Homeಮುಖಪುಟಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ಕೋವಿಡ್‌ ಬಿಕ್ಕಟ್ಟಿನವರೆಗಿನ ಅಂಕಿ-ಅಂಶಗಳನ್ನು ಮಾತ್ರ ಅಧ್ಯಯನಕ್ಕೆ ಬಳಸಲಾಗಿದೆ. ಕೋವಿಡ್‌ ನಂತರದ ಪರಿಸ್ಥಿತಿ ಮತ್ತಷ್ಟು ಆತಂಕಕಾರಿಯಾಗಿರುವ ಸಾಧ್ಯತೆ ಹೆಚ್ಚಿದೆ.

- Advertisement -
- Advertisement -

ಕಳೆದ ಕೆಲವು ತ್ರೈಮಾಸಿಕಗಳಲ್ಲಿ ಭಾರತದಲ್ಲಿ ನಿರುದ್ಯೋಗ ಅಂಕಿಅಂಶಗಳು ಸ್ಥಿರವಾಗಿ ಏರುತ್ತಿವೆ. ಭಾರತದ ಬಡವರ ಸಂಖ್ಯೆಯಲ್ಲಿ ಆಘಾತಕಾರಿ ಹೆಚ್ಚಳವಾಗಿರುವುದನ್ನು ಹೊರ ಹಾಕಿರುವ ಅಧ್ಯಯನದ ಕುರಿತು ‘ದಿ ವೈರ್‌’ ಜಾಲತಾಣ ವರದಿ ಮಾಡಿದೆ.

ಜರ್ಮನಿಯ ಬಾನ್‌ನಲ್ಲಿರುವ IZA ಕಾರ್ಮಿಕ ಅರ್ಥಶಾಸ್ತ್ರ ಸಂಸ್ಥೆಯ ಸಂಶೋಧಕ ಪ್ರೊ.ಸಂತೋಷ್ ಮೆಹ್ರೋತ್ರಾ ಮತ್ತು ಅವರ ಸಹೋದ್ಯೋಗಿ ಜಜಾತಿ ಕೇಶಾರಿ ಪರಿದಾ ಅವರ ಇತ್ತೀಚಿನ ಅಧ್ಯಯನವು ಈ ಸಂಗತಿಯನ್ನು ಬಿಚ್ಚಿಟ್ಟಿದೆ.

ಕಳೆದ ಎಂಟು ವರ್ಷಗಳಲ್ಲಿ (2020ರವರೆಗೆ) ದೇಶದಲ್ಲಿ ಹೆಚ್ಚಾಗಿರುವ ಬಡತನ ಪ್ರಮಾಣವನ್ನು ಅಧ್ಯಯನ ಬಹಿರಂಗಪಡಿಸಿದ್ದು, ಬಡತನ ರೇಖೆಗಿಂತ ಕೆಳಗಿರುವವರ ಸಂಖ್ಯೆ 7 ಕೋಟಿ 60 ಲಕ್ಷ ಹೆಚ್ಚಾಗಿದ್ದಾರೆ. ಭಾರತದ ಇತಿಹಾಸದಲ್ಲಿ ಇಷ್ಟು ಪ್ರಮಾಣದ ಬಡವರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗಿರುವುದು ಇದೇ ಮೊದಲು ಎನ್ನಲಾಗಿದೆ.

ಈ ದತ್ತಾಂಶವು ಕೋವಿಡ್‌-19 ಬಿಕ್ಕಟ್ಟು ಆರಂಭವಾಗುವವರೆಗೆ ಮಾತ್ರ ಇರುವುದು ಮತ್ತೊಂದು ಆಘಾತಕಾರಿ ಸಂಗತಿ. ಅಂದರೆ ಬಡತನ ರೇಖೆಯ ಕೆಳಗಿನ ಜನರ ಆಘಾತಕಾರಿ ಏರಿಕೆಯು ಸಾಂಕ್ರಾಮಿಕ ರೋಗವು ಬರುವ ಮೊದಲು ಆಗಿದೆ. ಲಾಕ್‌ಡೌನ್‌, ಕೋವಿಡ್‌ ಸಂದರ್ಭದಲ್ಲಿ ಗಣನೀಯವಾಗಿ ಉದ್ಯೋಗ ಕಡಿತವಾಗಿದ್ದು, ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ಸ್ಪಷ್ಟ.

