Homeಕರ್ನಾಟಕಮಳೆಗಾಲದ ಅಧಿವೇಶನದಲ್ಲಿಯೇ ‘ಒಳಮೀಸಲಾತಿ ಗ್ಯಾರಂಟಿ’ಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಆ.11ರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ

ಮಳೆಗಾಲದ ಅಧಿವೇಶನದಲ್ಲಿಯೇ ‘ಒಳಮೀಸಲಾತಿ ಗ್ಯಾರಂಟಿ’ಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಆ.11ರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ

- Advertisement -
- Advertisement -

ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿಯು ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿಯನ್ನು ಕೂಡಲೇ ಜಾರಿಗೊಳಿಸುವಂತೆ ಒತ್ತಾಯಿಸಿ ಆಗಸ್ಟ್ 11 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಿದೆ.

ಸಮಿತಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮಳೆಗಾಲದ ಅಧಿವೇಶನದಲ್ಲಿಯೇ ಈ ಕುರಿತು ನಿರ್ಧಾರ ಕೈಗೊಳ್ಳುವಂತೆ ಆಗ್ರಹಿಸಿದೆ. ಒಳಮೀಸಲಾತಿ ಹೋರಾಟವು ಒಂದು ನಿರ್ದಿಷ್ಟ ಜಾತಿಗೆ ಸೀಮಿತವಾಗಿಲ್ಲ, ಬದಲಿಗೆ 101 ಜಾತಿಗಳು ತಮ್ಮ ಹಕ್ಕುಗಳಿಗಾಗಿ ನಡೆಸುತ್ತಿರುವ ಹೋರಾಟ ಎಂದು ಸಮಿತಿ ಸ್ಪಷ್ಟಪಡಿಸಿದೆ.

ಕಳೆದ 30 ವರ್ಷಗಳಿಂದ ನಡೆಯುತ್ತಿರುವ ಈ ಹೋರಾಟದಿಂದಾಗಿ ಅವಕಾಶ ವಂಚಿತ ಸಮುದಾಯಗಳ ಹಲವು ತಲೆಮಾರುಗಳು ಶಿಕ್ಷಣ, ಉದ್ಯೋಗ ಮತ್ತು ರಾಜಕೀಯ ಸ್ಥಾನಮಾನಗಳನ್ನು ಕಳೆದುಕೊಂಡಿವೆ ಎಂದು ಸಮಿತಿಯ ಮುಖಂಡರು ತಿಳಿಸಿದ್ದಾರೆ. ಈ ಎಲ್ಲಾ ನಷ್ಟಗಳಿಗೆ ಆಡಳಿತಾರೂಢ ಎಲ್ಲ ಪಕ್ಷಗಳ ನಿರ್ಲಕ್ಷ್ಯವೇ ಕಾರಣ ಎಂದು ಅವರು ಆರೋಪಿಸಿದ್ದಾರೆ.

 

ಸುಪ್ರೀಂ ಕೋರ್ಟ್ ತೀರ್ಪು ಮತ್ತು ಸರ್ಕಾರದ ನಿಲುವು

ಆಗಸ್ಟ್ 1, 2024ರಂದು ಸುಪ್ರೀಂ ಕೋರ್ಟ್‌ನ ಏಳು ನ್ಯಾಯಮೂರ್ತಿಗಳ ಪೀಠವು ಒಳಮೀಸಲಾತಿ ಪರವಾಗಿ ನೀಡಿದ ತೀರ್ಪು ಸಂವಿಧಾನಬದ್ಧ ಮತ್ತು ಸಾಮಾಜಿಕ ನ್ಯಾಯದ ಗೆಲುವು ಎಂದು ಹೋರಾಟಗಾರರು ಬಣ್ಣಿಸಿದ್ದಾರೆ. ಈ ತೀರ್ಪು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯದ ಆಶಯವನ್ನು ಎತ್ತಿಹಿಡಿದಿದೆ. ಆದರೆ, ತೀರ್ಪು ಬಂದು ಒಂದು ವರ್ಷ ಗತಿಸಿದ್ದರೂ ಸರ್ಕಾರ ಮೀಸಲಾತಿ ಜಾರಿಗೊಳಿಸಲು ವಿಳಂಬ ಮಾಡುತ್ತಿರುವುದಕ್ಕೆ ಸಮಿತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಹಿರಿಯ ಹೋರಾಟಗಾರರು ಹೇಳುವಂತೆ, ಈ ಹೋರಾಟ ಯಾವುದೇ ರಾಜಕೀಯ ಪಕ್ಷದ ಹಿತಾಸಕ್ತಿಗೆ ಒಳಪಟ್ಟಿಲ್ಲ. ಇದು ಸಾಮಾಜಿಕ ಮತ್ತು ಸಾಂವಿಧಾನಿಕ ನ್ಯಾಯಕ್ಕಾಗಿ ನಡೆಯುತ್ತಿರುವ ದೀರ್ಘ ಹೋರಾಟವಾಗಿದೆ. ದವಿಂದರ್ ಸಿಂಗ್ V/s ಪಂಜಾಬ್ ಸರ್ಕಾರದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ನ್ಯಾಯದ ಪರ ಅಭಿಪ್ರಾಯವು ಒಳಮೀಸಲಾತಿ ಪರವಾದ ತೀರ್ಪಿಗೆ ಮೂಲ ಪ್ರೇರಣೆಯಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ. ಈ ತೀರ್ಪಿನ ನಂತರವೂ ಕೆಲವರು ತೆರೆಮರೆಯಲ್ಲಿ ನಡೆಸಿದ ಕುಟಿಲ ಪ್ರಯತ್ನಗಳು ವಿಫಲವಾಗಿವೆ. ಈಗ ಜಾರಿ ಮಾಡದೆ ಬೇರೆ ದಾರಿಯಿಲ್ಲ ಎಂದು ಸಮಿತಿ ಪ್ರತಿಪಾದಿಸಿದೆ.

