Homeಅಂತರಾಷ್ಟ್ರೀಯಹೋರಾಟಕ್ಕೆ ಹೆಚ್ಚುತ್ತಿರುವ ಅಂತಾರಾಷ್ಟ್ರೀಯ ಬೆಂಬಲ: ರೈತರ ಬೆನ್ನಿಗೆ ನಿಂತ ‘ಲಿಲ್ಲಿ ಸಿಂಗ್’

ಹೋರಾಟಕ್ಕೆ ಹೆಚ್ಚುತ್ತಿರುವ ಅಂತಾರಾಷ್ಟ್ರೀಯ ಬೆಂಬಲ: ರೈತರ ಬೆನ್ನಿಗೆ ನಿಂತ ‘ಲಿಲ್ಲಿ ಸಿಂಗ್’

- Advertisement -
- Advertisement -

ದೇಶದಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಇದೀಗ ಅಂತರಾಷ್ಟ್ರೀಯ ಖ್ಯಾತಿಯ ಹಾಸ್ಯನಟಿ, ಯೂಟ್ಯೂಬರ್‌ ಲಿಲ್ಲಿ ಸಿಂಗ್ ಬೆಂಬಲ ನೀಡಿದ್ದಾರೆ. 63 ನೇ ಗ್ರ್ಯಾಮಿ ಪ್ರಶಸ್ತಿ ವೇದಿಕೆಯನ್ನುಅವರು ರೈತ ಆಂದೋಲನವನ್ನು ಬೆಂಬಲಿಸಲು ಬಳಸಿಕೊಂಡರು. ಅವರು ಗ್ರ್ಯಾಮಿ ಪ್ರಶಸ್ತಿ ಸಮಾರಂಭಕ್ಕೆ ಆಗಮಿಸುವಾಗ “ನಾನು ರೈತರ ಜೊತೆ ನಿಲ್ಲುತ್ತೇನೆ” ಎಂದು ಬರೆದಿರುವ ಮಾಸ್ಕ್‌ ಅನ್ನು ಧರಿಸಿದ್ದರು.

ಈ ಚಿತ್ರವನ್ನು ತನ್ನ ಟ್ವಿಟ್ಟರ್ ಪೇಜ್‌ನಲ್ಲಿ ಪೋಸ್ಟ್ ಮಾಡಿರುವ ಲಿಲ್ಲಿ ಸಿಂಗ್, “ರೆಡ್ ಕಾರ್ಪೆಟ್ / ಅವಾರ್ಡ್ ಶೋಗಳಲ್ಲಿನ ಚಿತ್ರಗಳು ಯಾವಾಗಲೂ ಹೆಚ್ಚಿನ ಪ್ರಚಾರ ಪಡೆಯುತ್ತದೆ. ಹೋರಾಟದೊಂದಿಗೆ ಇರಲು ಭಯಪಡಬೇಡಿ. #ನಾನು ರೈತರೊಂದಿಗೆ ನಿಲ್ಲುತ್ತೇನೆ #ಗ್ರ್ಯಾಮಿ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ಕಡು ಬೇಸಿಗೆ ಎದುರಿಸಲು ಸಿದ್ದರಾಗುತ್ತಿದ್ದಾರೆ ಅನ್ನದಾತರು!

ಲಿಲ್ಲಿ ಸಿಂಗ್ ಕೆನಡಾ ಮೂಲದ ಯೂಟ್ಯೂಬರ್, ಹಾಸ್ಯನಟಿಯಾಗಿದ್ದಾರೆ. 2010 ರಲ್ಲಿ ಯೂಟ್ಯೂಬ್ ವೀಡಿಯೊಗಳನ್ನು ಮಾಡಲು ಪ್ರಾರಂಭಿಸಿದ ಅವರು 2016 ರಲ್ಲಿ ವಿಶ್ವದ ಅತಿ ಹೆಚ್ಚು ಸಂಭಾವನೆ ಪಡೆಯುವ ಯೂಟ್ಯೂಬರ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಏರಿದ್ದರು. ಯೂಟ್ಯೂಬ್‌ನಲ್ಲಿ ಇದುವರೆಗೂ  1.49 ಕೋಟಿಗೂ ಅಧಿಕ ಸಬ್‌ಸ್ಕ್ರೈಬರ್‌‌ ಅನ್ನು ಹೊಂದಿದ್ದಾರೆ.

