Homeಸಿನಿಮಾಕ್ರೀಡೆಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!

ಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!

ಪಂದ್ಯ ಗೆದ್ದ ನಂತರ ವಿರಾಟ್ ಕೊಹ್ಲಿ ಪಾಕ್ ಆಟಗಾರರನ್ನು ಅಭಿನಂದಿಸುತ್ತಿರುವ ಫೋಟೊ ಹಂಚಿಕೊಂಡಿರುವ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ "Spirit of Cricket" ಎಂದು ಬರೆದಿದೆ.

- Advertisement -
- Advertisement -

ಐಸಿಸಿ ಟಿಟ್ವೆಂಟಿ ವಿಶ್ವಕಪ್‌ನ ತನ್ನ ಆರಂಭಿಕ ಪಂದ್ಯದಲ್ಲಿ ಭಾರತವು ಪಾಕಿಸ್ತಾನದ ಎದರು 10 ವಿಕೆಟ್‌ಗಳ ಸೋಲು ಕಂಡಿತು. ಆದರೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಪಂದ್ಯ ಮುಗಿದ ವೇಳೆ ಪಾಕಿಸ್ತಾನದ ಆಟಗಾರ ಮೊಹಮ್ಮದ್ ರಿಜ್ವಾನ್‌ರನ್ನು ಅಪ್ಪಿಕೊಂಡು ಅಭಿನಂದಿಸಿದರು. ಮತ್ತೊಬ್ಬ ಆಟಗಾರ ಪಾಕ್ ನಾಯಕ ಬಾಬರ್ ಅಜಂರಿಗೆ ಅಭಿನಂದನೆ ತಿಳಿಸಿದರು. ಈ ಫೋಟೊ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ “ನಿಜವಾದ ಕ್ರೀಡಾಸ್ಪೂರ್ತಿ” ಎಂಬ ಹೆಗ್ಗಳಿಕೆಗೆ ಪಾತ್ರವಾಗಿವೆ. ಅದೇ ರೀತಿ ಪಂದ್ಯದ ನಂತರ ಭಾರತದ ತಂಡದ ಮೆಂಟರ್ ಮಹೇಂದ್ರ ಸಿಂಗ್ ಧೋನಿ ಪಾಕಿಸ್ತಾನದ ಆಟಗಾರರ ಜೊತೆ ಮಾತುಕತೆ ನಡೆಸಿ ಕ್ರೀಡಾಭಿಮಾನಿಗಳ ಮನಗೆದ್ದಿದ್ದಾರೆ.

ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ದುಕೊಂಡಿತು. ಪಾಕಿಸ್ತಾನದ ಬೌಲರ್‌ಗಳ ಶಿಸ್ತುಬದ್ಧ ದಾಳಿಗೆ ಭಾರತದ ಆರಂಭಿಕ ಬ್ಯಾಟ್ಸ್‌ಮನ್‌ಗಳು ತತ್ತರಿಸಿದರು. 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡ ಭಾರತ 151 ರನ್ ಪೇರಿಸಲಷ್ಟೇ ಸಾಧ್ಯವಾಯಿತು. ಅದಕ್ಕೆ ಪ್ರತಿಯಾಗಿ ಪಾಕಿಸ್ತಾನ ಯಾವುದೇ ವಿಕೆಟ್ ನಷ್ಟವಿಲ್ಲದೆ 152 ರನ್ ಗಳಿಸಿ ಗೆಲುವಿನ ಸಿಹಿ ಉಂಡಿತು. ಆ ಮೂಲಕ ಪಾಕಿಸ್ತಾನ ತಂಡವು ವಿಶ್ವಕಪ್ ಪಂದ್ಯಾವಳಿಗಳಲ್ಲಿ ಮೊದಲ ಬಾರಿಗೆ ಭಾರತದ ಎದುರು ಜಯ ದಾಖಲಿಸಿತು. ಬಾಬರ್ ಅಜಂ ಮತ್ತು ಮೊಹಮ್ಮದ್ ರಿಜ್ವಾನ್‌ ಅದ್ಭುತ ಜೊತೆಯಾಟವಾಡಿದರು.

