Homeಮುಖಪುಟಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ಕೋವಿಡ್‌ ಬಿಕ್ಕಟ್ಟಿನವರೆಗಿನ ಅಂಕಿ-ಅಂಶಗಳನ್ನು ಮಾತ್ರ ಅಧ್ಯಯನಕ್ಕೆ ಬಳಸಲಾಗಿದೆ. ಕೋವಿಡ್‌ ನಂತರದ ಪರಿಸ್ಥಿತಿ ಮತ್ತಷ್ಟು ಆತಂಕಕಾರಿಯಾಗಿರುವ ಸಾಧ್ಯತೆ ಹೆಚ್ಚಿದೆ.

- Advertisement -
- Advertisement -

ಕಳೆದ ಕೆಲವು ತ್ರೈಮಾಸಿಕಗಳಲ್ಲಿ ಭಾರತದಲ್ಲಿ ನಿರುದ್ಯೋಗ ಅಂಕಿಅಂಶಗಳು ಸ್ಥಿರವಾಗಿ ಏರುತ್ತಿವೆ. ಭಾರತದ ಬಡವರ ಸಂಖ್ಯೆಯಲ್ಲಿ ಆಘಾತಕಾರಿ ಹೆಚ್ಚಳವಾಗಿರುವುದನ್ನು ಹೊರ ಹಾಕಿರುವ ಅಧ್ಯಯನದ ಕುರಿತು ‘ದಿ ವೈರ್‌’ ಜಾಲತಾಣ ವರದಿ ಮಾಡಿದೆ.

ಜರ್ಮನಿಯ ಬಾನ್‌ನಲ್ಲಿರುವ IZA ಕಾರ್ಮಿಕ ಅರ್ಥಶಾಸ್ತ್ರ ಸಂಸ್ಥೆಯ ಸಂಶೋಧಕ ಪ್ರೊ.ಸಂತೋಷ್ ಮೆಹ್ರೋತ್ರಾ ಮತ್ತು ಅವರ ಸಹೋದ್ಯೋಗಿ ಜಜಾತಿ ಕೇಶಾರಿ ಪರಿದಾ ಅವರ ಇತ್ತೀಚಿನ ಅಧ್ಯಯನವು ಈ ಸಂಗತಿಯನ್ನು ಬಿಚ್ಚಿಟ್ಟಿದೆ.

ಕಳೆದ ಎಂಟು ವರ್ಷಗಳಲ್ಲಿ (2020ರವರೆಗೆ) ದೇಶದಲ್ಲಿ ಹೆಚ್ಚಾಗಿರುವ ಬಡತನ ಪ್ರಮಾಣವನ್ನು ಅಧ್ಯಯನ ಬಹಿರಂಗಪಡಿಸಿದ್ದು, ಬಡತನ ರೇಖೆಗಿಂತ ಕೆಳಗಿರುವವರ ಸಂಖ್ಯೆ 7 ಕೋಟಿ 60 ಲಕ್ಷ ಹೆಚ್ಚಾಗಿದ್ದಾರೆ. ಭಾರತದ ಇತಿಹಾಸದಲ್ಲಿ ಇಷ್ಟು ಪ್ರಮಾಣದ ಬಡವರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗಿರುವುದು ಇದೇ ಮೊದಲು ಎನ್ನಲಾಗಿದೆ.

ಈ ದತ್ತಾಂಶವು ಕೋವಿಡ್‌-19 ಬಿಕ್ಕಟ್ಟು ಆರಂಭವಾಗುವವರೆಗೆ ಮಾತ್ರ ಇರುವುದು ಮತ್ತೊಂದು ಆಘಾತಕಾರಿ ಸಂಗತಿ. ಅಂದರೆ ಬಡತನ ರೇಖೆಯ ಕೆಳಗಿನ ಜನರ ಆಘಾತಕಾರಿ ಏರಿಕೆಯು ಸಾಂಕ್ರಾಮಿಕ ರೋಗವು ಬರುವ ಮೊದಲು ಆಗಿದೆ. ಲಾಕ್‌ಡೌನ್‌, ಕೋವಿಡ್‌ ಸಂದರ್ಭದಲ್ಲಿ ಗಣನೀಯವಾಗಿ ಉದ್ಯೋಗ ಕಡಿತವಾಗಿದ್ದು, ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ಸ್ಪಷ್ಟ.

ದಿ ವೈರ್‌ನ ಪತ್ರಕರ್ತರಾದ ಮಿತಾಲಿ ಮುಖರ್ಜಿಯವರು ಸಂತೋಷ್ ಮೆಹ್ರೋತ್ರಾ  ಅವರ ವಿಡಿಯೊ ಸಂದರ್ಶನ ನಡೆಸಿದ್ದು, ಈ ಮಾಹಿತಿಯನ್ನು ಸಂತೋಷ್‌ ಬಿಚ್ಚಿಟ್ಟಿದ್ದಾರೆ. ಜೊತೆಗೆ ಈ ಬಡತನ ಹೆಚ್ಚಳಕ್ಕೆ ಕಾರಣಗಳನ್ನು ತಿಳಿಸಿದ್ದಾರೆ.

ಹಿರಿಯ ಅರ್ಥಶಾಸ್ತ್ರಜ್ಞ ಸುರೇಶ್‌ ತೆಂಡೂಲ್ಕರ್‌‌ ಹಾಕಿಕೊಟ್ಟ ಮೆಥಡಾಲಜಿ ಆಧರಿಸಿ, ಭಾರತ ಸರ್ಕಾರದ ನ್ಯಾಷನಲ್‌ ಸ್ಯಾಪಲ್‌ ಸರ್ವೇ ಆಫೀಸ್‌‌ (ಎನ್‌ಎಸ್‌ಎಸ್‌ಒ) ಅಂಕಿ-ಅಂಶಗಳ ಆಧಾರದಲ್ಲಿ ಅಧ್ಯಯನ ಮಾಡಲಾಗಿದೆ.

ನೋಟು ಅಮಾನೀಕರಣದಿಂದಾಗಿ ಅಸಂಘಟಿತ ವಲಯದಲ್ಲಿನ ಬಹುಸಂಖ್ಯೆಯ ಜನರು ಸಮಸ್ಯೆಗೆ ಸಿಲುಕಿದರು. ಆರ್ಥಿಕತೆ ಕುಸಿದು, ಜೀವನಾಗತ್ಯತೆಗಳನ್ನೂ ಪೂರೈಸಿಕೊಳ್ಳಲು ಆಗಲಿಲ್ಲ. ಉದ್ಯೋಗಗಳು ಗಣನೀಯವಾಗಿ ಕಡಿಮೆಯಾಗಿದ್ದು ಈ ಬಡತನ ಹೆಚ್ಚಳಕ್ಕೆ ಕಾರಣ. ಉದ್ಯೋಗ ಕಳೆದುಕೊಂಡಿದ್ದರಿಂದ ಜನರ ಖರೀದಿ ಸಾಮರ್ಥ್ಯ ಕುಸಿಯಿತು. ಇದರ ಆಧಾರದಲ್ಲಿ ಸಮೀಕ್ಷೆ ಮಾಡಲಾಗಿದೆ ಎಂದು ಪ್ರೊ.ಸಂತೋಷ್ ಮೆಹ್ರೋತ್ರಾ ತಿಳಿಸಿದ್ದಾರೆ.

2004- 2011 ಕಾಲಾವಧಿಯಲ್ಲಿ ಶೇ. 37 ಜನರು ಕೃಷಿಯನ್ನು ತೊರೆದರು. ಕೃಷಿಯೇತರ ಕ್ಷೇತ್ರ ಬೆಳೆಯಿತು. ಆದರೆ 2012ರ ಬಳಿಕ ಪ್ರತಿವರ್ಷ ಸುಮಾರು 7.5 ಮಿಲಿಯನ್‌ ಕೃಷಿಯೇತರ ಉದ್ಯೋಗಳು ನಷ್ಟವಾಗುತ್ತ ಬಂದವು ಎಂದು ವಿವರಿಸಿದ್ದಾರೆ.

(ಪ್ರೊ.ಸಂತೋಷ್‌ ಮೆಹ್ರೊತ್ರಾ ಅವರ ಪೂರ್ಣ ಸಂದರ್ಶನವನ್ನು ‘ದಿ ವೈರ್‌‌’ ಯೂಟ್ಯೂಬ್‌ ಚಾನೆಲ್‌ನಲ್ಲಿ ನೋಡಬಹುದು)


ಇದನ್ನೂ ಓದಿರಿ: ನೋಟು ರದ್ಧತಿಗೆ ಐದು ವರ್ಷ: ನಗದು ಬಳಕೆ ಕಡಿಮೆಯಾಯಿತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...