Homeಮುಖಪುಟಹೆಚ್ಚುತ್ತಿರುವ ಬೆಂಬಲ - ಗಡಿಗಳಲ್ಲಿ ತೀವ್ರಗೊಳ್ಳುತ್ತಿರುವ ರೈತ ಹೋರಾಟ

ಹೆಚ್ಚುತ್ತಿರುವ ಬೆಂಬಲ – ಗಡಿಗಳಲ್ಲಿ ತೀವ್ರಗೊಳ್ಳುತ್ತಿರುವ ರೈತ ಹೋರಾಟ

ಇದು ರೈತರ ಜೀವನ್ಮರಣದ ಪ್ರಶ್ನೆ, ಯಾರೂ ಚಿಂತಿಸಬೇಡಿ. ಈ ಸಂದರ್ಭದಲ್ಲಿ ನಾವೆಲ್ಲ ಒಟ್ಟಾಗಿ, ಐಕ್ಯತೆಯಿಂದ ಇರೋಣ- ಚೌಧರಿ ಸಾಹಿಬ್ ಅಜಿತ್‌ಸಿಂಗ್

- Advertisement -
- Advertisement -

ಕೃಷಿ ಕಾನೂನುಗಳನ್ನು ವಿರೋಧಿಸಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಹೋರಾಟ ನಡೆಸುತ್ತಿದ್ದಾರೆ. ಇದರ ಭಾಗವಾಗಿ ಗಣರಾಜ್ಯೋತ್ಸವದಂದು ನಡೆದ ಟ್ರ್ಯಾಕ್ಟರ್ ರ್ಯಾಲಿಯಲ್ಲಿ ನಡೆದ ಪಿತೂರಿಯಿಂದ ಕೆಲವು ಅಹಿತಕರ ಘಟನೆಗಳು ನಡೆದಿತ್ತು. ಇದರಿಂದ ಹೋರಾಟಕ್ಕೆ ಹಿನ್ನಡೆಯಾಗಿದೆಯೆಂದು ಕೆಲವರು ಭಾವಿಸಿದ್ದರು. ಆದರೆ ಇದು ಸುಳ್ಳು ಎಂಬುದನ್ನು ದೇಶಕ್ಕೆ ತಿಳಿಸಲು ರೈತರಿಗೆ ಹೆಚ್ಚಿನ ಸಮಯ ಬೇಕಾಗಲಿಲ್ಲ.

ಉತ್ತರಪ್ರದೇಶ ಮತ್ತು ದೆಹಲಿ ಗಡಿಗಳಲ್ಲಿರುವ ರೈತರನ್ನು ಖಾಲಿ ಮಾಡಿಸಲು ಸಾವಿರಾರು ಸಂಖ್ಯೆಯಲ್ಲಿ ಪೊಲೀಸರು ಜಮಾವಣೆಗೊಂಡಿದ್ದರು. ಆದರೆ, ರೈತರ ಹೋರಾಟ ದೆಹಲಿ ಗಡಿಗಳಲ್ಲಿ ಇನ್ನೂ ತೀವ್ರಗೊಳ್ಳುತ್ತಿದ್ದು, ಬೆಂಬಲದ ಮಹಾಪೂರವೇ ಹರಿದು ಬರುತ್ತಿದೆ. ಗುರುವಾರ ಮಧ್ಯರಾತ್ರಿಯೇ ಹರಿಯಾಣ ಮತ್ತು ಉತ್ತರಪ್ರದೇಶದ ಹತ್ತಾರು ಹಳ್ಳಿಯ ಜನರು ಗಡಿಗಳಿಗೆ ಆಗಮಿಸಿ ರೈತ ಹೋರಾಟಕ್ಕೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹಿಂದಕ್ಕೆ ಹೆಜ್ಜೆ ಇಡಲೊಪ್ಪದ ರೈತರು: ಸ್ಥಳ ಖಾಲಿ ಮಾಡಿದ ಹೆಚ್ಚುವರಿ ಪೊಲೀಸರು!

ಮುಜಫರ್ ನಗರದ ಸಿಸೌಲಿಯಲ್ಲಿರುವ ರೈತ ಮುಖಂಡ ರಾಕೇಶ್‌ ಟಿಕಾಯತ್‌ ಮನೆ ಮುಂದೆ ನೆರೆದ ಜನಸಂದಣಿಯು ನಾವೆಲ್ಲರೂ ನಿಮ್ಮ ಜೊತೆಗಿದ್ದೇವೆ. ಹೋರಾಟ ಬೆಂಬಲಿಸಲು ದೆಹಲಿಗೆ ಮೆರವಣಿಗೆ ಹೊರಡಲು ಸಿದ್ದ ಎಂದು ಘೋಷಿಸಿದ್ದಾರೆ.

