Homeಅಂತರಾಷ್ಟ್ರೀಯಹೋರಾಟಕ್ಕೆ ಹೆಚ್ಚುತ್ತಿರುವ ಅಂತಾರಾಷ್ಟ್ರೀಯ ಬೆಂಬಲ: ರೈತರ ಬೆನ್ನಿಗೆ ನಿಂತ ‘ಲಿಲ್ಲಿ ಸಿಂಗ್’

ಹೋರಾಟಕ್ಕೆ ಹೆಚ್ಚುತ್ತಿರುವ ಅಂತಾರಾಷ್ಟ್ರೀಯ ಬೆಂಬಲ: ರೈತರ ಬೆನ್ನಿಗೆ ನಿಂತ ‘ಲಿಲ್ಲಿ ಸಿಂಗ್’

- Advertisement -
- Advertisement -

ದೇಶದಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಇದೀಗ ಅಂತರಾಷ್ಟ್ರೀಯ ಖ್ಯಾತಿಯ ಹಾಸ್ಯನಟಿ, ಯೂಟ್ಯೂಬರ್‌ ಲಿಲ್ಲಿ ಸಿಂಗ್ ಬೆಂಬಲ ನೀಡಿದ್ದಾರೆ. 63 ನೇ ಗ್ರ್ಯಾಮಿ ಪ್ರಶಸ್ತಿ ವೇದಿಕೆಯನ್ನುಅವರು ರೈತ ಆಂದೋಲನವನ್ನು ಬೆಂಬಲಿಸಲು ಬಳಸಿಕೊಂಡರು. ಅವರು ಗ್ರ್ಯಾಮಿ ಪ್ರಶಸ್ತಿ ಸಮಾರಂಭಕ್ಕೆ ಆಗಮಿಸುವಾಗ “ನಾನು ರೈತರ ಜೊತೆ ನಿಲ್ಲುತ್ತೇನೆ” ಎಂದು ಬರೆದಿರುವ ಮಾಸ್ಕ್‌ ಅನ್ನು ಧರಿಸಿದ್ದರು.

ಈ ಚಿತ್ರವನ್ನು ತನ್ನ ಟ್ವಿಟ್ಟರ್ ಪೇಜ್‌ನಲ್ಲಿ ಪೋಸ್ಟ್ ಮಾಡಿರುವ ಲಿಲ್ಲಿ ಸಿಂಗ್, “ರೆಡ್ ಕಾರ್ಪೆಟ್ / ಅವಾರ್ಡ್ ಶೋಗಳಲ್ಲಿನ ಚಿತ್ರಗಳು ಯಾವಾಗಲೂ ಹೆಚ್ಚಿನ ಪ್ರಚಾರ ಪಡೆಯುತ್ತದೆ. ಹೋರಾಟದೊಂದಿಗೆ ಇರಲು ಭಯಪಡಬೇಡಿ. #ನಾನು ರೈತರೊಂದಿಗೆ ನಿಲ್ಲುತ್ತೇನೆ #ಗ್ರ್ಯಾಮಿ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ಕಡು ಬೇಸಿಗೆ ಎದುರಿಸಲು ಸಿದ್ದರಾಗುತ್ತಿದ್ದಾರೆ ಅನ್ನದಾತರು!

ಲಿಲ್ಲಿ ಸಿಂಗ್ ಕೆನಡಾ ಮೂಲದ ಯೂಟ್ಯೂಬರ್, ಹಾಸ್ಯನಟಿಯಾಗಿದ್ದಾರೆ. 2010 ರಲ್ಲಿ ಯೂಟ್ಯೂಬ್ ವೀಡಿಯೊಗಳನ್ನು ಮಾಡಲು ಪ್ರಾರಂಭಿಸಿದ ಅವರು 2016 ರಲ್ಲಿ ವಿಶ್ವದ ಅತಿ ಹೆಚ್ಚು ಸಂಭಾವನೆ ಪಡೆಯುವ ಯೂಟ್ಯೂಬರ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಏರಿದ್ದರು. ಯೂಟ್ಯೂಬ್‌ನಲ್ಲಿ ಇದುವರೆಗೂ  1.49 ಕೋಟಿಗೂ ಅಧಿಕ ಸಬ್‌ಸ್ಕ್ರೈಬರ್‌‌ ಅನ್ನು ಹೊಂದಿದ್ದಾರೆ.

