HomeUncategorizedಸರ್ಕಾರದ ವಿರುದ್ಧ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಇಂದಿನಿಂದ ರಾಜ್ಯದಲ್ಲಿ ಸರ್ಕಾರಿ ಸೇವೆಗಳು ಬಹುತೇಕ ಬಂದ್

ಸರ್ಕಾರದ ವಿರುದ್ಧ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಇಂದಿನಿಂದ ರಾಜ್ಯದಲ್ಲಿ ಸರ್ಕಾರಿ ಸೇವೆಗಳು ಬಹುತೇಕ ಬಂದ್

- Advertisement -
- Advertisement -

ರಾಜ್ಯ ಸರ್ಕಾರಿ ನೌಕರರ ಸಂಘ 7ನೇ ವೇತನ ಆಯೋಗದ ವರದಿ ಜಾರಿಗಾಗಿ ಮತ್ತು ಹಳೆ ಪಿಂಚಣಿ ವ್ಯವಸ್ಥೆಗೆ ಬೇಡಿಕೆಯಿಟ್ಟು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಇಂದಿನಿಂದ ರಾಜ್ಯಾದ್ಯಾಂದ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯವಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ (ಫೆ28)ದಂದು ರಾಜ್ಯ ಸರ್ಕಾರಿ ನೌಕರರ ಜೊತೆ ನಡೆಸಿದ ಸಭೆ ವಿಫಲವಾಗಿದೆ. ಹಾಗಾಗಿ ರಾಜ್ಯದಲ್ಲಿ ಬಹುತೇಕ ಎಲ್ಲಾ ಸರ್ಕಾರಿ ಸೇವೆಗಳು ಬಂದ್ ಆಗುವ ಸಾಧ್ಯತೆಗಳಿವೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ನಡೆದ ಸಭೆ ಬಳಿಕ ಮಾತನಾಡಿದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ, ”ಸಭೆಯಲ್ಲಿ ಬೇಡಿಕೆ ಈಡೇರಿಕೆ ಬಗ್ಗೆ ಮುಖ್ಯಮಂತ್ರಿ ಸ್ಪಷ್ಟವಾಗಿ ಏನನ್ನೂ ಹೇಳಿಲ್ಲ, ಭರವಸೆ ನೀಡಿದ್ದಾರೆ, ಹಾಗಂತ ನಾವು ಅದನ್ನು ಒಪ್ಪಿಕೊಂಡು ಮುಷ್ಕರ ಕೈಬಿಡುವ ಪ್ರಶ್ನೆ ಇಲ್ಲ. ಆದರೆ ನಾವು ಈಗ ಸಂಘದ ಪದಾಧಿಕಾರಿಗಳ ಜೊತೆ ಮತ್ತೊಂದು ಸುತ್ತಿನ ಸಭೆ ನಡೆಸುತ್ತೇವೆ. ಈ ಸಭೆಯಲ್ಲಿ ಕೈಗೊಳ್ಳುವ ನಿರ್ಧಾರದ ಬಗ್ಗೆ ಸಿಎಂ ಗಮನಕ್ಕೆ ತಂದು, ಆನಂತರ ಅಂತಿಮ ನಿರ್ಧಾರ ಪ್ರಕಟಿಸುತ್ತೇವೆ ಎಂದರು. ಸಿಎಂ ಜೊತೆಗಿನ ಸಭೆ ಸಫಲವೂ ಆಗಿಲ್ಲ, ವಿಫಲವೂ ಆಗಿಲ್ಲ. ಸರ್ಕಾರದ ಜತೆ ಯಾವುದೇ ಸಂಘರ್ಷವೂ ಇಲ್ಲ. ಆದರೆ ಬೇಡಿಕೆ ಈಡೇರುವವರೆ ಮಾತ್ರ ಮುಷ್ಕರ ನಡೆಸಲಾಗುವುದು” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಇಷ್ಟು ದಿನ ಬರೀ ಭರವಸೆ ಕೊಡುವ ಕೆಲಸವನ್ನು ಮುಂದುವರೆಸಿತ್ತು, ಈಗಲೂ ಅದೇ ಛಾಳಿಯನ್ನು ಮುಂದುವರೆಸಿದೆ. ಆದರೆ ಇದರಿಂದ ಬೇಸತ್ತ ಸರ್ಕಾರಿ ನೌಕರರು ಭರವಸೆಗಳಿಗೆ ಬಗ್ಗದೇ, ಬೇಡಿಕೆ ಈಡೇರುವವರೆಗೂ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಇಂದು ರಾಜ್ಯ ಎಲ್ಲಾ ಸರ್ಕಾರಿ ಇಲಾಖೆಗಳು ಏಕಕಾಲದಲ್ಲಿ ಬಂದ್ ಆಗಲಿವೆ. ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಶಿಕ್ಷಣ ಇಲಾಖೆ, ಸಾರಿಗೆ ಇಲಾಖೆ, ಪೌರ ಕಾರ್ಮಿಕರು ಸೇರಿ ವಿವಿಧ ಇಲಾಖೆಗಳ ನೌಕರರು ಸೇರಿದಂತೆ ಸುಮಾರು 40 ಸಂಘಗಳು ಮುಷ್ಕರಕ್ಕೆ ಬೆಂಬಲ ನೀಡುತ್ತೀವೆ.

