Homeಅಂತರಾಷ್ಟ್ರೀಯಕೊರೊನಾ ನಂತರ ಮತ್ತೆ ಜಾಗತಿಕ ಮಾಲಿನ್ಯ ಮಟ್ಟದಲ್ಲಿ ಏರಿಕೆ: ಅಧ್ಯಯನ ವರದಿ

ಕೊರೊನಾ ನಂತರ ಮತ್ತೆ ಜಾಗತಿಕ ಮಾಲಿನ್ಯ ಮಟ್ಟದಲ್ಲಿ ಏರಿಕೆ: ಅಧ್ಯಯನ ವರದಿ

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಎಲ್ಲಾ ರೀತಿಯ ಕೈಗಾರಿಕೆಗಳು ಮತ್ತು ಸಾರಿಗೆ ಕ್ಷೇತ್ರ ಸ್ಥಗಿತಗೊಂಡಿದ್ದರಿಂದ ಇಳಿಕೆಯಾಗಿದ್ದ ಇಂಗಾಲದ ಡೈಆಕ್ಸೈಡ್ ಹೊರಸೂಸುವಿಕೆಯು ಇದೀಗ ಮತ್ತೆ ಹೆಚ್ಚುತ್ತಿದೆ. ಮತ್ತೆ ಹೆಚ್ಚುತ್ತಿರುವ ಇಂಗಾಲದ ಹೊರಸೂಸುವಿಕೆಯಲ್ಲಿ ಚೀನಾದ ಪಾತ್ರ ಹೆಚ್ಚಿದೆ ಎಂದು ಹೊಸ ವೈಜ್ಞಾನಿಕ ಅಧ್ಯಯನವು ಹೇಳಿದೆ.

ಹವಾಮಾನ ಬದಲಾವಣೆಗೆ ಕಾರಣವಾಗುವ ಹೀಟ್‌-ಟ್ರ್ಯಾಪಿಂಗ್ ಅನಿಲಗಳನ್ನು ಪತ್ತೆಹಚ್ಚುವ ವಿಜ್ಞಾನಿಗಳ ಗುಂಪು ಅಧ್ಯಯನ ನಡೆಸಿದ್ದು, ಈ ವರ್ಷದ ಮೊದಲ ಒಂಬತ್ತು ತಿಂಗಳುಗಳಲ್ಲಿನ ಹೊರಸೂಸುವಿಕೆಯು 2019 ರ ಮಟ್ಟಕ್ಕಿಂತ ಸ್ವಲ್ಪ ಮಾತ್ರವೇ ಕಡಿಮೆ ಇದೆ ಎಂದು ಹೇಳಿದ್ದಾರೆ.

ಎರಡು ವರ್ಷಗಳ ಹಿಂದೆ ಲಾಕ್‌ಡೌನ್‌ಗೂ ಮುಂಚಿತವಾಗಿ ಇದ್ದ ಇಂಗಾಲದ ಡೈಆಕ್ಸೈಡ್ ಹೊರಸೂಸುವಿಕೆಯ ಪ್ರಮಾಣ 36.7 ಶತಕೋಟಿ ಮೆಟ್ರಿಕ್ ಟನ್‌ಗಳಿಗೆ ಹೋಲಿಸಿದರೆ 2021 ರಲ್ಲಿ ಪ್ರಪಂಚವು 36.4 ಶತಕೋಟಿ ಮೆಟ್ರಿಕ್ ಟನ್ ಇಂಗಾಲದ ಡೈಆಕ್ಸೈಡ್ ಅನ್ನು ಹೊರಹಾಕಿದೆ ಎಂದು ಅವರು ಅಂದಾಜಿಸಿದ್ದಾರೆ.

ಕಳೆದ ವರ್ಷ ಕೊರೊನಾ ಅಲೆಯು ಉತ್ತುಂಗದಲ್ಲಿದ್ದಾಗ, ಹೊರಸೂಸುವಿಕೆಯು 34.8 ಶತಕೋಟಿ ಮೆಟ್ರಿಕ್ ಟನ್‌ಗಳಿಗೆ ಕಡಿಮೆಯಾಗಿತ್ತು. ಆದರೆ, ಇದೀಗ ಗ್ಲೋಬಲ್ ಕಾರ್ಬನ್ ಪ್ರಾಜೆಕ್ಟ್‌ನ ನವೀಕರಿಸಿದ ಲೆಕ್ಕಾಚಾರಗಳ ಪ್ರಕಾರ ಈ ವರ್ಷ ಇಂಗಾಲ ಹೊರಸೂಸುವಿಕೆಯ ಪ್ರಮಾಣ ಶೇ. 4.9% ಏರಿಕೆಯಾಗಿದೆ.

