Homeಮುಖಪುಟಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ಕೋವಿಡ್‌ ಬಿಕ್ಕಟ್ಟಿನವರೆಗಿನ ಅಂಕಿ-ಅಂಶಗಳನ್ನು ಮಾತ್ರ ಅಧ್ಯಯನಕ್ಕೆ ಬಳಸಲಾಗಿದೆ. ಕೋವಿಡ್‌ ನಂತರದ ಪರಿಸ್ಥಿತಿ ಮತ್ತಷ್ಟು ಆತಂಕಕಾರಿಯಾಗಿರುವ ಸಾಧ್ಯತೆ ಹೆಚ್ಚಿದೆ.

- Advertisement -
- Advertisement -

ಕಳೆದ ಕೆಲವು ತ್ರೈಮಾಸಿಕಗಳಲ್ಲಿ ಭಾರತದಲ್ಲಿ ನಿರುದ್ಯೋಗ ಅಂಕಿಅಂಶಗಳು ಸ್ಥಿರವಾಗಿ ಏರುತ್ತಿವೆ. ಭಾರತದ ಬಡವರ ಸಂಖ್ಯೆಯಲ್ಲಿ ಆಘಾತಕಾರಿ ಹೆಚ್ಚಳವಾಗಿರುವುದನ್ನು ಹೊರ ಹಾಕಿರುವ ಅಧ್ಯಯನದ ಕುರಿತು ‘ದಿ ವೈರ್‌’ ಜಾಲತಾಣ ವರದಿ ಮಾಡಿದೆ.

ಜರ್ಮನಿಯ ಬಾನ್‌ನಲ್ಲಿರುವ IZA ಕಾರ್ಮಿಕ ಅರ್ಥಶಾಸ್ತ್ರ ಸಂಸ್ಥೆಯ ಸಂಶೋಧಕ ಪ್ರೊ.ಸಂತೋಷ್ ಮೆಹ್ರೋತ್ರಾ ಮತ್ತು ಅವರ ಸಹೋದ್ಯೋಗಿ ಜಜಾತಿ ಕೇಶಾರಿ ಪರಿದಾ ಅವರ ಇತ್ತೀಚಿನ ಅಧ್ಯಯನವು ಈ ಸಂಗತಿಯನ್ನು ಬಿಚ್ಚಿಟ್ಟಿದೆ.

ಕಳೆದ ಎಂಟು ವರ್ಷಗಳಲ್ಲಿ (2020ರವರೆಗೆ) ದೇಶದಲ್ಲಿ ಹೆಚ್ಚಾಗಿರುವ ಬಡತನ ಪ್ರಮಾಣವನ್ನು ಅಧ್ಯಯನ ಬಹಿರಂಗಪಡಿಸಿದ್ದು, ಬಡತನ ರೇಖೆಗಿಂತ ಕೆಳಗಿರುವವರ ಸಂಖ್ಯೆ 7 ಕೋಟಿ 60 ಲಕ್ಷ ಹೆಚ್ಚಾಗಿದ್ದಾರೆ. ಭಾರತದ ಇತಿಹಾಸದಲ್ಲಿ ಇಷ್ಟು ಪ್ರಮಾಣದ ಬಡವರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗಿರುವುದು ಇದೇ ಮೊದಲು ಎನ್ನಲಾಗಿದೆ.

ಈ ದತ್ತಾಂಶವು ಕೋವಿಡ್‌-19 ಬಿಕ್ಕಟ್ಟು ಆರಂಭವಾಗುವವರೆಗೆ ಮಾತ್ರ ಇರುವುದು ಮತ್ತೊಂದು ಆಘಾತಕಾರಿ ಸಂಗತಿ. ಅಂದರೆ ಬಡತನ ರೇಖೆಯ ಕೆಳಗಿನ ಜನರ ಆಘಾತಕಾರಿ ಏರಿಕೆಯು ಸಾಂಕ್ರಾಮಿಕ ರೋಗವು ಬರುವ ಮೊದಲು ಆಗಿದೆ. ಲಾಕ್‌ಡೌನ್‌, ಕೋವಿಡ್‌ ಸಂದರ್ಭದಲ್ಲಿ ಗಣನೀಯವಾಗಿ ಉದ್ಯೋಗ ಕಡಿತವಾಗಿದ್ದು, ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ಸ್ಪಷ್ಟ.

