Homeಕರ್ನಾಟಕರಾಜ್ಯ ಸರ್ಕಾರದ ವಿರುದ್ಧ ಸಾರಿಗೆದಾರರ ಅನಿರ್ದಿಷ್ಟಾವಧಿ ಮುಷ್ಕರ ಆರಂಭ

ರಾಜ್ಯ ಸರ್ಕಾರದ ವಿರುದ್ಧ ಸಾರಿಗೆದಾರರ ಅನಿರ್ದಿಷ್ಟಾವಧಿ ಮುಷ್ಕರ ಆರಂಭ

- Advertisement -
- Advertisement -

ರಾಜ್ಯ ಸರ್ಕಾರದ “ಸಾರಿಗೆ ವಿರೋಧಿ ವ್ಯಾಪಾರ ನೀತಿಗಳನ್ನು” ವಿರೋಧಿಸಿ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರದ ಭಾಗವಾಗಿ ಸೋಮವಾರ ಮಧ್ಯರಾತ್ರಿಯಿಂದ ಆರು ಲಕ್ಷಕ್ಕೂ ಹೆಚ್ಚು ಸಾರಿಗೆ ವಾಹನಗಳು ಭಾಗಿಯಾಗಲಿವೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ. ಆದಾಗ್ಯೂ, ಹಾಲು, ತರಕಾರಿಗಳು ಮತ್ತು ಹಣ್ಣುಗಳಂತಹ ಅಗತ್ಯ ಸರಕುಗಳನ್ನು ಸಾಗಿಸುವ ವಾಹನಗಳು ಮತ್ತು ಇತರ ಅಗತ್ಯ ಸೇವೆಗಳ ವಾಹನಗಳು ಮುಷ್ಕರದಲ್ಲಿ ಭಾಗವಹಿಸುವುದಿಲ್ಲ ಎಂದು ವರದಿ ಉಲ್ಲೇಖಿಸಿದೆ.

ರಾಜ್ಯದ ಟ್ರಕ್ಕರ್‌ಗಳು, ಸಾಗಣೆದಾರರು, ಪ್ರವಾಸಿ ಟ್ಯಾಕ್ಸಿಗಳು ಮತ್ತು ಮ್ಯಾಕ್ಸಿ ಕ್ಯಾಬ್ ನಿರ್ವಾಹಕರ ಪ್ರಮುಖ ಒಕ್ಕೂಟ ಎಂದು ಹೇಳಿಕೊಳ್ಳುವ ಕರ್ನಾಟಕ ರಾಜ್ಯ ಲಾರಿ ಮಾಲೀಕರು ಮತ್ತು ಏಜೆಂಟ್‌ಗಳ ಸಂಘ (FOKSLOAA) ಈ ಮುಷ್ಕರಕ್ಕೆ ಕರೆ ನೀಡಿದೆ. ರಾಜ್ಯದ 31 ಜಿಲ್ಲೆಯ 236 ತಾಲ್ಲೂಕು ಮಟ್ಟದ ಮತ್ತು ಸ್ಥಳೀಯ ಸಾರಿಗೆ ಸಂಘಗಳು ಈ ಸಂಘಟನೆಯೊಂದಿಗೆ ಸಂಯೋಜಿತವಾಗಿವೆ ಎಂದು ಅದು ಪ್ರತಿಪಾದಿಸಿದೆ.

ಪೆಟ್ರೋಲ್ ಪಂಪ್ ಮಾಲೀಕರು, LPG ಬಲ್ಕ್ ಆಪರೇಟರ್‌ಗಳ ಸಂಘ, ವಿಮಾನ ನಿಲ್ದಾಣ ಟ್ಯಾಕ್ಸಿ ಸಂಘಗಳು, ಚಾಲಕ ಸಂಘಗಳು ಮತ್ತು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಸಾರಿಗೆ ಸಂಘಗಳು ಸೇರಿದಂತೆ ವಿವಿಧ ಮಿತ್ರ ವಲಯಗಳಿಂದ ಮುಷ್ಕರಕ್ಕೆ ಬೆಂಬಲ ದೊರೆತಿದೆ ಎಂದು FOKSLOAA ತಿಳಿಸಿದೆ ಎಂದು ವರದಿ ಉಲ್ಲೇಖಿಸಿದೆ.

ಆದಾಗ್ಯೂ, ಕರ್ನಾಟಕ ಲಾರಿ ಮಾಲೀಕರ ಸಂಘದ ಒಕ್ಕೂಟವು ಮುಷ್ಕರವನ್ನು ಬೆಂಬಲಿಸುವುದಿಲ್ಲ ಎಂದು ಹೇಳಿ ಪ್ರತಿಭಟನೆಯಿಂದ ದೂರ ಉಳಿದಿದೆ ಎಂದು ವರದಿ ತಿಳಿಸಿದೆ.

