Homeಅಂತರಾಷ್ಟ್ರೀಯಕೊರೊನಾ ನಂತರ ಮತ್ತೆ ಜಾಗತಿಕ ಮಾಲಿನ್ಯ ಮಟ್ಟದಲ್ಲಿ ಏರಿಕೆ: ಅಧ್ಯಯನ ವರದಿ

ಕೊರೊನಾ ನಂತರ ಮತ್ತೆ ಜಾಗತಿಕ ಮಾಲಿನ್ಯ ಮಟ್ಟದಲ್ಲಿ ಏರಿಕೆ: ಅಧ್ಯಯನ ವರದಿ

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಎಲ್ಲಾ ರೀತಿಯ ಕೈಗಾರಿಕೆಗಳು ಮತ್ತು ಸಾರಿಗೆ ಕ್ಷೇತ್ರ ಸ್ಥಗಿತಗೊಂಡಿದ್ದರಿಂದ ಇಳಿಕೆಯಾಗಿದ್ದ ಇಂಗಾಲದ ಡೈಆಕ್ಸೈಡ್ ಹೊರಸೂಸುವಿಕೆಯು ಇದೀಗ ಮತ್ತೆ ಹೆಚ್ಚುತ್ತಿದೆ. ಮತ್ತೆ ಹೆಚ್ಚುತ್ತಿರುವ ಇಂಗಾಲದ ಹೊರಸೂಸುವಿಕೆಯಲ್ಲಿ ಚೀನಾದ ಪಾತ್ರ ಹೆಚ್ಚಿದೆ ಎಂದು ಹೊಸ ವೈಜ್ಞಾನಿಕ ಅಧ್ಯಯನವು ಹೇಳಿದೆ.

ಹವಾಮಾನ ಬದಲಾವಣೆಗೆ ಕಾರಣವಾಗುವ ಹೀಟ್‌-ಟ್ರ್ಯಾಪಿಂಗ್ ಅನಿಲಗಳನ್ನು ಪತ್ತೆಹಚ್ಚುವ ವಿಜ್ಞಾನಿಗಳ ಗುಂಪು ಅಧ್ಯಯನ ನಡೆಸಿದ್ದು, ಈ ವರ್ಷದ ಮೊದಲ ಒಂಬತ್ತು ತಿಂಗಳುಗಳಲ್ಲಿನ ಹೊರಸೂಸುವಿಕೆಯು 2019 ರ ಮಟ್ಟಕ್ಕಿಂತ ಸ್ವಲ್ಪ ಮಾತ್ರವೇ ಕಡಿಮೆ ಇದೆ ಎಂದು ಹೇಳಿದ್ದಾರೆ.

ಎರಡು ವರ್ಷಗಳ ಹಿಂದೆ ಲಾಕ್‌ಡೌನ್‌ಗೂ ಮುಂಚಿತವಾಗಿ ಇದ್ದ ಇಂಗಾಲದ ಡೈಆಕ್ಸೈಡ್ ಹೊರಸೂಸುವಿಕೆಯ ಪ್ರಮಾಣ 36.7 ಶತಕೋಟಿ ಮೆಟ್ರಿಕ್ ಟನ್‌ಗಳಿಗೆ ಹೋಲಿಸಿದರೆ 2021 ರಲ್ಲಿ ಪ್ರಪಂಚವು 36.4 ಶತಕೋಟಿ ಮೆಟ್ರಿಕ್ ಟನ್ ಇಂಗಾಲದ ಡೈಆಕ್ಸೈಡ್ ಅನ್ನು ಹೊರಹಾಕಿದೆ ಎಂದು ಅವರು ಅಂದಾಜಿಸಿದ್ದಾರೆ.

ಕಳೆದ ವರ್ಷ ಕೊರೊನಾ ಅಲೆಯು ಉತ್ತುಂಗದಲ್ಲಿದ್ದಾಗ, ಹೊರಸೂಸುವಿಕೆಯು 34.8 ಶತಕೋಟಿ ಮೆಟ್ರಿಕ್ ಟನ್‌ಗಳಿಗೆ ಕಡಿಮೆಯಾಗಿತ್ತು. ಆದರೆ, ಇದೀಗ ಗ್ಲೋಬಲ್ ಕಾರ್ಬನ್ ಪ್ರಾಜೆಕ್ಟ್‌ನ ನವೀಕರಿಸಿದ ಲೆಕ್ಕಾಚಾರಗಳ ಪ್ರಕಾರ ಈ ವರ್ಷ ಇಂಗಾಲ ಹೊರಸೂಸುವಿಕೆಯ ಪ್ರಮಾಣ ಶೇ. 4.9% ಏರಿಕೆಯಾಗಿದೆ.

