Homeಕರ್ನಾಟಕಒಳಮೀಸಲಾತಿಗಾಗಿ ಫ್ರೀಡಂ ಪಾರ್ಕ್‌ನಲ್ಲಿ ಆ.11ರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ: ಕರಿಯಪ್ಪ ಗುಡಿಮನಿ

ಒಳಮೀಸಲಾತಿಗಾಗಿ ಫ್ರೀಡಂ ಪಾರ್ಕ್‌ನಲ್ಲಿ ಆ.11ರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ: ಕರಿಯಪ್ಪ ಗುಡಿಮನಿ

- Advertisement -
- Advertisement -

ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿಯು ಆಗಸ್ಟ್ 11ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಸತ್ಯಾಗ್ರಹವನ್ನು ಆರಂಭಿಸುವುದಾಗಿ ಘೋಷಿಸಿದೆ. ನ್ಯಾ. ಹೆಚ್.ಎನ್. ನಾಗಮೋಹನ್‌ದಾಸ್ ಅವರ ಸಮೀಕ್ಷಾ ವರದಿಯನ್ನು ತಕ್ಷಣವೇ ಸ್ವೀಕರಿಸಿ, ಮುಂಬರುವ ಮಳೆಗಾಲ ಅಧಿವೇಶನದಲ್ಲಿಯೇ ಒಳಮೀಸಲಾತಿ ಜಾರಿಗೊಳಿಸಬೇಕೆಂದು ಸಮಿತಿ ಸರ್ಕಾರವನ್ನು ಒತ್ತಾಯಿಸಿದೆ.

ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೋರಾಟ ಸಮಿತಿಯ ಮುಖಂಡರಾದ ಕರಿಯಪ್ಪ ಗುಡಿಮನಿಯವರು, ಸುಪ್ರೀಂ ಕೋರ್ಟ್ ಪರಿಶಿಷ್ಟರ ಬಹುದಿನಗಳ ಬೇಡಿಕೆಯನ್ನು ರಾಜ್ಯ ಸರ್ಕಾರಗಳು ಆದ್ಯತೆಯ ಮೇರೆಗೆ ಜಾರಿಗೊಳಿಸಬಹುದು ಎಂಬ ಐತಿಹಾಸಿಕ ತೀರ್ಪು ನೀಡಿ ಒಂದು ವರ್ಷ ಗತಿಸಿದೆ. ಆದರೆ, ಇಷ್ಟಾದರೂ ಸರ್ಕಾರಗಳು ಒಳಮೀಸಲಾತಿ ಜಾರಿಗೆ ಮುಂದಾಗಿಲ್ಲ. ನ್ಯಾ. ನಾಗಮೋಹನ್‌ದಾಸ್ ಆಯೋಗವು ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ನಡೆಸಿ ಜುಲೈ 30ರೊಳಗೆ ವರದಿ ಸಲ್ಲಿಸಬೇಕಿತ್ತು. ಆದರೆ, ವಿಳಂಬ ಧೋರಣೆ ಮುಂದುವರಿದಿರುವುದರಿಂದ ಮತ್ತೊಂದು ಸುತ್ತಿನ ಹೋರಾಟ ಅನಿವಾರ್ಯವಾಗಿದೆ ಎಂದು ಹೇಳಿದರು.

ಕಳೆದ 30 ವರ್ಷಗಳಿಂದ ಒಳಮೀಸಲಾತಿ ಹೋರಾಟ ಮುಂದುವರಿದಿದ್ದು, ಆಯೋಗಗಳ ನೇಮಕ, ಅನುದಾನ ಬಿಡುಗಡೆ ಮತ್ತು ವರದಿ ಅನುಷ್ಠಾನದಲ್ಲಿ ನಿರಂತರ ವಿಳಂಬವಾಗುತ್ತಿದೆ. ಇದರಿಂದಾಗಿ, ಸಮುದಾಯದ ಜನರು ಯಾವ ಸರ್ಕಾರವನ್ನೂ ನಂಬುವ ಸ್ಥಿತಿಯಲ್ಲಿಲ್ಲ ಎಂದು ಸಮಿತಿ ವಿಷಾದ ವ್ಯಕ್ತಪಡಿಸಿದೆ.

