವಳಿಯಾದ್ಯಂತ ತೀವ್ರ ಜಾಗರೂಕತೆ ವಹಿಸುವ ಅಗತ್ಯವಿದೆ ಎಂದು ಎಚ್ಚರಿಕೆ ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉತ್ತರ ಶ್ರೀಲಂಕಾದಲ್ಲಿ ಪಿಎಲ್‌ಎ ಕೇಡರ್‌ಗಳ ಚಲನವಲನ ಮತ್ತು ಹೈಟೆಕ್ ಗ್ಯಾಜೆಟ್‌ಗಳಾದ ಉಪಗ್ರಹಗಳು, ಡ್ರೋನ್‌ಗಳು, ಇತರ ಸಂವಹನ ಸಾಧನಗಳ ನಿಯೋಜನೆಯನ್ನು ಗಮನಿಸಲು ಕರಾವಳಿ ಜಿಲ್ಲೆಗಳಲ್ಲಿ ನಿರಂತರ ಕಣ್ಗಾವಲು ಅಗತ್ಯವಿದೆ ಎಂದು ರಾಜ್ಯದ ಎಲ್ಲಾ ನಗರಗಳು/ಜಿಲ್ಲೆಗಳಿಗೆ ಸಲಹೆ ಕಳುಹಿಸಲಾಗಿದೆ. ಮೂಲಗಳನ್ನು ಉಲ್ಲೇಖಿಸಿರುವ ಗುಪ್ತಚರ ಸಂಸ್ಥೆ, “ಪಿಎಲ್‌ಎ ಸಮುದ್ರ ಸೌತೆಕಾಯಿ ಕೃಷಿಯನ್ನು ಪ್ರಾರಂಭಿಸುವ ನೆಪದಲ್ಲಿ ಅತ್ಯಾಧುನಿಕ ಗ್ಯಾಜೆಟ್‌ಗಳನ್ನು ನಿಯೋಜಿಸಿದೆ” ಎಂಬ ಎಚ್ಚರಿಕೆಯನ್ನೂ ನೀಡಿದೆ.

ಶ್ರೀಲಂಕಾ ಮೂಲದ ರಾಜಕೀಯ ಪಕ್ಷವೊಂದಕ್ಕೆ ಸೇರಿದ ಕಾರ್ಯಕರ್ತರ ನೆರವಿನೊಂದಿಗೆ ಕೆಲವು ಚೀನಾದ ಪ್ರಜೆಗಳು ರಹಸ್ಯವಾಗಿ ಸಮುದ್ರ ಮಾರ್ಗದ ಮೂಲಕ ಭಾರತವನ್ನು ಪ್ರವೇಶಿಸಿದ್ದಾರೆ ಎಂದು ಅದೇ ಸಂಸ್ಥೆ ಎಚ್ಚರಿಕೆ ನೀಡಿದ ಕೆಲವು ದಿನಗಳ ನಂತರ ಭದ್ರತಾ ಸಲಹೆ ಹೊರಬಿದ್ದಿದೆ.

ತಮಿಳುನಾಡು ಕೋಸ್ಟಲ್ ಸೆಕ್ಯುರಿಟಿ ಗ್ರೂಪ್, ಕೇಂದ್ರ ಗುಪ್ತಚರ ಸಂಸ್ಥೆಯನ್ನು ಉಲ್ಲೇಖಿಸಿದೆ. ಉಪಗ್ರಹಗಳು, ರಾಕೆಟ್‌ಗಳು ಮತ್ತು ಖಂಡಾಂತರ ಕ್ಷಿಪಣಿ ಉಡಾವಣೆಗಳ ಮೇಲೆ ನಿಗಾ ಇರಿಸಲು ಬಳಸುವ ಚೀನಾದ ಹಡಗಿನ ಮೇಲೆ ಎಚ್ಚರಿಕೆ ಅಗತ್ಯ. ಶ್ರೀಲಂಕಾದ ಹಂಬನ್‌ತೋಟ ಬಂದರಿನ ಬೆಳವಣಿಗೆಗಳನ್ನು ಗಮನಿಸಬೇಕು. ಸಾಕಷ್ಟು ಭದ್ರತಾ ವ್ಯವಸ್ಥೆಗಳಿಗೆ ಕರೆ ನೀಡಲಾಗಿದೆ. ತಮಿಳುನಾಡು ಕರಾವಳಿಯುದ್ದಕ್ಕೂ ಗಮನ ಹರಿಸಬೇಕು ಎಂದು ಸೂಚಿಸಲಾಗಿದೆ.

ಮುಲ್ಲೈತೀವು, ಪರುತಿಥೀವು, ಅನಲೈತೀವು, ಮೀಸಲೈ ಮತ್ತು ಚಾವಕ್ಕಚೇರಿ ಸೇರಿದಂತೆ ಉತ್ತರ ಶ್ರೀಲಂಕಾದ ಹಲವು ಭಾಗಗಳಲ್ಲಿ ಚೀನಾದ ಪ್ರಜೆಗಳ ಮುಕ್ತ ಸಂಚಾರವು ತಮಿಳು ಮೀನುಗಾರರಲ್ಲಿ ಅಸಮಾಧಾನವನ್ನು ಉಂಟುಮಾಡಿದೆ. ತಮ್ಮ ಜೀವನಾಧಾರವಾಗಿರುವ ಶ್ರೀಮಂತ ಸಮುದ್ರ ಸಂಪತ್ತನ್ನು ಚೀನಿಯರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಆತಂಕವನ್ನು ಅವರು ವ್ಯಕ್ತಪಡಿಸಿದ್ದಾರೆ.

