Homeಕರ್ನಾಟಕಮಳೆಗಾಲದ ಅಧಿವೇಶನದಲ್ಲಿಯೇ ‘ಒಳಮೀಸಲಾತಿ ಗ್ಯಾರಂಟಿ’ಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಆ.11ರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ

ಮಳೆಗಾಲದ ಅಧಿವೇಶನದಲ್ಲಿಯೇ ‘ಒಳಮೀಸಲಾತಿ ಗ್ಯಾರಂಟಿ’ಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಆ.11ರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ

- Advertisement -
- Advertisement -

ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿಯು ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿಯನ್ನು ಕೂಡಲೇ ಜಾರಿಗೊಳಿಸುವಂತೆ ಒತ್ತಾಯಿಸಿ ಆಗಸ್ಟ್ 11 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಿದೆ.

ಸಮಿತಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮಳೆಗಾಲದ ಅಧಿವೇಶನದಲ್ಲಿಯೇ ಈ ಕುರಿತು ನಿರ್ಧಾರ ಕೈಗೊಳ್ಳುವಂತೆ ಆಗ್ರಹಿಸಿದೆ. ಒಳಮೀಸಲಾತಿ ಹೋರಾಟವು ಒಂದು ನಿರ್ದಿಷ್ಟ ಜಾತಿಗೆ ಸೀಮಿತವಾಗಿಲ್ಲ, ಬದಲಿಗೆ 101 ಜಾತಿಗಳು ತಮ್ಮ ಹಕ್ಕುಗಳಿಗಾಗಿ ನಡೆಸುತ್ತಿರುವ ಹೋರಾಟ ಎಂದು ಸಮಿತಿ ಸ್ಪಷ್ಟಪಡಿಸಿದೆ.

ಕಳೆದ 30 ವರ್ಷಗಳಿಂದ ನಡೆಯುತ್ತಿರುವ ಈ ಹೋರಾಟದಿಂದಾಗಿ ಅವಕಾಶ ವಂಚಿತ ಸಮುದಾಯಗಳ ಹಲವು ತಲೆಮಾರುಗಳು ಶಿಕ್ಷಣ, ಉದ್ಯೋಗ ಮತ್ತು ರಾಜಕೀಯ ಸ್ಥಾನಮಾನಗಳನ್ನು ಕಳೆದುಕೊಂಡಿವೆ ಎಂದು ಸಮಿತಿಯ ಮುಖಂಡರು ತಿಳಿಸಿದ್ದಾರೆ. ಈ ಎಲ್ಲಾ ನಷ್ಟಗಳಿಗೆ ಆಡಳಿತಾರೂಢ ಎಲ್ಲ ಪಕ್ಷಗಳ ನಿರ್ಲಕ್ಷ್ಯವೇ ಕಾರಣ ಎಂದು ಅವರು ಆರೋಪಿಸಿದ್ದಾರೆ.

 

ಸುಪ್ರೀಂ ಕೋರ್ಟ್ ತೀರ್ಪು ಮತ್ತು ಸರ್ಕಾರದ ನಿಲುವು

ಆಗಸ್ಟ್ 1, 2024ರಂದು ಸುಪ್ರೀಂ ಕೋರ್ಟ್‌ನ ಏಳು ನ್ಯಾಯಮೂರ್ತಿಗಳ ಪೀಠವು ಒಳಮೀಸಲಾತಿ ಪರವಾಗಿ ನೀಡಿದ ತೀರ್ಪು ಸಂವಿಧಾನಬದ್ಧ ಮತ್ತು ಸಾಮಾಜಿಕ ನ್ಯಾಯದ ಗೆಲುವು ಎಂದು ಹೋರಾಟಗಾರರು ಬಣ್ಣಿಸಿದ್ದಾರೆ. ಈ ತೀರ್ಪು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯದ ಆಶಯವನ್ನು ಎತ್ತಿಹಿಡಿದಿದೆ. ಆದರೆ, ತೀರ್ಪು ಬಂದು ಒಂದು ವರ್ಷ ಗತಿಸಿದ್ದರೂ ಸರ್ಕಾರ ಮೀಸಲಾತಿ ಜಾರಿಗೊಳಿಸಲು ವಿಳಂಬ ಮಾಡುತ್ತಿರುವುದಕ್ಕೆ ಸಮಿತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಹಿರಿಯ ಹೋರಾಟಗಾರರು ಹೇಳುವಂತೆ, ಈ ಹೋರಾಟ ಯಾವುದೇ ರಾಜಕೀಯ ಪಕ್ಷದ ಹಿತಾಸಕ್ತಿಗೆ ಒಳಪಟ್ಟಿಲ್ಲ. ಇದು ಸಾಮಾಜಿಕ ಮತ್ತು ಸಾಂವಿಧಾನಿಕ ನ್ಯಾಯಕ್ಕಾಗಿ ನಡೆಯುತ್ತಿರುವ ದೀರ್ಘ ಹೋರಾಟವಾಗಿದೆ. ದವಿಂದರ್ ಸಿಂಗ್ V/s ಪಂಜಾಬ್ ಸರ್ಕಾರದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ನ್ಯಾಯದ ಪರ ಅಭಿಪ್ರಾಯವು ಒಳಮೀಸಲಾತಿ ಪರವಾದ ತೀರ್ಪಿಗೆ ಮೂಲ ಪ್ರೇರಣೆಯಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ. ಈ ತೀರ್ಪಿನ ನಂತರವೂ ಕೆಲವರು ತೆರೆಮರೆಯಲ್ಲಿ ನಡೆಸಿದ ಕುಟಿಲ ಪ್ರಯತ್ನಗಳು ವಿಫಲವಾಗಿವೆ. ಈಗ ಜಾರಿ ಮಾಡದೆ ಬೇರೆ ದಾರಿಯಿಲ್ಲ ಎಂದು ಸಮಿತಿ ಪ್ರತಿಪಾದಿಸಿದೆ.