FOKSLOAA ಒಟ್ಟು ಆರು ಬೇಡಿಕೆಗಳನ್ನು ಮುಂದಿಟ್ಟಿದ್ದು, ಇತ್ತೀಚೆಗೆ ಏರಿಕೆ ಮಾಡಿರುವ ಇಂಧನ ಬೆಲೆ ಏರಿಕೆಯನ್ನು ಹಿಂತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ. ರಾಜ್ಯ ಸರ್ಕಾರ ಇತ್ತೀಚೆಗೆ ಮಾರಾಟ ತೆರಿಗೆಯನ್ನು ಹೆಚ್ಚಿಸಿತ್ತು. ಹಾಗಾಗಿ ರಾಜ್ಯದಲ್ಲಿ ಪೆಟ್ರೋಲ್ ಲೀಟರ್‌ಗೆ ರೂ. 3 ಮತ್ತು ಡೀಸೆಲ್ ರೂ. 3.02 ರಷ್ಟು ದುಬಾರಿಯಾಗಿದೆ.

“ಸುಲಿಗೆ ಮತ್ತು ಕಿರುಕುಳದ ಕೇಂದ್ರಗಳಾಗಿ” ಮಾರ್ಪಟ್ಟಿರುವ 18 ರಾಜ್ಯ ಟೋಲ್ ಪ್ಲಾಜಾಗಳನ್ನು ರದ್ದುಗೊಳಿಸಿ ಎಂದು FOKSLOAA ಆಗ್ರಹಿಸಿದ್ದು, ಜಿಎಸ್‌ಟಿ ನಂತರದ ಯುಗದಲ್ಲಿ “ಅನಗತ್ಯ”ವಾಗಿರುವ ಚೆಕ್ ಪೋಸ್ಟ್‌ಗಳನ್ನು ತೆಗೆದುಹಾಕುವಂತೆ ಒತ್ತಾಯಿಸಿದೆ.

ಹಳೆಯ ವಾಹನ ಫಿಟ್‌ನೆಸ್ ನವೀಕರಣ ಶುಲ್ಕವನ್ನು ರೂ. 15,000 ವರೆಗೆ ಹೆಚ್ಚಿಸುವ ಪ್ರಸ್ತಾವಿತ ಹೆಚ್ಚಳವನ್ನು ಮರುಪರಿಶೀಲಿಸುವಂತೆ ಸಂಘವು ಒತ್ತಾಯಿಸಿದ್ದು, ಬೆಂಗಳೂರು ನಗರಕ್ಕೆ ವಾಣಿಜ್ಯ ವಾಹನಗಳಿಗೆ ಪ್ರವೇಶ ಸಮಯವನ್ನು ವಿಸ್ತರಿಸುವಂತೆ ಮತ್ತು NBFCಗಳು ಮತ್ತು ಕಿರುಬಂಡವಾಳ ಪೂರೈಕೆದಾರರಿಂದ ನೀಡಲಾಗುತ್ತಿರುವ ಕಿರುಕುಳವನ್ನು ನಿಲ್ಲಿಸುವಂತೆ ಕೇಳಿಕೊಂಡಿದೆ.

ಸಮಸ್ಯೆಯನ್ನು ಪರಿಹರಿಸದಿದ್ದರೆ ರಾಜ್ಯದಾದ್ಯಂತ ಸರಕು ಮತ್ತು ಪ್ರಯಾಣಿಕರ ಚಲನೆಗೆ ತೀವ್ರ ಅಡ್ಡಿಯಾಗುವ ಸಾಧ್ಯತೆಯಿದೆ ಎಂದು FOKSLOAA ಅಧ್ಯಕ್ಷ ಜಿ.ಆರ್. ಷಣ್ಮುಗಪ್ಪ ಎಚ್ಚರಿಸಿದ್ದಾರೆ. ಪಾಲುದಾರರೊಂದಿಗೆ ರಚನಾತ್ಮಕವಾಗಿ ತೊಡಗಿಸಿಕೊಳ್ಳುವ ಮೂಲಕ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಪರಿಹರಿಸುವಂತೆ ಹಾಗೂ ಈ ಮೂಲಕ ಬಿಕ್ಕಟ್ಟನ್ನು ತಪ್ಪಿಸಲು ಸರ್ಕಾರ ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.

ಮುಷ್ಕರದ ಭಾಗವಾಗಿ, FOKSLOAA ಸದಸ್ಯರು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಅತ್ತಿಬೆಲೆ ಮತ್ತು ರಾಜ್ಯದ ಇತರ ಗಡಿ ಚೆಕ್‌ಪೋಸ್ಟ್‌ಗಳಲ್ಲಿ ಪ್ರತಿಭಟನೆ ನಡೆಸಲು ಯೋಜಿಸಿದ್ದಾಗಿ ಡೆಕ್ಕನ್ ಹೆರಾಲ್ಡ್ ವರದಿ ಹೇಳಿದೆ. ರಾಜ್ಯ ಸರ್ಕಾರದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಏಪ್ರಿಲ್ 17ರ ಸಚಿವ ಸಂಪುಟ ಚರ್ಚೆಯ ನಂತರ ಜಾತಿ ಸಮೀಕ್ಷೆ ಬಗ್ಗೆ ಮಾತನಾಡುತ್ತೇನೆ: ಸಿಎಂ ಸಿದ್ದರಾಮಯ್ಯ

ಏಪ್ರಿಲ್ 17ರ ಸಚಿವ ಸಂಪುಟ ಚರ್ಚೆಯ ನಂತರ ಜಾತಿ ಸಮೀಕ್ಷೆ ಬಗ್ಗೆ ಮಾತನಾಡುತ್ತೇನೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...