Homeಮುಖಪುಟಹೆಚ್ಚುತ್ತಿರುವ ಬೆಂಬಲ - ಗಡಿಗಳಲ್ಲಿ ತೀವ್ರಗೊಳ್ಳುತ್ತಿರುವ ರೈತ ಹೋರಾಟ

ಹೆಚ್ಚುತ್ತಿರುವ ಬೆಂಬಲ – ಗಡಿಗಳಲ್ಲಿ ತೀವ್ರಗೊಳ್ಳುತ್ತಿರುವ ರೈತ ಹೋರಾಟ

ಇದು ರೈತರ ಜೀವನ್ಮರಣದ ಪ್ರಶ್ನೆ, ಯಾರೂ ಚಿಂತಿಸಬೇಡಿ. ಈ ಸಂದರ್ಭದಲ್ಲಿ ನಾವೆಲ್ಲ ಒಟ್ಟಾಗಿ, ಐಕ್ಯತೆಯಿಂದ ಇರೋಣ- ಚೌಧರಿ ಸಾಹಿಬ್ ಅಜಿತ್‌ಸಿಂಗ್

- Advertisement -
- Advertisement -

ಕೃಷಿ ಕಾನೂನುಗಳನ್ನು ವಿರೋಧಿಸಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಹೋರಾಟ ನಡೆಸುತ್ತಿದ್ದಾರೆ. ಇದರ ಭಾಗವಾಗಿ ಗಣರಾಜ್ಯೋತ್ಸವದಂದು ನಡೆದ ಟ್ರ್ಯಾಕ್ಟರ್ ರ್ಯಾಲಿಯಲ್ಲಿ ನಡೆದ ಪಿತೂರಿಯಿಂದ ಕೆಲವು ಅಹಿತಕರ ಘಟನೆಗಳು ನಡೆದಿತ್ತು. ಇದರಿಂದ ಹೋರಾಟಕ್ಕೆ ಹಿನ್ನಡೆಯಾಗಿದೆಯೆಂದು ಕೆಲವರು ಭಾವಿಸಿದ್ದರು. ಆದರೆ ಇದು ಸುಳ್ಳು ಎಂಬುದನ್ನು ದೇಶಕ್ಕೆ ತಿಳಿಸಲು ರೈತರಿಗೆ ಹೆಚ್ಚಿನ ಸಮಯ ಬೇಕಾಗಲಿಲ್ಲ.

ಉತ್ತರಪ್ರದೇಶ ಮತ್ತು ದೆಹಲಿ ಗಡಿಗಳಲ್ಲಿರುವ ರೈತರನ್ನು ಖಾಲಿ ಮಾಡಿಸಲು ಸಾವಿರಾರು ಸಂಖ್ಯೆಯಲ್ಲಿ ಪೊಲೀಸರು ಜಮಾವಣೆಗೊಂಡಿದ್ದರು. ಆದರೆ, ರೈತರ ಹೋರಾಟ ದೆಹಲಿ ಗಡಿಗಳಲ್ಲಿ ಇನ್ನೂ ತೀವ್ರಗೊಳ್ಳುತ್ತಿದ್ದು, ಬೆಂಬಲದ ಮಹಾಪೂರವೇ ಹರಿದು ಬರುತ್ತಿದೆ. ಗುರುವಾರ ಮಧ್ಯರಾತ್ರಿಯೇ ಹರಿಯಾಣ ಮತ್ತು ಉತ್ತರಪ್ರದೇಶದ ಹತ್ತಾರು ಹಳ್ಳಿಯ ಜನರು ಗಡಿಗಳಿಗೆ ಆಗಮಿಸಿ ರೈತ ಹೋರಾಟಕ್ಕೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹಿಂದಕ್ಕೆ ಹೆಜ್ಜೆ ಇಡಲೊಪ್ಪದ ರೈತರು: ಸ್ಥಳ ಖಾಲಿ ಮಾಡಿದ ಹೆಚ್ಚುವರಿ ಪೊಲೀಸರು!

ಮುಜಫರ್ ನಗರದ ಸಿಸೌಲಿಯಲ್ಲಿರುವ ರೈತ ಮುಖಂಡ ರಾಕೇಶ್‌ ಟಿಕಾಯತ್‌ ಮನೆ ಮುಂದೆ ನೆರೆದ ಜನಸಂದಣಿಯು ನಾವೆಲ್ಲರೂ ನಿಮ್ಮ ಜೊತೆಗಿದ್ದೇವೆ. ಹೋರಾಟ ಬೆಂಬಲಿಸಲು ದೆಹಲಿಗೆ ಮೆರವಣಿಗೆ ಹೊರಡಲು ಸಿದ್ದ ಎಂದು ಘೋಷಿಸಿದ್ದಾರೆ.

