HomeUncategorizedಸರ್ಕಾರದ ವಿರುದ್ಧ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಇಂದಿನಿಂದ ರಾಜ್ಯದಲ್ಲಿ ಸರ್ಕಾರಿ ಸೇವೆಗಳು ಬಹುತೇಕ ಬಂದ್

ಸರ್ಕಾರದ ವಿರುದ್ಧ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಇಂದಿನಿಂದ ರಾಜ್ಯದಲ್ಲಿ ಸರ್ಕಾರಿ ಸೇವೆಗಳು ಬಹುತೇಕ ಬಂದ್

- Advertisement -
- Advertisement -

ರಾಜ್ಯ ಸರ್ಕಾರಿ ನೌಕರರ ಸಂಘ 7ನೇ ವೇತನ ಆಯೋಗದ ವರದಿ ಜಾರಿಗಾಗಿ ಮತ್ತು ಹಳೆ ಪಿಂಚಣಿ ವ್ಯವಸ್ಥೆಗೆ ಬೇಡಿಕೆಯಿಟ್ಟು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಇಂದಿನಿಂದ ರಾಜ್ಯಾದ್ಯಾಂದ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯವಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ (ಫೆ28)ದಂದು ರಾಜ್ಯ ಸರ್ಕಾರಿ ನೌಕರರ ಜೊತೆ ನಡೆಸಿದ ಸಭೆ ವಿಫಲವಾಗಿದೆ. ಹಾಗಾಗಿ ರಾಜ್ಯದಲ್ಲಿ ಬಹುತೇಕ ಎಲ್ಲಾ ಸರ್ಕಾರಿ ಸೇವೆಗಳು ಬಂದ್ ಆಗುವ ಸಾಧ್ಯತೆಗಳಿವೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ನಡೆದ ಸಭೆ ಬಳಿಕ ಮಾತನಾಡಿದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ, ”ಸಭೆಯಲ್ಲಿ ಬೇಡಿಕೆ ಈಡೇರಿಕೆ ಬಗ್ಗೆ ಮುಖ್ಯಮಂತ್ರಿ ಸ್ಪಷ್ಟವಾಗಿ ಏನನ್ನೂ ಹೇಳಿಲ್ಲ, ಭರವಸೆ ನೀಡಿದ್ದಾರೆ, ಹಾಗಂತ ನಾವು ಅದನ್ನು ಒಪ್ಪಿಕೊಂಡು ಮುಷ್ಕರ ಕೈಬಿಡುವ ಪ್ರಶ್ನೆ ಇಲ್ಲ. ಆದರೆ ನಾವು ಈಗ ಸಂಘದ ಪದಾಧಿಕಾರಿಗಳ ಜೊತೆ ಮತ್ತೊಂದು ಸುತ್ತಿನ ಸಭೆ ನಡೆಸುತ್ತೇವೆ. ಈ ಸಭೆಯಲ್ಲಿ ಕೈಗೊಳ್ಳುವ ನಿರ್ಧಾರದ ಬಗ್ಗೆ ಸಿಎಂ ಗಮನಕ್ಕೆ ತಂದು, ಆನಂತರ ಅಂತಿಮ ನಿರ್ಧಾರ ಪ್ರಕಟಿಸುತ್ತೇವೆ ಎಂದರು. ಸಿಎಂ ಜೊತೆಗಿನ ಸಭೆ ಸಫಲವೂ ಆಗಿಲ್ಲ, ವಿಫಲವೂ ಆಗಿಲ್ಲ. ಸರ್ಕಾರದ ಜತೆ ಯಾವುದೇ ಸಂಘರ್ಷವೂ ಇಲ್ಲ. ಆದರೆ ಬೇಡಿಕೆ ಈಡೇರುವವರೆ ಮಾತ್ರ ಮುಷ್ಕರ ನಡೆಸಲಾಗುವುದು” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಇಷ್ಟು ದಿನ ಬರೀ ಭರವಸೆ ಕೊಡುವ ಕೆಲಸವನ್ನು ಮುಂದುವರೆಸಿತ್ತು, ಈಗಲೂ ಅದೇ ಛಾಳಿಯನ್ನು ಮುಂದುವರೆಸಿದೆ. ಆದರೆ ಇದರಿಂದ ಬೇಸತ್ತ ಸರ್ಕಾರಿ ನೌಕರರು ಭರವಸೆಗಳಿಗೆ ಬಗ್ಗದೇ, ಬೇಡಿಕೆ ಈಡೇರುವವರೆಗೂ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಇಂದು ರಾಜ್ಯ ಎಲ್ಲಾ ಸರ್ಕಾರಿ ಇಲಾಖೆಗಳು ಏಕಕಾಲದಲ್ಲಿ ಬಂದ್ ಆಗಲಿವೆ. ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಶಿಕ್ಷಣ ಇಲಾಖೆ, ಸಾರಿಗೆ ಇಲಾಖೆ, ಪೌರ ಕಾರ್ಮಿಕರು ಸೇರಿ ವಿವಿಧ ಇಲಾಖೆಗಳ ನೌಕರರು ಸೇರಿದಂತೆ ಸುಮಾರು 40 ಸಂಘಗಳು ಮುಷ್ಕರಕ್ಕೆ ಬೆಂಬಲ ನೀಡುತ್ತೀವೆ.

