Homeಮುಖಪುಟಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ಕೋವಿಡ್‌ ಬಿಕ್ಕಟ್ಟಿನವರೆಗಿನ ಅಂಕಿ-ಅಂಶಗಳನ್ನು ಮಾತ್ರ ಅಧ್ಯಯನಕ್ಕೆ ಬಳಸಲಾಗಿದೆ. ಕೋವಿಡ್‌ ನಂತರದ ಪರಿಸ್ಥಿತಿ ಮತ್ತಷ್ಟು ಆತಂಕಕಾರಿಯಾಗಿರುವ ಸಾಧ್ಯತೆ ಹೆಚ್ಚಿದೆ.

- Advertisement -
- Advertisement -

ಕಳೆದ ಕೆಲವು ತ್ರೈಮಾಸಿಕಗಳಲ್ಲಿ ಭಾರತದಲ್ಲಿ ನಿರುದ್ಯೋಗ ಅಂಕಿಅಂಶಗಳು ಸ್ಥಿರವಾಗಿ ಏರುತ್ತಿವೆ. ಭಾರತದ ಬಡವರ ಸಂಖ್ಯೆಯಲ್ಲಿ ಆಘಾತಕಾರಿ ಹೆಚ್ಚಳವಾಗಿರುವುದನ್ನು ಹೊರ ಹಾಕಿರುವ ಅಧ್ಯಯನದ ಕುರಿತು ‘ದಿ ವೈರ್‌’ ಜಾಲತಾಣ ವರದಿ ಮಾಡಿದೆ.

ಜರ್ಮನಿಯ ಬಾನ್‌ನಲ್ಲಿರುವ IZA ಕಾರ್ಮಿಕ ಅರ್ಥಶಾಸ್ತ್ರ ಸಂಸ್ಥೆಯ ಸಂಶೋಧಕ ಪ್ರೊ.ಸಂತೋಷ್ ಮೆಹ್ರೋತ್ರಾ ಮತ್ತು ಅವರ ಸಹೋದ್ಯೋಗಿ ಜಜಾತಿ ಕೇಶಾರಿ ಪರಿದಾ ಅವರ ಇತ್ತೀಚಿನ ಅಧ್ಯಯನವು ಈ ಸಂಗತಿಯನ್ನು ಬಿಚ್ಚಿಟ್ಟಿದೆ.

ಕಳೆದ ಎಂಟು ವರ್ಷಗಳಲ್ಲಿ (2020ರವರೆಗೆ) ದೇಶದಲ್ಲಿ ಹೆಚ್ಚಾಗಿರುವ ಬಡತನ ಪ್ರಮಾಣವನ್ನು ಅಧ್ಯಯನ ಬಹಿರಂಗಪಡಿಸಿದ್ದು, ಬಡತನ ರೇಖೆಗಿಂತ ಕೆಳಗಿರುವವರ ಸಂಖ್ಯೆ 7 ಕೋಟಿ 60 ಲಕ್ಷ ಹೆಚ್ಚಾಗಿದ್ದಾರೆ. ಭಾರತದ ಇತಿಹಾಸದಲ್ಲಿ ಇಷ್ಟು ಪ್ರಮಾಣದ ಬಡವರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗಿರುವುದು ಇದೇ ಮೊದಲು ಎನ್ನಲಾಗಿದೆ.

ಈ ದತ್ತಾಂಶವು ಕೋವಿಡ್‌-19 ಬಿಕ್ಕಟ್ಟು ಆರಂಭವಾಗುವವರೆಗೆ ಮಾತ್ರ ಇರುವುದು ಮತ್ತೊಂದು ಆಘಾತಕಾರಿ ಸಂಗತಿ. ಅಂದರೆ ಬಡತನ ರೇಖೆಯ ಕೆಳಗಿನ ಜನರ ಆಘಾತಕಾರಿ ಏರಿಕೆಯು ಸಾಂಕ್ರಾಮಿಕ ರೋಗವು ಬರುವ ಮೊದಲು ಆಗಿದೆ. ಲಾಕ್‌ಡೌನ್‌, ಕೋವಿಡ್‌ ಸಂದರ್ಭದಲ್ಲಿ ಗಣನೀಯವಾಗಿ ಉದ್ಯೋಗ ಕಡಿತವಾಗಿದ್ದು, ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ಸ್ಪಷ್ಟ.

