Homeಅಂತರಾಷ್ಟ್ರೀಯಹೋರಾಟಕ್ಕೆ ಹೆಚ್ಚುತ್ತಿರುವ ಅಂತಾರಾಷ್ಟ್ರೀಯ ಬೆಂಬಲ: ರೈತರ ಬೆನ್ನಿಗೆ ನಿಂತ ‘ಲಿಲ್ಲಿ ಸಿಂಗ್’

ಹೋರಾಟಕ್ಕೆ ಹೆಚ್ಚುತ್ತಿರುವ ಅಂತಾರಾಷ್ಟ್ರೀಯ ಬೆಂಬಲ: ರೈತರ ಬೆನ್ನಿಗೆ ನಿಂತ ‘ಲಿಲ್ಲಿ ಸಿಂಗ್’

- Advertisement -
- Advertisement -

ದೇಶದಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಇದೀಗ ಅಂತರಾಷ್ಟ್ರೀಯ ಖ್ಯಾತಿಯ ಹಾಸ್ಯನಟಿ, ಯೂಟ್ಯೂಬರ್‌ ಲಿಲ್ಲಿ ಸಿಂಗ್ ಬೆಂಬಲ ನೀಡಿದ್ದಾರೆ. 63 ನೇ ಗ್ರ್ಯಾಮಿ ಪ್ರಶಸ್ತಿ ವೇದಿಕೆಯನ್ನುಅವರು ರೈತ ಆಂದೋಲನವನ್ನು ಬೆಂಬಲಿಸಲು ಬಳಸಿಕೊಂಡರು. ಅವರು ಗ್ರ್ಯಾಮಿ ಪ್ರಶಸ್ತಿ ಸಮಾರಂಭಕ್ಕೆ ಆಗಮಿಸುವಾಗ “ನಾನು ರೈತರ ಜೊತೆ ನಿಲ್ಲುತ್ತೇನೆ” ಎಂದು ಬರೆದಿರುವ ಮಾಸ್ಕ್‌ ಅನ್ನು ಧರಿಸಿದ್ದರು.

ಈ ಚಿತ್ರವನ್ನು ತನ್ನ ಟ್ವಿಟ್ಟರ್ ಪೇಜ್‌ನಲ್ಲಿ ಪೋಸ್ಟ್ ಮಾಡಿರುವ ಲಿಲ್ಲಿ ಸಿಂಗ್, “ರೆಡ್ ಕಾರ್ಪೆಟ್ / ಅವಾರ್ಡ್ ಶೋಗಳಲ್ಲಿನ ಚಿತ್ರಗಳು ಯಾವಾಗಲೂ ಹೆಚ್ಚಿನ ಪ್ರಚಾರ ಪಡೆಯುತ್ತದೆ. ಹೋರಾಟದೊಂದಿಗೆ ಇರಲು ಭಯಪಡಬೇಡಿ. #ನಾನು ರೈತರೊಂದಿಗೆ ನಿಲ್ಲುತ್ತೇನೆ #ಗ್ರ್ಯಾಮಿ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ಕಡು ಬೇಸಿಗೆ ಎದುರಿಸಲು ಸಿದ್ದರಾಗುತ್ತಿದ್ದಾರೆ ಅನ್ನದಾತರು!

ಲಿಲ್ಲಿ ಸಿಂಗ್ ಕೆನಡಾ ಮೂಲದ ಯೂಟ್ಯೂಬರ್, ಹಾಸ್ಯನಟಿಯಾಗಿದ್ದಾರೆ. 2010 ರಲ್ಲಿ ಯೂಟ್ಯೂಬ್ ವೀಡಿಯೊಗಳನ್ನು ಮಾಡಲು ಪ್ರಾರಂಭಿಸಿದ ಅವರು 2016 ರಲ್ಲಿ ವಿಶ್ವದ ಅತಿ ಹೆಚ್ಚು ಸಂಭಾವನೆ ಪಡೆಯುವ ಯೂಟ್ಯೂಬರ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಏರಿದ್ದರು. ಯೂಟ್ಯೂಬ್‌ನಲ್ಲಿ ಇದುವರೆಗೂ  1.49 ಕೋಟಿಗೂ ಅಧಿಕ ಸಬ್‌ಸ್ಕ್ರೈಬರ್‌‌ ಅನ್ನು ಹೊಂದಿದ್ದಾರೆ.

