Homeಮುಖಪುಟಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ಕೋವಿಡ್‌ ಬಿಕ್ಕಟ್ಟಿನವರೆಗಿನ ಅಂಕಿ-ಅಂಶಗಳನ್ನು ಮಾತ್ರ ಅಧ್ಯಯನಕ್ಕೆ ಬಳಸಲಾಗಿದೆ. ಕೋವಿಡ್‌ ನಂತರದ ಪರಿಸ್ಥಿತಿ ಮತ್ತಷ್ಟು ಆತಂಕಕಾರಿಯಾಗಿರುವ ಸಾಧ್ಯತೆ ಹೆಚ್ಚಿದೆ.

- Advertisement -
- Advertisement -

ಕಳೆದ ಕೆಲವು ತ್ರೈಮಾಸಿಕಗಳಲ್ಲಿ ಭಾರತದಲ್ಲಿ ನಿರುದ್ಯೋಗ ಅಂಕಿಅಂಶಗಳು ಸ್ಥಿರವಾಗಿ ಏರುತ್ತಿವೆ. ಭಾರತದ ಬಡವರ ಸಂಖ್ಯೆಯಲ್ಲಿ ಆಘಾತಕಾರಿ ಹೆಚ್ಚಳವಾಗಿರುವುದನ್ನು ಹೊರ ಹಾಕಿರುವ ಅಧ್ಯಯನದ ಕುರಿತು ‘ದಿ ವೈರ್‌’ ಜಾಲತಾಣ ವರದಿ ಮಾಡಿದೆ.

ಜರ್ಮನಿಯ ಬಾನ್‌ನಲ್ಲಿರುವ IZA ಕಾರ್ಮಿಕ ಅರ್ಥಶಾಸ್ತ್ರ ಸಂಸ್ಥೆಯ ಸಂಶೋಧಕ ಪ್ರೊ.ಸಂತೋಷ್ ಮೆಹ್ರೋತ್ರಾ ಮತ್ತು ಅವರ ಸಹೋದ್ಯೋಗಿ ಜಜಾತಿ ಕೇಶಾರಿ ಪರಿದಾ ಅವರ ಇತ್ತೀಚಿನ ಅಧ್ಯಯನವು ಈ ಸಂಗತಿಯನ್ನು ಬಿಚ್ಚಿಟ್ಟಿದೆ.

ಕಳೆದ ಎಂಟು ವರ್ಷಗಳಲ್ಲಿ (2020ರವರೆಗೆ) ದೇಶದಲ್ಲಿ ಹೆಚ್ಚಾಗಿರುವ ಬಡತನ ಪ್ರಮಾಣವನ್ನು ಅಧ್ಯಯನ ಬಹಿರಂಗಪಡಿಸಿದ್ದು, ಬಡತನ ರೇಖೆಗಿಂತ ಕೆಳಗಿರುವವರ ಸಂಖ್ಯೆ 7 ಕೋಟಿ 60 ಲಕ್ಷ ಹೆಚ್ಚಾಗಿದ್ದಾರೆ. ಭಾರತದ ಇತಿಹಾಸದಲ್ಲಿ ಇಷ್ಟು ಪ್ರಮಾಣದ ಬಡವರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗಿರುವುದು ಇದೇ ಮೊದಲು ಎನ್ನಲಾಗಿದೆ.

ಈ ದತ್ತಾಂಶವು ಕೋವಿಡ್‌-19 ಬಿಕ್ಕಟ್ಟು ಆರಂಭವಾಗುವವರೆಗೆ ಮಾತ್ರ ಇರುವುದು ಮತ್ತೊಂದು ಆಘಾತಕಾರಿ ಸಂಗತಿ. ಅಂದರೆ ಬಡತನ ರೇಖೆಯ ಕೆಳಗಿನ ಜನರ ಆಘಾತಕಾರಿ ಏರಿಕೆಯು ಸಾಂಕ್ರಾಮಿಕ ರೋಗವು ಬರುವ ಮೊದಲು ಆಗಿದೆ. ಲಾಕ್‌ಡೌನ್‌, ಕೋವಿಡ್‌ ಸಂದರ್ಭದಲ್ಲಿ ಗಣನೀಯವಾಗಿ ಉದ್ಯೋಗ ಕಡಿತವಾಗಿದ್ದು, ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ಸ್ಪಷ್ಟ.

