Homeಮುಖಪುಟಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ಕೋವಿಡ್‌ ಬಿಕ್ಕಟ್ಟಿನವರೆಗಿನ ಅಂಕಿ-ಅಂಶಗಳನ್ನು ಮಾತ್ರ ಅಧ್ಯಯನಕ್ಕೆ ಬಳಸಲಾಗಿದೆ. ಕೋವಿಡ್‌ ನಂತರದ ಪರಿಸ್ಥಿತಿ ಮತ್ತಷ್ಟು ಆತಂಕಕಾರಿಯಾಗಿರುವ ಸಾಧ್ಯತೆ ಹೆಚ್ಚಿದೆ.

- Advertisement -
- Advertisement -

ಕಳೆದ ಕೆಲವು ತ್ರೈಮಾಸಿಕಗಳಲ್ಲಿ ಭಾರತದಲ್ಲಿ ನಿರುದ್ಯೋಗ ಅಂಕಿಅಂಶಗಳು ಸ್ಥಿರವಾಗಿ ಏರುತ್ತಿವೆ. ಭಾರತದ ಬಡವರ ಸಂಖ್ಯೆಯಲ್ಲಿ ಆಘಾತಕಾರಿ ಹೆಚ್ಚಳವಾಗಿರುವುದನ್ನು ಹೊರ ಹಾಕಿರುವ ಅಧ್ಯಯನದ ಕುರಿತು ‘ದಿ ವೈರ್‌’ ಜಾಲತಾಣ ವರದಿ ಮಾಡಿದೆ.

ಜರ್ಮನಿಯ ಬಾನ್‌ನಲ್ಲಿರುವ IZA ಕಾರ್ಮಿಕ ಅರ್ಥಶಾಸ್ತ್ರ ಸಂಸ್ಥೆಯ ಸಂಶೋಧಕ ಪ್ರೊ.ಸಂತೋಷ್ ಮೆಹ್ರೋತ್ರಾ ಮತ್ತು ಅವರ ಸಹೋದ್ಯೋಗಿ ಜಜಾತಿ ಕೇಶಾರಿ ಪರಿದಾ ಅವರ ಇತ್ತೀಚಿನ ಅಧ್ಯಯನವು ಈ ಸಂಗತಿಯನ್ನು ಬಿಚ್ಚಿಟ್ಟಿದೆ.

ಕಳೆದ ಎಂಟು ವರ್ಷಗಳಲ್ಲಿ (2020ರವರೆಗೆ) ದೇಶದಲ್ಲಿ ಹೆಚ್ಚಾಗಿರುವ ಬಡತನ ಪ್ರಮಾಣವನ್ನು ಅಧ್ಯಯನ ಬಹಿರಂಗಪಡಿಸಿದ್ದು, ಬಡತನ ರೇಖೆಗಿಂತ ಕೆಳಗಿರುವವರ ಸಂಖ್ಯೆ 7 ಕೋಟಿ 60 ಲಕ್ಷ ಹೆಚ್ಚಾಗಿದ್ದಾರೆ. ಭಾರತದ ಇತಿಹಾಸದಲ್ಲಿ ಇಷ್ಟು ಪ್ರಮಾಣದ ಬಡವರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗಿರುವುದು ಇದೇ ಮೊದಲು ಎನ್ನಲಾಗಿದೆ.

ಈ ದತ್ತಾಂಶವು ಕೋವಿಡ್‌-19 ಬಿಕ್ಕಟ್ಟು ಆರಂಭವಾಗುವವರೆಗೆ ಮಾತ್ರ ಇರುವುದು ಮತ್ತೊಂದು ಆಘಾತಕಾರಿ ಸಂಗತಿ. ಅಂದರೆ ಬಡತನ ರೇಖೆಯ ಕೆಳಗಿನ ಜನರ ಆಘಾತಕಾರಿ ಏರಿಕೆಯು ಸಾಂಕ್ರಾಮಿಕ ರೋಗವು ಬರುವ ಮೊದಲು ಆಗಿದೆ. ಲಾಕ್‌ಡೌನ್‌, ಕೋವಿಡ್‌ ಸಂದರ್ಭದಲ್ಲಿ ಗಣನೀಯವಾಗಿ ಉದ್ಯೋಗ ಕಡಿತವಾಗಿದ್ದು, ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ಸ್ಪಷ್ಟ.

