Homeಮುಖಪುಟಶ್ರೀಲಂಕಾದಲ್ಲಿ ಹೆಚ್ಚುತ್ತಿದೆ ಚೀನಾ ಸೇನೆಯ ಪ್ರಾಬಲ್ಯ; ತಮಿಳುನಾಡಿಗೆ ಗುಪ್ತಚರ ಸಂಸ್ಥೆ ಎಚ್ಚರಿಕೆ ಕರೆಘಂಟೆ

ಶ್ರೀಲಂಕಾದಲ್ಲಿ ಹೆಚ್ಚುತ್ತಿದೆ ಚೀನಾ ಸೇನೆಯ ಪ್ರಾಬಲ್ಯ; ತಮಿಳುನಾಡಿಗೆ ಗುಪ್ತಚರ ಸಂಸ್ಥೆ ಎಚ್ಚರಿಕೆ ಕರೆಘಂಟೆ

- Advertisement -
- Advertisement -

ಶ್ರೀಲಂಕಾದಲ್ಲಿ ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಪ್ರಾಬಲ್ಯ ಹೆಚ್ಚುತ್ತಿರುವ ಬಗ್ಗೆ ತಮಿಳುನಾಡು ರಾಜ್ಯವು ಗಂಭೀರ ಭದ್ರತಾ ಕಳವಳಗಳನ್ನು ವ್ಯಕ್ತಪಡಿಸಿದೆ.

ಕೆಲವು ದಿನಗಳ ಹಿಂದೆ ರಾಜ್ಯದ ಗುಪ್ತಚರ ಸಂಸ್ಥೆ ಎಚ್ಚರಿಕೆಗಳನ್ನು ನೀಡಿದ್ದು, ನೆರೆಯ ದೇಶದಲ್ಲಿ ಚೀನಿಯರ ಚಟುವಟಿಕೆಗಳು ರಾಷ್ಟ್ರೀಯ ಭದ್ರತೆಗೆ ಕಳವಳಕಾರಿಯಾಗಿವೆ ಮತ್ತು ಕರಾವಳಿಯಾದ್ಯಂತ ತೀವ್ರ ಜಾಗರೂಕತೆ ವಹಿಸುವ ಅಗತ್ಯವಿದೆ ಎಂದು ಎಚ್ಚರಿಕೆ ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉತ್ತರ ಶ್ರೀಲಂಕಾದಲ್ಲಿ ಪಿಎಲ್‌ಎ ಕೇಡರ್‌ಗಳ ಚಲನವಲನ ಮತ್ತು ಹೈಟೆಕ್ ಗ್ಯಾಜೆಟ್‌ಗಳಾದ ಉಪಗ್ರಹಗಳು, ಡ್ರೋನ್‌ಗಳು, ಇತರ ಸಂವಹನ ಸಾಧನಗಳ ನಿಯೋಜನೆಯನ್ನು ಗಮನಿಸಲು ಕರಾವಳಿ ಜಿಲ್ಲೆಗಳಲ್ಲಿ ನಿರಂತರ ಕಣ್ಗಾವಲು ಅಗತ್ಯವಿದೆ ಎಂದು ರಾಜ್ಯದ ಎಲ್ಲಾ ನಗರಗಳು/ಜಿಲ್ಲೆಗಳಿಗೆ ಸಲಹೆ ಕಳುಹಿಸಲಾಗಿದೆ. ಮೂಲಗಳನ್ನು ಉಲ್ಲೇಖಿಸಿರುವ ಗುಪ್ತಚರ ಸಂಸ್ಥೆ, “ಪಿಎಲ್‌ಎ ಸಮುದ್ರ ಸೌತೆಕಾಯಿ ಕೃಷಿಯನ್ನು ಪ್ರಾರಂಭಿಸುವ ನೆಪದಲ್ಲಿ ಅತ್ಯಾಧುನಿಕ ಗ್ಯಾಜೆಟ್‌ಗಳನ್ನು ನಿಯೋಜಿಸಿದೆ” ಎಂಬ ಎಚ್ಚರಿಕೆಯನ್ನೂ ನೀಡಿದೆ.

