Homeಅಂತರಾಷ್ಟ್ರೀಯಕೊರೊನಾ ನಂತರ ಮತ್ತೆ ಜಾಗತಿಕ ಮಾಲಿನ್ಯ ಮಟ್ಟದಲ್ಲಿ ಏರಿಕೆ: ಅಧ್ಯಯನ ವರದಿ

ಕೊರೊನಾ ನಂತರ ಮತ್ತೆ ಜಾಗತಿಕ ಮಾಲಿನ್ಯ ಮಟ್ಟದಲ್ಲಿ ಏರಿಕೆ: ಅಧ್ಯಯನ ವರದಿ

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಎಲ್ಲಾ ರೀತಿಯ ಕೈಗಾರಿಕೆಗಳು ಮತ್ತು ಸಾರಿಗೆ ಕ್ಷೇತ್ರ ಸ್ಥಗಿತಗೊಂಡಿದ್ದರಿಂದ ಇಳಿಕೆಯಾಗಿದ್ದ ಇಂಗಾಲದ ಡೈಆಕ್ಸೈಡ್ ಹೊರಸೂಸುವಿಕೆಯು ಇದೀಗ ಮತ್ತೆ ಹೆಚ್ಚುತ್ತಿದೆ. ಮತ್ತೆ ಹೆಚ್ಚುತ್ತಿರುವ ಇಂಗಾಲದ ಹೊರಸೂಸುವಿಕೆಯಲ್ಲಿ ಚೀನಾದ ಪಾತ್ರ ಹೆಚ್ಚಿದೆ ಎಂದು ಹೊಸ ವೈಜ್ಞಾನಿಕ ಅಧ್ಯಯನವು ಹೇಳಿದೆ.

ಹವಾಮಾನ ಬದಲಾವಣೆಗೆ ಕಾರಣವಾಗುವ ಹೀಟ್‌-ಟ್ರ್ಯಾಪಿಂಗ್ ಅನಿಲಗಳನ್ನು ಪತ್ತೆಹಚ್ಚುವ ವಿಜ್ಞಾನಿಗಳ ಗುಂಪು ಅಧ್ಯಯನ ನಡೆಸಿದ್ದು, ಈ ವರ್ಷದ ಮೊದಲ ಒಂಬತ್ತು ತಿಂಗಳುಗಳಲ್ಲಿನ ಹೊರಸೂಸುವಿಕೆಯು 2019 ರ ಮಟ್ಟಕ್ಕಿಂತ ಸ್ವಲ್ಪ ಮಾತ್ರವೇ ಕಡಿಮೆ ಇದೆ ಎಂದು ಹೇಳಿದ್ದಾರೆ.

ಎರಡು ವರ್ಷಗಳ ಹಿಂದೆ ಲಾಕ್‌ಡೌನ್‌ಗೂ ಮುಂಚಿತವಾಗಿ ಇದ್ದ ಇಂಗಾಲದ ಡೈಆಕ್ಸೈಡ್ ಹೊರಸೂಸುವಿಕೆಯ ಪ್ರಮಾಣ 36.7 ಶತಕೋಟಿ ಮೆಟ್ರಿಕ್ ಟನ್‌ಗಳಿಗೆ ಹೋಲಿಸಿದರೆ 2021 ರಲ್ಲಿ ಪ್ರಪಂಚವು 36.4 ಶತಕೋಟಿ ಮೆಟ್ರಿಕ್ ಟನ್ ಇಂಗಾಲದ ಡೈಆಕ್ಸೈಡ್ ಅನ್ನು ಹೊರಹಾಕಿದೆ ಎಂದು ಅವರು ಅಂದಾಜಿಸಿದ್ದಾರೆ.

ಕಳೆದ ವರ್ಷ ಕೊರೊನಾ ಅಲೆಯು ಉತ್ತುಂಗದಲ್ಲಿದ್ದಾಗ, ಹೊರಸೂಸುವಿಕೆಯು 34.8 ಶತಕೋಟಿ ಮೆಟ್ರಿಕ್ ಟನ್‌ಗಳಿಗೆ ಕಡಿಮೆಯಾಗಿತ್ತು. ಆದರೆ, ಇದೀಗ ಗ್ಲೋಬಲ್ ಕಾರ್ಬನ್ ಪ್ರಾಜೆಕ್ಟ್‌ನ ನವೀಕರಿಸಿದ ಲೆಕ್ಕಾಚಾರಗಳ ಪ್ರಕಾರ ಈ ವರ್ಷ ಇಂಗಾಲ ಹೊರಸೂಸುವಿಕೆಯ ಪ್ರಮಾಣ ಶೇ. 4.9% ಏರಿಕೆಯಾಗಿದೆ.

