Homeಅಂತರಾಷ್ಟ್ರೀಯಕೊರೊನಾ ನಂತರ ಮತ್ತೆ ಜಾಗತಿಕ ಮಾಲಿನ್ಯ ಮಟ್ಟದಲ್ಲಿ ಏರಿಕೆ: ಅಧ್ಯಯನ ವರದಿ

ಕೊರೊನಾ ನಂತರ ಮತ್ತೆ ಜಾಗತಿಕ ಮಾಲಿನ್ಯ ಮಟ್ಟದಲ್ಲಿ ಏರಿಕೆ: ಅಧ್ಯಯನ ವರದಿ

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಎಲ್ಲಾ ರೀತಿಯ ಕೈಗಾರಿಕೆಗಳು ಮತ್ತು ಸಾರಿಗೆ ಕ್ಷೇತ್ರ ಸ್ಥಗಿತಗೊಂಡಿದ್ದರಿಂದ ಇಳಿಕೆಯಾಗಿದ್ದ ಇಂಗಾಲದ ಡೈಆಕ್ಸೈಡ್ ಹೊರಸೂಸುವಿಕೆಯು ಇದೀಗ ಮತ್ತೆ ಹೆಚ್ಚುತ್ತಿದೆ. ಮತ್ತೆ ಹೆಚ್ಚುತ್ತಿರುವ ಇಂಗಾಲದ ಹೊರಸೂಸುವಿಕೆಯಲ್ಲಿ ಚೀನಾದ ಪಾತ್ರ ಹೆಚ್ಚಿದೆ ಎಂದು ಹೊಸ ವೈಜ್ಞಾನಿಕ ಅಧ್ಯಯನವು ಹೇಳಿದೆ.

ಹವಾಮಾನ ಬದಲಾವಣೆಗೆ ಕಾರಣವಾಗುವ ಹೀಟ್‌-ಟ್ರ್ಯಾಪಿಂಗ್ ಅನಿಲಗಳನ್ನು ಪತ್ತೆಹಚ್ಚುವ ವಿಜ್ಞಾನಿಗಳ ಗುಂಪು ಅಧ್ಯಯನ ನಡೆಸಿದ್ದು, ಈ ವರ್ಷದ ಮೊದಲ ಒಂಬತ್ತು ತಿಂಗಳುಗಳಲ್ಲಿನ ಹೊರಸೂಸುವಿಕೆಯು 2019 ರ ಮಟ್ಟಕ್ಕಿಂತ ಸ್ವಲ್ಪ ಮಾತ್ರವೇ ಕಡಿಮೆ ಇದೆ ಎಂದು ಹೇಳಿದ್ದಾರೆ.

ಎರಡು ವರ್ಷಗಳ ಹಿಂದೆ ಲಾಕ್‌ಡೌನ್‌ಗೂ ಮುಂಚಿತವಾಗಿ ಇದ್ದ ಇಂಗಾಲದ ಡೈಆಕ್ಸೈಡ್ ಹೊರಸೂಸುವಿಕೆಯ ಪ್ರಮಾಣ 36.7 ಶತಕೋಟಿ ಮೆಟ್ರಿಕ್ ಟನ್‌ಗಳಿಗೆ ಹೋಲಿಸಿದರೆ 2021 ರಲ್ಲಿ ಪ್ರಪಂಚವು 36.4 ಶತಕೋಟಿ ಮೆಟ್ರಿಕ್ ಟನ್ ಇಂಗಾಲದ ಡೈಆಕ್ಸೈಡ್ ಅನ್ನು ಹೊರಹಾಕಿದೆ ಎಂದು ಅವರು ಅಂದಾಜಿಸಿದ್ದಾರೆ.

ಕಳೆದ ವರ್ಷ ಕೊರೊನಾ ಅಲೆಯು ಉತ್ತುಂಗದಲ್ಲಿದ್ದಾಗ, ಹೊರಸೂಸುವಿಕೆಯು 34.8 ಶತಕೋಟಿ ಮೆಟ್ರಿಕ್ ಟನ್‌ಗಳಿಗೆ ಕಡಿಮೆಯಾಗಿತ್ತು. ಆದರೆ, ಇದೀಗ ಗ್ಲೋಬಲ್ ಕಾರ್ಬನ್ ಪ್ರಾಜೆಕ್ಟ್‌ನ ನವೀಕರಿಸಿದ ಲೆಕ್ಕಾಚಾರಗಳ ಪ್ರಕಾರ ಈ ವರ್ಷ ಇಂಗಾಲ ಹೊರಸೂಸುವಿಕೆಯ ಪ್ರಮಾಣ ಶೇ. 4.9% ಏರಿಕೆಯಾಗಿದೆ.

