Homeಮುಖಪುಟಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ಕೋವಿಡ್‌ ಬಿಕ್ಕಟ್ಟಿನವರೆಗಿನ ಅಂಕಿ-ಅಂಶಗಳನ್ನು ಮಾತ್ರ ಅಧ್ಯಯನಕ್ಕೆ ಬಳಸಲಾಗಿದೆ. ಕೋವಿಡ್‌ ನಂತರದ ಪರಿಸ್ಥಿತಿ ಮತ್ತಷ್ಟು ಆತಂಕಕಾರಿಯಾಗಿರುವ ಸಾಧ್ಯತೆ ಹೆಚ್ಚಿದೆ.

- Advertisement -
- Advertisement -

ಕಳೆದ ಕೆಲವು ತ್ರೈಮಾಸಿಕಗಳಲ್ಲಿ ಭಾರತದಲ್ಲಿ ನಿರುದ್ಯೋಗ ಅಂಕಿಅಂಶಗಳು ಸ್ಥಿರವಾಗಿ ಏರುತ್ತಿವೆ. ಭಾರತದ ಬಡವರ ಸಂಖ್ಯೆಯಲ್ಲಿ ಆಘಾತಕಾರಿ ಹೆಚ್ಚಳವಾಗಿರುವುದನ್ನು ಹೊರ ಹಾಕಿರುವ ಅಧ್ಯಯನದ ಕುರಿತು ‘ದಿ ವೈರ್‌’ ಜಾಲತಾಣ ವರದಿ ಮಾಡಿದೆ.

ಜರ್ಮನಿಯ ಬಾನ್‌ನಲ್ಲಿರುವ IZA ಕಾರ್ಮಿಕ ಅರ್ಥಶಾಸ್ತ್ರ ಸಂಸ್ಥೆಯ ಸಂಶೋಧಕ ಪ್ರೊ.ಸಂತೋಷ್ ಮೆಹ್ರೋತ್ರಾ ಮತ್ತು ಅವರ ಸಹೋದ್ಯೋಗಿ ಜಜಾತಿ ಕೇಶಾರಿ ಪರಿದಾ ಅವರ ಇತ್ತೀಚಿನ ಅಧ್ಯಯನವು ಈ ಸಂಗತಿಯನ್ನು ಬಿಚ್ಚಿಟ್ಟಿದೆ.

ಕಳೆದ ಎಂಟು ವರ್ಷಗಳಲ್ಲಿ (2020ರವರೆಗೆ) ದೇಶದಲ್ಲಿ ಹೆಚ್ಚಾಗಿರುವ ಬಡತನ ಪ್ರಮಾಣವನ್ನು ಅಧ್ಯಯನ ಬಹಿರಂಗಪಡಿಸಿದ್ದು, ಬಡತನ ರೇಖೆಗಿಂತ ಕೆಳಗಿರುವವರ ಸಂಖ್ಯೆ 7 ಕೋಟಿ 60 ಲಕ್ಷ ಹೆಚ್ಚಾಗಿದ್ದಾರೆ. ಭಾರತದ ಇತಿಹಾಸದಲ್ಲಿ ಇಷ್ಟು ಪ್ರಮಾಣದ ಬಡವರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗಿರುವುದು ಇದೇ ಮೊದಲು ಎನ್ನಲಾಗಿದೆ.

ಈ ದತ್ತಾಂಶವು ಕೋವಿಡ್‌-19 ಬಿಕ್ಕಟ್ಟು ಆರಂಭವಾಗುವವರೆಗೆ ಮಾತ್ರ ಇರುವುದು ಮತ್ತೊಂದು ಆಘಾತಕಾರಿ ಸಂಗತಿ. ಅಂದರೆ ಬಡತನ ರೇಖೆಯ ಕೆಳಗಿನ ಜನರ ಆಘಾತಕಾರಿ ಏರಿಕೆಯು ಸಾಂಕ್ರಾಮಿಕ ರೋಗವು ಬರುವ ಮೊದಲು ಆಗಿದೆ. ಲಾಕ್‌ಡೌನ್‌, ಕೋವಿಡ್‌ ಸಂದರ್ಭದಲ್ಲಿ ಗಣನೀಯವಾಗಿ ಉದ್ಯೋಗ ಕಡಿತವಾಗಿದ್ದು, ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ಸ್ಪಷ್ಟ.