ಹೋರಾಟದ ಭಾಗವಾಗಿ, ಆಗಸ್ಟ್ 11ರಂದು ಆರಂಭವಾಗಲಿರುವ ಮಳೆಗಾಲ ಅಧಿವೇಶನದಲ್ಲಿಯೇ ಒಳಮೀಸಲಾತಿ ಮಸೂದೆಯನ್ನು ಅಂಗೀಕರಿಸಬೇಕು. ಇದರಿಂದ 30 ಸಾವಿರಕ್ಕೂ ಹೆಚ್ಚು ಉದ್ಯೋಗಗಳು ವಂಚಿತ ಯುವಕ-ಯುವತಿಯರಿಗೆ ಸಿಗಲಿವೆ. ಸರ್ಕಾರವು ಈ ಅಧಿವೇಶನದಲ್ಲಿ ತನ್ನ ಬದ್ಧತೆಯನ್ನು ಪ್ರಕಟಿಸಬೇಕು ಎಂದು ಸಮಿತಿ ಆಗ್ರಹಿಸಿದೆ. ಈ ಹೋರಾಟದಲ್ಲಿ ಎಲ್ಲ ಸಂಘ-ಸಂಸ್ಥೆಗಳ ಮುಖಂಡರು ಮತ್ತು ರಾಜಕೀಯ ಪಕ್ಷಗಳ ಮುಖಂಡರು ಪಕ್ಷಾತೀತವಾಗಿ ಭಾಗವಹಿಸಬೇಕೆಂದು ಸಮಿತಿ ಮನವಿ ಮಾಡಿದೆ.

ಒಳಮೀಸಲಾತಿ ಬೇಡಿಕೆಯ ಪ್ರಮುಖ ಅಂಶಗಳು:

ನ್ಯಾ. ನಾಗಮೋಹನ್‌ದಾಸ್ ಸಮೀಕ್ಷಾ ವರದಿಯನ್ನು ತಕ್ಷಣವೇ ಅಂಗೀಕರಿಸುವುದು

ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಅಧಿವೇಶನದಲ್ಲಿ ತಮ್ಮ ಬದ್ಧತೆಯನ್ನು ಘೋಷಿಸುವುದು

ಆಗಸ್ಟ್ 11ರಿಂದ ಆರಂಭವಾಗುವ ಅಧಿವೇಶನದಲ್ಲಿಯೇ ಒಳಮೀಸಲಾತಿ ಜಾರಿಗೊಳಿಸುವುದು

30 ಸಾವಿರಕ್ಕೂ ಹೆಚ್ಚು ಖಾಲಿ ಇರುವ ಹುದ್ದೆಗಳಿಗೆ ವಂಚಿತ ಸಮುದಾಯದವರಿಗೆ ಅವಕಾಶ ಕಲ್ಪಿಸುವುದು

ಸರ್ಕಾರವು ಈ ನಿರ್ಲಕ್ಷ್ಯ ಧೋರಣೆಯನ್ನು ಕೈಬಿಟ್ಟು, ನುಡಿದಂತೆ ನಡೆಯುವ ಮೂಲಕ ತಮ್ಮ ಬದ್ಧತೆಯನ್ನು ತೋರಿಸಬೇಕೆಂದು ಹೋರಾಟ ಸಮಿತಿ ಒತ್ತಾಯಿಸಿದೆ.

ಸುಳ್ಳು ಸುದ್ದಿ ಪ್ರಸಾರ ಆರೋಪ: ಸುವರ್ಣ ನ್ಯೂಸ್‌ನ ಅಜಿತ್‌ ಹನುಮಕ್ಕನವರ್‌ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...