Homeಮುಖಪುಟಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ಕೋವಿಡ್‌ ಬಿಕ್ಕಟ್ಟಿನವರೆಗಿನ ಅಂಕಿ-ಅಂಶಗಳನ್ನು ಮಾತ್ರ ಅಧ್ಯಯನಕ್ಕೆ ಬಳಸಲಾಗಿದೆ. ಕೋವಿಡ್‌ ನಂತರದ ಪರಿಸ್ಥಿತಿ ಮತ್ತಷ್ಟು ಆತಂಕಕಾರಿಯಾಗಿರುವ ಸಾಧ್ಯತೆ ಹೆಚ್ಚಿದೆ.

- Advertisement -
- Advertisement -

ಕಳೆದ ಕೆಲವು ತ್ರೈಮಾಸಿಕಗಳಲ್ಲಿ ಭಾರತದಲ್ಲಿ ನಿರುದ್ಯೋಗ ಅಂಕಿಅಂಶಗಳು ಸ್ಥಿರವಾಗಿ ಏರುತ್ತಿವೆ. ಭಾರತದ ಬಡವರ ಸಂಖ್ಯೆಯಲ್ಲಿ ಆಘಾತಕಾರಿ ಹೆಚ್ಚಳವಾಗಿರುವುದನ್ನು ಹೊರ ಹಾಕಿರುವ ಅಧ್ಯಯನದ ಕುರಿತು ‘ದಿ ವೈರ್‌’ ಜಾಲತಾಣ ವರದಿ ಮಾಡಿದೆ.

ಜರ್ಮನಿಯ ಬಾನ್‌ನಲ್ಲಿರುವ IZA ಕಾರ್ಮಿಕ ಅರ್ಥಶಾಸ್ತ್ರ ಸಂಸ್ಥೆಯ ಸಂಶೋಧಕ ಪ್ರೊ.ಸಂತೋಷ್ ಮೆಹ್ರೋತ್ರಾ ಮತ್ತು ಅವರ ಸಹೋದ್ಯೋಗಿ ಜಜಾತಿ ಕೇಶಾರಿ ಪರಿದಾ ಅವರ ಇತ್ತೀಚಿನ ಅಧ್ಯಯನವು ಈ ಸಂಗತಿಯನ್ನು ಬಿಚ್ಚಿಟ್ಟಿದೆ.

ಕಳೆದ ಎಂಟು ವರ್ಷಗಳಲ್ಲಿ (2020ರವರೆಗೆ) ದೇಶದಲ್ಲಿ ಹೆಚ್ಚಾಗಿರುವ ಬಡತನ ಪ್ರಮಾಣವನ್ನು ಅಧ್ಯಯನ ಬಹಿರಂಗಪಡಿಸಿದ್ದು, ಬಡತನ ರೇಖೆಗಿಂತ ಕೆಳಗಿರುವವರ ಸಂಖ್ಯೆ 7 ಕೋಟಿ 60 ಲಕ್ಷ ಹೆಚ್ಚಾಗಿದ್ದಾರೆ. ಭಾರತದ ಇತಿಹಾಸದಲ್ಲಿ ಇಷ್ಟು ಪ್ರಮಾಣದ ಬಡವರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗಿರುವುದು ಇದೇ ಮೊದಲು ಎನ್ನಲಾಗಿದೆ.

ಈ ದತ್ತಾಂಶವು ಕೋವಿಡ್‌-19 ಬಿಕ್ಕಟ್ಟು ಆರಂಭವಾಗುವವರೆಗೆ ಮಾತ್ರ ಇರುವುದು ಮತ್ತೊಂದು ಆಘಾತಕಾರಿ ಸಂಗತಿ. ಅಂದರೆ ಬಡತನ ರೇಖೆಯ ಕೆಳಗಿನ ಜನರ ಆಘಾತಕಾರಿ ಏರಿಕೆಯು ಸಾಂಕ್ರಾಮಿಕ ರೋಗವು ಬರುವ ಮೊದಲು ಆಗಿದೆ. ಲಾಕ್‌ಡೌನ್‌, ಕೋವಿಡ್‌ ಸಂದರ್ಭದಲ್ಲಿ ಗಣನೀಯವಾಗಿ ಉದ್ಯೋಗ ಕಡಿತವಾಗಿದ್ದು, ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ಸ್ಪಷ್ಟ.

