Homeಸಿನಿಮಾಕ್ರೀಡೆಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!

ಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!

ಪಂದ್ಯ ಗೆದ್ದ ನಂತರ ವಿರಾಟ್ ಕೊಹ್ಲಿ ಪಾಕ್ ಆಟಗಾರರನ್ನು ಅಭಿನಂದಿಸುತ್ತಿರುವ ಫೋಟೊ ಹಂಚಿಕೊಂಡಿರುವ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ "Spirit of Cricket" ಎಂದು ಬರೆದಿದೆ.

- Advertisement -
- Advertisement -

ಐಸಿಸಿ ಟಿಟ್ವೆಂಟಿ ವಿಶ್ವಕಪ್‌ನ ತನ್ನ ಆರಂಭಿಕ ಪಂದ್ಯದಲ್ಲಿ ಭಾರತವು ಪಾಕಿಸ್ತಾನದ ಎದರು 10 ವಿಕೆಟ್‌ಗಳ ಸೋಲು ಕಂಡಿತು. ಆದರೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಪಂದ್ಯ ಮುಗಿದ ವೇಳೆ ಪಾಕಿಸ್ತಾನದ ಆಟಗಾರ ಮೊಹಮ್ಮದ್ ರಿಜ್ವಾನ್‌ರನ್ನು ಅಪ್ಪಿಕೊಂಡು ಅಭಿನಂದಿಸಿದರು. ಮತ್ತೊಬ್ಬ ಆಟಗಾರ ಪಾಕ್ ನಾಯಕ ಬಾಬರ್ ಅಜಂರಿಗೆ ಅಭಿನಂದನೆ ತಿಳಿಸಿದರು. ಈ ಫೋಟೊ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ “ನಿಜವಾದ ಕ್ರೀಡಾಸ್ಪೂರ್ತಿ” ಎಂಬ ಹೆಗ್ಗಳಿಕೆಗೆ ಪಾತ್ರವಾಗಿವೆ. ಅದೇ ರೀತಿ ಪಂದ್ಯದ ನಂತರ ಭಾರತದ ತಂಡದ ಮೆಂಟರ್ ಮಹೇಂದ್ರ ಸಿಂಗ್ ಧೋನಿ ಪಾಕಿಸ್ತಾನದ ಆಟಗಾರರ ಜೊತೆ ಮಾತುಕತೆ ನಡೆಸಿ ಕ್ರೀಡಾಭಿಮಾನಿಗಳ ಮನಗೆದ್ದಿದ್ದಾರೆ.

ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ದುಕೊಂಡಿತು. ಪಾಕಿಸ್ತಾನದ ಬೌಲರ್‌ಗಳ ಶಿಸ್ತುಬದ್ಧ ದಾಳಿಗೆ ಭಾರತದ ಆರಂಭಿಕ ಬ್ಯಾಟ್ಸ್‌ಮನ್‌ಗಳು ತತ್ತರಿಸಿದರು. 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡ ಭಾರತ 151 ರನ್ ಪೇರಿಸಲಷ್ಟೇ ಸಾಧ್ಯವಾಯಿತು. ಅದಕ್ಕೆ ಪ್ರತಿಯಾಗಿ ಪಾಕಿಸ್ತಾನ ಯಾವುದೇ ವಿಕೆಟ್ ನಷ್ಟವಿಲ್ಲದೆ 152 ರನ್ ಗಳಿಸಿ ಗೆಲುವಿನ ಸಿಹಿ ಉಂಡಿತು. ಆ ಮೂಲಕ ಪಾಕಿಸ್ತಾನ ತಂಡವು ವಿಶ್ವಕಪ್ ಪಂದ್ಯಾವಳಿಗಳಲ್ಲಿ ಮೊದಲ ಬಾರಿಗೆ ಭಾರತದ ಎದುರು ಜಯ ದಾಖಲಿಸಿತು. ಬಾಬರ್ ಅಜಂ ಮತ್ತು ಮೊಹಮ್ಮದ್ ರಿಜ್ವಾನ್‌ ಅದ್ಭುತ ಜೊತೆಯಾಟವಾಡಿದರು.