“ಹೆಚ್ಚಿನ ದೇಶಗಳು ಕೊರೊನಾ ವೈರಸ್‌ ಪತ್ತೆಯಾಗುವುದಕ್ಕೂ ಮೊದಲಿದ್ದ ಪ್ರವೃತ್ತಿಗೆ ಹಿಂತಿರುಗಿವೆ. ಆ ಎಲ್ಲಾ ದೇಶಗಳಲ್ಲಿಯೂ ಇಂಗಾಲ ಹೊರಸೂಸುವಿಕೆ ಮತ್ತೆ ಹೆಚ್ಚಾಗಿದೆ. ಈ ಪೈಕಿ, ಚೀನಾದಲ್ಲಿನ ಮಾಲಿನ್ಯ ಹೆಚ್ಚಳವು ವಿಶ್ವಾದ್ಯಂತ ಅಂಕಿಅಂಶಗಳು 2019 ರ ಮಾಲಿನ್ಯ ಮಟ್ಟಕ್ಕೆ ಹಿಂದಿರುಗಲು ಹೆಚ್ಚಿನ ಕಾರಣವಾಗಿದೆ” ಎಂದು ಯುನೈಟೆಡ್ ಕಿಂಗ್‌ಡಂನ ಈಸ್ಟ್ ಆಂಗ್ಲಿಯಾ ವಿಶ್ವವಿದ್ಯಾಲಯದ ಹವಾಮಾನ ವಿಜ್ಞಾನಿ, ಅಧ್ಯಯನ ಸಹ-ಲೇಖಕ ಕೊರಿನ್ನೆ ಲೆಕ್ವೆರ್ ಹೇಳಿದ್ದಾರೆ.

ಭಾರತದಿಂದ ಇಟಲಿಯವರೆಗಿನ ನಗರಗಳಲ್ಲಿ 2020ರ ಅವಧಿಯಲ್ಲಿ ನಾಟಕೀಯವಾಗಿ ಇಂಗಾಲದ ಮಾಲಿನ್ಯವನ್ನು ಕಡಿಮೆಯಾಗುವುದರ ಜೊತೆಗೆ ಶುದ್ದ ಗಾಳಿ ಹೆಚ್ಚುವಂತೆ ಮಾಡುವಲ್ಲಿ ಜಗತ್ತು ಸರಿಯಾದ ಹಾದಿಯಲ್ಲಿದೆ ಎಂದು ಕೆಲವರು ಭಾವಿಸಿರಬಹುದು, ಆದರೆ ವಿಜ್ಞಾನಿಗಳು ಅದು ನಿಜವಲ್ಲ ಎಂದು ಹೇಳಿದ್ದಾರೆ.

“ಪ್ರಪಂಚವು ಜಾಗತಿಕ ತಾಪಮಾನ ಏರಿಕೆಯನ್ನು ಕೈಗಾರಿಕೆಗಳ ಉದಯಕ್ಕೂ ಮೊದಲಿದ್ದ 1.5 ಡಿಗ್ರಿ ಸೆಲ್ಸಿಯಸ್ (2.7 ಡಿಗ್ರಿ ಫ್ಯಾರನ್‌ಹೀಟ್) ಗೆ ಮಿತಿಗೊಳಿಸುವ ಉದ್ದೇಶವನ್ನು ಹೊಂದಿದ್ದರೆ, ಅದನ್ನು ತ್ವರಿತವಾಗಿ ಆರಂಭಿಸಬೇಕು. ಪ್ರಸ್ತುತ ಹೊರಸೂಸುವಿಕೆಯ ಮಟ್ಟವನ್ನು ಗಮನಿದರೆ ಕೇವಲ 11 ವರ್ಷಗಳು ಮಾತ್ರ ಉಳಿದಿವೆ” ಎಂದು ಅಧ್ಯಯನ ವರದಿ ಹೇಳಿದೆ.

1800ರ ದಶಕದ ಅಂತ್ಯದಿಂದ ಪ್ರಪಂಚವು 1.1 ಡಿಗ್ರಿ ಸೆಲ್ಸಿಯಸ್ (2 ಡಿಗ್ರಿ ಫ್ಯಾರನ್‌ಹೀಟ್) ಅನ್ನು ಹೊಂದಿತ್ತು.