ಶ್ರೀಲಂಕಾ ಮೂಲದ ರಾಜಕೀಯ ಪಕ್ಷವೊಂದಕ್ಕೆ ಸೇರಿದ ಕಾರ್ಯಕರ್ತರ ನೆರವಿನೊಂದಿಗೆ ಕೆಲವು ಚೀನಾದ ಪ್ರಜೆಗಳು ರಹಸ್ಯವಾಗಿ ಸಮುದ್ರ ಮಾರ್ಗದ ಮೂಲಕ ಭಾರತವನ್ನು ಪ್ರವೇಶಿಸಿದ್ದಾರೆ ಎಂದು ಅದೇ ಸಂಸ್ಥೆ ಎಚ್ಚರಿಕೆ ನೀಡಿದ ಕೆಲವು ದಿನಗಳ ನಂತರ ಭದ್ರತಾ ಸಲಹೆ ಹೊರಬಿದ್ದಿದೆ.

ತಮಿಳುನಾಡು ಕೋಸ್ಟಲ್ ಸೆಕ್ಯುರಿಟಿ ಗ್ರೂಪ್, ಕೇಂದ್ರ ಗುಪ್ತಚರ ಸಂಸ್ಥೆಯನ್ನು ಉಲ್ಲೇಖಿಸಿದೆ. ಉಪಗ್ರಹಗಳು, ರಾಕೆಟ್‌ಗಳು ಮತ್ತು ಖಂಡಾಂತರ ಕ್ಷಿಪಣಿ ಉಡಾವಣೆಗಳ ಮೇಲೆ ನಿಗಾ ಇರಿಸಲು ಬಳಸುವ ಚೀನಾದ ಹಡಗಿನ ಮೇಲೆ ಎಚ್ಚರಿಕೆ ಅಗತ್ಯ. ಶ್ರೀಲಂಕಾದ ಹಂಬನ್‌ತೋಟ ಬಂದರಿನ ಬೆಳವಣಿಗೆಗಳನ್ನು ಗಮನಿಸಬೇಕು. ಸಾಕಷ್ಟು ಭದ್ರತಾ ವ್ಯವಸ್ಥೆಗಳಿಗೆ ಕರೆ ನೀಡಲಾಗಿದೆ. ತಮಿಳುನಾಡು ಕರಾವಳಿಯುದ್ದಕ್ಕೂ ಗಮನ ಹರಿಸಬೇಕು ಎಂದು ಸೂಚಿಸಲಾಗಿದೆ.

ಮುಲ್ಲೈತೀವು, ಪರುತಿಥೀವು, ಅನಲೈತೀವು, ಮೀಸಲೈ ಮತ್ತು ಚಾವಕ್ಕಚೇರಿ ಸೇರಿದಂತೆ ಉತ್ತರ ಶ್ರೀಲಂಕಾದ ಹಲವು ಭಾಗಗಳಲ್ಲಿ ಚೀನಾದ ಪ್ರಜೆಗಳ ಮುಕ್ತ ಸಂಚಾರವು ತಮಿಳು ಮೀನುಗಾರರಲ್ಲಿ ಅಸಮಾಧಾನವನ್ನು ಉಂಟುಮಾಡಿದೆ. ತಮ್ಮ ಜೀವನಾಧಾರವಾಗಿರುವ ಶ್ರೀಮಂತ ಸಮುದ್ರ ಸಂಪತ್ತನ್ನು ಚೀನಿಯರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಆತಂಕವನ್ನು ಅವರು ವ್ಯಕ್ತಪಡಿಸಿದ್ದಾರೆ.

ಸದ್ಯದ ಪರಿಸ್ಥಿತಿಯು ಶ್ರೀಲಂಕಾದ ಪ್ರಜೆಗಳ ನಡುವೆ ವಿಭಜನೆ ಉಂಟು ಮಾಡಬಹುದು. ದ್ವೀಪ ರಾಷ್ಟ್ರದ ಉತ್ತರ ಮತ್ತು ಪೂರ್ವ ಭಾಗಗಳಲ್ಲಿ ವಾಸಿಸುವ ತಮಿಳರ ಮೇಲೆ ಭಾರತದ ಪ್ರಭಾವವನ್ನು ಮೊಟಕುಗೊಳಿಸಬಹುದು ಎಂಬುದು ಸ್ಥಳೀಯ ತಮಿಳರ ಭಯವಾಗಿದೆ.