ದಿ ವೈರ್‌ನ ಪತ್ರಕರ್ತರಾದ ಮಿತಾಲಿ ಮುಖರ್ಜಿಯವರು ಸಂತೋಷ್ ಮೆಹ್ರೋತ್ರಾ  ಅವರ ವಿಡಿಯೊ ಸಂದರ್ಶನ ನಡೆಸಿದ್ದು, ಈ ಮಾಹಿತಿಯನ್ನು ಸಂತೋಷ್‌ ಬಿಚ್ಚಿಟ್ಟಿದ್ದಾರೆ. ಜೊತೆಗೆ ಈ ಬಡತನ ಹೆಚ್ಚಳಕ್ಕೆ ಕಾರಣಗಳನ್ನು ತಿಳಿಸಿದ್ದಾರೆ.

ಹಿರಿಯ ಅರ್ಥಶಾಸ್ತ್ರಜ್ಞ ಸುರೇಶ್‌ ತೆಂಡೂಲ್ಕರ್‌‌ ಹಾಕಿಕೊಟ್ಟ ಮೆಥಡಾಲಜಿ ಆಧರಿಸಿ, ಭಾರತ ಸರ್ಕಾರದ ನ್ಯಾಷನಲ್‌ ಸ್ಯಾಪಲ್‌ ಸರ್ವೇ ಆಫೀಸ್‌‌ (ಎನ್‌ಎಸ್‌ಎಸ್‌ಒ) ಅಂಕಿ-ಅಂಶಗಳ ಆಧಾರದಲ್ಲಿ ಅಧ್ಯಯನ ಮಾಡಲಾಗಿದೆ.

ನೋಟು ಅಮಾನೀಕರಣದಿಂದಾಗಿ ಅಸಂಘಟಿತ ವಲಯದಲ್ಲಿನ ಬಹುಸಂಖ್ಯೆಯ ಜನರು ಸಮಸ್ಯೆಗೆ ಸಿಲುಕಿದರು. ಆರ್ಥಿಕತೆ ಕುಸಿದು, ಜೀವನಾಗತ್ಯತೆಗಳನ್ನೂ ಪೂರೈಸಿಕೊಳ್ಳಲು ಆಗಲಿಲ್ಲ. ಉದ್ಯೋಗಗಳು ಗಣನೀಯವಾಗಿ ಕಡಿಮೆಯಾಗಿದ್ದು ಈ ಬಡತನ ಹೆಚ್ಚಳಕ್ಕೆ ಕಾರಣ. ಉದ್ಯೋಗ ಕಳೆದುಕೊಂಡಿದ್ದರಿಂದ ಜನರ ಖರೀದಿ ಸಾಮರ್ಥ್ಯ ಕುಸಿಯಿತು. ಇದರ ಆಧಾರದಲ್ಲಿ ಸಮೀಕ್ಷೆ ಮಾಡಲಾಗಿದೆ ಎಂದು ಪ್ರೊ.ಸಂತೋಷ್ ಮೆಹ್ರೋತ್ರಾ ತಿಳಿಸಿದ್ದಾರೆ.

2004- 2011 ಕಾಲಾವಧಿಯಲ್ಲಿ ಶೇ. 37 ಜನರು ಕೃಷಿಯನ್ನು ತೊರೆದರು. ಕೃಷಿಯೇತರ ಕ್ಷೇತ್ರ ಬೆಳೆಯಿತು. ಆದರೆ 2012ರ ಬಳಿಕ ಪ್ರತಿವರ್ಷ ಸುಮಾರು 7.5 ಮಿಲಿಯನ್‌ ಕೃಷಿಯೇತರ ಉದ್ಯೋಗಳು ನಷ್ಟವಾಗುತ್ತ ಬಂದವು ಎಂದು ವಿವರಿಸಿದ್ದಾರೆ.

(ಪ್ರೊ.ಸಂತೋಷ್‌ ಮೆಹ್ರೊತ್ರಾ ಅವರ ಪೂರ್ಣ ಸಂದರ್ಶನವನ್ನು ‘ದಿ ವೈರ್‌‌’ ಯೂಟ್ಯೂಬ್‌ ಚಾನೆಲ್‌ನಲ್ಲಿ ನೋಡಬಹುದು)


ಇದನ್ನೂ ಓದಿರಿ: ನೋಟು ರದ್ಧತಿಗೆ ಐದು ವರ್ಷ: ನಗದು ಬಳಕೆ ಕಡಿಮೆಯಾಯಿತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...