Homeಅಂತರಾಷ್ಟ್ರೀಯಕೊರೊನಾ ನಂತರ ಮತ್ತೆ ಜಾಗತಿಕ ಮಾಲಿನ್ಯ ಮಟ್ಟದಲ್ಲಿ ಏರಿಕೆ: ಅಧ್ಯಯನ ವರದಿ

ಕೊರೊನಾ ನಂತರ ಮತ್ತೆ ಜಾಗತಿಕ ಮಾಲಿನ್ಯ ಮಟ್ಟದಲ್ಲಿ ಏರಿಕೆ: ಅಧ್ಯಯನ ವರದಿ

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಎಲ್ಲಾ ರೀತಿಯ ಕೈಗಾರಿಕೆಗಳು ಮತ್ತು ಸಾರಿಗೆ ಕ್ಷೇತ್ರ ಸ್ಥಗಿತಗೊಂಡಿದ್ದರಿಂದ ಇಳಿಕೆಯಾಗಿದ್ದ ಇಂಗಾಲದ ಡೈಆಕ್ಸೈಡ್ ಹೊರಸೂಸುವಿಕೆಯು ಇದೀಗ ಮತ್ತೆ ಹೆಚ್ಚುತ್ತಿದೆ. ಮತ್ತೆ ಹೆಚ್ಚುತ್ತಿರುವ ಇಂಗಾಲದ ಹೊರಸೂಸುವಿಕೆಯಲ್ಲಿ ಚೀನಾದ ಪಾತ್ರ ಹೆಚ್ಚಿದೆ ಎಂದು ಹೊಸ ವೈಜ್ಞಾನಿಕ ಅಧ್ಯಯನವು ಹೇಳಿದೆ.

ಹವಾಮಾನ ಬದಲಾವಣೆಗೆ ಕಾರಣವಾಗುವ ಹೀಟ್‌-ಟ್ರ್ಯಾಪಿಂಗ್ ಅನಿಲಗಳನ್ನು ಪತ್ತೆಹಚ್ಚುವ ವಿಜ್ಞಾನಿಗಳ ಗುಂಪು ಅಧ್ಯಯನ ನಡೆಸಿದ್ದು, ಈ ವರ್ಷದ ಮೊದಲ ಒಂಬತ್ತು ತಿಂಗಳುಗಳಲ್ಲಿನ ಹೊರಸೂಸುವಿಕೆಯು 2019 ರ ಮಟ್ಟಕ್ಕಿಂತ ಸ್ವಲ್ಪ ಮಾತ್ರವೇ ಕಡಿಮೆ ಇದೆ ಎಂದು ಹೇಳಿದ್ದಾರೆ.

ಎರಡು ವರ್ಷಗಳ ಹಿಂದೆ ಲಾಕ್‌ಡೌನ್‌ಗೂ ಮುಂಚಿತವಾಗಿ ಇದ್ದ ಇಂಗಾಲದ ಡೈಆಕ್ಸೈಡ್ ಹೊರಸೂಸುವಿಕೆಯ ಪ್ರಮಾಣ 36.7 ಶತಕೋಟಿ ಮೆಟ್ರಿಕ್ ಟನ್‌ಗಳಿಗೆ ಹೋಲಿಸಿದರೆ 2021 ರಲ್ಲಿ ಪ್ರಪಂಚವು 36.4 ಶತಕೋಟಿ ಮೆಟ್ರಿಕ್ ಟನ್ ಇಂಗಾಲದ ಡೈಆಕ್ಸೈಡ್ ಅನ್ನು ಹೊರಹಾಕಿದೆ ಎಂದು ಅವರು ಅಂದಾಜಿಸಿದ್ದಾರೆ.

ಕಳೆದ ವರ್ಷ ಕೊರೊನಾ ಅಲೆಯು ಉತ್ತುಂಗದಲ್ಲಿದ್ದಾಗ, ಹೊರಸೂಸುವಿಕೆಯು 34.8 ಶತಕೋಟಿ ಮೆಟ್ರಿಕ್ ಟನ್‌ಗಳಿಗೆ ಕಡಿಮೆಯಾಗಿತ್ತು. ಆದರೆ, ಇದೀಗ ಗ್ಲೋಬಲ್ ಕಾರ್ಬನ್ ಪ್ರಾಜೆಕ್ಟ್‌ನ ನವೀಕರಿಸಿದ ಲೆಕ್ಕಾಚಾರಗಳ ಪ್ರಕಾರ ಈ ವರ್ಷ ಇಂಗಾಲ ಹೊರಸೂಸುವಿಕೆಯ ಪ್ರಮಾಣ ಶೇ. 4.9% ಏರಿಕೆಯಾಗಿದೆ.

