Homeಮುಖಪುಟಫೇಸ್‌ಬುಕ್‌ನಲ್ಲಿ ಮೋದಿ ಫೋಟೊಗಳಿಗೆ ಹೆಚ್ಚುತ್ತಿರುವ #ResignModi ಕಮೆಂಟ್‌ಗಳು: ಹಳೆ ಫೋಟೊಗಳನ್ನು ಬಿಡದ ನೆಟ್ಟಿಗರು!

ಫೇಸ್‌ಬುಕ್‌ನಲ್ಲಿ ಮೋದಿ ಫೋಟೊಗಳಿಗೆ ಹೆಚ್ಚುತ್ತಿರುವ #ResignModi ಕಮೆಂಟ್‌ಗಳು: ಹಳೆ ಫೋಟೊಗಳನ್ನು ಬಿಡದ ನೆಟ್ಟಿಗರು!

- Advertisement -
- Advertisement -

ಭಾರತಕ್ಕೆ ಅಪ್ಪಳಿಸಿರುವ ಕೋವಿಡ್ ಎರಡನೇ ಅಲೆಯನ್ನು ನಿಭಾಯಿಸುವಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂಬ ಆರೋಪಗಳು ದಟ್ಟವಾಗಿ ಕೇಳಿಬರುತ್ತಿರುವುದರ ನಡುವೆ ಕಳೆದ 15 ದಿನಗಳಿಂದಲೂ #ResignModi ಹ್ಯಾಷ್‌ಟ್ಯಾಗ್‌ ಟ್ರೆಂಡಿಂಗ್‌ನಲ್ಲಿರುವುದು ನಿಮಗೆಲ್ಲಾ ಗೊತ್ತಿರುವ ವಿಚಾರ. ಈಗ ಇನ್ನು ಒಂದು ಹೆಜ್ಜೆ ಮುಂದೆ ಹೋಗಿರುವ ಸಾಮಾಜಿಕ ಜಾಲತಾಣ ಬಳಕೆದಾರರು ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ಹಾಕುವ ಪ್ರತಿಯೊಂದು ಫೋಟೊಗಳಿಗೆ #ResignModi ಎಂದು ಕಮೆಂಟ್ ಮಾಡುವು ಮೂಲಕ ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ.

ಹೆಚ್ಚುತ್ತಿರುವ ಪ್ರಕರಣಗಳ ನಡುವೆ ಆಸ್ಪತ್ರೆಗಳಲ್ಲಿ ಬೆಡ್ ಇಲ್ಲ, ಆಕ್ಸಿಜನ್ ಇಲ್ಲ, ಔಷಧಿಗಳು ಸಿಗುತ್ತಿಲ್ಲ.. ಎಲ್ಲಕ್ಕಿಂತ ಹೆಚ್ಚಾಗಿ ಕೋವಿಡ್ ಬರದಂತೆ ತಡೆಯಲು ಲಸಿಕೆ ಹಾಕಿಸಿಕೊಳ್ಳಲು ಸಹ ಸ್ಟಾಕ್ ಇಲ್ಲದ ಪರಿಸ್ಥಿತಿ ಉದ್ಭವಿಸಿದೆ. ಕೋವಿಡ್ ಬಂದು 15 ತಿಂಗಳಾದರೂ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಲು ಮೋದಿ ಸರ್ಕಾರ ವಿಫಲವಾಗಿದೆ. ಈಗ ಪ್ರತಿನಿತ್ಯ 3000 ಹೆಚ್ಚು ಮಂದಿ ಪ್ರಾಣ ಕಳೆದುಕೊಳ್ಳಬೇಕಾದ ಪರಿಸ್ಥಿತಿ ಬಂದಿದೆ. ಈ ರೀತಿಯಲ್ಲಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡವರು ಫೇಸ್‌ಬುಕ್‌ನಲ್ಲಿ ವಿಡಿಯೋ ಮಾಡುವುದು ಸೇರಿದಂತೆ ಮೋದಿ ಫೋಟೊ ಮತ್ತು ಪೋಸ್ಟ್‌ಗಳಿಗೆ ಕಮೆಂಟ್ ಮಾಡಿ ಕೋಪ ತೋರಿಸುತ್ತಿದ್ದಾರೆ.