“ಇಂಗಾಲದ ಹೊರಸೂಸುವಿಕೆ ಸಂಖ್ಯೆಗಳು ತೋರಿಸುವುದೇನೆಂದರೆ, ಹೊರಸೂಸುವಿಕೆಗಳು (COVID-19 ಸಮಯದಲ್ಲಿ) ಈಗ ಮೂಲತಃ ಸಮತಟ್ಟಾಗಿದೆ ಅಥವಾ ಕಡಿಮೆಯಾಗಿದೆ. ಅದು ಒಳ್ಳೆಯ ಸುದ್ದಿ. ಅದರೆ, ಕೆಟ್ಟ ಸುದ್ದಿ ಎಂದರೆ ಅದು ಸಾಕಾಗುವುದಿಲ್ಲ. ನಾವು ಹೊರಸೂಸುವಿಕೆಯನ್ನು ಇಳಿಸಲು ಪ್ರಾರಂಭಿಸಬೇಕು” ಎಂದು ವರದಿಯ ಭಾಗವಾಗದ ಪೆನ್ಸಿಲ್ವೇನಿಯಾ ಸ್ಟೇಟ್ ಯೂನಿವರ್ಸಿಟಿ ಹವಾಮಾನ ವಿಜ್ಞಾನಿ ಮೈಕೆಲ್ ಮನ್ ಹೇಳಿದ್ದಾರೆ.

2019 ಕ್ಕೆ ಹೋಲಿಸಿದರೆ 2021 ರಲ್ಲಿ ಚೀನಾದಲ್ಲಿ ಹೊರಸೂಸುವಿಕೆ 7% ಹೆಚ್ಚಾಗಿದೆ. ಅದೇ ರೀತಿ, ಭಾರತದ ಹೊರಸೂಸುವಿಕೆ 3% ಹೆಚ್ಚಾಗಿದೆ ಎಂದು ಅಧ್ಯಯನ ಹೇಳಿದೆ.

ಇದಕ್ಕೆ ವ್ಯತಿರಿಕ್ತವಾಗಿ, ಯುನೈಟೆಡ್ ಸ್ಟೇಟ್ಸ್, ಯುರೋಪಿಯನ್ ಯೂನಿಯನ್ ಮತ್ತು ಪ್ರಪಂಚದ ಉಳಿದ ಭಾಗಗಳು 2019ಕ್ಕೆ ಹೋಲಿಸಿದರೆ, ಈ ವರ್ಷ ಕಡಿಮೆ ಮಾಲಿನ್ಯವನ್ನು ಹೊಂದಿವೆ.

ಚೀನಾದ ಮಾಲಿನ್ಯ ಜಿಗಿತಕ್ಕೆ ಹೆಚ್ಚಾಗಿ ಕಲ್ಲಿದ್ದಲು ಮತ್ತು ನೈಸರ್ಗಿಕ ಅನಿಲವನ್ನು ಸುಡುವುದರಿಂದ ಮತ್ತು ಲಾಕ್‌ಡೌನ್‌ನಿಂದ ಚೇತರಿಸಿಕೊಳ್ಳಲು ಬೃಹತ್ ಆರ್ಥಿಕ ಪ್ರಚೋದನೆಯೇ ಕಾರಣವಾಗಿದೆ ಎಂದು ಲೆಕ್ವೆರ್ ಹೇಳಿದ್ದಾರೆ.

ಅಂಕಿಅಂಶಗಳು ವಿದ್ಯುತ್ ಬಳಕೆ, ಪ್ರಯಾಣ, ಕೈಗಾರಿಕಾ ಉತ್ಪಾದನೆ ಮತ್ತು ಇತರ ಅಂಶಗಳ ಮೇಲೆ ಸರ್ಕಾರಗಳ ಡೇಟಾವನ್ನು ಆಧರಿಸಿವೆ. ಈ ವರ್ಷ ಹೊರಸೂಸುವಿಕೆಯು ಪ್ರತಿ ಸೆಕೆಂಡಿಗೆ ಸರಾಸರಿ 115 ಮೆಟ್ರಿಕ್ ಟನ್ ಇಂಗಾಲದ ಡೈಆಕ್ಸೈಡ್ ಗಾಳಿಯನ್ನು ಸೇರುತ್ತಿದೆ.

ಆಧಾರ: ಇಂಡಿಯನ್ ಎಕ್ಸ್‌ಪ್ರೆಸ್


ಇದನ್ನೂ ಓದಿ: ಉಪಚುನಾವಣೆ ಸೋಲಿನಿಂದಾಗಿ ಕೇಂದ್ರವು ಪೆಟ್ರೋಲ್, ಡೀಸೆಲ್ ತೆರಿಗೆ ಕಡಿತಗೊಳಿಸಿದೆ: ಪಿ ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...