ಪಾಕ್ ಪಂದ್ಯ ಗೆದ್ದ ನಂತರ ವಿರಾಟ್ ಕೊಹ್ಲಿ ಪಾಕ್ ಆಟಗಾರರನ್ನು ಅಭಿನಂದಿಸುತ್ತಿರುವ ಫೋಟೊ ಹಂಚಿಕೊಂಡಿರುವ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ “Spirit of Cricket” ಎಂದು ಬರೆದಿದೆ.

ಸೋತದ್ದು ಒಂದು ಪಂದ್ಯ ಮಾತ್ರ, ಆದರೆ ಗೆದ್ದದ್ದು ಸಹಸ್ರಾರು ಹೃದಯ!
Well done ವಿರಾಟ್ ಕೊಹ್ಲಿ ಎಂದು ರಂಜನ್ ಪ್ರಸಾದ್‌ರವರು ಪ್ರತಿಕ್ರಿಯಿಸಿದ್ದಾರೆ.

ವಿರಾಟ್ ಕೋಹ್ಲಿ ಓರ್ವ ಪ್ರಬುದ್ಧ ಆಟಗಾರ.‌ ಪಂದ್ಯ ಸೋತರೂ ಕೂಡಾ ಪಾಕಿಸ್ತಾನವೂ ಸೇರಿದಂತೆ ವಿಶ್ವದೆಲ್ಲೆಡೆಯ ಕ್ರಿಕೆಟ್ ಅಭಿಮಾನಿಗಳ ಹೃದಯವನ್ನು ಗೆದ್ದ ಕ್ಯಾಪ್ಟನ್ ಎಂದು ಪುನೀತ್ ಅಪ್ಪುರವರು ಬರೆದಿದ್ದಾರೆ.

ನಿಜವಾಗಿಯೂ ಕ್ರಿಕೆಟ್ ಗೆದ್ದಿದೆ..ಅಭಿನಂದನೆಗಳು ಎಂದು ಸುಲೈಮಾನ್ ಕಲ್ಲರ್ಪೆಯವರು ಬರೆದಿದ್ದಾರೆ.

ಪಾಕಿಸ್ತಾನ ತಂಡ ಚೆನ್ನಾಗಿ ಆಟವಾಗಿದೆ. ಭಾರತದಿಂದ ಅವರಿಗೆ ಪ್ರೀತಿಪೂರ್ವಕ ಅಭಿನಂದನೆಗಳು ಎಂದು ಹಲವಾರು ಜನ ಶುಭ ಕೋರಿದ್ದಾರೆ.

ಪಂದ್ಯ ಆರಂಭಕ್ಕೂ ಮುನ್ನವೇ ಹಲವು ಮಾಧ್ಯಮಗಳು ಭಾರತ-ಪಾಕ್ ಪಂದ್ಯವನ್ನು ವಿಶ್ವಯುದ್ಧವೆಂಬಂತೆ ಬಿಂಬಿಸಿದ್ದವು. ಅಲ್ಲದೇ ಪಾಕಿಸ್ತಾನವನ್ನು ಶತ್ರು ರಾಷ್ಟ್ರವೆಂಬಂತೆ ಕರೆದಿದ್ದವು. ಆದರೆ ಅದನ್ನು ಸ್ವತಃ ಭಾರತದ ತಂಡ ಸುಳ್ಳು ಮಾಡಿತು. ಭಾರತದ ಎಲ್ಲಾ ಆಟಗಾರರು ಕ್ರೀಡಾಸ್ಫೂರ್ತಿ ಮೆರೆದರು. ಹಾಗಾಗಿ ಹಲವಾರು ಕ್ರೀಡಾಭಿಮಾನಿಗಳು ಕೊಹ್ಲಿ ಮತ್ತು ಧೋನಿ ನಡೆಯನ್ನು ಪ್ರೀತಿಯಿಂದ ಬೆಂಬಲಿಸಿದರು.


ಇದನ್ನೂ ಓದಿ; ಭಾರತ ಕ್ರಿಕೆಟ್ ತಂಡವನ್ನು ‘ದಂಡುಪಾಳ್ಯದ ದಂಡಪಿಂಡ’ಗಳು ಎಂದ ದಿಗ್ವಿಜಯ ನ್ಯೂಸ್?: ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...