ಶ್ರೀಲಂಕಾದ ಹಂಬಂತೋಟಾ ಬಂದರಿಗೆ ಚೀನಾದ ಸಂಶೋಧನಾ ನೌಕೆ ‘ಯುವಾನ್ ವಾಂಗ್ 5’ ಆಗಮನದ ಕುರಿತು ಕೇಂದ್ರ ಸರ್ಕಾರ ಪ್ರತಿಕ್ರಿಯಿಸಿತ್ತು. ನಂತರ ತಮಿಳುನಾಡು ಆಗ್ನೇಯ ಕರಾವಳಿಯಲ್ಲಿ ಭದ್ರತಾ ವ್ಯವಸ್ಥೆಯನ್ನು ಬಲಪಡಿಸಿದೆ. 1,076-ಕಿಮೀ ಉದ್ದದ ಕರಾವಳಿ ಭಾಗದಲ್ಲಿ ಗುಪ್ತಚರ ಚಟುವಟಿಕೆಗಳನ್ನು ಸರ್ಕಾರ ಸಕ್ರಿಯಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ವರ್ಷದ ಆಗಸ್ಟ್‌ನಲ್ಲಿ ಚೀನಾದ ಅನುದಾನಿತ ಹಂಬನ್‌ತೋಟ ಬಂದರಿಗೆ ಚೀನಾದ ಉಪಗ್ರಹ-ಟ್ರ್ಯಾಕಿಂಗ್ ಹಡಗಿನ ಆಗಮನವಾಗಿದ್ದರ ಕುರಿತು ಭಾರತವು ಆತಂಕ ವ್ಯಕ್ತಪಡಿಸಿತ್ತು. ತನ್ನ ಭದ್ರತೆ ಮತ್ತು ಆರ್ಥಿಕ ಹಿತಾಸಕ್ತಿಗಳ ಮೇಲೆ ಪರಿಣಾಮ ಬೀರುವ ಬೆಳವಣಿಗೆಗಳನ್ನು ಎಚ್ಚರಿಕೆಯಿಂದ ಭಾರತ ಗಮನಿಸುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮತ್ತು ತಮಿಳುನಾಡು ಕರಾವಳಿ ಭದ್ರತಾ ಗುಂಪಿನ ಮುಖ್ಯಸ್ಥ ಸಂದೀಪ್ ಮಿತ್ತಲ್ ಪ್ರತಿಕ್ರಿಯಿಸಿದ್ದು, “ಶ್ರೀಲಂಕಾದಲ್ಲಿ ಚೀನಾದ ಪ್ರಜೆಗಳ ಉಪಸ್ಥಿತಿಯು ಹೆಚ್ಚುತ್ತಿದೆ ಎಂಬುದು ವಿವಾದಾಸ್ಪದ ಸಂಗತಿಯಲ್ಲ. ಆದರೆ ಶ್ರೀಲಂಕಾದಲ್ಲಿರುವ ಚೀನಾದ ರಾಯಭಾರಿಯು ಅಂತಾರಾಷ್ಟ್ರೀಯ ಕಡಲ ಗಡಿ ರೇಖೆಯ ಸಮೀಪವಿರುವ ದ್ವೀಪಗಳಿಗೆ ಆಗಾಗ್ಗೆ ಭೇಟಿ ನೀಡುತ್ತಿರುವುದು ಮತ್ತು ಸಮುದ್ರ ಸೌತೆಕಾಯಿಯನ್ನು ಬೆಳೆಯುವ ನೆಪದಲ್ಲಿ ಆ ಪ್ರದೇಶದಲ್ಲಿ ನಡೆಸಲಾದ ಡ್ರೋನ್ ಸಮೀಕ್ಷೆಯು ಅನುಮಾನಗಳನ್ನು ತಂದಿವೆ” ಎಂದಿದ್ದಾರೆ.