ದಿ ವೈರ್‌ನ ಪತ್ರಕರ್ತರಾದ ಮಿತಾಲಿ ಮುಖರ್ಜಿಯವರು ಸಂತೋಷ್ ಮೆಹ್ರೋತ್ರಾ  ಅವರ ವಿಡಿಯೊ ಸಂದರ್ಶನ ನಡೆಸಿದ್ದು, ಈ ಮಾಹಿತಿಯನ್ನು ಸಂತೋಷ್‌ ಬಿಚ್ಚಿಟ್ಟಿದ್ದಾರೆ. ಜೊತೆಗೆ ಈ ಬಡತನ ಹೆಚ್ಚಳಕ್ಕೆ ಕಾರಣಗಳನ್ನು ತಿಳಿಸಿದ್ದಾರೆ.

ಹಿರಿಯ ಅರ್ಥಶಾಸ್ತ್ರಜ್ಞ ಸುರೇಶ್‌ ತೆಂಡೂಲ್ಕರ್‌‌ ಹಾಕಿಕೊಟ್ಟ ಮೆಥಡಾಲಜಿ ಆಧರಿಸಿ, ಭಾರತ ಸರ್ಕಾರದ ನ್ಯಾಷನಲ್‌ ಸ್ಯಾಪಲ್‌ ಸರ್ವೇ ಆಫೀಸ್‌‌ (ಎನ್‌ಎಸ್‌ಎಸ್‌ಒ) ಅಂಕಿ-ಅಂಶಗಳ ಆಧಾರದಲ್ಲಿ ಅಧ್ಯಯನ ಮಾಡಲಾಗಿದೆ.

ನೋಟು ಅಮಾನೀಕರಣದಿಂದಾಗಿ ಅಸಂಘಟಿತ ವಲಯದಲ್ಲಿನ ಬಹುಸಂಖ್ಯೆಯ ಜನರು ಸಮಸ್ಯೆಗೆ ಸಿಲುಕಿದರು. ಆರ್ಥಿಕತೆ ಕುಸಿದು, ಜೀವನಾಗತ್ಯತೆಗಳನ್ನೂ ಪೂರೈಸಿಕೊಳ್ಳಲು ಆಗಲಿಲ್ಲ. ಉದ್ಯೋಗಗಳು ಗಣನೀಯವಾಗಿ ಕಡಿಮೆಯಾಗಿದ್ದು ಈ ಬಡತನ ಹೆಚ್ಚಳಕ್ಕೆ ಕಾರಣ. ಉದ್ಯೋಗ ಕಳೆದುಕೊಂಡಿದ್ದರಿಂದ ಜನರ ಖರೀದಿ ಸಾಮರ್ಥ್ಯ ಕುಸಿಯಿತು. ಇದರ ಆಧಾರದಲ್ಲಿ ಸಮೀಕ್ಷೆ ಮಾಡಲಾಗಿದೆ ಎಂದು ಪ್ರೊ.ಸಂತೋಷ್ ಮೆಹ್ರೋತ್ರಾ ತಿಳಿಸಿದ್ದಾರೆ.

2004- 2011 ಕಾಲಾವಧಿಯಲ್ಲಿ ಶೇ. 37 ಜನರು ಕೃಷಿಯನ್ನು ತೊರೆದರು. ಕೃಷಿಯೇತರ ಕ್ಷೇತ್ರ ಬೆಳೆಯಿತು. ಆದರೆ 2012ರ ಬಳಿಕ ಪ್ರತಿವರ್ಷ ಸುಮಾರು 7.5 ಮಿಲಿಯನ್‌ ಕೃಷಿಯೇತರ ಉದ್ಯೋಗಳು ನಷ್ಟವಾಗುತ್ತ ಬಂದವು ಎಂದು ವಿವರಿಸಿದ್ದಾರೆ.

(ಪ್ರೊ.ಸಂತೋಷ್‌ ಮೆಹ್ರೊತ್ರಾ ಅವರ ಪೂರ್ಣ ಸಂದರ್ಶನವನ್ನು ‘ದಿ ವೈರ್‌‌’ ಯೂಟ್ಯೂಬ್‌ ಚಾನೆಲ್‌ನಲ್ಲಿ ನೋಡಬಹುದು)


ಇದನ್ನೂ ಓದಿರಿ: ನೋಟು ರದ್ಧತಿಗೆ ಐದು ವರ್ಷ: ನಗದು ಬಳಕೆ ಕಡಿಮೆಯಾಯಿತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....