“ಹೆಚ್ಚಿನ ದೇಶಗಳು ಕೊರೊನಾ ವೈರಸ್‌ ಪತ್ತೆಯಾಗುವುದಕ್ಕೂ ಮೊದಲಿದ್ದ ಪ್ರವೃತ್ತಿಗೆ ಹಿಂತಿರುಗಿವೆ. ಆ ಎಲ್ಲಾ ದೇಶಗಳಲ್ಲಿಯೂ ಇಂಗಾಲ ಹೊರಸೂಸುವಿಕೆ ಮತ್ತೆ ಹೆಚ್ಚಾಗಿದೆ. ಈ ಪೈಕಿ, ಚೀನಾದಲ್ಲಿನ ಮಾಲಿನ್ಯ ಹೆಚ್ಚಳವು ವಿಶ್ವಾದ್ಯಂತ ಅಂಕಿಅಂಶಗಳು 2019 ರ ಮಾಲಿನ್ಯ ಮಟ್ಟಕ್ಕೆ ಹಿಂದಿರುಗಲು ಹೆಚ್ಚಿನ ಕಾರಣವಾಗಿದೆ” ಎಂದು ಯುನೈಟೆಡ್ ಕಿಂಗ್‌ಡಂನ ಈಸ್ಟ್ ಆಂಗ್ಲಿಯಾ ವಿಶ್ವವಿದ್ಯಾಲಯದ ಹವಾಮಾನ ವಿಜ್ಞಾನಿ, ಅಧ್ಯಯನ ಸಹ-ಲೇಖಕ ಕೊರಿನ್ನೆ ಲೆಕ್ವೆರ್ ಹೇಳಿದ್ದಾರೆ.

ಭಾರತದಿಂದ ಇಟಲಿಯವರೆಗಿನ ನಗರಗಳಲ್ಲಿ 2020ರ ಅವಧಿಯಲ್ಲಿ ನಾಟಕೀಯವಾಗಿ ಇಂಗಾಲದ ಮಾಲಿನ್ಯವನ್ನು ಕಡಿಮೆಯಾಗುವುದರ ಜೊತೆಗೆ ಶುದ್ದ ಗಾಳಿ ಹೆಚ್ಚುವಂತೆ ಮಾಡುವಲ್ಲಿ ಜಗತ್ತು ಸರಿಯಾದ ಹಾದಿಯಲ್ಲಿದೆ ಎಂದು ಕೆಲವರು ಭಾವಿಸಿರಬಹುದು, ಆದರೆ ವಿಜ್ಞಾನಿಗಳು ಅದು ನಿಜವಲ್ಲ ಎಂದು ಹೇಳಿದ್ದಾರೆ.

“ಪ್ರಪಂಚವು ಜಾಗತಿಕ ತಾಪಮಾನ ಏರಿಕೆಯನ್ನು ಕೈಗಾರಿಕೆಗಳ ಉದಯಕ್ಕೂ ಮೊದಲಿದ್ದ 1.5 ಡಿಗ್ರಿ ಸೆಲ್ಸಿಯಸ್ (2.7 ಡಿಗ್ರಿ ಫ್ಯಾರನ್‌ಹೀಟ್) ಗೆ ಮಿತಿಗೊಳಿಸುವ ಉದ್ದೇಶವನ್ನು ಹೊಂದಿದ್ದರೆ, ಅದನ್ನು ತ್ವರಿತವಾಗಿ ಆರಂಭಿಸಬೇಕು. ಪ್ರಸ್ತುತ ಹೊರಸೂಸುವಿಕೆಯ ಮಟ್ಟವನ್ನು ಗಮನಿದರೆ ಕೇವಲ 11 ವರ್ಷಗಳು ಮಾತ್ರ ಉಳಿದಿವೆ” ಎಂದು ಅಧ್ಯಯನ ವರದಿ ಹೇಳಿದೆ.

1800ರ ದಶಕದ ಅಂತ್ಯದಿಂದ ಪ್ರಪಂಚವು 1.1 ಡಿಗ್ರಿ ಸೆಲ್ಸಿಯಸ್ (2 ಡಿಗ್ರಿ ಫ್ಯಾರನ್‌ಹೀಟ್) ಅನ್ನು ಹೊಂದಿತ್ತು.