“ಹೆಚ್ಚಿನ ದೇಶಗಳು ಕೊರೊನಾ ವೈರಸ್‌ ಪತ್ತೆಯಾಗುವುದಕ್ಕೂ ಮೊದಲಿದ್ದ ಪ್ರವೃತ್ತಿಗೆ ಹಿಂತಿರುಗಿವೆ. ಆ ಎಲ್ಲಾ ದೇಶಗಳಲ್ಲಿಯೂ ಇಂಗಾಲ ಹೊರಸೂಸುವಿಕೆ ಮತ್ತೆ ಹೆಚ್ಚಾಗಿದೆ. ಈ ಪೈಕಿ, ಚೀನಾದಲ್ಲಿನ ಮಾಲಿನ್ಯ ಹೆಚ್ಚಳವು ವಿಶ್ವಾದ್ಯಂತ ಅಂಕಿಅಂಶಗಳು 2019 ರ ಮಾಲಿನ್ಯ ಮಟ್ಟಕ್ಕೆ ಹಿಂದಿರುಗಲು ಹೆಚ್ಚಿನ ಕಾರಣವಾಗಿದೆ” ಎಂದು ಯುನೈಟೆಡ್ ಕಿಂಗ್‌ಡಂನ ಈಸ್ಟ್ ಆಂಗ್ಲಿಯಾ ವಿಶ್ವವಿದ್ಯಾಲಯದ ಹವಾಮಾನ ವಿಜ್ಞಾನಿ, ಅಧ್ಯಯನ ಸಹ-ಲೇಖಕ ಕೊರಿನ್ನೆ ಲೆಕ್ವೆರ್ ಹೇಳಿದ್ದಾರೆ.

ಭಾರತದಿಂದ ಇಟಲಿಯವರೆಗಿನ ನಗರಗಳಲ್ಲಿ 2020ರ ಅವಧಿಯಲ್ಲಿ ನಾಟಕೀಯವಾಗಿ ಇಂಗಾಲದ ಮಾಲಿನ್ಯವನ್ನು ಕಡಿಮೆಯಾಗುವುದರ ಜೊತೆಗೆ ಶುದ್ದ ಗಾಳಿ ಹೆಚ್ಚುವಂತೆ ಮಾಡುವಲ್ಲಿ ಜಗತ್ತು ಸರಿಯಾದ ಹಾದಿಯಲ್ಲಿದೆ ಎಂದು ಕೆಲವರು ಭಾವಿಸಿರಬಹುದು, ಆದರೆ ವಿಜ್ಞಾನಿಗಳು ಅದು ನಿಜವಲ್ಲ ಎಂದು ಹೇಳಿದ್ದಾರೆ.

“ಪ್ರಪಂಚವು ಜಾಗತಿಕ ತಾಪಮಾನ ಏರಿಕೆಯನ್ನು ಕೈಗಾರಿಕೆಗಳ ಉದಯಕ್ಕೂ ಮೊದಲಿದ್ದ 1.5 ಡಿಗ್ರಿ ಸೆಲ್ಸಿಯಸ್ (2.7 ಡಿಗ್ರಿ ಫ್ಯಾರನ್‌ಹೀಟ್) ಗೆ ಮಿತಿಗೊಳಿಸುವ ಉದ್ದೇಶವನ್ನು ಹೊಂದಿದ್ದರೆ, ಅದನ್ನು ತ್ವರಿತವಾಗಿ ಆರಂಭಿಸಬೇಕು. ಪ್ರಸ್ತುತ ಹೊರಸೂಸುವಿಕೆಯ ಮಟ್ಟವನ್ನು ಗಮನಿದರೆ ಕೇವಲ 11 ವರ್ಷಗಳು ಮಾತ್ರ ಉಳಿದಿವೆ” ಎಂದು ಅಧ್ಯಯನ ವರದಿ ಹೇಳಿದೆ.

1800ರ ದಶಕದ ಅಂತ್ಯದಿಂದ ಪ್ರಪಂಚವು 1.1 ಡಿಗ್ರಿ ಸೆಲ್ಸಿಯಸ್ (2 ಡಿಗ್ರಿ ಫ್ಯಾರನ್‌ಹೀಟ್) ಅನ್ನು ಹೊಂದಿತ್ತು.