ಏಪ್ರಿಲ್ 28 ರಂದು ಮೋದಿಯವರು “ಒಂದು ಲಕ್ಷ ಪೋರ್ಟಬಲ್ ಆಕ್ಸಿಜನ್ ಸಾಂದ್ರಕಗಳನ್ನು ಖರೀದಿಸುತ್ತೇವೆ, 500ಕ್ಕೂ ಹೆಚ್ಚು ಪಿಎಸ್‌ಎ ಪ್ಲಾಂಟ್‌ಗಳನ್ನು ಹಾಕುತ್ತೇವೆ” ಎಂದು ಪೋಸ್ಟ್ ಒಂದನ್ನು ಹಾಕಿದ್ದರು. ಅದಕ್ಕೆ ದಾಖಲಾದ 42 ಸಾವಿರ ಕಮೆಂಟ್‌ಗಳಲ್ಲಿ ಬಹುತೇಕ ಕಮೆಂಟ್‌ಗಳು ಮೋದಿ ವಿರುದ್ಧ ಕೋಪ, ಆಕ್ರೋಶ ವ್ಯಕ್ತಪಡಿಸಿವೆ. ಮನೆ ಹೊತ್ತಿ ಉರಿಯುವಾಗ ಬಾವಿ ತೋಡಿದರು ಎಂಬಂತೆ ಇಷ್ಟು ದಿನ ಏನು ಮಾಡುತ್ತಿದ್ದೀರಿ? ಜನರ ಪ್ರಾಣ ಅಂದ್ರೆ ನಿಮಗೆ ಅಷ್ಟು ಸುಲಭವೇ? ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.

ಬಹಳಷ್ಟು ಕನ್ನಡಿಗರು ಸಹ ಕನ್ನಡದಲ್ಲಿಯೇ ಪ್ರತಿಕ್ರಿಯೆ ನೀಡಿ ಸರ್ಕಾರದ ನೀತಿಗಳನ್ನು ಟೀಕಿಸಿದ್ದಾರೆ. ಆದರೆ #ResignModi ಕಮೆಂಟ್‌ಗಳು ಸಹಸ್ರಾರು ಸಂಖ್ಯೆಯಲ್ಲಿ ದಾಖಲಾಗುತ್ತಿವೆ.

ಹಳೆ ಫೋಟೊಗಳನ್ನು ಬಿಡದ ನೆಟ್ಟಿಗರು!

ಇನ್ನು ನರೇಂದ್ರ ಮೋದಿಯವರು 2009ರಲ್ಲಿ ತಮ್ಮ ಫೇಸ್‌ಬುಕ್ ಪುಟ ತೆರೆದಿದ್ದಾರೆ. ಆಗ ಅವರು ಗುಜರಾತ್‌ ಸಿಎಂ ಆಗಿದ್ದರು. ಆ ಸಂದರ್ಭದಿಂದ ಅವರು ತಮ್ಮ ಹಲವಾರು ಫೋಟೊಗಳನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್‌ ಮಾಡಿದ್ದಾರೆ. ಆ ಫೋಟೊಗಳನ್ನು ಬಿಡದ ನೆಟ್ಟಿಗರು ಅವಕ್ಕೂ ಸಹ #ResignModi ಕಮೆಂಟ್‌ಗಳನ್ನು ಮಾಡುವ ಮೂಲಕ ಮೋದಿ ರಾಜೀನಾಮೆ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ.

ಇನ್ನು ಕಳೆದ 15 ದಿನಗಳಿಂದ ಸತತವಾಗಿ ಟ್ರೆಡಿಂಗ್‌ನಲ್ಲಿದ್ದ, ಕೋಟ್ಯಾಂತರ ಟ್ವೀಟ್‌ಗಳು, ಫೇಸ್‌ಬುಕ್ ಪೋಸ್ಟ್‌ಗಳು ದಾಖಲಾಗಿದ್ದ #ResignModi (‘ಮೋದಿ ರಾಜೀನಾಮೆ ನೀಡಿ’) ಎಂಬ ಹ್ಯಾಷ್‌ಟ್ಯಾಗ್‌ ಮತ್ತು ಅದರ ಹೆಸರಿನಲ್ಲಿ ದಾಖಲಾದ ಎಲ್ಲಾ ಪೋಸ್ಟ್‌ಗಳನ್ನು ಬುಧವಾರ ಫೇಸ್‌ಬುಕ್ ಇಂಡಿಯಾ ಬ್ಲಾಕ್ ಮಾಡಿತ್ತು. ಫೇಸ್‌ಬುಕ್ ಆಳುವ ಸರ್ಕಾರವನ್ನು ರಕ್ಷಿಸಲು ಮುಂದಾಗಿದೆ, ಇದು ಸೆನ್ಸಾರ್ ಶಿಪ್ ಅಲ್ಲವೇ? ಎಂಬ ವ್ಯಾಪಕ ಟೀಕೆಗಳು ಬಂದ ನಂತರ ಫೇಸ್‌ಬುಕ್ #ResignModi ಹ್ಯಾಷ್‌ಟ್ಯಾಗ್‌ ಅನ್ನು ಮರುಸ್ಥಾಪಿಸಿದೆ. ಇದೊಂದು ‘ಮಿಸ್ಟೇಕ್’ ಎಂದ ಕಂಪನಿ ಒಪ್ಪಿಕೊಂಡಿದೆ.


ಇದನ್ನೂ ಓದಿ: #ResignModi ಹ್ಯಾಷ್‌ಟ್ಯಾಗ್‌ ನಿರ್ಬಂಧಿಸಿ ಟೀಕೆಗೊಳಗಾದ ಫೇಸ್‌ಬುಕ್: ಟೀಕೆ ನಂತರ ಎಚ್ಚೆತ್ತು ಮರುಸ್ಥಾಪನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...