ಸದ್ಯದ ಪರಿಸ್ಥಿತಿಯು ಶ್ರೀಲಂಕಾದ ಪ್ರಜೆಗಳ ನಡುವೆ ವಿಭಜನೆ ಉಂಟು ಮಾಡಬಹುದು. ದ್ವೀಪ ರಾಷ್ಟ್ರದ ಉತ್ತರ ಮತ್ತು ಪೂರ್ವ ಭಾಗಗಳಲ್ಲಿ ವಾಸಿಸುವ ತಮಿಳರ ಮೇಲೆ ಭಾರತದ ಪ್ರಭಾವವನ್ನು ಮೊಟಕುಗೊಳಿಸಬಹುದು ಎಂಬುದು ಸ್ಥಳೀಯ ತಮಿಳರ ಭಯವಾಗಿದೆ.

ಶ್ರೀಲಂಕಾದ ಹಂಬಂತೋಟಾ ಬಂದರಿಗೆ ಚೀನಾದ ಸಂಶೋಧನಾ ನೌಕೆ ‘ಯುವಾನ್ ವಾಂಗ್ 5’ ಆಗಮನದ ಕುರಿತು ಕೇಂದ್ರ ಸರ್ಕಾರ ಪ್ರತಿಕ್ರಿಯಿಸಿತ್ತು. ನಂತರ ತಮಿಳುನಾಡು ಆಗ್ನೇಯ ಕರಾವಳಿಯಲ್ಲಿ ಭದ್ರತಾ ವ್ಯವಸ್ಥೆಯನ್ನು ಬಲಪಡಿಸಿದೆ. 1,076-ಕಿಮೀ ಉದ್ದದ ಕರಾವಳಿ ಭಾಗದಲ್ಲಿ ಗುಪ್ತಚರ ಚಟುವಟಿಕೆಗಳನ್ನು ಸರ್ಕಾರ ಸಕ್ರಿಯಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ವರ್ಷದ ಆಗಸ್ಟ್‌ನಲ್ಲಿ ಚೀನಾದ ಅನುದಾನಿತ ಹಂಬನ್‌ತೋಟ ಬಂದರಿಗೆ ಚೀನಾದ ಉಪಗ್ರಹ-ಟ್ರ್ಯಾಕಿಂಗ್ ಹಡಗಿನ ಆಗಮನವಾಗಿದ್ದರ ಕುರಿತು ಭಾರತವು ಆತಂಕ ವ್ಯಕ್ತಪಡಿಸಿತ್ತು. ತನ್ನ ಭದ್ರತೆ ಮತ್ತು ಆರ್ಥಿಕ ಹಿತಾಸಕ್ತಿಗಳ ಮೇಲೆ ಪರಿಣಾಮ ಬೀರುವ ಬೆಳವಣಿಗೆಗಳನ್ನು ಎಚ್ಚರಿಕೆಯಿಂದ ಭಾರತ ಗಮನಿಸುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮತ್ತು ತಮಿಳುನಾಡು ಕರಾವಳಿ ಭದ್ರತಾ ಗುಂಪಿನ ಮುಖ್ಯಸ್ಥ ಸಂದೀಪ್ ಮಿತ್ತಲ್ ಪ್ರತಿಕ್ರಿಯಿಸಿದ್ದು, “ಶ್ರೀಲಂಕಾದಲ್ಲಿ ಚೀನಾದ ಪ್ರಜೆಗಳ ಉಪಸ್ಥಿತಿಯು ಹೆಚ್ಚುತ್ತಿದೆ ಎಂಬುದು ವಿವಾದಾಸ್ಪದ ಸಂಗತಿಯಲ್ಲ. ಆದರೆ ಶ್ರೀಲಂಕಾದಲ್ಲಿರುವ ಚೀನಾದ ರಾಯಭಾರಿಯು ಅಂತಾರಾಷ್ಟ್ರೀಯ ಕಡಲ ಗಡಿ ರೇಖೆಯ ಸಮೀಪವಿರುವ ದ್ವೀಪಗಳಿಗೆ ಆಗಾಗ್ಗೆ ಭೇಟಿ ನೀಡುತ್ತಿರುವುದು ಮತ್ತು ಸಮುದ್ರ ಸೌತೆಕಾಯಿಯನ್ನು ಬೆಳೆಯುವ ನೆಪದಲ್ಲಿ ಆ ಪ್ರದೇಶದಲ್ಲಿ ನಡೆಸಲಾದ ಡ್ರೋನ್ ಸಮೀಕ್ಷೆಯು ಅನುಮಾನಗಳನ್ನು ತಂದಿವೆ” ಎಂದಿದ್ದಾರೆ.