ನಾಗಮೋಹನ್ ದಾಸ್ ಆಯೋಗದ ವರದಿ ಮತ್ತು ಸರ್ಕಾರದ ಮುಂದಿರುವ ಅವಕಾಶಗಳು

ನ್ಯಾಯಾಲಯದ ನಿರ್ದೇಶನದಂತೆ ಸರ್ಕಾರವೇ ನೇಮಿಸಿದ ಹೆಚ್.ಎನ್. ನಾಗಮೋಹನ್ ದಾಸ್ ಏಕ ಸದಸ್ಯ ಆಯೋಗವು ವೈಜ್ಞಾನಿಕ ಮತ್ತು ವಸ್ತುನಿಷ್ಠ ದತ್ತಾಂಶಗಳನ್ನು ಸಂಗ್ರಹಿಸುವ ಗಡುವು ಜುಲೈ 31ಕ್ಕೆ ಮುಕ್ತಾಯಗೊಂಡಿದೆ. ಆಗಸ್ಟ್ 11 ರಿಂದ ಪ್ರಾರಂಭವಾಗುವ ಮಳೆಗಾಲದ ಅಧಿವೇಶನದಲ್ಲಿ ಈ ವರದಿಯನ್ನು ಮಂಡಿಸಿ, ಒಳಮೀಸಲಾತಿಯನ್ನು ಸರ್ವಾನುಮತದಿಂದ ಅಂಗೀಕರಿಸಬೇಕು ಎಂದು ಸಮಿತಿ ಆಗ್ರಹಿಸಿದೆ.

ಇದು ಸರ್ಕಾರದ ಮುಂದಿರುವ ಸದಾವಕಾಶವಾಗಿದೆ. ಇದರ ಬದಲಾಗಿ, ಮತ್ತೊಂದು ಸಂಪುಟ ಉಪಸಮಿತಿ ರಚಿಸುವ ಅಥವಾ ತಜ್ಞರ ಸಲಹೆಯ ನೆಪದಲ್ಲಿ ಹೋರಾಟವನ್ನು ವಿಳಂಬಗೊಳಿಸುವ ಪ್ರಯತ್ನ ಮಾಡಿದರೆ ಅದನ್ನು ಸಹಿಸುವುದಿಲ್ಲ ಎಂದು ಸಮಿತಿ ಎಚ್ಚರಿಕೆ ನೀಡಿದೆ. ತಡಮಾಡಿದಷ್ಟು ಎಡವಟ್ಟುಗಳು ಹೆಚ್ಚುತ್ತವೆ ಎಂಬ ಗತಕಾಲದ ಹೋರಾಟಗಳ ಗುಣಪಾಠವನ್ನು ಮುಖ್ಯಮಂತ್ರಿಯವರು ನೆನಪಿಸಿಕೊಳ್ಳಬೇಕು ಎಂದು ಸಮಿತಿ ಹೇಳಿದೆ.