“ಹೆಚ್ಚಿನ ದೇಶಗಳು ಕೊರೊನಾ ವೈರಸ್‌ ಪತ್ತೆಯಾಗುವುದಕ್ಕೂ ಮೊದಲಿದ್ದ ಪ್ರವೃತ್ತಿಗೆ ಹಿಂತಿರುಗಿವೆ. ಆ ಎಲ್ಲಾ ದೇಶಗಳಲ್ಲಿಯೂ ಇಂಗಾಲ ಹೊರಸೂಸುವಿಕೆ ಮತ್ತೆ ಹೆಚ್ಚಾಗಿದೆ. ಈ ಪೈಕಿ, ಚೀನಾದಲ್ಲಿನ ಮಾಲಿನ್ಯ ಹೆಚ್ಚಳವು ವಿಶ್ವಾದ್ಯಂತ ಅಂಕಿಅಂಶಗಳು 2019 ರ ಮಾಲಿನ್ಯ ಮಟ್ಟಕ್ಕೆ ಹಿಂದಿರುಗಲು ಹೆಚ್ಚಿನ ಕಾರಣವಾಗಿದೆ” ಎಂದು ಯುನೈಟೆಡ್ ಕಿಂಗ್‌ಡಂನ ಈಸ್ಟ್ ಆಂಗ್ಲಿಯಾ ವಿಶ್ವವಿದ್ಯಾಲಯದ ಹವಾಮಾನ ವಿಜ್ಞಾನಿ, ಅಧ್ಯಯನ ಸಹ-ಲೇಖಕ ಕೊರಿನ್ನೆ ಲೆಕ್ವೆರ್ ಹೇಳಿದ್ದಾರೆ.

ಭಾರತದಿಂದ ಇಟಲಿಯವರೆಗಿನ ನಗರಗಳಲ್ಲಿ 2020ರ ಅವಧಿಯಲ್ಲಿ ನಾಟಕೀಯವಾಗಿ ಇಂಗಾಲದ ಮಾಲಿನ್ಯವನ್ನು ಕಡಿಮೆಯಾಗುವುದರ ಜೊತೆಗೆ ಶುದ್ದ ಗಾಳಿ ಹೆಚ್ಚುವಂತೆ ಮಾಡುವಲ್ಲಿ ಜಗತ್ತು ಸರಿಯಾದ ಹಾದಿಯಲ್ಲಿದೆ ಎಂದು ಕೆಲವರು ಭಾವಿಸಿರಬಹುದು, ಆದರೆ ವಿಜ್ಞಾನಿಗಳು ಅದು ನಿಜವಲ್ಲ ಎಂದು ಹೇಳಿದ್ದಾರೆ.

“ಪ್ರಪಂಚವು ಜಾಗತಿಕ ತಾಪಮಾನ ಏರಿಕೆಯನ್ನು ಕೈಗಾರಿಕೆಗಳ ಉದಯಕ್ಕೂ ಮೊದಲಿದ್ದ 1.5 ಡಿಗ್ರಿ ಸೆಲ್ಸಿಯಸ್ (2.7 ಡಿಗ್ರಿ ಫ್ಯಾರನ್‌ಹೀಟ್) ಗೆ ಮಿತಿಗೊಳಿಸುವ ಉದ್ದೇಶವನ್ನು ಹೊಂದಿದ್ದರೆ, ಅದನ್ನು ತ್ವರಿತವಾಗಿ ಆರಂಭಿಸಬೇಕು. ಪ್ರಸ್ತುತ ಹೊರಸೂಸುವಿಕೆಯ ಮಟ್ಟವನ್ನು ಗಮನಿದರೆ ಕೇವಲ 11 ವರ್ಷಗಳು ಮಾತ್ರ ಉಳಿದಿವೆ” ಎಂದು ಅಧ್ಯಯನ ವರದಿ ಹೇಳಿದೆ.

1800ರ ದಶಕದ ಅಂತ್ಯದಿಂದ ಪ್ರಪಂಚವು 1.1 ಡಿಗ್ರಿ ಸೆಲ್ಸಿಯಸ್ (2 ಡಿಗ್ರಿ ಫ್ಯಾರನ್‌ಹೀಟ್) ಅನ್ನು ಹೊಂದಿತ್ತು.