“ಹೆಚ್ಚಿನ ದೇಶಗಳು ಕೊರೊನಾ ವೈರಸ್‌ ಪತ್ತೆಯಾಗುವುದಕ್ಕೂ ಮೊದಲಿದ್ದ ಪ್ರವೃತ್ತಿಗೆ ಹಿಂತಿರುಗಿವೆ. ಆ ಎಲ್ಲಾ ದೇಶಗಳಲ್ಲಿಯೂ ಇಂಗಾಲ ಹೊರಸೂಸುವಿಕೆ ಮತ್ತೆ ಹೆಚ್ಚಾಗಿದೆ. ಈ ಪೈಕಿ, ಚೀನಾದಲ್ಲಿನ ಮಾಲಿನ್ಯ ಹೆಚ್ಚಳವು ವಿಶ್ವಾದ್ಯಂತ ಅಂಕಿಅಂಶಗಳು 2019 ರ ಮಾಲಿನ್ಯ ಮಟ್ಟಕ್ಕೆ ಹಿಂದಿರುಗಲು ಹೆಚ್ಚಿನ ಕಾರಣವಾಗಿದೆ” ಎಂದು ಯುನೈಟೆಡ್ ಕಿಂಗ್‌ಡಂನ ಈಸ್ಟ್ ಆಂಗ್ಲಿಯಾ ವಿಶ್ವವಿದ್ಯಾಲಯದ ಹವಾಮಾನ ವಿಜ್ಞಾನಿ, ಅಧ್ಯಯನ ಸಹ-ಲೇಖಕ ಕೊರಿನ್ನೆ ಲೆಕ್ವೆರ್ ಹೇಳಿದ್ದಾರೆ.

ಭಾರತದಿಂದ ಇಟಲಿಯವರೆಗಿನ ನಗರಗಳಲ್ಲಿ 2020ರ ಅವಧಿಯಲ್ಲಿ ನಾಟಕೀಯವಾಗಿ ಇಂಗಾಲದ ಮಾಲಿನ್ಯವನ್ನು ಕಡಿಮೆಯಾಗುವುದರ ಜೊತೆಗೆ ಶುದ್ದ ಗಾಳಿ ಹೆಚ್ಚುವಂತೆ ಮಾಡುವಲ್ಲಿ ಜಗತ್ತು ಸರಿಯಾದ ಹಾದಿಯಲ್ಲಿದೆ ಎಂದು ಕೆಲವರು ಭಾವಿಸಿರಬಹುದು, ಆದರೆ ವಿಜ್ಞಾನಿಗಳು ಅದು ನಿಜವಲ್ಲ ಎಂದು ಹೇಳಿದ್ದಾರೆ.

“ಪ್ರಪಂಚವು ಜಾಗತಿಕ ತಾಪಮಾನ ಏರಿಕೆಯನ್ನು ಕೈಗಾರಿಕೆಗಳ ಉದಯಕ್ಕೂ ಮೊದಲಿದ್ದ 1.5 ಡಿಗ್ರಿ ಸೆಲ್ಸಿಯಸ್ (2.7 ಡಿಗ್ರಿ ಫ್ಯಾರನ್‌ಹೀಟ್) ಗೆ ಮಿತಿಗೊಳಿಸುವ ಉದ್ದೇಶವನ್ನು ಹೊಂದಿದ್ದರೆ, ಅದನ್ನು ತ್ವರಿತವಾಗಿ ಆರಂಭಿಸಬೇಕು. ಪ್ರಸ್ತುತ ಹೊರಸೂಸುವಿಕೆಯ ಮಟ್ಟವನ್ನು ಗಮನಿದರೆ ಕೇವಲ 11 ವರ್ಷಗಳು ಮಾತ್ರ ಉಳಿದಿವೆ” ಎಂದು ಅಧ್ಯಯನ ವರದಿ ಹೇಳಿದೆ.

1800ರ ದಶಕದ ಅಂತ್ಯದಿಂದ ಪ್ರಪಂಚವು 1.1 ಡಿಗ್ರಿ ಸೆಲ್ಸಿಯಸ್ (2 ಡಿಗ್ರಿ ಫ್ಯಾರನ್‌ಹೀಟ್) ಅನ್ನು ಹೊಂದಿತ್ತು.