ಗ್ರ್ಯಾಮಿಸ್ ಪ್ರಶಸ್ತಿ ಪ್ರಧಾನ ಸಮಾರಂಭವು ವಿಶ್ವದ ಅತಿದೊಡ್ಡ ಸಂಗೀತ ತಾರೆಯರನ್ನು ಸ್ವಾಗತಿಸಿದ್ದು, ಈ ಕಾರ್ಯಕ್ರಮವನ್ನು ವಿಶ್ವದಾದ್ಯಂತ ಲಕ್ಷಾಂತರ ಜನರು ವೀಕ್ಷಿಸುತ್ತಾರೆ. ಮಾಡೆಲ್ ಅಮಂಡಾ ಸೆರ್ನಿ, ಡಬ್ಲ್ಯುಡಬ್ಲ್ಯುಇ ಕುಸ್ತಿಪಟು ಸುನಿಲ್ ಸಿಂಗ್ ಮತ್ತು ಭಾರತೀಯ ನಟಿ ಶ್ರುತಿ ಸೇಠ್ ಲಿಲ್ಲಿ ಸಿಂಗ್‌ ಅವರ ಟ್ವೀಟ್‌ಗಗೆ ಪ್ರತಿಕ್ರಿಯಿಸಿದ್ದಾರೆ.

ರೈತ ಹೋರಾಟಕ್ಕೆ ಅಂತರಾಷ್ಟ್ರೀಯ ಬೆಂಬಲ ಸಿಗುತ್ತಿರುವುದು ಇದುವೆ ಮೊದಲೇನಲ್ಲ. ಫೆಬ್ರವರಿಯ ಆರಂಭದಲ್ಲಿ ರೈತರನ್ನು ಬೆಂಬಲಿಸಿ ಜಾಗತಿಕ ಸಂಗೀತ ಐಕಾನ್ ರಿಹಾನ್ನಾ ಟ್ವೀಟ್ ಮಾಡಿದ್ದು ಭಾರಿ ಸುದ್ದಿಯಾಗಿತ್ತು. ಇದು ಹೋರಾಟಕ್ಕೆ ಇನ್ನಷ್ಟು ಅಂತಾರಾಷ್ಟ್ರೀಯ ಸಮುದಾಯದ ಬೆಂಬಲ ನೀಡುವಂತೆ ಮಾಡಿತ್ತು.

ಇದನ್ನೂ ಓದಿ: Breaking: ಮಾ. 26ಕ್ಕೆ ಸಂಪೂರ್ಣ ಭಾರತ್ ಬಂದ್ – ಹೋರಾಟನಿರತ ರೈತರ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಾಂಜಿ ಪಿಂಜಿ ಎಲ್ಲ ರೈತರ ಹೆಸರಲ್ಲಿ ಹಣ ಮಡ್ಕೊತ ಇದ್ದಾರೆ..ಜೊತೆಗೆ ರೈತರು ಎನಿಸಿ ಕೊoಡವರು ಬೆಂಗಾಲ್ ಚುನಾವಣಾ ಪ್ರಚಾರ ದಲ್ಲಿ ಕಾಂಗ್ರೆಸ್ ಪರ್ ಪ್ರಚಾರ ದಲ್ಲಿ ಇದ್ದಾರೆ ಹೀಗಾಗಿ ಅವರು ಯಾರು ಅಂತ ಪ್ರತ್ಯೇಕ ಹೇಳ ಬೇಕಾಗಿಲ್ಲ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...