ದಿ ವೈರ್‌ನ ಪತ್ರಕರ್ತರಾದ ಮಿತಾಲಿ ಮುಖರ್ಜಿಯವರು ಸಂತೋಷ್ ಮೆಹ್ರೋತ್ರಾ  ಅವರ ವಿಡಿಯೊ ಸಂದರ್ಶನ ನಡೆಸಿದ್ದು, ಈ ಮಾಹಿತಿಯನ್ನು ಸಂತೋಷ್‌ ಬಿಚ್ಚಿಟ್ಟಿದ್ದಾರೆ. ಜೊತೆಗೆ ಈ ಬಡತನ ಹೆಚ್ಚಳಕ್ಕೆ ಕಾರಣಗಳನ್ನು ತಿಳಿಸಿದ್ದಾರೆ.

ಹಿರಿಯ ಅರ್ಥಶಾಸ್ತ್ರಜ್ಞ ಸುರೇಶ್‌ ತೆಂಡೂಲ್ಕರ್‌‌ ಹಾಕಿಕೊಟ್ಟ ಮೆಥಡಾಲಜಿ ಆಧರಿಸಿ, ಭಾರತ ಸರ್ಕಾರದ ನ್ಯಾಷನಲ್‌ ಸ್ಯಾಪಲ್‌ ಸರ್ವೇ ಆಫೀಸ್‌‌ (ಎನ್‌ಎಸ್‌ಎಸ್‌ಒ) ಅಂಕಿ-ಅಂಶಗಳ ಆಧಾರದಲ್ಲಿ ಅಧ್ಯಯನ ಮಾಡಲಾಗಿದೆ.

ನೋಟು ಅಮಾನೀಕರಣದಿಂದಾಗಿ ಅಸಂಘಟಿತ ವಲಯದಲ್ಲಿನ ಬಹುಸಂಖ್ಯೆಯ ಜನರು ಸಮಸ್ಯೆಗೆ ಸಿಲುಕಿದರು. ಆರ್ಥಿಕತೆ ಕುಸಿದು, ಜೀವನಾಗತ್ಯತೆಗಳನ್ನೂ ಪೂರೈಸಿಕೊಳ್ಳಲು ಆಗಲಿಲ್ಲ. ಉದ್ಯೋಗಗಳು ಗಣನೀಯವಾಗಿ ಕಡಿಮೆಯಾಗಿದ್ದು ಈ ಬಡತನ ಹೆಚ್ಚಳಕ್ಕೆ ಕಾರಣ. ಉದ್ಯೋಗ ಕಳೆದುಕೊಂಡಿದ್ದರಿಂದ ಜನರ ಖರೀದಿ ಸಾಮರ್ಥ್ಯ ಕುಸಿಯಿತು. ಇದರ ಆಧಾರದಲ್ಲಿ ಸಮೀಕ್ಷೆ ಮಾಡಲಾಗಿದೆ ಎಂದು ಪ್ರೊ.ಸಂತೋಷ್ ಮೆಹ್ರೋತ್ರಾ ತಿಳಿಸಿದ್ದಾರೆ.

2004- 2011 ಕಾಲಾವಧಿಯಲ್ಲಿ ಶೇ. 37 ಜನರು ಕೃಷಿಯನ್ನು ತೊರೆದರು. ಕೃಷಿಯೇತರ ಕ್ಷೇತ್ರ ಬೆಳೆಯಿತು. ಆದರೆ 2012ರ ಬಳಿಕ ಪ್ರತಿವರ್ಷ ಸುಮಾರು 7.5 ಮಿಲಿಯನ್‌ ಕೃಷಿಯೇತರ ಉದ್ಯೋಗಳು ನಷ್ಟವಾಗುತ್ತ ಬಂದವು ಎಂದು ವಿವರಿಸಿದ್ದಾರೆ.

(ಪ್ರೊ.ಸಂತೋಷ್‌ ಮೆಹ್ರೊತ್ರಾ ಅವರ ಪೂರ್ಣ ಸಂದರ್ಶನವನ್ನು ‘ದಿ ವೈರ್‌‌’ ಯೂಟ್ಯೂಬ್‌ ಚಾನೆಲ್‌ನಲ್ಲಿ ನೋಡಬಹುದು)


ಇದನ್ನೂ ಓದಿರಿ: ನೋಟು ರದ್ಧತಿಗೆ ಐದು ವರ್ಷ: ನಗದು ಬಳಕೆ ಕಡಿಮೆಯಾಯಿತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...