ಗಾಜಿಪುರ್‌ ಗಡಿಯಲ್ಲಿ ರಾಕೇಶ್‌ ಟಿಕಾಯತ್‌ ರೈತ ಹೋರಾಟ ಮುಂದುವರೆಸುತ್ತಿದ್ದಾರೆ. ಆದರೆ ಗಣರಾಜ್ಯೋತ್ಸವದಂದು ಕೆಂಪು ಕೋಟೆಯ ಅಹಿತಕರ ಘಟನೆ ಜರುಗಿದ ನಂತರ ರೈತ ಹೋರಾಟ ಹತ್ತಿಕ್ಕಲು ಉತ್ತರ ಪ್ರದೇಶ ಪೊಲೀಸರು ಯತ್ನಿಸುತ್ತಿದ್ದು, ಇಂದು ಅವರು ಅಲ್ಲಿಂದ ತೆರವು ಮಾಡಬೇಕೆಂದು ಒತ್ತಾಯಿಸಿದ್ದರು. ಗಡಿಯ ಜನರಿಗೆ ನೀರು, ವಿದ್ಯುತ್‌ ಸಂಪರ್ಕ ಕಿತ್ತು ಹಾಕಲಾಗಿತ್ತು. ನಿನ್ನೆ ರಾತ್ರಿ ಕೆಲವೆಡೆ ಲಾಠೀ ಚಾರ್ಜ್‌ ಸಹ ಮಾಡಲಾಗಿತ್ತು.

ಇಂದು ಶತಾಯ ಗತಾಯ ರೈತರನ್ನು ಅಲ್ಲಿಂದ ತೆರವುಗೊಳಿಸಲು ಮುಂದಾದಾಗ ರೈತ ಮುಖಂಡ ರಾಕೇಶ್‌ ಟಿಕಾಯತ್ ನಮ್ಮ ಮೇಲೆ ಗುಂಡು ಹಾರಿಸಿದರೂ ಸರಿಯೇ ಇಲ್ಲಿಂದ ಕದಲುವುದಿಲ್ಲ ಎಂದು ಘೋಷಿಸಿದ್ದಾರೆ. ಅಲ್ಲದೇ ಪೊಲೀಸರು ನಮ್ಮನ್ನು ತೆರವುಗೊಳಿಸಿದರೆ ನಮ್ಮ ಸಾವಿಗೆ ಅವರೇ ಕಾರಣರಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದರಿಂದ ಬಹಳಷ್ಟು ರೈತರು ಕೆರಳಿದ್ದು ಪೊಲೀಸರ ವಿರು‍ದ್ಧ ಹರಿಹಾಯ್ದಿದ್ದಾರೆ. ಅವರೆಲ್ಲರೂ ಸದ್ಯಕ್ಕೆ ಟಿಕಾಯತ್‌ ಮನೆ ಮುಂದೆ ಜಮಾಯಿಸಿ ಹೋರಾಟಕ್ಕೆ ಬೇಷರತ್‌ ಬೆಂಬಲ ಘೋಷಿಸಿದ್ದಾರೆ.

ಇದನ್ನೂ ಓದಿ: ಟ್ರ್ಯಾಕ್ಟರ್‌ ರ್‍ಯಾಲಿ: ಕಾಂಗ್ರೆಸ್ ಸಂಸದ ಶಶಿ ತರೂರ್ ಸೇರಿ 6 ಜನರ ವಿರುದ್ಧ ದೇಶದ್ರೋಹ…

“ಸುಪ್ರೀಂ ಕೋರ್ಟ್ ಶಾಂತಿಯುತ ಧರಣಿಯನ್ನು ಸಮರ್ಥಿಸಿದೆ. ಗಾಜಿಪುರ ಗಡಿಯಲ್ಲಿ ಯಾವುದೇ ಹಿಂಸಾಚಾರ ನಡೆದಿಲ್ಲ. ಇದರ ಹೊರತಾಗಿಯೂ, ಸರ್ಕಾರವು ದಮನಕಾರಿ ನೀತಿಯನ್ನು ಅನುಸರಿಸುತ್ತಿದೆ. ಇದು ಉತ್ತರ ಪ್ರದೇಶ ಸರ್ಕಾರದ ಮುಖ” ಎಂದು ರಾಕೇಶ್ ಟಿಕಾಯತ್‌ ಕಿಡಿಕಾರಿದ್ದಾರೆ.