ಗ್ರ್ಯಾಮಿಸ್ ಪ್ರಶಸ್ತಿ ಪ್ರಧಾನ ಸಮಾರಂಭವು ವಿಶ್ವದ ಅತಿದೊಡ್ಡ ಸಂಗೀತ ತಾರೆಯರನ್ನು ಸ್ವಾಗತಿಸಿದ್ದು, ಈ ಕಾರ್ಯಕ್ರಮವನ್ನು ವಿಶ್ವದಾದ್ಯಂತ ಲಕ್ಷಾಂತರ ಜನರು ವೀಕ್ಷಿಸುತ್ತಾರೆ. ಮಾಡೆಲ್ ಅಮಂಡಾ ಸೆರ್ನಿ, ಡಬ್ಲ್ಯುಡಬ್ಲ್ಯುಇ ಕುಸ್ತಿಪಟು ಸುನಿಲ್ ಸಿಂಗ್ ಮತ್ತು ಭಾರತೀಯ ನಟಿ ಶ್ರುತಿ ಸೇಠ್ ಲಿಲ್ಲಿ ಸಿಂಗ್‌ ಅವರ ಟ್ವೀಟ್‌ಗಗೆ ಪ್ರತಿಕ್ರಿಯಿಸಿದ್ದಾರೆ.

ರೈತ ಹೋರಾಟಕ್ಕೆ ಅಂತರಾಷ್ಟ್ರೀಯ ಬೆಂಬಲ ಸಿಗುತ್ತಿರುವುದು ಇದುವೆ ಮೊದಲೇನಲ್ಲ. ಫೆಬ್ರವರಿಯ ಆರಂಭದಲ್ಲಿ ರೈತರನ್ನು ಬೆಂಬಲಿಸಿ ಜಾಗತಿಕ ಸಂಗೀತ ಐಕಾನ್ ರಿಹಾನ್ನಾ ಟ್ವೀಟ್ ಮಾಡಿದ್ದು ಭಾರಿ ಸುದ್ದಿಯಾಗಿತ್ತು. ಇದು ಹೋರಾಟಕ್ಕೆ ಇನ್ನಷ್ಟು ಅಂತಾರಾಷ್ಟ್ರೀಯ ಸಮುದಾಯದ ಬೆಂಬಲ ನೀಡುವಂತೆ ಮಾಡಿತ್ತು.

ಇದನ್ನೂ ಓದಿ: Breaking: ಮಾ. 26ಕ್ಕೆ ಸಂಪೂರ್ಣ ಭಾರತ್ ಬಂದ್ – ಹೋರಾಟನಿರತ ರೈತರ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಾಂಜಿ ಪಿಂಜಿ ಎಲ್ಲ ರೈತರ ಹೆಸರಲ್ಲಿ ಹಣ ಮಡ್ಕೊತ ಇದ್ದಾರೆ..ಜೊತೆಗೆ ರೈತರು ಎನಿಸಿ ಕೊoಡವರು ಬೆಂಗಾಲ್ ಚುನಾವಣಾ ಪ್ರಚಾರ ದಲ್ಲಿ ಕಾಂಗ್ರೆಸ್ ಪರ್ ಪ್ರಚಾರ ದಲ್ಲಿ ಇದ್ದಾರೆ ಹೀಗಾಗಿ ಅವರು ಯಾರು ಅಂತ ಪ್ರತ್ಯೇಕ ಹೇಳ ಬೇಕಾಗಿಲ್ಲ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...