“ಇಂಗಾಲದ ಹೊರಸೂಸುವಿಕೆ ಸಂಖ್ಯೆಗಳು ತೋರಿಸುವುದೇನೆಂದರೆ, ಹೊರಸೂಸುವಿಕೆಗಳು (COVID-19 ಸಮಯದಲ್ಲಿ) ಈಗ ಮೂಲತಃ ಸಮತಟ್ಟಾಗಿದೆ ಅಥವಾ ಕಡಿಮೆಯಾಗಿದೆ. ಅದು ಒಳ್ಳೆಯ ಸುದ್ದಿ. ಅದರೆ, ಕೆಟ್ಟ ಸುದ್ದಿ ಎಂದರೆ ಅದು ಸಾಕಾಗುವುದಿಲ್ಲ. ನಾವು ಹೊರಸೂಸುವಿಕೆಯನ್ನು ಇಳಿಸಲು ಪ್ರಾರಂಭಿಸಬೇಕು” ಎಂದು ವರದಿಯ ಭಾಗವಾಗದ ಪೆನ್ಸಿಲ್ವೇನಿಯಾ ಸ್ಟೇಟ್ ಯೂನಿವರ್ಸಿಟಿ ಹವಾಮಾನ ವಿಜ್ಞಾನಿ ಮೈಕೆಲ್ ಮನ್ ಹೇಳಿದ್ದಾರೆ.

2019 ಕ್ಕೆ ಹೋಲಿಸಿದರೆ 2021 ರಲ್ಲಿ ಚೀನಾದಲ್ಲಿ ಹೊರಸೂಸುವಿಕೆ 7% ಹೆಚ್ಚಾಗಿದೆ. ಅದೇ ರೀತಿ, ಭಾರತದ ಹೊರಸೂಸುವಿಕೆ 3% ಹೆಚ್ಚಾಗಿದೆ ಎಂದು ಅಧ್ಯಯನ ಹೇಳಿದೆ.

ಇದಕ್ಕೆ ವ್ಯತಿರಿಕ್ತವಾಗಿ, ಯುನೈಟೆಡ್ ಸ್ಟೇಟ್ಸ್, ಯುರೋಪಿಯನ್ ಯೂನಿಯನ್ ಮತ್ತು ಪ್ರಪಂಚದ ಉಳಿದ ಭಾಗಗಳು 2019ಕ್ಕೆ ಹೋಲಿಸಿದರೆ, ಈ ವರ್ಷ ಕಡಿಮೆ ಮಾಲಿನ್ಯವನ್ನು ಹೊಂದಿವೆ.

ಚೀನಾದ ಮಾಲಿನ್ಯ ಜಿಗಿತಕ್ಕೆ ಹೆಚ್ಚಾಗಿ ಕಲ್ಲಿದ್ದಲು ಮತ್ತು ನೈಸರ್ಗಿಕ ಅನಿಲವನ್ನು ಸುಡುವುದರಿಂದ ಮತ್ತು ಲಾಕ್‌ಡೌನ್‌ನಿಂದ ಚೇತರಿಸಿಕೊಳ್ಳಲು ಬೃಹತ್ ಆರ್ಥಿಕ ಪ್ರಚೋದನೆಯೇ ಕಾರಣವಾಗಿದೆ ಎಂದು ಲೆಕ್ವೆರ್ ಹೇಳಿದ್ದಾರೆ.

ಅಂಕಿಅಂಶಗಳು ವಿದ್ಯುತ್ ಬಳಕೆ, ಪ್ರಯಾಣ, ಕೈಗಾರಿಕಾ ಉತ್ಪಾದನೆ ಮತ್ತು ಇತರ ಅಂಶಗಳ ಮೇಲೆ ಸರ್ಕಾರಗಳ ಡೇಟಾವನ್ನು ಆಧರಿಸಿವೆ. ಈ ವರ್ಷ ಹೊರಸೂಸುವಿಕೆಯು ಪ್ರತಿ ಸೆಕೆಂಡಿಗೆ ಸರಾಸರಿ 115 ಮೆಟ್ರಿಕ್ ಟನ್ ಇಂಗಾಲದ ಡೈಆಕ್ಸೈಡ್ ಗಾಳಿಯನ್ನು ಸೇರುತ್ತಿದೆ.

ಆಧಾರ: ಇಂಡಿಯನ್ ಎಕ್ಸ್‌ಪ್ರೆಸ್


ಇದನ್ನೂ ಓದಿ: ಉಪಚುನಾವಣೆ ಸೋಲಿನಿಂದಾಗಿ ಕೇಂದ್ರವು ಪೆಟ್ರೋಲ್, ಡೀಸೆಲ್ ತೆರಿಗೆ ಕಡಿತಗೊಳಿಸಿದೆ: ಪಿ ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...