ಇನ್ನು, ಮಾಜಿ ಕೇಂದ್ರ ಸಚಿವ, ರಾಷ್ಟ್ರೀಯ ಲೋಕದಳ್ ಮುಖ್ಯಸ್ಥ ಅಜಿತ್‌ಸಿಂಗ್ ಚೌಧರಿ ಬಿಕೆಯು ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.

ಈ ಕುರಿತು ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅಜಿತ್‌ಸಿಂಗ್ ಪುತ್ರ ಮತ್ತು ಆರ್‌ಎಲ್‌ಡಿ ಉಪಾಧ್ಯಕ್ಷ ಜಯಂತ್ ಚೌಧರಿ, ಅದರಲ್ಲಿ ಅಜಿತ್‌ಸಿಂಗ್ ಸಂದೇಶವನ್ನು ಹಾಕಿದ್ದಾರೆ. “ಇದು ರೈತರ ಜೀವನ್ಮರಣದ ಪ್ರಶ್ನೆ, ಯಾರೂ ಚಿಂತಿಸಬೇಡಿ. ಈ ಸಂದರ್ಭದಲ್ಲಿ ನಾವೆಲ್ಲ ಒಟ್ಟಾಗಿ, ಐಕ್ಯತೆಯಿಂದ ಇರೋಣ- ಇದು ಚೌಧರಿ ಸಾಹಿಬ್ (ಅಜಿತ್‌ಸಿಂಗ್) ಅವರ ಸಂದೇಶ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ʼಬಾರ್ಡರ್‌ʼಗಳಲ್ಲಿ ರಾತ್ರಿ ಆಗಿದ್ದೇನು? – ಗ್ರೌಂಡ್‌ ರಿಪೋರ್ಟ್‌

ಅಜಿತ್‌ಸಿಂಗ್ ಅವರು ರಾಕೇಶ್ ಟಿಕಾಯತ್ ಮತ್ತು ಅವರ ಸಹೋದರ ನರೇಶ್ ಟಿಕಾಯತ್ ಅವರೊಂದಿಗೆ ಮಾತನಾಡಿದ್ದು, ಬಿಕೆಯು ಹೋರಾಟಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಿನ್ನೆ ಯುಪಿ ಗಡಿಯಲ್ಲಿ ಭಾರಿ ಸಂಖ್ಯೆಯಲ್ಲಿ ಪೊಲೀಸರನ್ನು ಜಮಾವಣೆ ಮಾಡಿ ರೈತರನ್ನು ಸ್ಥಳದಿಂದ ಎತ್ತಂಗಡಿ ಮಾಡಲು ಯುಪಿ ಸರ್ಕಾರ ಯತ್ನಿಸಿದ ನಂತರ ಉತ್ತರ ಭಾತರದ ಪ್ರಮುಖ ರಾಜ್ಯಗಳಲ್ಲಿ ರೈತ ಹೋರಾಟಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ನಿನ್ನೆ ರಾತ್ರಿಯಿಂದಲೇ ಸಾವಿರಾರು ರೈತರು, ನೂರಾರು ಟ್ರ್ಯಾಕ್ಟರ್‌ಗಳು ಈಗ ಗಾಜಿಪುರ ಮತ್ತು ಸಿಂಘು ಗಡಿ ತಲುಪಿದ್ದಾರೆ.

ಟಿಕಾಯತ್ ಅವರ ರಾತ್ರಿಯ ಭಾವನಾತ್ಮಕ ಭಾಷಣವು ಸಾಕಷ್ಟು ಜನಪ್ರಿಯವಾಗಿದ್ದು, ರೈತ ಹೋರಾಟಕ್ಕೆ ಹೆಚ್ಚಿನ ಬೆಂಬಲ ವ್ಯಕ್ತವಾಗುತ್ತಿದೆ.


ಇದನ್ನೂ ಓದಿ: ಜನರನ್ನು ಪ್ರಚೋದಿಸುವ ಟಿವಿ ಕಾರ್ಯಕ್ರಮ ನಿಗ್ರಹಿಸಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...