ದಿ ವೈರ್‌ನ ಪತ್ರಕರ್ತರಾದ ಮಿತಾಲಿ ಮುಖರ್ಜಿಯವರು ಸಂತೋಷ್ ಮೆಹ್ರೋತ್ರಾ  ಅವರ ವಿಡಿಯೊ ಸಂದರ್ಶನ ನಡೆಸಿದ್ದು, ಈ ಮಾಹಿತಿಯನ್ನು ಸಂತೋಷ್‌ ಬಿಚ್ಚಿಟ್ಟಿದ್ದಾರೆ. ಜೊತೆಗೆ ಈ ಬಡತನ ಹೆಚ್ಚಳಕ್ಕೆ ಕಾರಣಗಳನ್ನು ತಿಳಿಸಿದ್ದಾರೆ.

ಹಿರಿಯ ಅರ್ಥಶಾಸ್ತ್ರಜ್ಞ ಸುರೇಶ್‌ ತೆಂಡೂಲ್ಕರ್‌‌ ಹಾಕಿಕೊಟ್ಟ ಮೆಥಡಾಲಜಿ ಆಧರಿಸಿ, ಭಾರತ ಸರ್ಕಾರದ ನ್ಯಾಷನಲ್‌ ಸ್ಯಾಪಲ್‌ ಸರ್ವೇ ಆಫೀಸ್‌‌ (ಎನ್‌ಎಸ್‌ಎಸ್‌ಒ) ಅಂಕಿ-ಅಂಶಗಳ ಆಧಾರದಲ್ಲಿ ಅಧ್ಯಯನ ಮಾಡಲಾಗಿದೆ.

ನೋಟು ಅಮಾನೀಕರಣದಿಂದಾಗಿ ಅಸಂಘಟಿತ ವಲಯದಲ್ಲಿನ ಬಹುಸಂಖ್ಯೆಯ ಜನರು ಸಮಸ್ಯೆಗೆ ಸಿಲುಕಿದರು. ಆರ್ಥಿಕತೆ ಕುಸಿದು, ಜೀವನಾಗತ್ಯತೆಗಳನ್ನೂ ಪೂರೈಸಿಕೊಳ್ಳಲು ಆಗಲಿಲ್ಲ. ಉದ್ಯೋಗಗಳು ಗಣನೀಯವಾಗಿ ಕಡಿಮೆಯಾಗಿದ್ದು ಈ ಬಡತನ ಹೆಚ್ಚಳಕ್ಕೆ ಕಾರಣ. ಉದ್ಯೋಗ ಕಳೆದುಕೊಂಡಿದ್ದರಿಂದ ಜನರ ಖರೀದಿ ಸಾಮರ್ಥ್ಯ ಕುಸಿಯಿತು. ಇದರ ಆಧಾರದಲ್ಲಿ ಸಮೀಕ್ಷೆ ಮಾಡಲಾಗಿದೆ ಎಂದು ಪ್ರೊ.ಸಂತೋಷ್ ಮೆಹ್ರೋತ್ರಾ ತಿಳಿಸಿದ್ದಾರೆ.

2004- 2011 ಕಾಲಾವಧಿಯಲ್ಲಿ ಶೇ. 37 ಜನರು ಕೃಷಿಯನ್ನು ತೊರೆದರು. ಕೃಷಿಯೇತರ ಕ್ಷೇತ್ರ ಬೆಳೆಯಿತು. ಆದರೆ 2012ರ ಬಳಿಕ ಪ್ರತಿವರ್ಷ ಸುಮಾರು 7.5 ಮಿಲಿಯನ್‌ ಕೃಷಿಯೇತರ ಉದ್ಯೋಗಳು ನಷ್ಟವಾಗುತ್ತ ಬಂದವು ಎಂದು ವಿವರಿಸಿದ್ದಾರೆ.

(ಪ್ರೊ.ಸಂತೋಷ್‌ ಮೆಹ್ರೊತ್ರಾ ಅವರ ಪೂರ್ಣ ಸಂದರ್ಶನವನ್ನು ‘ದಿ ವೈರ್‌‌’ ಯೂಟ್ಯೂಬ್‌ ಚಾನೆಲ್‌ನಲ್ಲಿ ನೋಡಬಹುದು)


ಇದನ್ನೂ ಓದಿರಿ: ನೋಟು ರದ್ಧತಿಗೆ ಐದು ವರ್ಷ: ನಗದು ಬಳಕೆ ಕಡಿಮೆಯಾಯಿತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...