Homeಕರ್ನಾಟಕಮಳೆಗಾಲದ ಅಧಿವೇಶನದಲ್ಲಿಯೇ ‘ಒಳಮೀಸಲಾತಿ ಗ್ಯಾರಂಟಿ’ಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಆ.11ರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ

ಮಳೆಗಾಲದ ಅಧಿವೇಶನದಲ್ಲಿಯೇ ‘ಒಳಮೀಸಲಾತಿ ಗ್ಯಾರಂಟಿ’ಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಆ.11ರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ

- Advertisement -
- Advertisement -

ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿಯು ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿಯನ್ನು ಕೂಡಲೇ ಜಾರಿಗೊಳಿಸುವಂತೆ ಒತ್ತಾಯಿಸಿ ಆಗಸ್ಟ್ 11 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಿದೆ.

ಸಮಿತಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮಳೆಗಾಲದ ಅಧಿವೇಶನದಲ್ಲಿಯೇ ಈ ಕುರಿತು ನಿರ್ಧಾರ ಕೈಗೊಳ್ಳುವಂತೆ ಆಗ್ರಹಿಸಿದೆ. ಒಳಮೀಸಲಾತಿ ಹೋರಾಟವು ಒಂದು ನಿರ್ದಿಷ್ಟ ಜಾತಿಗೆ ಸೀಮಿತವಾಗಿಲ್ಲ, ಬದಲಿಗೆ 101 ಜಾತಿಗಳು ತಮ್ಮ ಹಕ್ಕುಗಳಿಗಾಗಿ ನಡೆಸುತ್ತಿರುವ ಹೋರಾಟ ಎಂದು ಸಮಿತಿ ಸ್ಪಷ್ಟಪಡಿಸಿದೆ.

ಕಳೆದ 30 ವರ್ಷಗಳಿಂದ ನಡೆಯುತ್ತಿರುವ ಈ ಹೋರಾಟದಿಂದಾಗಿ ಅವಕಾಶ ವಂಚಿತ ಸಮುದಾಯಗಳ ಹಲವು ತಲೆಮಾರುಗಳು ಶಿಕ್ಷಣ, ಉದ್ಯೋಗ ಮತ್ತು ರಾಜಕೀಯ ಸ್ಥಾನಮಾನಗಳನ್ನು ಕಳೆದುಕೊಂಡಿವೆ ಎಂದು ಸಮಿತಿಯ ಮುಖಂಡರು ತಿಳಿಸಿದ್ದಾರೆ. ಈ ಎಲ್ಲಾ ನಷ್ಟಗಳಿಗೆ ಆಡಳಿತಾರೂಢ ಎಲ್ಲ ಪಕ್ಷಗಳ ನಿರ್ಲಕ್ಷ್ಯವೇ ಕಾರಣ ಎಂದು ಅವರು ಆರೋಪಿಸಿದ್ದಾರೆ.

 

ಸುಪ್ರೀಂ ಕೋರ್ಟ್ ತೀರ್ಪು ಮತ್ತು ಸರ್ಕಾರದ ನಿಲುವು

ಆಗಸ್ಟ್ 1, 2024ರಂದು ಸುಪ್ರೀಂ ಕೋರ್ಟ್‌ನ ಏಳು ನ್ಯಾಯಮೂರ್ತಿಗಳ ಪೀಠವು ಒಳಮೀಸಲಾತಿ ಪರವಾಗಿ ನೀಡಿದ ತೀರ್ಪು ಸಂವಿಧಾನಬದ್ಧ ಮತ್ತು ಸಾಮಾಜಿಕ ನ್ಯಾಯದ ಗೆಲುವು ಎಂದು ಹೋರಾಟಗಾರರು ಬಣ್ಣಿಸಿದ್ದಾರೆ. ಈ ತೀರ್ಪು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯದ ಆಶಯವನ್ನು ಎತ್ತಿಹಿಡಿದಿದೆ. ಆದರೆ, ತೀರ್ಪು ಬಂದು ಒಂದು ವರ್ಷ ಗತಿಸಿದ್ದರೂ ಸರ್ಕಾರ ಮೀಸಲಾತಿ ಜಾರಿಗೊಳಿಸಲು ವಿಳಂಬ ಮಾಡುತ್ತಿರುವುದಕ್ಕೆ ಸಮಿತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಹಿರಿಯ ಹೋರಾಟಗಾರರು ಹೇಳುವಂತೆ, ಈ ಹೋರಾಟ ಯಾವುದೇ ರಾಜಕೀಯ ಪಕ್ಷದ ಹಿತಾಸಕ್ತಿಗೆ ಒಳಪಟ್ಟಿಲ್ಲ. ಇದು ಸಾಮಾಜಿಕ ಮತ್ತು ಸಾಂವಿಧಾನಿಕ ನ್ಯಾಯಕ್ಕಾಗಿ ನಡೆಯುತ್ತಿರುವ ದೀರ್ಘ ಹೋರಾಟವಾಗಿದೆ. ದವಿಂದರ್ ಸಿಂಗ್ V/s ಪಂಜಾಬ್ ಸರ್ಕಾರದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ನ್ಯಾಯದ ಪರ ಅಭಿಪ್ರಾಯವು ಒಳಮೀಸಲಾತಿ ಪರವಾದ ತೀರ್ಪಿಗೆ ಮೂಲ ಪ್ರೇರಣೆಯಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ. ಈ ತೀರ್ಪಿನ ನಂತರವೂ ಕೆಲವರು ತೆರೆಮರೆಯಲ್ಲಿ ನಡೆಸಿದ ಕುಟಿಲ ಪ್ರಯತ್ನಗಳು ವಿಫಲವಾಗಿವೆ. ಈಗ ಜಾರಿ ಮಾಡದೆ ಬೇರೆ ದಾರಿಯಿಲ್ಲ ಎಂದು ಸಮಿತಿ ಪ್ರತಿಪಾದಿಸಿದೆ.

