Homeಮುಖಪುಟಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ಕೋವಿಡ್‌ ಬಿಕ್ಕಟ್ಟಿನವರೆಗಿನ ಅಂಕಿ-ಅಂಶಗಳನ್ನು ಮಾತ್ರ ಅಧ್ಯಯನಕ್ಕೆ ಬಳಸಲಾಗಿದೆ. ಕೋವಿಡ್‌ ನಂತರದ ಪರಿಸ್ಥಿತಿ ಮತ್ತಷ್ಟು ಆತಂಕಕಾರಿಯಾಗಿರುವ ಸಾಧ್ಯತೆ ಹೆಚ್ಚಿದೆ.

- Advertisement -
- Advertisement -

ಕಳೆದ ಕೆಲವು ತ್ರೈಮಾಸಿಕಗಳಲ್ಲಿ ಭಾರತದಲ್ಲಿ ನಿರುದ್ಯೋಗ ಅಂಕಿಅಂಶಗಳು ಸ್ಥಿರವಾಗಿ ಏರುತ್ತಿವೆ. ಭಾರತದ ಬಡವರ ಸಂಖ್ಯೆಯಲ್ಲಿ ಆಘಾತಕಾರಿ ಹೆಚ್ಚಳವಾಗಿರುವುದನ್ನು ಹೊರ ಹಾಕಿರುವ ಅಧ್ಯಯನದ ಕುರಿತು ‘ದಿ ವೈರ್‌’ ಜಾಲತಾಣ ವರದಿ ಮಾಡಿದೆ.

ಜರ್ಮನಿಯ ಬಾನ್‌ನಲ್ಲಿರುವ IZA ಕಾರ್ಮಿಕ ಅರ್ಥಶಾಸ್ತ್ರ ಸಂಸ್ಥೆಯ ಸಂಶೋಧಕ ಪ್ರೊ.ಸಂತೋಷ್ ಮೆಹ್ರೋತ್ರಾ ಮತ್ತು ಅವರ ಸಹೋದ್ಯೋಗಿ ಜಜಾತಿ ಕೇಶಾರಿ ಪರಿದಾ ಅವರ ಇತ್ತೀಚಿನ ಅಧ್ಯಯನವು ಈ ಸಂಗತಿಯನ್ನು ಬಿಚ್ಚಿಟ್ಟಿದೆ.

ಕಳೆದ ಎಂಟು ವರ್ಷಗಳಲ್ಲಿ (2020ರವರೆಗೆ) ದೇಶದಲ್ಲಿ ಹೆಚ್ಚಾಗಿರುವ ಬಡತನ ಪ್ರಮಾಣವನ್ನು ಅಧ್ಯಯನ ಬಹಿರಂಗಪಡಿಸಿದ್ದು, ಬಡತನ ರೇಖೆಗಿಂತ ಕೆಳಗಿರುವವರ ಸಂಖ್ಯೆ 7 ಕೋಟಿ 60 ಲಕ್ಷ ಹೆಚ್ಚಾಗಿದ್ದಾರೆ. ಭಾರತದ ಇತಿಹಾಸದಲ್ಲಿ ಇಷ್ಟು ಪ್ರಮಾಣದ ಬಡವರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗಿರುವುದು ಇದೇ ಮೊದಲು ಎನ್ನಲಾಗಿದೆ.

ಈ ದತ್ತಾಂಶವು ಕೋವಿಡ್‌-19 ಬಿಕ್ಕಟ್ಟು ಆರಂಭವಾಗುವವರೆಗೆ ಮಾತ್ರ ಇರುವುದು ಮತ್ತೊಂದು ಆಘಾತಕಾರಿ ಸಂಗತಿ. ಅಂದರೆ ಬಡತನ ರೇಖೆಯ ಕೆಳಗಿನ ಜನರ ಆಘಾತಕಾರಿ ಏರಿಕೆಯು ಸಾಂಕ್ರಾಮಿಕ ರೋಗವು ಬರುವ ಮೊದಲು ಆಗಿದೆ. ಲಾಕ್‌ಡೌನ್‌, ಕೋವಿಡ್‌ ಸಂದರ್ಭದಲ್ಲಿ ಗಣನೀಯವಾಗಿ ಉದ್ಯೋಗ ಕಡಿತವಾಗಿದ್ದು, ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ಸ್ಪಷ್ಟ.