“ಇಂಗಾಲದ ಹೊರಸೂಸುವಿಕೆ ಸಂಖ್ಯೆಗಳು ತೋರಿಸುವುದೇನೆಂದರೆ, ಹೊರಸೂಸುವಿಕೆಗಳು (COVID-19 ಸಮಯದಲ್ಲಿ) ಈಗ ಮೂಲತಃ ಸಮತಟ್ಟಾಗಿದೆ ಅಥವಾ ಕಡಿಮೆಯಾಗಿದೆ. ಅದು ಒಳ್ಳೆಯ ಸುದ್ದಿ. ಅದರೆ, ಕೆಟ್ಟ ಸುದ್ದಿ ಎಂದರೆ ಅದು ಸಾಕಾಗುವುದಿಲ್ಲ. ನಾವು ಹೊರಸೂಸುವಿಕೆಯನ್ನು ಇಳಿಸಲು ಪ್ರಾರಂಭಿಸಬೇಕು” ಎಂದು ವರದಿಯ ಭಾಗವಾಗದ ಪೆನ್ಸಿಲ್ವೇನಿಯಾ ಸ್ಟೇಟ್ ಯೂನಿವರ್ಸಿಟಿ ಹವಾಮಾನ ವಿಜ್ಞಾನಿ ಮೈಕೆಲ್ ಮನ್ ಹೇಳಿದ್ದಾರೆ.

2019 ಕ್ಕೆ ಹೋಲಿಸಿದರೆ 2021 ರಲ್ಲಿ ಚೀನಾದಲ್ಲಿ ಹೊರಸೂಸುವಿಕೆ 7% ಹೆಚ್ಚಾಗಿದೆ. ಅದೇ ರೀತಿ, ಭಾರತದ ಹೊರಸೂಸುವಿಕೆ 3% ಹೆಚ್ಚಾಗಿದೆ ಎಂದು ಅಧ್ಯಯನ ಹೇಳಿದೆ.

ಇದಕ್ಕೆ ವ್ಯತಿರಿಕ್ತವಾಗಿ, ಯುನೈಟೆಡ್ ಸ್ಟೇಟ್ಸ್, ಯುರೋಪಿಯನ್ ಯೂನಿಯನ್ ಮತ್ತು ಪ್ರಪಂಚದ ಉಳಿದ ಭಾಗಗಳು 2019ಕ್ಕೆ ಹೋಲಿಸಿದರೆ, ಈ ವರ್ಷ ಕಡಿಮೆ ಮಾಲಿನ್ಯವನ್ನು ಹೊಂದಿವೆ.

ಚೀನಾದ ಮಾಲಿನ್ಯ ಜಿಗಿತಕ್ಕೆ ಹೆಚ್ಚಾಗಿ ಕಲ್ಲಿದ್ದಲು ಮತ್ತು ನೈಸರ್ಗಿಕ ಅನಿಲವನ್ನು ಸುಡುವುದರಿಂದ ಮತ್ತು ಲಾಕ್‌ಡೌನ್‌ನಿಂದ ಚೇತರಿಸಿಕೊಳ್ಳಲು ಬೃಹತ್ ಆರ್ಥಿಕ ಪ್ರಚೋದನೆಯೇ ಕಾರಣವಾಗಿದೆ ಎಂದು ಲೆಕ್ವೆರ್ ಹೇಳಿದ್ದಾರೆ.

ಅಂಕಿಅಂಶಗಳು ವಿದ್ಯುತ್ ಬಳಕೆ, ಪ್ರಯಾಣ, ಕೈಗಾರಿಕಾ ಉತ್ಪಾದನೆ ಮತ್ತು ಇತರ ಅಂಶಗಳ ಮೇಲೆ ಸರ್ಕಾರಗಳ ಡೇಟಾವನ್ನು ಆಧರಿಸಿವೆ. ಈ ವರ್ಷ ಹೊರಸೂಸುವಿಕೆಯು ಪ್ರತಿ ಸೆಕೆಂಡಿಗೆ ಸರಾಸರಿ 115 ಮೆಟ್ರಿಕ್ ಟನ್ ಇಂಗಾಲದ ಡೈಆಕ್ಸೈಡ್ ಗಾಳಿಯನ್ನು ಸೇರುತ್ತಿದೆ.

ಆಧಾರ: ಇಂಡಿಯನ್ ಎಕ್ಸ್‌ಪ್ರೆಸ್


ಇದನ್ನೂ ಓದಿ: ಉಪಚುನಾವಣೆ ಸೋಲಿನಿಂದಾಗಿ ಕೇಂದ್ರವು ಪೆಟ್ರೋಲ್, ಡೀಸೆಲ್ ತೆರಿಗೆ ಕಡಿತಗೊಳಿಸಿದೆ: ಪಿ ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...