ಸರ್ಕಾರದ ನಿರ್ಲಕ್ಷ್ಯದ ಕುರಿತು ಎಚ್ಚರಿಕೆ

ಒಳಮೀಸಲಾತಿ ಜಾರಿ ವಿಳಂಬದಿಂದಾಗಿ ಮೀಸಲಾತಿ ವಿರೋಧಿಗಳು ಸಮಾಜದಲ್ಲಿ ಬಿರುಕು ಮೂಡಿಸಲು ಯತ್ನಿಸುತ್ತಿದ್ದಾರೆ ಎಂದು ಸಮಿತಿ ಆರೋಪಿಸಿದೆ. ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ಭಾಷಣಗಳನ್ನು ಮಾಡುವ ಸಿದ್ದರಾಮಯ್ಯನವರಂತಹ ನಾಯಕರು ಈ ವಿಷಯದಲ್ಲಿ ನಿಧಾನಗತಿ ತೋರುತ್ತಿರುವುದು ನೊಂದ ಸಮುದಾಯಗಳಲ್ಲಿ ಆತಂಕ ಮೂಡಿಸಿದೆ ಎಂದು ಹೋರಾಟಗಾರರು ತಿಳಿಸಿದ್ದಾರೆ. “ನಿಮ್ಮ ನಿರ್ಲಕ್ಷ್ಯದಿಂದ ಮತ ವಿಭಜನೆಯಾದರೆ ಅದಕ್ಕೆ ನಿಮ್ಮ ಸರ್ಕಾರದ ಧೋರಣೆಯೇ ಕಾರಣ,” ಎಂದು ಸಮಿತಿ ನೇರವಾಗಿ ಮುಖ್ಯಮಂತ್ರಿಯವರಿಗೆ ತಿಳಿಸಿದೆ.

ಒಳಮೀಸಲಾತಿಯನ್ನು ಕೂಡಲೇ ಜಾರಿಗೆ ತಂದು ಸಾವಿರಾರು ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಬೇಕೆಂದು ಸಮಿತಿ ಒತ್ತಾಯಿಸಿದೆ. ಆಗಸ್ಟ್ 1, 2025ರಂದು ಒಳಮೀಸಲಾತಿ ಜಾರಿಗೊಂಡಿದ್ದರೆ, ಸಾವಿರಾರು ಕುಟುಂಬಗಳು ಒಂದು ವರ್ಷದ ವಿಜಯೋತ್ಸವವನ್ನು ಆಚರಿಸಬಹುದಿತ್ತು ಎಂದು ಸಮಿತಿ ವಿಷಾದಿಸಿದೆ.

ಹೋರಾಟದಲ್ಲಿ ಭಾಗವಹಿಸುವಂತೆ ಕರೆ

“ಸಮಪಾಲು! ಸಮಬಾಳು!! ಸಾಮಾಜಿಕ ಪರಿವರ್ತನೆ!!!” ಎಂಬ ಘೋಷಣೆಯೊಂದಿಗೆ, “ಮನೆಗೊಬ್ಬ ವ್ಯಕ್ತಿ… ಜೊತೆಗಿರಲಿ ಬುತ್ತಿ… ಒಗ್ಗೂಡಿ ಹೋರಾಡಿ, ಹಂಚಿ ತಿನ್ನೋಣ ಒಳಮೀಸಲಾತಿ…” ಎಂದು ಸಮಿತಿಯ ವಕ್ತಾರರು ಕರೆ ನೀಡಿದ್ದಾರೆ. 30 ವರ್ಷಗಳ ಹೋರಾಟದ ಮುಂಚೂಣಿಯಲ್ಲಿದ್ದ ಎಲ್ಲಾ ಮುಖಂಡರುಗಳ ಸಾಮೂಹಿಕ ನೇತೃತ್ವದಲ್ಲಿ ಈ ಹೋರಾಟ ನಡೆಯಲಿದೆ.

ಈ ಹೋರಾಟದ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆಗಳು: 9448059406, 9448695537, 9449491213, ಮತ್ತು 9448667163. ಈ ಹೋರಾಟವು ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ, ಬದಲಿಗೆ ಅಲೆಮಾರಿ ಸಮುದಾಯಗಳು ಸೇರಿದಂತೆ ಎಲ್ಲಾ ಅವಕಾಶ ವಂಚಿತ ಸಮುದಾಯಗಳ ಸೌಹಾರ್ದತೆಯ ಸಂಗಮವಾಗಿದೆ ಎಂದು ಸಮಿತಿ ತಿಳಿಸಿದೆ.

ಆದಿವಾಸಿಗಳ ಮೇಲೆ ನಡೆಯುತ್ತಿರುವ ‘ಆಪರೇಷನ್ ಖಗಾರ್’ ಯುದ್ದ ನಿಲ್ಲಿಸಿ: ಆದಿವಾಸಿಗಳ ಮೇಲಿನ ಯುದ್ಧ ವಿರೋಧಿ ಕರ್ನಾಟಕ ಜನತೆಯ ಒಕ್ಕೂಟ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...