ಗ್ರ್ಯಾಮಿಸ್ ಪ್ರಶಸ್ತಿ ಪ್ರಧಾನ ಸಮಾರಂಭವು ವಿಶ್ವದ ಅತಿದೊಡ್ಡ ಸಂಗೀತ ತಾರೆಯರನ್ನು ಸ್ವಾಗತಿಸಿದ್ದು, ಈ ಕಾರ್ಯಕ್ರಮವನ್ನು ವಿಶ್ವದಾದ್ಯಂತ ಲಕ್ಷಾಂತರ ಜನರು ವೀಕ್ಷಿಸುತ್ತಾರೆ. ಮಾಡೆಲ್ ಅಮಂಡಾ ಸೆರ್ನಿ, ಡಬ್ಲ್ಯುಡಬ್ಲ್ಯುಇ ಕುಸ್ತಿಪಟು ಸುನಿಲ್ ಸಿಂಗ್ ಮತ್ತು ಭಾರತೀಯ ನಟಿ ಶ್ರುತಿ ಸೇಠ್ ಲಿಲ್ಲಿ ಸಿಂಗ್‌ ಅವರ ಟ್ವೀಟ್‌ಗಗೆ ಪ್ರತಿಕ್ರಿಯಿಸಿದ್ದಾರೆ.

ರೈತ ಹೋರಾಟಕ್ಕೆ ಅಂತರಾಷ್ಟ್ರೀಯ ಬೆಂಬಲ ಸಿಗುತ್ತಿರುವುದು ಇದುವೆ ಮೊದಲೇನಲ್ಲ. ಫೆಬ್ರವರಿಯ ಆರಂಭದಲ್ಲಿ ರೈತರನ್ನು ಬೆಂಬಲಿಸಿ ಜಾಗತಿಕ ಸಂಗೀತ ಐಕಾನ್ ರಿಹಾನ್ನಾ ಟ್ವೀಟ್ ಮಾಡಿದ್ದು ಭಾರಿ ಸುದ್ದಿಯಾಗಿತ್ತು. ಇದು ಹೋರಾಟಕ್ಕೆ ಇನ್ನಷ್ಟು ಅಂತಾರಾಷ್ಟ್ರೀಯ ಸಮುದಾಯದ ಬೆಂಬಲ ನೀಡುವಂತೆ ಮಾಡಿತ್ತು.

ಇದನ್ನೂ ಓದಿ: Breaking: ಮಾ. 26ಕ್ಕೆ ಸಂಪೂರ್ಣ ಭಾರತ್ ಬಂದ್ – ಹೋರಾಟನಿರತ ರೈತರ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಾಂಜಿ ಪಿಂಜಿ ಎಲ್ಲ ರೈತರ ಹೆಸರಲ್ಲಿ ಹಣ ಮಡ್ಕೊತ ಇದ್ದಾರೆ..ಜೊತೆಗೆ ರೈತರು ಎನಿಸಿ ಕೊoಡವರು ಬೆಂಗಾಲ್ ಚುನಾವಣಾ ಪ್ರಚಾರ ದಲ್ಲಿ ಕಾಂಗ್ರೆಸ್ ಪರ್ ಪ್ರಚಾರ ದಲ್ಲಿ ಇದ್ದಾರೆ ಹೀಗಾಗಿ ಅವರು ಯಾರು ಅಂತ ಪ್ರತ್ಯೇಕ ಹೇಳ ಬೇಕಾಗಿಲ್ಲ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...