ಇದನ್ನೂ ಓದಿ: 7ನೇ ವೇತನ ಆಯೋಗ ಜಾರಿ ಸಂಬಂಧ ಆದೇಶ ಹೊರಡಿಸಿದರೆ ಮಾತ್ರ ಮಾರ್ಚ್ 1ರ ಮುಷ್ಕರ ವಾಪಸ್: ಷಡಾಕ್ಷರಿ

ರಾಜ್ಯ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ವಿವೇಕ್ ದೊರೆ, ರಾಜ್ಯ ಸರ್ಕಾರಿ ಶಾಲಾ ಕಾಲೇಜುಗಳು ಸಂಘದ ಅಧ್ಯಕ್ಷ ಶಂಭುಲಿಂಗ ಗೌಡ ಸೇರಿದಂತೆ ಇತರೆ ಇಲಾಖೆಗಳ ನೌಕರರ ಸಂಘ ಸಹ ಈ ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ. ಇದರಿಂದ ಸುಮಾರು 10 ಲಕ್ಷ ಸರ್ಕಾರಿ ನೌಕರರರಿಂದ ಮುಷ್ಕರದಲ್ಲಿ ಭಾಗಿಯಾಗಲಿದ್ದು, ಜನಸಾಮಾನ್ಯರಿಗೆ ಸರ್ಕಾರಿ ಸೇವೆಗಳು ಲಭ್ಯವಿರುವುದಿಲ್ಲ. ಇದು ಒಂದು ರೀತಿಯಲ್ಲಿ ಕರ್ನಾಟಕ ಬಂದ್ ಎಂದೇ ಹೇಳಬಹುದಾಗಿದೆ.

ಈ ಬಗ್ಗೆ ಮಾತನಾಡಿರುವ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ವಿವೇಕ್ ದೊರೆ, ”ಇಂದು ಓಪಿಡಿ ಸೇರಿದಂತೆ ಉಳಿದ ಸೇವೆಗಳು ಇರುವುದಿಲ್ಲ. ಆಸ್ಪತ್ರೆಯಲ್ಲಿ ತುರ್ತು ಸೇವೆ ಮಾತ್ರ ಲಭ್ಯವಿದೆ. ಕಪ್ಪುಪಟ್ಟಿ ಧರಿಸಿ ಸಿಬ್ಬಂದಿ ಸೇವೆಗೆ ಹಾಜರಾಗುತ್ತಾರೆ. ಆದರೆ ಬೆಂಗಳೂರಿನಲ್ಲಿ 3 ಪ್ರಮುಖ ಆಸ್ಪತ್ರೆ, 105 ಪ್ರಾಥಮಿಕ ಆರೋಗ್ಯ ಕೇಂದ್ರ, 19 ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳ ಓಪಿಡಿ ಇರುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯ ಸರ್ಕಾರಿ ಶಾಲಾ ಕಾಲೇಜುಗಳ ಸಂಘದ ಅಧ್ಯಕ್ಷ ಶಂಭುಲಿಂಗ ಗೌಡ ಸಹ ಮುಷ್ಕರಕ್ಕೆ ಬೆಂಬಲ ಘೋಷಿಸಿದ್ದಾರೆ. ಹಾಗಾಗಿ ರಾಜ್ಯದ ಎಲ್ಲಾ ಶಿಕ್ಷಕರು ಕೂಡ ಮುಷ್ಕರದಲ್ಲಿ ಭಾಗಿಯಾಗಲಿದ್ದು, ತರಗತಿಗಳು ನಡೆಯುವುದಿಲ್ಲ. ಇದೇ ತಿಂಗಳು (ಮಾರ್ಚ್) ಮಕ್ಕಳಿಗೆ ಪರೀಕ್ಷೆ ಇರುವುದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಆತಂಕ ಶುರುವಾಗಿದೆ. ಆದರೆ ಸರ್ಕಾರ ಮಾತ್ರ ಈ ಬಗ್ಗೆ ಯೋಚನೆ ಮಾಡುತ್ತಿಲ್ಲ ಎಂದೆನಿಸುತ್ತದೆ.

ರಾಜ್ಯ ಸರ್ಕಾರಿ ನೌಕರರ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ಮಂಗಳವಾರ(ಫೆ.28) ಮಧ್ಯರಾತ್ರಿ 2.30ರ ವರೆಗೂ ಸಭೆ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ಬೊಮ್ಮಾಯಿ ಇಂದು (ಮಾ.1) ಮತ್ತೊಂದು ಸುತ್ತಿನ ಸಭೆ ನಡೆಸುವ ಸಾಧ್ಯತೆ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...