ದಿ ವೈರ್‌ನ ಪತ್ರಕರ್ತರಾದ ಮಿತಾಲಿ ಮುಖರ್ಜಿಯವರು ಸಂತೋಷ್ ಮೆಹ್ರೋತ್ರಾ  ಅವರ ವಿಡಿಯೊ ಸಂದರ್ಶನ ನಡೆಸಿದ್ದು, ಈ ಮಾಹಿತಿಯನ್ನು ಸಂತೋಷ್‌ ಬಿಚ್ಚಿಟ್ಟಿದ್ದಾರೆ. ಜೊತೆಗೆ ಈ ಬಡತನ ಹೆಚ್ಚಳಕ್ಕೆ ಕಾರಣಗಳನ್ನು ತಿಳಿಸಿದ್ದಾರೆ.

ಹಿರಿಯ ಅರ್ಥಶಾಸ್ತ್ರಜ್ಞ ಸುರೇಶ್‌ ತೆಂಡೂಲ್ಕರ್‌‌ ಹಾಕಿಕೊಟ್ಟ ಮೆಥಡಾಲಜಿ ಆಧರಿಸಿ, ಭಾರತ ಸರ್ಕಾರದ ನ್ಯಾಷನಲ್‌ ಸ್ಯಾಪಲ್‌ ಸರ್ವೇ ಆಫೀಸ್‌‌ (ಎನ್‌ಎಸ್‌ಎಸ್‌ಒ) ಅಂಕಿ-ಅಂಶಗಳ ಆಧಾರದಲ್ಲಿ ಅಧ್ಯಯನ ಮಾಡಲಾಗಿದೆ.

ನೋಟು ಅಮಾನೀಕರಣದಿಂದಾಗಿ ಅಸಂಘಟಿತ ವಲಯದಲ್ಲಿನ ಬಹುಸಂಖ್ಯೆಯ ಜನರು ಸಮಸ್ಯೆಗೆ ಸಿಲುಕಿದರು. ಆರ್ಥಿಕತೆ ಕುಸಿದು, ಜೀವನಾಗತ್ಯತೆಗಳನ್ನೂ ಪೂರೈಸಿಕೊಳ್ಳಲು ಆಗಲಿಲ್ಲ. ಉದ್ಯೋಗಗಳು ಗಣನೀಯವಾಗಿ ಕಡಿಮೆಯಾಗಿದ್ದು ಈ ಬಡತನ ಹೆಚ್ಚಳಕ್ಕೆ ಕಾರಣ. ಉದ್ಯೋಗ ಕಳೆದುಕೊಂಡಿದ್ದರಿಂದ ಜನರ ಖರೀದಿ ಸಾಮರ್ಥ್ಯ ಕುಸಿಯಿತು. ಇದರ ಆಧಾರದಲ್ಲಿ ಸಮೀಕ್ಷೆ ಮಾಡಲಾಗಿದೆ ಎಂದು ಪ್ರೊ.ಸಂತೋಷ್ ಮೆಹ್ರೋತ್ರಾ ತಿಳಿಸಿದ್ದಾರೆ.

2004- 2011 ಕಾಲಾವಧಿಯಲ್ಲಿ ಶೇ. 37 ಜನರು ಕೃಷಿಯನ್ನು ತೊರೆದರು. ಕೃಷಿಯೇತರ ಕ್ಷೇತ್ರ ಬೆಳೆಯಿತು. ಆದರೆ 2012ರ ಬಳಿಕ ಪ್ರತಿವರ್ಷ ಸುಮಾರು 7.5 ಮಿಲಿಯನ್‌ ಕೃಷಿಯೇತರ ಉದ್ಯೋಗಳು ನಷ್ಟವಾಗುತ್ತ ಬಂದವು ಎಂದು ವಿವರಿಸಿದ್ದಾರೆ.

(ಪ್ರೊ.ಸಂತೋಷ್‌ ಮೆಹ್ರೊತ್ರಾ ಅವರ ಪೂರ್ಣ ಸಂದರ್ಶನವನ್ನು ‘ದಿ ವೈರ್‌‌’ ಯೂಟ್ಯೂಬ್‌ ಚಾನೆಲ್‌ನಲ್ಲಿ ನೋಡಬಹುದು)


ಇದನ್ನೂ ಓದಿರಿ: ನೋಟು ರದ್ಧತಿಗೆ ಐದು ವರ್ಷ: ನಗದು ಬಳಕೆ ಕಡಿಮೆಯಾಯಿತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...