ಇದನ್ನೂ ಓದಿ: 7ನೇ ವೇತನ ಆಯೋಗ ಜಾರಿ ಸಂಬಂಧ ಆದೇಶ ಹೊರಡಿಸಿದರೆ ಮಾತ್ರ ಮಾರ್ಚ್ 1ರ ಮುಷ್ಕರ ವಾಪಸ್: ಷಡಾಕ್ಷರಿ

ರಾಜ್ಯ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ವಿವೇಕ್ ದೊರೆ, ರಾಜ್ಯ ಸರ್ಕಾರಿ ಶಾಲಾ ಕಾಲೇಜುಗಳು ಸಂಘದ ಅಧ್ಯಕ್ಷ ಶಂಭುಲಿಂಗ ಗೌಡ ಸೇರಿದಂತೆ ಇತರೆ ಇಲಾಖೆಗಳ ನೌಕರರ ಸಂಘ ಸಹ ಈ ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ. ಇದರಿಂದ ಸುಮಾರು 10 ಲಕ್ಷ ಸರ್ಕಾರಿ ನೌಕರರರಿಂದ ಮುಷ್ಕರದಲ್ಲಿ ಭಾಗಿಯಾಗಲಿದ್ದು, ಜನಸಾಮಾನ್ಯರಿಗೆ ಸರ್ಕಾರಿ ಸೇವೆಗಳು ಲಭ್ಯವಿರುವುದಿಲ್ಲ. ಇದು ಒಂದು ರೀತಿಯಲ್ಲಿ ಕರ್ನಾಟಕ ಬಂದ್ ಎಂದೇ ಹೇಳಬಹುದಾಗಿದೆ.

ಈ ಬಗ್ಗೆ ಮಾತನಾಡಿರುವ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ವಿವೇಕ್ ದೊರೆ, ”ಇಂದು ಓಪಿಡಿ ಸೇರಿದಂತೆ ಉಳಿದ ಸೇವೆಗಳು ಇರುವುದಿಲ್ಲ. ಆಸ್ಪತ್ರೆಯಲ್ಲಿ ತುರ್ತು ಸೇವೆ ಮಾತ್ರ ಲಭ್ಯವಿದೆ. ಕಪ್ಪುಪಟ್ಟಿ ಧರಿಸಿ ಸಿಬ್ಬಂದಿ ಸೇವೆಗೆ ಹಾಜರಾಗುತ್ತಾರೆ. ಆದರೆ ಬೆಂಗಳೂರಿನಲ್ಲಿ 3 ಪ್ರಮುಖ ಆಸ್ಪತ್ರೆ, 105 ಪ್ರಾಥಮಿಕ ಆರೋಗ್ಯ ಕೇಂದ್ರ, 19 ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳ ಓಪಿಡಿ ಇರುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯ ಸರ್ಕಾರಿ ಶಾಲಾ ಕಾಲೇಜುಗಳ ಸಂಘದ ಅಧ್ಯಕ್ಷ ಶಂಭುಲಿಂಗ ಗೌಡ ಸಹ ಮುಷ್ಕರಕ್ಕೆ ಬೆಂಬಲ ಘೋಷಿಸಿದ್ದಾರೆ. ಹಾಗಾಗಿ ರಾಜ್ಯದ ಎಲ್ಲಾ ಶಿಕ್ಷಕರು ಕೂಡ ಮುಷ್ಕರದಲ್ಲಿ ಭಾಗಿಯಾಗಲಿದ್ದು, ತರಗತಿಗಳು ನಡೆಯುವುದಿಲ್ಲ. ಇದೇ ತಿಂಗಳು (ಮಾರ್ಚ್) ಮಕ್ಕಳಿಗೆ ಪರೀಕ್ಷೆ ಇರುವುದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಆತಂಕ ಶುರುವಾಗಿದೆ. ಆದರೆ ಸರ್ಕಾರ ಮಾತ್ರ ಈ ಬಗ್ಗೆ ಯೋಚನೆ ಮಾಡುತ್ತಿಲ್ಲ ಎಂದೆನಿಸುತ್ತದೆ.

ರಾಜ್ಯ ಸರ್ಕಾರಿ ನೌಕರರ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ಮಂಗಳವಾರ(ಫೆ.28) ಮಧ್ಯರಾತ್ರಿ 2.30ರ ವರೆಗೂ ಸಭೆ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ಬೊಮ್ಮಾಯಿ ಇಂದು (ಮಾ.1) ಮತ್ತೊಂದು ಸುತ್ತಿನ ಸಭೆ ನಡೆಸುವ ಸಾಧ್ಯತೆ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...