ದಿ ವೈರ್‌ನ ಪತ್ರಕರ್ತರಾದ ಮಿತಾಲಿ ಮುಖರ್ಜಿಯವರು ಸಂತೋಷ್ ಮೆಹ್ರೋತ್ರಾ  ಅವರ ವಿಡಿಯೊ ಸಂದರ್ಶನ ನಡೆಸಿದ್ದು, ಈ ಮಾಹಿತಿಯನ್ನು ಸಂತೋಷ್‌ ಬಿಚ್ಚಿಟ್ಟಿದ್ದಾರೆ. ಜೊತೆಗೆ ಈ ಬಡತನ ಹೆಚ್ಚಳಕ್ಕೆ ಕಾರಣಗಳನ್ನು ತಿಳಿಸಿದ್ದಾರೆ.

ಹಿರಿಯ ಅರ್ಥಶಾಸ್ತ್ರಜ್ಞ ಸುರೇಶ್‌ ತೆಂಡೂಲ್ಕರ್‌‌ ಹಾಕಿಕೊಟ್ಟ ಮೆಥಡಾಲಜಿ ಆಧರಿಸಿ, ಭಾರತ ಸರ್ಕಾರದ ನ್ಯಾಷನಲ್‌ ಸ್ಯಾಪಲ್‌ ಸರ್ವೇ ಆಫೀಸ್‌‌ (ಎನ್‌ಎಸ್‌ಎಸ್‌ಒ) ಅಂಕಿ-ಅಂಶಗಳ ಆಧಾರದಲ್ಲಿ ಅಧ್ಯಯನ ಮಾಡಲಾಗಿದೆ.

ನೋಟು ಅಮಾನೀಕರಣದಿಂದಾಗಿ ಅಸಂಘಟಿತ ವಲಯದಲ್ಲಿನ ಬಹುಸಂಖ್ಯೆಯ ಜನರು ಸಮಸ್ಯೆಗೆ ಸಿಲುಕಿದರು. ಆರ್ಥಿಕತೆ ಕುಸಿದು, ಜೀವನಾಗತ್ಯತೆಗಳನ್ನೂ ಪೂರೈಸಿಕೊಳ್ಳಲು ಆಗಲಿಲ್ಲ. ಉದ್ಯೋಗಗಳು ಗಣನೀಯವಾಗಿ ಕಡಿಮೆಯಾಗಿದ್ದು ಈ ಬಡತನ ಹೆಚ್ಚಳಕ್ಕೆ ಕಾರಣ. ಉದ್ಯೋಗ ಕಳೆದುಕೊಂಡಿದ್ದರಿಂದ ಜನರ ಖರೀದಿ ಸಾಮರ್ಥ್ಯ ಕುಸಿಯಿತು. ಇದರ ಆಧಾರದಲ್ಲಿ ಸಮೀಕ್ಷೆ ಮಾಡಲಾಗಿದೆ ಎಂದು ಪ್ರೊ.ಸಂತೋಷ್ ಮೆಹ್ರೋತ್ರಾ ತಿಳಿಸಿದ್ದಾರೆ.

2004- 2011 ಕಾಲಾವಧಿಯಲ್ಲಿ ಶೇ. 37 ಜನರು ಕೃಷಿಯನ್ನು ತೊರೆದರು. ಕೃಷಿಯೇತರ ಕ್ಷೇತ್ರ ಬೆಳೆಯಿತು. ಆದರೆ 2012ರ ಬಳಿಕ ಪ್ರತಿವರ್ಷ ಸುಮಾರು 7.5 ಮಿಲಿಯನ್‌ ಕೃಷಿಯೇತರ ಉದ್ಯೋಗಳು ನಷ್ಟವಾಗುತ್ತ ಬಂದವು ಎಂದು ವಿವರಿಸಿದ್ದಾರೆ.

(ಪ್ರೊ.ಸಂತೋಷ್‌ ಮೆಹ್ರೊತ್ರಾ ಅವರ ಪೂರ್ಣ ಸಂದರ್ಶನವನ್ನು ‘ದಿ ವೈರ್‌‌’ ಯೂಟ್ಯೂಬ್‌ ಚಾನೆಲ್‌ನಲ್ಲಿ ನೋಡಬಹುದು)


ಇದನ್ನೂ ಓದಿರಿ: ನೋಟು ರದ್ಧತಿಗೆ ಐದು ವರ್ಷ: ನಗದು ಬಳಕೆ ಕಡಿಮೆಯಾಯಿತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...