“ಭಾರತದಲ್ಲಿ ಪದವಿಪೂರ್ವ ಕಲಿಕೆಯನ್ನು ಮಾಡುತ್ತಿರುವ ಶ್ರೀಲಂಕಾದ ವಿದ್ಯಾರ್ಥಿಗಳಿಗೆ ಭಾರತವು ವಿದ್ಯಾರ್ಥಿವೇತನವನ್ನು ನೀಡುತ್ತಿದ್ದರೆ, ಶ್ರೀಲಂಕಾದಲ್ಲಿಯೇ ಓದುತ್ತಿರುವ ಸ್ನಾತಕೋತ್ತರ ಶ್ರೀಲಂಕಾ ವಿದ್ಯಾರ್ಥಿಗಳಿಗೆ ಚೀನಾ ಧನಸಹಾಯ ನೀಡುತ್ತಿದೆ. ಅವರು [ಚೀನೀಯರು] ತಮ್ಮ ಭವಿಷ್ಯದ ಯೋಜನೆಗಳನ್ನು ಬೆಂಬಲಿಸಲು ಶ್ರೀಲಂಕಾದಲ್ಲಿ ಯುವಕರನ್ನು ಓಲೈಸಲು ಪ್ರಯತ್ನಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: 100ಕ್ಕೂ ಹೆಚ್ಚು ಅಪ್ಲಿಕೇಷನ್‌ ಬಳಸಿ ಸುಲಿಗೆ; ₹ 500 ಕೋಟಿ ಚೀನಾಕ್ಕೆ ಕಳುಹಿಸಿದ ಯುಪಿ ಗ್ಯಾಂಗ್‌ ಅರೆಸ್ಟ್‌‌!

ಚೀನೀಯರು ಭಾರತದ ಜಲಪ್ರದೇಶಕ್ಕೆ ನುಗ್ಗುತ್ತಾರೆ ಎಂಬುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ ಎಂದು ರಾಜ್ಯ ಕಡಲ ಭದ್ರತಾ ಸಂಯೋಜಕರೂ ಆಗಿರುವ ಡಾ.ಮಿತ್ತಲ್ ಹೇಳಿದ್ದಾರೆ. “ತಮ್ಮ ಗುಪ್ತಚರ ಚಟುವಟಿಕೆಗಳನ್ನು ಸಕ್ರಿಯಗೊಳಿಸಲು ಮತ್ತು ಕರಾವಳಿಯಾದ್ಯಂತ ಭದ್ರತೆಯನ್ನು ತೀವ್ರಗೊಳಿಸಲು ಎಲ್ಲಾ ಕರಾವಳಿ ಜಿಲ್ಲೆಗಳಿಗೆ ಎಚ್ಚರಿಕೆಯನ್ನು ತಮಿಳುನಾಡು ನೀಡಿದೆ” ಎಂದಿದ್ದಾರೆ.

ಕೇಂದ್ರ ಸರ್ಕಾರವು ಕರಾವಳಿ ಭದ್ರತಾ ಯೋಜನೆಯ ಹಂತ-IIIರ ನಿಧಿಯನ್ನು ಸಕ್ರಿಯಗೊಳಿಸುವ ತುರ್ತು ಅವಶ್ಯಕತೆಯಿದೆ ಎಂದು ತಮಿಳುನಾಡಿನ ಭದ್ರತಾ ಏಜೆನ್ಸಿಗಳು ಹೇಳುತ್ತದೆ. ಹಂತ-II 2020ರಲ್ಲಿ ಕೊನೆಗೊಂಡ ನಂತರ, ಕರಾವಳಿ ಭದ್ರತಾ ಗುಂಪಿಗೆ ಹಣ ಮತ್ತು ಮೂಲಸೌಕರ್ಯದ ಬೆಂಬಲವನ್ನು ನಿಲ್ಲಿಸಲಾಯಿತು.

“ಹೆಚ್ಚುತ್ತಿರುವ ಆತಂಕವನ್ನು ಪರಿಗಣಿಸಿ ಕರಾವಳಿಯುದ್ದಕ್ಕೂ ಅನುಕೂಲಕರ ಸ್ಥಳಗಳಲ್ಲಿ ನೆಲೆಸಲು ಕೆಲವು ಭಾರತೀಯ ಸಮುದ್ರ ಮೀಸಲು ಬೆಟಾಲಿಯನ್‌ಗಳನ್ನು ಹೆಚ್ಚಿಸಲು ಕೇಂದ್ರವು ತಮಿಳುನಾಡಿಗೆ ಸಹಾಯ ಮಾಡಬೇಕು. ತಮಿಳುನಾಡು ಕೋಸ್ಟಲ್ ಸೆಕ್ಯುರಿಟಿ ಗ್ರೂಪ್‌ಗೆ 800 ಸಿಬ್ಬಂದಿಗಳ ಮಂಜೂರಾತಿಯಲ್ಲಿ ಸುಮಾರು 50% ಖಾಲಿ ಇದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ‘ದಿ ಹಿಂದೂ’ ವರದಿ ಮಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...