ನಾಗಮೋಹನ್ ದಾಸ್ ಆಯೋಗದ ವರದಿ ಮತ್ತು ಸರ್ಕಾರದ ಮುಂದಿರುವ ಅವಕಾಶಗಳು

ನ್ಯಾಯಾಲಯದ ನಿರ್ದೇಶನದಂತೆ ಸರ್ಕಾರವೇ ನೇಮಿಸಿದ ಹೆಚ್.ಎನ್. ನಾಗಮೋಹನ್ ದಾಸ್ ಏಕ ಸದಸ್ಯ ಆಯೋಗವು ವೈಜ್ಞಾನಿಕ ಮತ್ತು ವಸ್ತುನಿಷ್ಠ ದತ್ತಾಂಶಗಳನ್ನು ಸಂಗ್ರಹಿಸುವ ಗಡುವು ಜುಲೈ 31ಕ್ಕೆ ಮುಕ್ತಾಯಗೊಂಡಿದೆ. ಆಗಸ್ಟ್ 11 ರಿಂದ ಪ್ರಾರಂಭವಾಗುವ ಮಳೆಗಾಲದ ಅಧಿವೇಶನದಲ್ಲಿ ಈ ವರದಿಯನ್ನು ಮಂಡಿಸಿ, ಒಳಮೀಸಲಾತಿಯನ್ನು ಸರ್ವಾನುಮತದಿಂದ ಅಂಗೀಕರಿಸಬೇಕು ಎಂದು ಸಮಿತಿ ಆಗ್ರಹಿಸಿದೆ.

ಇದು ಸರ್ಕಾರದ ಮುಂದಿರುವ ಸದಾವಕಾಶವಾಗಿದೆ. ಇದರ ಬದಲಾಗಿ, ಮತ್ತೊಂದು ಸಂಪುಟ ಉಪಸಮಿತಿ ರಚಿಸುವ ಅಥವಾ ತಜ್ಞರ ಸಲಹೆಯ ನೆಪದಲ್ಲಿ ಹೋರಾಟವನ್ನು ವಿಳಂಬಗೊಳಿಸುವ ಪ್ರಯತ್ನ ಮಾಡಿದರೆ ಅದನ್ನು ಸಹಿಸುವುದಿಲ್ಲ ಎಂದು ಸಮಿತಿ ಎಚ್ಚರಿಕೆ ನೀಡಿದೆ. ತಡಮಾಡಿದಷ್ಟು ಎಡವಟ್ಟುಗಳು ಹೆಚ್ಚುತ್ತವೆ ಎಂಬ ಗತಕಾಲದ ಹೋರಾಟಗಳ ಗುಣಪಾಠವನ್ನು ಮುಖ್ಯಮಂತ್ರಿಯವರು ನೆನಪಿಸಿಕೊಳ್ಳಬೇಕು ಎಂದು ಸಮಿತಿ ಹೇಳಿದೆ.