ಗಾಜಿಪುರ್‌ ಗಡಿಯಲ್ಲಿ ರಾಕೇಶ್‌ ಟಿಕಾಯತ್‌ ರೈತ ಹೋರಾಟ ಮುಂದುವರೆಸುತ್ತಿದ್ದಾರೆ. ಆದರೆ ಗಣರಾಜ್ಯೋತ್ಸವದಂದು ಕೆಂಪು ಕೋಟೆಯ ಅಹಿತಕರ ಘಟನೆ ಜರುಗಿದ ನಂತರ ರೈತ ಹೋರಾಟ ಹತ್ತಿಕ್ಕಲು ಉತ್ತರ ಪ್ರದೇಶ ಪೊಲೀಸರು ಯತ್ನಿಸುತ್ತಿದ್ದು, ಇಂದು ಅವರು ಅಲ್ಲಿಂದ ತೆರವು ಮಾಡಬೇಕೆಂದು ಒತ್ತಾಯಿಸಿದ್ದರು. ಗಡಿಯ ಜನರಿಗೆ ನೀರು, ವಿದ್ಯುತ್‌ ಸಂಪರ್ಕ ಕಿತ್ತು ಹಾಕಲಾಗಿತ್ತು. ನಿನ್ನೆ ರಾತ್ರಿ ಕೆಲವೆಡೆ ಲಾಠೀ ಚಾರ್ಜ್‌ ಸಹ ಮಾಡಲಾಗಿತ್ತು.

ಇಂದು ಶತಾಯ ಗತಾಯ ರೈತರನ್ನು ಅಲ್ಲಿಂದ ತೆರವುಗೊಳಿಸಲು ಮುಂದಾದಾಗ ರೈತ ಮುಖಂಡ ರಾಕೇಶ್‌ ಟಿಕಾಯತ್ ನಮ್ಮ ಮೇಲೆ ಗುಂಡು ಹಾರಿಸಿದರೂ ಸರಿಯೇ ಇಲ್ಲಿಂದ ಕದಲುವುದಿಲ್ಲ ಎಂದು ಘೋಷಿಸಿದ್ದಾರೆ. ಅಲ್ಲದೇ ಪೊಲೀಸರು ನಮ್ಮನ್ನು ತೆರವುಗೊಳಿಸಿದರೆ ನಮ್ಮ ಸಾವಿಗೆ ಅವರೇ ಕಾರಣರಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದರಿಂದ ಬಹಳಷ್ಟು ರೈತರು ಕೆರಳಿದ್ದು ಪೊಲೀಸರ ವಿರು‍ದ್ಧ ಹರಿಹಾಯ್ದಿದ್ದಾರೆ. ಅವರೆಲ್ಲರೂ ಸದ್ಯಕ್ಕೆ ಟಿಕಾಯತ್‌ ಮನೆ ಮುಂದೆ ಜಮಾಯಿಸಿ ಹೋರಾಟಕ್ಕೆ ಬೇಷರತ್‌ ಬೆಂಬಲ ಘೋಷಿಸಿದ್ದಾರೆ.

ಇದನ್ನೂ ಓದಿ: ಟ್ರ್ಯಾಕ್ಟರ್‌ ರ್‍ಯಾಲಿ: ಕಾಂಗ್ರೆಸ್ ಸಂಸದ ಶಶಿ ತರೂರ್ ಸೇರಿ 6 ಜನರ ವಿರುದ್ಧ ದೇಶದ್ರೋಹ…

“ಸುಪ್ರೀಂ ಕೋರ್ಟ್ ಶಾಂತಿಯುತ ಧರಣಿಯನ್ನು ಸಮರ್ಥಿಸಿದೆ. ಗಾಜಿಪುರ ಗಡಿಯಲ್ಲಿ ಯಾವುದೇ ಹಿಂಸಾಚಾರ ನಡೆದಿಲ್ಲ. ಇದರ ಹೊರತಾಗಿಯೂ, ಸರ್ಕಾರವು ದಮನಕಾರಿ ನೀತಿಯನ್ನು ಅನುಸರಿಸುತ್ತಿದೆ. ಇದು ಉತ್ತರ ಪ್ರದೇಶ ಸರ್ಕಾರದ ಮುಖ” ಎಂದು ರಾಕೇಶ್ ಟಿಕಾಯತ್‌ ಕಿಡಿಕಾರಿದ್ದಾರೆ.