ನಾಗಮೋಹನ್ ದಾಸ್ ಆಯೋಗದ ವರದಿ ಮತ್ತು ಸರ್ಕಾರದ ಮುಂದಿರುವ ಅವಕಾಶಗಳು

ನ್ಯಾಯಾಲಯದ ನಿರ್ದೇಶನದಂತೆ ಸರ್ಕಾರವೇ ನೇಮಿಸಿದ ಹೆಚ್.ಎನ್. ನಾಗಮೋಹನ್ ದಾಸ್ ಏಕ ಸದಸ್ಯ ಆಯೋಗವು ವೈಜ್ಞಾನಿಕ ಮತ್ತು ವಸ್ತುನಿಷ್ಠ ದತ್ತಾಂಶಗಳನ್ನು ಸಂಗ್ರಹಿಸುವ ಗಡುವು ಜುಲೈ 31ಕ್ಕೆ ಮುಕ್ತಾಯಗೊಂಡಿದೆ. ಆಗಸ್ಟ್ 11 ರಿಂದ ಪ್ರಾರಂಭವಾಗುವ ಮಳೆಗಾಲದ ಅಧಿವೇಶನದಲ್ಲಿ ಈ ವರದಿಯನ್ನು ಮಂಡಿಸಿ, ಒಳಮೀಸಲಾತಿಯನ್ನು ಸರ್ವಾನುಮತದಿಂದ ಅಂಗೀಕರಿಸಬೇಕು ಎಂದು ಸಮಿತಿ ಆಗ್ರಹಿಸಿದೆ.

ಇದು ಸರ್ಕಾರದ ಮುಂದಿರುವ ಸದಾವಕಾಶವಾಗಿದೆ. ಇದರ ಬದಲಾಗಿ, ಮತ್ತೊಂದು ಸಂಪುಟ ಉಪಸಮಿತಿ ರಚಿಸುವ ಅಥವಾ ತಜ್ಞರ ಸಲಹೆಯ ನೆಪದಲ್ಲಿ ಹೋರಾಟವನ್ನು ವಿಳಂಬಗೊಳಿಸುವ ಪ್ರಯತ್ನ ಮಾಡಿದರೆ ಅದನ್ನು ಸಹಿಸುವುದಿಲ್ಲ ಎಂದು ಸಮಿತಿ ಎಚ್ಚರಿಕೆ ನೀಡಿದೆ. ತಡಮಾಡಿದಷ್ಟು ಎಡವಟ್ಟುಗಳು ಹೆಚ್ಚುತ್ತವೆ ಎಂಬ ಗತಕಾಲದ ಹೋರಾಟಗಳ ಗುಣಪಾಠವನ್ನು ಮುಖ್ಯಮಂತ್ರಿಯವರು ನೆನಪಿಸಿಕೊಳ್ಳಬೇಕು ಎಂದು ಸಮಿತಿ ಹೇಳಿದೆ.