ಸರ್ಕಾರದ ನಿರ್ಲಕ್ಷ್ಯದ ಕುರಿತು ಎಚ್ಚರಿಕೆ

ಒಳಮೀಸಲಾತಿ ಜಾರಿ ವಿಳಂಬದಿಂದಾಗಿ ಮೀಸಲಾತಿ ವಿರೋಧಿಗಳು ಸಮಾಜದಲ್ಲಿ ಬಿರುಕು ಮೂಡಿಸಲು ಯತ್ನಿಸುತ್ತಿದ್ದಾರೆ ಎಂದು ಸಮಿತಿ ಆರೋಪಿಸಿದೆ. ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ಭಾಷಣಗಳನ್ನು ಮಾಡುವ ಸಿದ್ದರಾಮಯ್ಯನವರಂತಹ ನಾಯಕರು ಈ ವಿಷಯದಲ್ಲಿ ನಿಧಾನಗತಿ ತೋರುತ್ತಿರುವುದು ನೊಂದ ಸಮುದಾಯಗಳಲ್ಲಿ ಆತಂಕ ಮೂಡಿಸಿದೆ ಎಂದು ಹೋರಾಟಗಾರರು ತಿಳಿಸಿದ್ದಾರೆ. “ನಿಮ್ಮ ನಿರ್ಲಕ್ಷ್ಯದಿಂದ ಮತ ವಿಭಜನೆಯಾದರೆ ಅದಕ್ಕೆ ನಿಮ್ಮ ಸರ್ಕಾರದ ಧೋರಣೆಯೇ ಕಾರಣ,” ಎಂದು ಸಮಿತಿ ನೇರವಾಗಿ ಮುಖ್ಯಮಂತ್ರಿಯವರಿಗೆ ತಿಳಿಸಿದೆ.

ಒಳಮೀಸಲಾತಿಯನ್ನು ಕೂಡಲೇ ಜಾರಿಗೆ ತಂದು ಸಾವಿರಾರು ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಬೇಕೆಂದು ಸಮಿತಿ ಒತ್ತಾಯಿಸಿದೆ. ಆಗಸ್ಟ್ 1, 2025ರಂದು ಒಳಮೀಸಲಾತಿ ಜಾರಿಗೊಂಡಿದ್ದರೆ, ಸಾವಿರಾರು ಕುಟುಂಬಗಳು ಒಂದು ವರ್ಷದ ವಿಜಯೋತ್ಸವವನ್ನು ಆಚರಿಸಬಹುದಿತ್ತು ಎಂದು ಸಮಿತಿ ವಿಷಾದಿಸಿದೆ.

ಹೋರಾಟದಲ್ಲಿ ಭಾಗವಹಿಸುವಂತೆ ಕರೆ

“ಸಮಪಾಲು! ಸಮಬಾಳು!! ಸಾಮಾಜಿಕ ಪರಿವರ್ತನೆ!!!” ಎಂಬ ಘೋಷಣೆಯೊಂದಿಗೆ, “ಮನೆಗೊಬ್ಬ ವ್ಯಕ್ತಿ… ಜೊತೆಗಿರಲಿ ಬುತ್ತಿ… ಒಗ್ಗೂಡಿ ಹೋರಾಡಿ, ಹಂಚಿ ತಿನ್ನೋಣ ಒಳಮೀಸಲಾತಿ…” ಎಂದು ಸಮಿತಿಯ ವಕ್ತಾರರು ಕರೆ ನೀಡಿದ್ದಾರೆ. 30 ವರ್ಷಗಳ ಹೋರಾಟದ ಮುಂಚೂಣಿಯಲ್ಲಿದ್ದ ಎಲ್ಲಾ ಮುಖಂಡರುಗಳ ಸಾಮೂಹಿಕ ನೇತೃತ್ವದಲ್ಲಿ ಈ ಹೋರಾಟ ನಡೆಯಲಿದೆ.

ಈ ಹೋರಾಟದ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆಗಳು: 9448059406, 9448695537, 9449491213, ಮತ್ತು 9448667163. ಈ ಹೋರಾಟವು ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ, ಬದಲಿಗೆ ಅಲೆಮಾರಿ ಸಮುದಾಯಗಳು ಸೇರಿದಂತೆ ಎಲ್ಲಾ ಅವಕಾಶ ವಂಚಿತ ಸಮುದಾಯಗಳ ಸೌಹಾರ್ದತೆಯ ಸಂಗಮವಾಗಿದೆ ಎಂದು ಸಮಿತಿ ತಿಳಿಸಿದೆ.

ಆದಿವಾಸಿಗಳ ಮೇಲೆ ನಡೆಯುತ್ತಿರುವ ‘ಆಪರೇಷನ್ ಖಗಾರ್’ ಯುದ್ದ ನಿಲ್ಲಿಸಿ: ಆದಿವಾಸಿಗಳ ಮೇಲಿನ ಯುದ್ಧ ವಿರೋಧಿ ಕರ್ನಾಟಕ ಜನತೆಯ ಒಕ್ಕೂಟ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...