“ಭಾರತದಲ್ಲಿ ಪದವಿಪೂರ್ವ ಕಲಿಕೆಯನ್ನು ಮಾಡುತ್ತಿರುವ ಶ್ರೀಲಂಕಾದ ವಿದ್ಯಾರ್ಥಿಗಳಿಗೆ ಭಾರತವು ವಿದ್ಯಾರ್ಥಿವೇತನವನ್ನು ನೀಡುತ್ತಿದ್ದರೆ, ಶ್ರೀಲಂಕಾದಲ್ಲಿಯೇ ಓದುತ್ತಿರುವ ಸ್ನಾತಕೋತ್ತರ ಶ್ರೀಲಂಕಾ ವಿದ್ಯಾರ್ಥಿಗಳಿಗೆ ಚೀನಾ ಧನಸಹಾಯ ನೀಡುತ್ತಿದೆ. ಅವರು [ಚೀನೀಯರು] ತಮ್ಮ ಭವಿಷ್ಯದ ಯೋಜನೆಗಳನ್ನು ಬೆಂಬಲಿಸಲು ಶ್ರೀಲಂಕಾದಲ್ಲಿ ಯುವಕರನ್ನು ಓಲೈಸಲು ಪ್ರಯತ್ನಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: 100ಕ್ಕೂ ಹೆಚ್ಚು ಅಪ್ಲಿಕೇಷನ್‌ ಬಳಸಿ ಸುಲಿಗೆ; ₹ 500 ಕೋಟಿ ಚೀನಾಕ್ಕೆ ಕಳುಹಿಸಿದ ಯುಪಿ ಗ್ಯಾಂಗ್‌ ಅರೆಸ್ಟ್‌‌!

ಚೀನೀಯರು ಭಾರತದ ಜಲಪ್ರದೇಶಕ್ಕೆ ನುಗ್ಗುತ್ತಾರೆ ಎಂಬುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ ಎಂದು ರಾಜ್ಯ ಕಡಲ ಭದ್ರತಾ ಸಂಯೋಜಕರೂ ಆಗಿರುವ ಡಾ.ಮಿತ್ತಲ್ ಹೇಳಿದ್ದಾರೆ. “ತಮ್ಮ ಗುಪ್ತಚರ ಚಟುವಟಿಕೆಗಳನ್ನು ಸಕ್ರಿಯಗೊಳಿಸಲು ಮತ್ತು ಕರಾವಳಿಯಾದ್ಯಂತ ಭದ್ರತೆಯನ್ನು ತೀವ್ರಗೊಳಿಸಲು ಎಲ್ಲಾ ಕರಾವಳಿ ಜಿಲ್ಲೆಗಳಿಗೆ ಎಚ್ಚರಿಕೆಯನ್ನು ತಮಿಳುನಾಡು ನೀಡಿದೆ” ಎಂದಿದ್ದಾರೆ.

ಕೇಂದ್ರ ಸರ್ಕಾರವು ಕರಾವಳಿ ಭದ್ರತಾ ಯೋಜನೆಯ ಹಂತ-IIIರ ನಿಧಿಯನ್ನು ಸಕ್ರಿಯಗೊಳಿಸುವ ತುರ್ತು ಅವಶ್ಯಕತೆಯಿದೆ ಎಂದು ತಮಿಳುನಾಡಿನ ಭದ್ರತಾ ಏಜೆನ್ಸಿಗಳು ಹೇಳುತ್ತದೆ. ಹಂತ-II 2020ರಲ್ಲಿ ಕೊನೆಗೊಂಡ ನಂತರ, ಕರಾವಳಿ ಭದ್ರತಾ ಗುಂಪಿಗೆ ಹಣ ಮತ್ತು ಮೂಲಸೌಕರ್ಯದ ಬೆಂಬಲವನ್ನು ನಿಲ್ಲಿಸಲಾಯಿತು.

“ಹೆಚ್ಚುತ್ತಿರುವ ಆತಂಕವನ್ನು ಪರಿಗಣಿಸಿ ಕರಾವಳಿಯುದ್ದಕ್ಕೂ ಅನುಕೂಲಕರ ಸ್ಥಳಗಳಲ್ಲಿ ನೆಲೆಸಲು ಕೆಲವು ಭಾರತೀಯ ಸಮುದ್ರ ಮೀಸಲು ಬೆಟಾಲಿಯನ್‌ಗಳನ್ನು ಹೆಚ್ಚಿಸಲು ಕೇಂದ್ರವು ತಮಿಳುನಾಡಿಗೆ ಸಹಾಯ ಮಾಡಬೇಕು. ತಮಿಳುನಾಡು ಕೋಸ್ಟಲ್ ಸೆಕ್ಯುರಿಟಿ ಗ್ರೂಪ್‌ಗೆ 800 ಸಿಬ್ಬಂದಿಗಳ ಮಂಜೂರಾತಿಯಲ್ಲಿ ಸುಮಾರು 50% ಖಾಲಿ ಇದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ‘ದಿ ಹಿಂದೂ’ ವರದಿ ಮಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...