ದಿ ವೈರ್‌ನ ಪತ್ರಕರ್ತರಾದ ಮಿತಾಲಿ ಮುಖರ್ಜಿಯವರು ಸಂತೋಷ್ ಮೆಹ್ರೋತ್ರಾ  ಅವರ ವಿಡಿಯೊ ಸಂದರ್ಶನ ನಡೆಸಿದ್ದು, ಈ ಮಾಹಿತಿಯನ್ನು ಸಂತೋಷ್‌ ಬಿಚ್ಚಿಟ್ಟಿದ್ದಾರೆ. ಜೊತೆಗೆ ಈ ಬಡತನ ಹೆಚ್ಚಳಕ್ಕೆ ಕಾರಣಗಳನ್ನು ತಿಳಿಸಿದ್ದಾರೆ.

ಹಿರಿಯ ಅರ್ಥಶಾಸ್ತ್ರಜ್ಞ ಸುರೇಶ್‌ ತೆಂಡೂಲ್ಕರ್‌‌ ಹಾಕಿಕೊಟ್ಟ ಮೆಥಡಾಲಜಿ ಆಧರಿಸಿ, ಭಾರತ ಸರ್ಕಾರದ ನ್ಯಾಷನಲ್‌ ಸ್ಯಾಪಲ್‌ ಸರ್ವೇ ಆಫೀಸ್‌‌ (ಎನ್‌ಎಸ್‌ಎಸ್‌ಒ) ಅಂಕಿ-ಅಂಶಗಳ ಆಧಾರದಲ್ಲಿ ಅಧ್ಯಯನ ಮಾಡಲಾಗಿದೆ.

ನೋಟು ಅಮಾನೀಕರಣದಿಂದಾಗಿ ಅಸಂಘಟಿತ ವಲಯದಲ್ಲಿನ ಬಹುಸಂಖ್ಯೆಯ ಜನರು ಸಮಸ್ಯೆಗೆ ಸಿಲುಕಿದರು. ಆರ್ಥಿಕತೆ ಕುಸಿದು, ಜೀವನಾಗತ್ಯತೆಗಳನ್ನೂ ಪೂರೈಸಿಕೊಳ್ಳಲು ಆಗಲಿಲ್ಲ. ಉದ್ಯೋಗಗಳು ಗಣನೀಯವಾಗಿ ಕಡಿಮೆಯಾಗಿದ್ದು ಈ ಬಡತನ ಹೆಚ್ಚಳಕ್ಕೆ ಕಾರಣ. ಉದ್ಯೋಗ ಕಳೆದುಕೊಂಡಿದ್ದರಿಂದ ಜನರ ಖರೀದಿ ಸಾಮರ್ಥ್ಯ ಕುಸಿಯಿತು. ಇದರ ಆಧಾರದಲ್ಲಿ ಸಮೀಕ್ಷೆ ಮಾಡಲಾಗಿದೆ ಎಂದು ಪ್ರೊ.ಸಂತೋಷ್ ಮೆಹ್ರೋತ್ರಾ ತಿಳಿಸಿದ್ದಾರೆ.

2004- 2011 ಕಾಲಾವಧಿಯಲ್ಲಿ ಶೇ. 37 ಜನರು ಕೃಷಿಯನ್ನು ತೊರೆದರು. ಕೃಷಿಯೇತರ ಕ್ಷೇತ್ರ ಬೆಳೆಯಿತು. ಆದರೆ 2012ರ ಬಳಿಕ ಪ್ರತಿವರ್ಷ ಸುಮಾರು 7.5 ಮಿಲಿಯನ್‌ ಕೃಷಿಯೇತರ ಉದ್ಯೋಗಳು ನಷ್ಟವಾಗುತ್ತ ಬಂದವು ಎಂದು ವಿವರಿಸಿದ್ದಾರೆ.

(ಪ್ರೊ.ಸಂತೋಷ್‌ ಮೆಹ್ರೊತ್ರಾ ಅವರ ಪೂರ್ಣ ಸಂದರ್ಶನವನ್ನು ‘ದಿ ವೈರ್‌‌’ ಯೂಟ್ಯೂಬ್‌ ಚಾನೆಲ್‌ನಲ್ಲಿ ನೋಡಬಹುದು)


ಇದನ್ನೂ ಓದಿರಿ: ನೋಟು ರದ್ಧತಿಗೆ ಐದು ವರ್ಷ: ನಗದು ಬಳಕೆ ಕಡಿಮೆಯಾಯಿತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...