ದಿ ವೈರ್‌ನ ಪತ್ರಕರ್ತರಾದ ಮಿತಾಲಿ ಮುಖರ್ಜಿಯವರು ಸಂತೋಷ್ ಮೆಹ್ರೋತ್ರಾ  ಅವರ ವಿಡಿಯೊ ಸಂದರ್ಶನ ನಡೆಸಿದ್ದು, ಈ ಮಾಹಿತಿಯನ್ನು ಸಂತೋಷ್‌ ಬಿಚ್ಚಿಟ್ಟಿದ್ದಾರೆ. ಜೊತೆಗೆ ಈ ಬಡತನ ಹೆಚ್ಚಳಕ್ಕೆ ಕಾರಣಗಳನ್ನು ತಿಳಿಸಿದ್ದಾರೆ.

ಹಿರಿಯ ಅರ್ಥಶಾಸ್ತ್ರಜ್ಞ ಸುರೇಶ್‌ ತೆಂಡೂಲ್ಕರ್‌‌ ಹಾಕಿಕೊಟ್ಟ ಮೆಥಡಾಲಜಿ ಆಧರಿಸಿ, ಭಾರತ ಸರ್ಕಾರದ ನ್ಯಾಷನಲ್‌ ಸ್ಯಾಪಲ್‌ ಸರ್ವೇ ಆಫೀಸ್‌‌ (ಎನ್‌ಎಸ್‌ಎಸ್‌ಒ) ಅಂಕಿ-ಅಂಶಗಳ ಆಧಾರದಲ್ಲಿ ಅಧ್ಯಯನ ಮಾಡಲಾಗಿದೆ.

ನೋಟು ಅಮಾನೀಕರಣದಿಂದಾಗಿ ಅಸಂಘಟಿತ ವಲಯದಲ್ಲಿನ ಬಹುಸಂಖ್ಯೆಯ ಜನರು ಸಮಸ್ಯೆಗೆ ಸಿಲುಕಿದರು. ಆರ್ಥಿಕತೆ ಕುಸಿದು, ಜೀವನಾಗತ್ಯತೆಗಳನ್ನೂ ಪೂರೈಸಿಕೊಳ್ಳಲು ಆಗಲಿಲ್ಲ. ಉದ್ಯೋಗಗಳು ಗಣನೀಯವಾಗಿ ಕಡಿಮೆಯಾಗಿದ್ದು ಈ ಬಡತನ ಹೆಚ್ಚಳಕ್ಕೆ ಕಾರಣ. ಉದ್ಯೋಗ ಕಳೆದುಕೊಂಡಿದ್ದರಿಂದ ಜನರ ಖರೀದಿ ಸಾಮರ್ಥ್ಯ ಕುಸಿಯಿತು. ಇದರ ಆಧಾರದಲ್ಲಿ ಸಮೀಕ್ಷೆ ಮಾಡಲಾಗಿದೆ ಎಂದು ಪ್ರೊ.ಸಂತೋಷ್ ಮೆಹ್ರೋತ್ರಾ ತಿಳಿಸಿದ್ದಾರೆ.

2004- 2011 ಕಾಲಾವಧಿಯಲ್ಲಿ ಶೇ. 37 ಜನರು ಕೃಷಿಯನ್ನು ತೊರೆದರು. ಕೃಷಿಯೇತರ ಕ್ಷೇತ್ರ ಬೆಳೆಯಿತು. ಆದರೆ 2012ರ ಬಳಿಕ ಪ್ರತಿವರ್ಷ ಸುಮಾರು 7.5 ಮಿಲಿಯನ್‌ ಕೃಷಿಯೇತರ ಉದ್ಯೋಗಳು ನಷ್ಟವಾಗುತ್ತ ಬಂದವು ಎಂದು ವಿವರಿಸಿದ್ದಾರೆ.

(ಪ್ರೊ.ಸಂತೋಷ್‌ ಮೆಹ್ರೊತ್ರಾ ಅವರ ಪೂರ್ಣ ಸಂದರ್ಶನವನ್ನು ‘ದಿ ವೈರ್‌‌’ ಯೂಟ್ಯೂಬ್‌ ಚಾನೆಲ್‌ನಲ್ಲಿ ನೋಡಬಹುದು)


ಇದನ್ನೂ ಓದಿರಿ: ನೋಟು ರದ್ಧತಿಗೆ ಐದು ವರ್ಷ: ನಗದು ಬಳಕೆ ಕಡಿಮೆಯಾಯಿತೆ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಗೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

0
ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ...