Homeಕರ್ನಾಟಕಸಂಪುಟ ಪುನರ್‌‌‌‌ ರಚನೆಗೆ ಹೆಚ್ಚುತ್ತಿರುವ ಒತ್ತಡ: ಹೈಕಮಾಂಡ್‌‌‌‌‌ ಒಪ್ಪಿಗೆಗೆ ಕಾಯುತ್ತಿದ್ದೇನೆ ಎಂದ ಬೊಮ್ಮಾಯಿ!

ಸಂಪುಟ ಪುನರ್‌‌‌‌ ರಚನೆಗೆ ಹೆಚ್ಚುತ್ತಿರುವ ಒತ್ತಡ: ಹೈಕಮಾಂಡ್‌‌‌‌‌ ಒಪ್ಪಿಗೆಗೆ ಕಾಯುತ್ತಿದ್ದೇನೆ ಎಂದ ಬೊಮ್ಮಾಯಿ!

- Advertisement -
- Advertisement -

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮೇಲೆ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್‌‌ ರಚನೆ ಮಾಡುವಂತೆ ಒತ್ತಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಇದಕ್ಕಾಗಿ ಬಿಜೆಪಿ ನಾಯಕತ್ವದ ಒಪ್ಪಿಗೆಗಾಗಿ ಕಾಯುತ್ತಿರುವುದಾಗಿ ಸೋಮವಾರ ಸೂಚಿಸಿದ್ದಾರೆ. ಜನವರಿ 28ಕ್ಕೆ ತಮ್ಮ ಸರ್ಕಾರ ಆರು ತಿಂಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ತಮ್ಮ ಆಡಳಿತದ ಸಾಧನೆಗಳ ಪಟ್ಟಿಯನ್ನು ಹೊರತರುವುದಾಗಿ ತಿಳಿಸಿದ್ದಾರೆ.

“ನಾಲ್ಕು ಸಚಿವ ಸ್ಥಾನಗಳು ಖಾಲಿ ಇವೆ, ಆದ್ದರಿಂದ ಸಹಜವಾಗಿ ಆಕಾಂಕ್ಷೆಗಳಿವೆ. ಅದರಲ್ಲಿ ಯಾವುದೇ ತಪ್ಪಿಲ್ಲ, ಅದನ್ನು ಯಾವಾಗ ಮತ್ತು ಹೇಗೆ ಮಾಡಬೇಕೆಂದು ಪಕ್ಷದ ನಾಯಕತ್ವಕ್ಕೆ ತಿಳಿದಿದೆ. ನಾನು ಅದನ್ನು ನಾಯಕತ್ವದ ಗಮನಕ್ಕೆ ತರುತ್ತಿದ್ದೇನೆ. ನಾಯಕತ್ವವು ಈ ಬಗ್ಗೆ ನನ್ನನ್ನು ಚರ್ಚೆಗಾಗಿ ಕರೆದಾಗ ಅವರಿಗೆ ನಾನು ಎಲ್ಲಾ ವಿವರಗಳನ್ನು ನೀಡುತ್ತೇನೆ” ಎಂದು ಬೊಮ್ಮಾಯಿ ಅವರು ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ: ಪ್ರಚೋದನಾಕಾರಿ ಭಾಷಣ ಮಾಡಿದ ಬಿಜೆಪಿ ಅಭ್ಯರ್ಥಿ ವಿರುದ್ಧ ಪ್ರಕರಣ

ಮಂಡಳಿ ಮತ್ತು ನಿಗಮಗಳ ನೇಮಕಾತಿ ಕುರಿತ ಪ್ರಶ್ನೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಪಕ್ಷದಲ್ಲಿ ಚರ್ಚಿಸಬೇಕು ಮತ್ತು ಇದನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

“ಇದು ಪಕ್ಷದ ಮೇಲೆ ಅವಲಂಬಿತವಾಗಿದೆ, ಯಾವ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಬೇಕು ಎಂಬುದನ್ನು ಪಕ್ಷವು ನಿರ್ಧರಿಸುತ್ತದೆ. ಸದ್ಯಕ್ಕೆ ಮುಖ್ಯಮಂತ್ರಿಯಾಗಿರುವ ನನ್ನ ಮುಂದೆ ಮಂಡಳಿ ಮತ್ತು ನಿಗಮಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಹ ಯಾವುದೇ ಪ್ರಸ್ತಾಪವಿಲ್ಲ, ಪಕ್ಷವು ಅದನ್ನು ನೋಡುತ್ತಿದೆ. ಚರ್ಚೆಯ ನಂತರ ಅವರು ವರದಿಯನ್ನು ನೀಡುತ್ತಾರೆ, ಅದರ ಆಧಾರದ ಮೇಲೆ ನಾವು ಈ ಬಗ್ಗೆ ನೋಡುತ್ತೇವೆ”ಎಂದು ಅವರು ಹೇಳಿದ್ದಾರೆ.

2023 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ಹೊಸ ಮುಖಗಳಿಗೆ ಅವಕಾಶ ಕಲ್ಪಿಸಲು ಶೀಘ್ರದಲ್ಲೇ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಲು ಅಥವಾ ಪುನರ್ರಚನೆ ಮಾಡಲು ಮತ್ತು ಪಕ್ಷದ ಶಾಸಕರನ್ನು ವಿವಿಧ ಮಂಡಳಿಗಳು ಮತ್ತು ನಿಗಮಗಳ ಖಾಲಿ ಇರುವ ಮುಖ್ಯಸ್ಥರ ಹುದ್ದೆಗಳನ್ನು ಭರ್ತಿ ಮಾಡಲು ಮುಖ್ಯಮಂತ್ರಿಯ ಮೇಲೆ ಒತ್ತಡ ಹೆಚ್ಚುತ್ತಿದೆ.

ರಾಜ್ಯದಲ್ಲಿರುವ 34 ಸಚಿವರ ಸ್ಥಾನದಲ್ಲಿ ಮುಖ್ಯಮಂತ್ರಿ ಸೇರಿದಂತೆ ಸಚಿವ ಸಂಪುಟದಲ್ಲಿ 30 ಸಚಿವರು ಈಗಾಗಲೆ ಉಸ್ತುವಾರಿ ವಹಿಸಿಕೊಂಡಿದ್ದಾರೆ.

ಇದನ್ನೂ ಓದಿ: ಎಚ್ಚರಗೊಂಡವರ ಕನಸು; ವೋಕ್ ಸಂಸ್ಕೃತಿ-ಕಥನ ಮತ್ತು ತಾತ್ವಿಕ-ಮಂಥನ

ಈ ಮಧ್ಯೆ, ಐದು ರಾಜ್ಯಗಳ ವಿಧಾನಸಭೆ ಚುನಾವಣೆ ನಂತರವೇ ಸಂಪುಟ ವಿಸ್ತರಣೆ ಅಥವಾ ಪುನರ್‌ ರಚನೆ ಸಾಧ್ಯತೆ ಇದೆ ಎಂಬ ಮಾತುಗಳು ಕೂಡಾ ಪಕ್ಷದ ವಲಯದಲ್ಲಿ ಕೇಳಿಬರುತ್ತಿವೆ.

ಹೊಸ ಮುಖಗಳಿಗೆ ಅವಕಾಶ ನೀಡುವ ಗುಜರಾತ್ ಮಾದರಿಯನ್ನು ಶೀಘ್ರದಲ್ಲೇ ರಾಜ್ಯದಲ್ಲೂ ಬಿಜೆಪಿ ಪ್ರಯೋಗಿಸುತ್ತದೆ ಎಂದು ಇತ್ತೀಚೆಗೆ ವರದಿ ಹರಡಿತ್ತು. ಇದನ್ನು ಮಾರ್ಚ್‌ ತಿಂಗಳಲ್ಲಿ ಮಾಡಿದರೆ ತುಂಬಾ ತಡವಾಗಲಿದ್ದು, ಮಂತ್ರಿಗಳು ತಮ್ಮ ಸಂಪುಟದಲ್ಲಿ ಮಾತ್ರವಲ್ಲದೆ, ಸ್ವಂತ ಕ್ಷೇತ್ರದಲ್ಲೂ ಛಾಫು ಮೂಡಿಸಲು ಸಾಧ್ಯವಿರುವುದಿಲ್ಲ ಎಂದು ಪಕ್ಷವು ಗಮನಿಸಿದೆ ಎನ್ನಲಾಗಿದೆ.

ಕಳೆದ ಸೆಪ್ಟೆಂಬರ್‌ನಲ್ಲಿ, ಬಿಜೆಪಿಯು ಭೂಪೇಂದ್ರ ಪಟೇಲ್ ಸರ್ಕಾರಕ್ಕೆ ಹೊಸ ಮುಖಗಳನ್ನು ಆಯ್ಕೆ ಮಾಡುವ ಮೂಲಕ ಗುಜರಾತ್‌ನ ಮಂತ್ರಿ ಮಂಡಳಿಯನ್ನು ಸಂಪೂರ್ಣವಾಗಿ ಬದಲಾಯಿಸಿತ್ತು. ಈ ಹಿಂದಿನ ವಿಜಯ್ ರೂಪಾನಿ ನೇತೃತ್ವದ ಸಚಿವಾಲಯದಿಂದ ಯಾವುದೇ ಸಚಿವರನ್ನು ಸೇರ್ಪಡೆಗೊಳಿಸಿರಲಿಲ್ಲ.

ಬಿಜೆಪಿಯ ಹಿರಿಯ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಎಂಪಿ ರೇಣುಕಾಚಾರ್ಯ ಅವರು ಗುರುವಾರದಂದು ರಹಸ್ಯ ಸಭೆ ನಡೆಸಿದ್ದಾರೆ ಎಂದು TNIE ವರದಿ ಮಾಡಿದೆ. ಬೆಳಗಾವಿಯಲ್ಲಿ  ಕೂಡಾ ಇದೇ ರೀತಿಯ ಸಭೆ ಸಚಿವ ಉಮೇಶ ಕತ್ತಿ, ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮತ್ತು ಈ ಭಾಗದ ಇತರ ಶಾಸಕರು ನಡೆಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಹಿಂದೂ ವಿರೋಧಿ ಭಾಷಣ ಆರೋಪಿಸಿ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್‌‌ಗೆ ಹಿಂದುತ್ವ ಸಂಘಟನೆಗಳ ಅರ್ಜಿ

ಕೆಲವು ಬಿಜೆಪಿ ಶಾಸಕರ ನಡುವೆ “ರಹಸ್ಯ ಸಭೆ” ನಡೆದಿರುವ ಕುರಿತು ಕೇಳಿದ ಪ್ರಶ್ನೆಯನ್ನು ತಳ್ಳಿ ಹಾಕಿ ಮುಖ್ಯಮಂತ್ರಿ, ಇದು ಪಕ್ಷದ ನಾಯಕರ ನಡುವಿನ ಸಾಂದರ್ಭಿಕ ಸಭೆ ಎಂದು ಬಣ್ಣಿಸಿದ್ದಾರೆ.

“ಈ ಬಗ್ಗೆ ನನಗೆ ಗೊತ್ತಿಲ್ಲ, ಮಾಧ್ಯಮಗಳು ಇದನ್ನು ರಹಸ್ಯ ಸಭೆ ಎಂದು ಕರೆಯುತ್ತಿದ್ದೀರಿ. ಇದರಲ್ಲಿ ಯಾವುದೇ ಗೊಂದಲವಿಲ್ಲ, ನಾಯಕರು ಹಲವಾರು ಸಂದರ್ಭಗಳಲ್ಲಿ ಆಕಸ್ಮಿಕವಾಗಿ ಭೇಟಿಯಾಗುತ್ತಾರೆ. ನೀವು ಅದನ್ನು ಬೇರೇನೋ ಎಂದು ಬಿಂಬಿಸುತ್ತಿರುವುದು ಸರಿಯಲ್ಲ. ಕಾಂಗ್ರೆಸ್ ನಾಯಕರು ವಿವಿಧ ಸ್ಥಳಗಳಲ್ಲಿ ಆಕಸ್ಮಿಕವಾಗಿ ಭೇಟಿಯಾಗುತ್ತಾರೆ. ಅದೇ ರೀತಿ ಬಿಜೆಪಿ ನಾಯಕರು ಕೂಡ ಭೇಟಿಯಾಗುತ್ತಾರೆ, ಅದರಲ್ಲಿ ಏನೂ ಇಲ್ಲ” ಎಂದು ಅವರು ಹೇಳಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ನಾಳೆ ಬಿಜೆಪಿ ಕಚೇರಿಯಲ್ಲಿ ಸಭೆ ನಿಗದಿಯಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಬಜೆಟ್ ಸಿದ್ಧತೆ ಕುರಿತ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ, ಡಿಸೆಂಬರ್‌ನಿಂದ ಹಣಕಾಸು ಇಲಾಖೆಯೊಂದಿಗೆ ಆಂತರಿಕ ಸಭೆಗಳನ್ನು ನಡೆಸುತ್ತಿದ್ದು, ಆದಾಯ ಉತ್ಪಾದಿಸುವ ಇಲಾಖೆಗಳೊಂದಿಗೆ ಮತ್ತು ಗುರಿಗಳನ್ನು ತಲುಪಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶನಗಳನ್ನು ನೀಡಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: ರುವಾಂಡ ರೀತಿಯ ನರಮೇಧ ಭಾರತದಲ್ಲೂ ನಡೆಯಲಿದೆಯೇ?; ತಜ್ಞರ ಎಚ್ಚರಿಕೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...