“ಇಂಗಾಲದ ಹೊರಸೂಸುವಿಕೆ ಸಂಖ್ಯೆಗಳು ತೋರಿಸುವುದೇನೆಂದರೆ, ಹೊರಸೂಸುವಿಕೆಗಳು (COVID-19 ಸಮಯದಲ್ಲಿ) ಈಗ ಮೂಲತಃ ಸಮತಟ್ಟಾಗಿದೆ ಅಥವಾ ಕಡಿಮೆಯಾಗಿದೆ. ಅದು ಒಳ್ಳೆಯ ಸುದ್ದಿ. ಅದರೆ, ಕೆಟ್ಟ ಸುದ್ದಿ ಎಂದರೆ ಅದು ಸಾಕಾಗುವುದಿಲ್ಲ. ನಾವು ಹೊರಸೂಸುವಿಕೆಯನ್ನು ಇಳಿಸಲು ಪ್ರಾರಂಭಿಸಬೇಕು” ಎಂದು ವರದಿಯ ಭಾಗವಾಗದ ಪೆನ್ಸಿಲ್ವೇನಿಯಾ ಸ್ಟೇಟ್ ಯೂನಿವರ್ಸಿಟಿ ಹವಾಮಾನ ವಿಜ್ಞಾನಿ ಮೈಕೆಲ್ ಮನ್ ಹೇಳಿದ್ದಾರೆ.

2019 ಕ್ಕೆ ಹೋಲಿಸಿದರೆ 2021 ರಲ್ಲಿ ಚೀನಾದಲ್ಲಿ ಹೊರಸೂಸುವಿಕೆ 7% ಹೆಚ್ಚಾಗಿದೆ. ಅದೇ ರೀತಿ, ಭಾರತದ ಹೊರಸೂಸುವಿಕೆ 3% ಹೆಚ್ಚಾಗಿದೆ ಎಂದು ಅಧ್ಯಯನ ಹೇಳಿದೆ.

ಇದಕ್ಕೆ ವ್ಯತಿರಿಕ್ತವಾಗಿ, ಯುನೈಟೆಡ್ ಸ್ಟೇಟ್ಸ್, ಯುರೋಪಿಯನ್ ಯೂನಿಯನ್ ಮತ್ತು ಪ್ರಪಂಚದ ಉಳಿದ ಭಾಗಗಳು 2019ಕ್ಕೆ ಹೋಲಿಸಿದರೆ, ಈ ವರ್ಷ ಕಡಿಮೆ ಮಾಲಿನ್ಯವನ್ನು ಹೊಂದಿವೆ.

ಚೀನಾದ ಮಾಲಿನ್ಯ ಜಿಗಿತಕ್ಕೆ ಹೆಚ್ಚಾಗಿ ಕಲ್ಲಿದ್ದಲು ಮತ್ತು ನೈಸರ್ಗಿಕ ಅನಿಲವನ್ನು ಸುಡುವುದರಿಂದ ಮತ್ತು ಲಾಕ್‌ಡೌನ್‌ನಿಂದ ಚೇತರಿಸಿಕೊಳ್ಳಲು ಬೃಹತ್ ಆರ್ಥಿಕ ಪ್ರಚೋದನೆಯೇ ಕಾರಣವಾಗಿದೆ ಎಂದು ಲೆಕ್ವೆರ್ ಹೇಳಿದ್ದಾರೆ.

ಅಂಕಿಅಂಶಗಳು ವಿದ್ಯುತ್ ಬಳಕೆ, ಪ್ರಯಾಣ, ಕೈಗಾರಿಕಾ ಉತ್ಪಾದನೆ ಮತ್ತು ಇತರ ಅಂಶಗಳ ಮೇಲೆ ಸರ್ಕಾರಗಳ ಡೇಟಾವನ್ನು ಆಧರಿಸಿವೆ. ಈ ವರ್ಷ ಹೊರಸೂಸುವಿಕೆಯು ಪ್ರತಿ ಸೆಕೆಂಡಿಗೆ ಸರಾಸರಿ 115 ಮೆಟ್ರಿಕ್ ಟನ್ ಇಂಗಾಲದ ಡೈಆಕ್ಸೈಡ್ ಗಾಳಿಯನ್ನು ಸೇರುತ್ತಿದೆ.

ಆಧಾರ: ಇಂಡಿಯನ್ ಎಕ್ಸ್‌ಪ್ರೆಸ್


ಇದನ್ನೂ ಓದಿ: ಉಪಚುನಾವಣೆ ಸೋಲಿನಿಂದಾಗಿ ಕೇಂದ್ರವು ಪೆಟ್ರೋಲ್, ಡೀಸೆಲ್ ತೆರಿಗೆ ಕಡಿತಗೊಳಿಸಿದೆ: ಪಿ ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...