ಸರ್ಕಾರದ ನಿರ್ಲಕ್ಷ್ಯದ ಕುರಿತು ಎಚ್ಚರಿಕೆ

ಒಳಮೀಸಲಾತಿ ಜಾರಿ ವಿಳಂಬದಿಂದಾಗಿ ಮೀಸಲಾತಿ ವಿರೋಧಿಗಳು ಸಮಾಜದಲ್ಲಿ ಬಿರುಕು ಮೂಡಿಸಲು ಯತ್ನಿಸುತ್ತಿದ್ದಾರೆ ಎಂದು ಸಮಿತಿ ಆರೋಪಿಸಿದೆ. ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ಭಾಷಣಗಳನ್ನು ಮಾಡುವ ಸಿದ್ದರಾಮಯ್ಯನವರಂತಹ ನಾಯಕರು ಈ ವಿಷಯದಲ್ಲಿ ನಿಧಾನಗತಿ ತೋರುತ್ತಿರುವುದು ನೊಂದ ಸಮುದಾಯಗಳಲ್ಲಿ ಆತಂಕ ಮೂಡಿಸಿದೆ ಎಂದು ಹೋರಾಟಗಾರರು ತಿಳಿಸಿದ್ದಾರೆ. “ನಿಮ್ಮ ನಿರ್ಲಕ್ಷ್ಯದಿಂದ ಮತ ವಿಭಜನೆಯಾದರೆ ಅದಕ್ಕೆ ನಿಮ್ಮ ಸರ್ಕಾರದ ಧೋರಣೆಯೇ ಕಾರಣ,” ಎಂದು ಸಮಿತಿ ನೇರವಾಗಿ ಮುಖ್ಯಮಂತ್ರಿಯವರಿಗೆ ತಿಳಿಸಿದೆ.

ಒಳಮೀಸಲಾತಿಯನ್ನು ಕೂಡಲೇ ಜಾರಿಗೆ ತಂದು ಸಾವಿರಾರು ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಬೇಕೆಂದು ಸಮಿತಿ ಒತ್ತಾಯಿಸಿದೆ. ಆಗಸ್ಟ್ 1, 2025ರಂದು ಒಳಮೀಸಲಾತಿ ಜಾರಿಗೊಂಡಿದ್ದರೆ, ಸಾವಿರಾರು ಕುಟುಂಬಗಳು ಒಂದು ವರ್ಷದ ವಿಜಯೋತ್ಸವವನ್ನು ಆಚರಿಸಬಹುದಿತ್ತು ಎಂದು ಸಮಿತಿ ವಿಷಾದಿಸಿದೆ.

ಹೋರಾಟದಲ್ಲಿ ಭಾಗವಹಿಸುವಂತೆ ಕರೆ

“ಸಮಪಾಲು! ಸಮಬಾಳು!! ಸಾಮಾಜಿಕ ಪರಿವರ್ತನೆ!!!” ಎಂಬ ಘೋಷಣೆಯೊಂದಿಗೆ, “ಮನೆಗೊಬ್ಬ ವ್ಯಕ್ತಿ… ಜೊತೆಗಿರಲಿ ಬುತ್ತಿ… ಒಗ್ಗೂಡಿ ಹೋರಾಡಿ, ಹಂಚಿ ತಿನ್ನೋಣ ಒಳಮೀಸಲಾತಿ…” ಎಂದು ಸಮಿತಿಯ ವಕ್ತಾರರು ಕರೆ ನೀಡಿದ್ದಾರೆ. 30 ವರ್ಷಗಳ ಹೋರಾಟದ ಮುಂಚೂಣಿಯಲ್ಲಿದ್ದ ಎಲ್ಲಾ ಮುಖಂಡರುಗಳ ಸಾಮೂಹಿಕ ನೇತೃತ್ವದಲ್ಲಿ ಈ ಹೋರಾಟ ನಡೆಯಲಿದೆ.

ಈ ಹೋರಾಟದ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆಗಳು: 9448059406, 9448695537, 9449491213, ಮತ್ತು 9448667163. ಈ ಹೋರಾಟವು ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ, ಬದಲಿಗೆ ಅಲೆಮಾರಿ ಸಮುದಾಯಗಳು ಸೇರಿದಂತೆ ಎಲ್ಲಾ ಅವಕಾಶ ವಂಚಿತ ಸಮುದಾಯಗಳ ಸೌಹಾರ್ದತೆಯ ಸಂಗಮವಾಗಿದೆ ಎಂದು ಸಮಿತಿ ತಿಳಿಸಿದೆ.

ಆದಿವಾಸಿಗಳ ಮೇಲೆ ನಡೆಯುತ್ತಿರುವ ‘ಆಪರೇಷನ್ ಖಗಾರ್’ ಯುದ್ದ ನಿಲ್ಲಿಸಿ: ಆದಿವಾಸಿಗಳ ಮೇಲಿನ ಯುದ್ಧ ವಿರೋಧಿ ಕರ್ನಾಟಕ ಜನತೆಯ ಒಕ್ಕೂಟ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...