“ಇಂಗಾಲದ ಹೊರಸೂಸುವಿಕೆ ಸಂಖ್ಯೆಗಳು ತೋರಿಸುವುದೇನೆಂದರೆ, ಹೊರಸೂಸುವಿಕೆಗಳು (COVID-19 ಸಮಯದಲ್ಲಿ) ಈಗ ಮೂಲತಃ ಸಮತಟ್ಟಾಗಿದೆ ಅಥವಾ ಕಡಿಮೆಯಾಗಿದೆ. ಅದು ಒಳ್ಳೆಯ ಸುದ್ದಿ. ಅದರೆ, ಕೆಟ್ಟ ಸುದ್ದಿ ಎಂದರೆ ಅದು ಸಾಕಾಗುವುದಿಲ್ಲ. ನಾವು ಹೊರಸೂಸುವಿಕೆಯನ್ನು ಇಳಿಸಲು ಪ್ರಾರಂಭಿಸಬೇಕು” ಎಂದು ವರದಿಯ ಭಾಗವಾಗದ ಪೆನ್ಸಿಲ್ವೇನಿಯಾ ಸ್ಟೇಟ್ ಯೂನಿವರ್ಸಿಟಿ ಹವಾಮಾನ ವಿಜ್ಞಾನಿ ಮೈಕೆಲ್ ಮನ್ ಹೇಳಿದ್ದಾರೆ.

2019 ಕ್ಕೆ ಹೋಲಿಸಿದರೆ 2021 ರಲ್ಲಿ ಚೀನಾದಲ್ಲಿ ಹೊರಸೂಸುವಿಕೆ 7% ಹೆಚ್ಚಾಗಿದೆ. ಅದೇ ರೀತಿ, ಭಾರತದ ಹೊರಸೂಸುವಿಕೆ 3% ಹೆಚ್ಚಾಗಿದೆ ಎಂದು ಅಧ್ಯಯನ ಹೇಳಿದೆ.

ಇದಕ್ಕೆ ವ್ಯತಿರಿಕ್ತವಾಗಿ, ಯುನೈಟೆಡ್ ಸ್ಟೇಟ್ಸ್, ಯುರೋಪಿಯನ್ ಯೂನಿಯನ್ ಮತ್ತು ಪ್ರಪಂಚದ ಉಳಿದ ಭಾಗಗಳು 2019ಕ್ಕೆ ಹೋಲಿಸಿದರೆ, ಈ ವರ್ಷ ಕಡಿಮೆ ಮಾಲಿನ್ಯವನ್ನು ಹೊಂದಿವೆ.

ಚೀನಾದ ಮಾಲಿನ್ಯ ಜಿಗಿತಕ್ಕೆ ಹೆಚ್ಚಾಗಿ ಕಲ್ಲಿದ್ದಲು ಮತ್ತು ನೈಸರ್ಗಿಕ ಅನಿಲವನ್ನು ಸುಡುವುದರಿಂದ ಮತ್ತು ಲಾಕ್‌ಡೌನ್‌ನಿಂದ ಚೇತರಿಸಿಕೊಳ್ಳಲು ಬೃಹತ್ ಆರ್ಥಿಕ ಪ್ರಚೋದನೆಯೇ ಕಾರಣವಾಗಿದೆ ಎಂದು ಲೆಕ್ವೆರ್ ಹೇಳಿದ್ದಾರೆ.

ಅಂಕಿಅಂಶಗಳು ವಿದ್ಯುತ್ ಬಳಕೆ, ಪ್ರಯಾಣ, ಕೈಗಾರಿಕಾ ಉತ್ಪಾದನೆ ಮತ್ತು ಇತರ ಅಂಶಗಳ ಮೇಲೆ ಸರ್ಕಾರಗಳ ಡೇಟಾವನ್ನು ಆಧರಿಸಿವೆ. ಈ ವರ್ಷ ಹೊರಸೂಸುವಿಕೆಯು ಪ್ರತಿ ಸೆಕೆಂಡಿಗೆ ಸರಾಸರಿ 115 ಮೆಟ್ರಿಕ್ ಟನ್ ಇಂಗಾಲದ ಡೈಆಕ್ಸೈಡ್ ಗಾಳಿಯನ್ನು ಸೇರುತ್ತಿದೆ.

ಆಧಾರ: ಇಂಡಿಯನ್ ಎಕ್ಸ್‌ಪ್ರೆಸ್


ಇದನ್ನೂ ಓದಿ: ಉಪಚುನಾವಣೆ ಸೋಲಿನಿಂದಾಗಿ ಕೇಂದ್ರವು ಪೆಟ್ರೋಲ್, ಡೀಸೆಲ್ ತೆರಿಗೆ ಕಡಿತಗೊಳಿಸಿದೆ: ಪಿ ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...