ಇನ್ನು, ಮಾಜಿ ಕೇಂದ್ರ ಸಚಿವ, ರಾಷ್ಟ್ರೀಯ ಲೋಕದಳ್ ಮುಖ್ಯಸ್ಥ ಅಜಿತ್‌ಸಿಂಗ್ ಚೌಧರಿ ಬಿಕೆಯು ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.

ಈ ಕುರಿತು ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅಜಿತ್‌ಸಿಂಗ್ ಪುತ್ರ ಮತ್ತು ಆರ್‌ಎಲ್‌ಡಿ ಉಪಾಧ್ಯಕ್ಷ ಜಯಂತ್ ಚೌಧರಿ, ಅದರಲ್ಲಿ ಅಜಿತ್‌ಸಿಂಗ್ ಸಂದೇಶವನ್ನು ಹಾಕಿದ್ದಾರೆ. “ಇದು ರೈತರ ಜೀವನ್ಮರಣದ ಪ್ರಶ್ನೆ, ಯಾರೂ ಚಿಂತಿಸಬೇಡಿ. ಈ ಸಂದರ್ಭದಲ್ಲಿ ನಾವೆಲ್ಲ ಒಟ್ಟಾಗಿ, ಐಕ್ಯತೆಯಿಂದ ಇರೋಣ- ಇದು ಚೌಧರಿ ಸಾಹಿಬ್ (ಅಜಿತ್‌ಸಿಂಗ್) ಅವರ ಸಂದೇಶ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ʼಬಾರ್ಡರ್‌ʼಗಳಲ್ಲಿ ರಾತ್ರಿ ಆಗಿದ್ದೇನು? – ಗ್ರೌಂಡ್‌ ರಿಪೋರ್ಟ್‌

ಅಜಿತ್‌ಸಿಂಗ್ ಅವರು ರಾಕೇಶ್ ಟಿಕಾಯತ್ ಮತ್ತು ಅವರ ಸಹೋದರ ನರೇಶ್ ಟಿಕಾಯತ್ ಅವರೊಂದಿಗೆ ಮಾತನಾಡಿದ್ದು, ಬಿಕೆಯು ಹೋರಾಟಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಿನ್ನೆ ಯುಪಿ ಗಡಿಯಲ್ಲಿ ಭಾರಿ ಸಂಖ್ಯೆಯಲ್ಲಿ ಪೊಲೀಸರನ್ನು ಜಮಾವಣೆ ಮಾಡಿ ರೈತರನ್ನು ಸ್ಥಳದಿಂದ ಎತ್ತಂಗಡಿ ಮಾಡಲು ಯುಪಿ ಸರ್ಕಾರ ಯತ್ನಿಸಿದ ನಂತರ ಉತ್ತರ ಭಾತರದ ಪ್ರಮುಖ ರಾಜ್ಯಗಳಲ್ಲಿ ರೈತ ಹೋರಾಟಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ನಿನ್ನೆ ರಾತ್ರಿಯಿಂದಲೇ ಸಾವಿರಾರು ರೈತರು, ನೂರಾರು ಟ್ರ್ಯಾಕ್ಟರ್‌ಗಳು ಈಗ ಗಾಜಿಪುರ ಮತ್ತು ಸಿಂಘು ಗಡಿ ತಲುಪಿದ್ದಾರೆ.

ಟಿಕಾಯತ್ ಅವರ ರಾತ್ರಿಯ ಭಾವನಾತ್ಮಕ ಭಾಷಣವು ಸಾಕಷ್ಟು ಜನಪ್ರಿಯವಾಗಿದ್ದು, ರೈತ ಹೋರಾಟಕ್ಕೆ ಹೆಚ್ಚಿನ ಬೆಂಬಲ ವ್ಯಕ್ತವಾಗುತ್ತಿದೆ.


ಇದನ್ನೂ ಓದಿ: ಜನರನ್ನು ಪ್ರಚೋದಿಸುವ ಟಿವಿ ಕಾರ್ಯಕ್ರಮ ನಿಗ್ರಹಿಸಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...