ಪಾಕ್ ಪಂದ್ಯ ಗೆದ್ದ ನಂತರ ವಿರಾಟ್ ಕೊಹ್ಲಿ ಪಾಕ್ ಆಟಗಾರರನ್ನು ಅಭಿನಂದಿಸುತ್ತಿರುವ ಫೋಟೊ ಹಂಚಿಕೊಂಡಿರುವ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ “Spirit of Cricket” ಎಂದು ಬರೆದಿದೆ.

ಸೋತದ್ದು ಒಂದು ಪಂದ್ಯ ಮಾತ್ರ, ಆದರೆ ಗೆದ್ದದ್ದು ಸಹಸ್ರಾರು ಹೃದಯ!
Well done ವಿರಾಟ್ ಕೊಹ್ಲಿ ಎಂದು ರಂಜನ್ ಪ್ರಸಾದ್‌ರವರು ಪ್ರತಿಕ್ರಿಯಿಸಿದ್ದಾರೆ.

ವಿರಾಟ್ ಕೋಹ್ಲಿ ಓರ್ವ ಪ್ರಬುದ್ಧ ಆಟಗಾರ.‌ ಪಂದ್ಯ ಸೋತರೂ ಕೂಡಾ ಪಾಕಿಸ್ತಾನವೂ ಸೇರಿದಂತೆ ವಿಶ್ವದೆಲ್ಲೆಡೆಯ ಕ್ರಿಕೆಟ್ ಅಭಿಮಾನಿಗಳ ಹೃದಯವನ್ನು ಗೆದ್ದ ಕ್ಯಾಪ್ಟನ್ ಎಂದು ಪುನೀತ್ ಅಪ್ಪುರವರು ಬರೆದಿದ್ದಾರೆ.

ನಿಜವಾಗಿಯೂ ಕ್ರಿಕೆಟ್ ಗೆದ್ದಿದೆ..ಅಭಿನಂದನೆಗಳು ಎಂದು ಸುಲೈಮಾನ್ ಕಲ್ಲರ್ಪೆಯವರು ಬರೆದಿದ್ದಾರೆ.

ಪಾಕಿಸ್ತಾನ ತಂಡ ಚೆನ್ನಾಗಿ ಆಟವಾಗಿದೆ. ಭಾರತದಿಂದ ಅವರಿಗೆ ಪ್ರೀತಿಪೂರ್ವಕ ಅಭಿನಂದನೆಗಳು ಎಂದು ಹಲವಾರು ಜನ ಶುಭ ಕೋರಿದ್ದಾರೆ.

ಪಂದ್ಯ ಆರಂಭಕ್ಕೂ ಮುನ್ನವೇ ಹಲವು ಮಾಧ್ಯಮಗಳು ಭಾರತ-ಪಾಕ್ ಪಂದ್ಯವನ್ನು ವಿಶ್ವಯುದ್ಧವೆಂಬಂತೆ ಬಿಂಬಿಸಿದ್ದವು. ಅಲ್ಲದೇ ಪಾಕಿಸ್ತಾನವನ್ನು ಶತ್ರು ರಾಷ್ಟ್ರವೆಂಬಂತೆ ಕರೆದಿದ್ದವು. ಆದರೆ ಅದನ್ನು ಸ್ವತಃ ಭಾರತದ ತಂಡ ಸುಳ್ಳು ಮಾಡಿತು. ಭಾರತದ ಎಲ್ಲಾ ಆಟಗಾರರು ಕ್ರೀಡಾಸ್ಫೂರ್ತಿ ಮೆರೆದರು. ಹಾಗಾಗಿ ಹಲವಾರು ಕ್ರೀಡಾಭಿಮಾನಿಗಳು ಕೊಹ್ಲಿ ಮತ್ತು ಧೋನಿ ನಡೆಯನ್ನು ಪ್ರೀತಿಯಿಂದ ಬೆಂಬಲಿಸಿದರು.


ಇದನ್ನೂ ಓದಿ; ಭಾರತ ಕ್ರಿಕೆಟ್ ತಂಡವನ್ನು ‘ದಂಡುಪಾಳ್ಯದ ದಂಡಪಿಂಡ’ಗಳು ಎಂದ ದಿಗ್ವಿಜಯ ನ್ಯೂಸ್?: ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...